Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 34:6 - ಪರಿಶುದ್ದ ಬೈಬಲ್‌

6 ಕುರುಬರೇ ಇಲ್ಲವಾದ್ದರಿಂದ ಎತ್ತರವಾದ ಎಲ್ಲಾ ಬೆಟ್ಟಗುಡ್ಡಗಳ ಮೇಲೆ ನನ್ನ ಮಂದೆಯು ಅಲೆದಾಡಿತು; ಭೂಮಂಡಲದ ಎಲ್ಲಾ ಕಡೆಗಳಲ್ಲಿ ಚದರಿ ಹೋಯಿತು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನನ್ನ ಕುರಿಗಳು ಪರ್ವತಗಳ ಮೇಲೆಯೂ, ಎತ್ತರವಾದ ಪ್ರತಿಯೊಂದು ಬೆಟ್ಟದ ಮೇಲೆಯೂ ಅಲೆದಾಡುತ್ತಿವೆ; ಹೌದು, ನನ್ನ ಮಂದೆಯು ಭೂಮಂಡಲದಲ್ಲೆಲ್ಲಾ ಚದುರಿಹೋಗಿದೆ; ಯಾರೂ ಅವುಗಳ ಹಿಂದೆ ಹೋಗಿ ಹುಡುಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನನ್ನ ಕುರಿಗಳು ಮಲೆನಾಡಿನಲ್ಲೆಲ್ಲಾ ಎತ್ತರವಾದ ಪ್ರತಿಯೊಂದು ಬೆಟ್ಟದ ಮೇಲೆ ಅಲೆದಾಡಿದವು; ಹೌದು, ನನ್ನ ಕುರಿಗಳು ಭೂಮಂಡಲದಲ್ಲೆಲ್ಲಾ ಚದರಿಹೋದವು; ಯಾರೂ ಅವುಗಳ ಹಿಂದೆ ಹೋಗಿ ಹುಡುಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನನ್ನ ಕುರಿಗಳು ಮಲೆನಾಡಿನಲ್ಲೆಲ್ಲಾ ಎತ್ತರವಾದ ಪ್ರತಿಯೊಂದು ಬೆಟ್ಟದ ಮೇಲೆ ಅಲೆದಾಡಿದವು; ಹೌದು, ನನ್ನ ಕುರಿಗಳು ಭೂಮಂಡಲದಲ್ಲೆಲ್ಲಾ ಚದರಿಹೋದವು; ಯಾರೂ ಅವುಗಳ ಹಿಂದೆ ಹೋಗಿ ಹುಡುಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನನ್ನ ಕುರಿಗಳು ಎಲ್ಲಾ ಪರ್ವತಗಳ ಮೇಲೆಯೂ ಪ್ರತಿಯೊಂದು ಎತ್ತರವಾದ ಬೆಟ್ಟಗಳ ಮೇಲೆಯೂ ಅಲೆದಾಡುತ್ತಿವೆ. ಹೌದು, ನನ್ನ ಮಂದೆಯು ಎಲ್ಲಾ ಭೂಮಿಯ ಮೇಲೆಲ್ಲಾ ಚದರಿಹೋಗಿದೆ. ಯಾವನೂ ಅವುಗಳಿಗಾಗಿ ವಿಚಾರಿಸಲಿಲ್ಲ ಅಥವಾ ಹುಡುಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 34:6
15 ತಿಳಿವುಗಳ ಹೋಲಿಕೆ  

ನೀವು ದಾರಿ ತಪ್ಪಿದ ಕುರಿಗಳಾಗಿದ್ದಿರಿ. ಆದರೆ ಈಗ ನೀವು ನಿಮ್ಮ ಕುರುಬನ ಬಳಿಗೆ ಅಂದರೆ ನಿಮ್ಮ ಆತ್ಮಗಳನ್ನು ಕಾಪಾಡುವಾತನ ಬಳಿಗೆ ಹಿಂತಿರುಗಿ ಬಂದಿರುವಿರಿ.


