Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 35:11 - ಪರಿಶುದ್ದ ಬೈಬಲ್‌

11 ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ನನ್ನ ಜನರ ಮೇಲೆ ನೀನು ಅಸೂಯೆಪಟ್ಟೆ ಮತ್ತು ನೀನು ಅವರ ಮೇಲೆ ಸಿಟ್ಟುಗೊಂಡಿದ್ದೆ. ನಿಜವಾಗಿ ಹೇಳಬೇಕಾದರೆ, ನೀನು ಅವರನ್ನು ದ್ವೇಷಿಸಿದೆ. ಆದ್ದರಿಂದ, ನನ್ನ ಜೀವದಾಣೆ, ನೀನು ಹೇಗೆ ಅವರನ್ನು ನೋಯಿಸಿದೆಯೋ ಹಾಗೆಯೇ ನಾನು ನಿನ್ನನ್ನು ಶಿಕ್ಷಿಸುವೆನು. ಈ ರೀತಿಯಲ್ಲಿ, ನನ್ನ ಜನರೊಂದಿಗೆ ನಾನಿದ್ದೇನೆಂದು ಅವರಿಗೆ ತಿಳಿಯಪಡಿಸುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 “ನನ್ನ ಜೀವದಾಣೆ, ನೀನು ನನ್ನ ಜನರನ್ನು ದ್ವೇಷಿಸಿ, ಅವರ ಮೇಲಿಟ್ಟ ಕೋಪಕ್ಕೂ, ಹೊಟ್ಟೆಕಿಚ್ಚಿಗೂ ನಾನು ನಿನ್ನ ವಿರುದ್ಧವಾಗಿ ನ್ಯಾಯ ತೀರಿಸಿದ ಮೇಲೆ, ನಾನು ಅವರ ಮಧ್ಯದಲ್ಲಿ ನನ್ನನ್ನು ತಿಳಿಯಪಡಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆದುದರಿಂದ ನನ್ನ ಜೀವದಾಣೆ, ನೀನು ನನ್ನ ಜನರನ್ನು ದ್ವೇಷಿಸಿ, ಅವರ ಮೇಲಿಟ್ಟ ಕೋಪಕ್ಕೂ ಮಾತ್ಸರ್ಯಕ್ಕೂ ನಾನು ನಿನಗೆ ಪ್ರತೀಕಾರಮಾಡುವೆನು; ನಿನ್ನನ್ನು ದಂಡಿಸುವಾಗ ನಾನು ಅವರಿಗೆ ಗೋಚರವಾಗುವೆನು. ಇದು ಸರ್ವೇಶ್ವರನಾದ ದೇವರ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನೀನು ನನ್ನ ಜನರನ್ನು ದ್ವೇಷಿಸಿ ಅವರ ಮೇಲಿಟ್ಟ ಕೋಪಕ್ಕೂ ಮಾತ್ಸರ್ಯಕ್ಕೂ ನಾನು ನಿನಗೆ ಪ್ರತಿಮಾಡುವೆನು; ನಿನ್ನನ್ನು ದಂಡಿಸಿದಾಗ ನಾನು ಅವರಿಗೆ ಗೋಚರನಾಗುವೆನು, ಇದು ಕರ್ತನಾದ ಯೆಹೋನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ: ನನ್ನ ಜೀವದಾಣೆ, ನಾನು ನಿನ್ನ ಕೋಪದ ಪ್ರಕಾರವೂ ನೀನು ದ್ವೇಷದಿಂದ ಅವರಿಗೆ ವಿರುದ್ಧವಾಗಿ ನಡೆಸಿದ ಹೊಟ್ಟೆಕಿಚ್ಚಿನ ಪ್ರಕಾರವೂ ನಿನಗೆ ನ್ಯಾಯತೀರಿಸಿದಾಗ ನಾನು ಅವರ ಮಧ್ಯದಲ್ಲಿ ನನ್ನನ್ನು ತಿಳಿಯಪಡಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 35:11
8 ತಿಳಿವುಗಳ ಹೋಲಿಕೆ  

ನೀವು ಬೇರೆಯವರಿಗೆ ತೀರ್ಪು ಮಾಡಿದರೆ, ಅದೇ ಪ್ರಕಾರ ನಿಮಗೂ ತೀರ್ಪಾಗುವುದು. ನೀವು ಬೇರೆಯವರನ್ನು ಕ್ಷಮಿಸಿದರೆ ನಿಮಗೂ ಕ್ಷಮೆ ದೊರೆಯುವುದು.


ಯೆಹೋವನು ಅವರನ್ನು ಅವರ ಕುಯುಕ್ತಿಯಲ್ಲಿಯೇ ಸಿಕ್ಕಿಸಿದ್ದರಿಂದ ಆತನ ನೀತಿಯು ಪ್ರಖ್ಯಾತವಾಯಿತು.


ಯೆಹೋವನು ಹೇಳುವುದೇನೆಂದರೆ, “