ನಾನು ಸುತ್ತಮುತ್ತ ನೋಡಿದರೂ ನನ್ನ ಸ್ನೇಹಿತರಲ್ಲಿ ಯಾರೂ ಕಾಣುತ್ತಿಲ್ಲ. ಓಡಿಹೋಗಲು ನನಗೆ ಯಾವ ಸ್ಥಳವೂ ಇಲ್ಲ. ನನ್ನನ್ನು ರಕ್ಷಿಸಲು ಯಾರೂ ಪ್ರಯತ್ನಿಸುತ್ತಿಲ್ಲ.


ನನಗೆ ಬೇರೆ ಕುರಿಗಳು ಸಹ ಇವೆ. ಅವುಗಳು ಇಲ್ಲಿರುವ ಈ ಮಂದೆಯಲ್ಲಿಲ್ಲ. ನಾನು ಅವುಗಳನ್ನು ಸಹ ಒಳಗೆ ನಡೆಸಬೇಕು. ಅವುಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಮುಂದಿನ ಕಾಲದಲ್ಲಿ ಒಂದೇ ಮಂದೆಯಿರುವುದು ಮತ್ತು ಒಬ್ಬನೇ ಕುರುಬನಿರುವನು.


“ಆದರೂ ಕೆಲವರು ತಪ್ಪಿಸಿಕೊಳ್ಳುವರು. ಅವರು ಬೆಟ್ಟಕ್ಕೆ ಓಡುವರು. ಆದರೆ ಅವರು ಸಂತೋಷಪಡುವುದಿಲ್ಲ. ತಮ್ಮ ಪಾಪಗಳಿಗಾಗಿ ಅವರು ದುಃಖಿತರಾಗುವರು. ಪಾರಿವಾಳಗಳಂತೆ ಮೂಲುಗುವರು, ಅಳುವರು.


ನಿಮ್ಮ ದೇವರಾದ ಯೆಹೋವನು ಅಂಧಕಾರವನ್ನು ಉಂಟುಮಾಡುವ ಮೊದಲೇ ಆತನನ್ನು ಗೌರವಿಸಿರಿ, ಕಗ್ಗತ್ತಲಿನ ಬೆಟ್ಟಗಳ ಮೇಲೆ ನೀವು ಬೀಳುವ ಮೊದಲೇ ಆತನನ್ನು ಸ್ತುತಿಸಿರಿ. ಯೆಹೂದದ ಜನರಾದ ನೀವು ಬೆಳಕನ್ನು ನಿರೀಕ್ಷಿಸುತ್ತಿದ್ದೀರಿ. ಆದರೆ ಯೆಹೋವನು ಬೆಳಕನ್ನು ಗಾಢಾಂಧಕಾರವನ್ನಾಗಿ ಪರಿವರ್ತಿಸುವನು.


ಯೆಹೋವನು ಹೀಗೆನ್ನುತ್ತಾನೆ: “ಜೆರುಸಲೇಮಿನ ಬೀದಿಗಳಲ್ಲಿ ಅತ್ತಿತ್ತ ತಿರುಗಾಡಿ ನೋಡಿರಿ; ಈ ವಿಷಯಗಳ ಬಗ್ಗೆ ವಿಚಾರ ಮಾಡಿರಿ. ನಗರದ ಸಾರ್ವಜನಿಕ ಸ್ಥಳಗಳಲ್ಲಿ ಹುಡುಕಿ ನೋಡಿರಿ. ಸತ್ಯಶೋಧಕನೂ ಪ್ರಾಮಾಣಿಕನೂ ಒಳ್ಳೆಯವನೂ ಆಗಿರುವ ಮನುಷ್ಯನು ಎಲ್ಲಿ ಸಿಕ್ಕುವನೋ ನೋಡಿ. ಕೇವಲ ಒಬ್ಬ ಒಳ್ಳೆಯವನಿದ್ದರೂ ನಾನು ಇಡೀ ಜೆರುಸಲೇಮನ್ನು ಕ್ಷಮಿಸುತ್ತೇನೆ.


“ನನ್ನ ಜನರು ತಪ್ಪಿಸಿಕೊಂಡ ಕುರಿಗಳಂತಿದ್ದಾರೆ. ಅವರ ಕುರುಬರು ಅವರನ್ನು ತಪ್ಪು ದಾರಿಗೆ ಎಳೆದಿದ್ದಾರೆ. ಅವರ ನಾಯಕರುಗಳು ಅವರನ್ನು ಬೆಟ್ಟಗಳಲ್ಲಿ ಅಲೆಯುವಂತೆ ಮಾಡಿದ್ದಾರೆ. ಅವರ ವಿಶ್ರಾಂತಿಸ್ಥಾನವನ್ನು ಅವರು ಮರೆತುಬಿಟ್ಟಿದ್ದಾರೆ.


ಆದ್ದರಿಂದ ಕುರಬರೇ, ಯೆಹೋವನ ಮಾತುಗಳನ್ನು ಕೇಳಿರಿ. ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ,


ಅವರು ನನ್ನನ್ನು ಬಿಟ್ಟು ತೊಲಗಿದರು. ಇದು ಅವರಿಗೆ ಕೆಡುಕು ಉಂಟುಮಾಡುವದು. ಅವರು ನನಗೆ ವಿಧೇಯರಾಗಲು ಇಷ್ಟಪಡಲಿಲ್ಲ. ಆದ್ದರಿಂದ ಅವರು ನಾಶವಾಗುವರು. ನಾನು ಅವರನ್ನು ರಕ್ಷಿಸಿ ಕಾಪಾಡಿದ್ದಾಗ್ಯೂ ಅವರು ನನಗೆ ವಿರುದ್ಧವಾಗಿ ಸುಳ್ಳಾಡಿದರು.


ಮತ್ತು ಎಲ್ಲಾ ಜನಾಂಗಗಳನ್ನು ನಾನು ಒಟ್ಟುಗೂಡಿಸುವೆನು. ಆ ದೇಶಗಳನ್ನು ಯೆಹೋಷಾಫಾಟ್ ತಗ್ಗಿಗೆ ಕರೆತರುವೆನು. ಅಲ್ಲಿ ಅವರಿಗೆ ನ್ಯಾಯತೀರಿಸುವೆನು. ಆ ದೇಶಗಳವರು ನನ್ನ ಜನರಾದ ಇಸ್ರೇಲರನ್ನು ಚದರಿಸಿದ್ದರು. ಅವರನ್ನು ಪರದೇಶಗಳಲ್ಲಿ ವಾಸಿಸುವಂತೆ ಮಾಡಿದರು. ಆದ್ದರಿಂದ ಆ ದೇಶಗಳವರನ್ನು ನಾನು ಶಿಕ್ಷಿಸುವೆನು. ಆ ದೇಶದವರು ನನ್ನ ದೇಶವನ್ನು ವಿಭಜಿಸಿದರು.


ನಾನು ಕಳೆದುಹೋದ ಕುರಿಯಂತೆ ಅಲೆದಾಡುತ್ತಿದ್ದೇನೆ. ನನಗೋಸ್ಕರ ಹುಡುಕುತ್ತಾ ಬಾ. ನಿನ್ನ ಸೇವಕನಾದ ನಾನು ನಿನ್ನ ಆಜ್ಞೆಗಳನ್ನು ಮರೆತುಬಿಟ್ಟಿಲ್ಲ.


ಜೆರುಸಲೇಮಿನಲ್ಲಿ ಅನೇಕ ಜನರಿದ್ದರೂ ಅವರಲ್ಲಿ ಯಾರೂ ಅವಳಿಗಾಗಿ ನಾಯಕರಾಗಲಿಲ್ಲ. ಆಕೆಯು ಅನೇಕ ಮಕ್ಕಳನ್ನು ಪಡೆದವಳಾಗಿದ್ದರೂ ಆಕೆಯನ್ನು ನಡೆಸಲು ಮಾರ್ಗದರ್ಶಕರು ಯಾರೂ ಆಗಲಿಲ್ಲ.


ಕುರುಬರು ಬುದ್ಧಿಗೇಡಿಗಳಾಗಿದ್ದಾರೆ. ಅವರು ಯೆಹೋವನನ್ನು ಹುಡುಕುವ ಪ್ರಯತ್ನ ಮಾಡುವುದಿಲ್ಲ. ಅವರು ಜ್ಞಾನಿಗಳಲ್ಲ, ಅವರ ಹಿಂಡುಗಳು ಚದರಿಹೋಗುವವು; ಕಳೆದುಹೋಗುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು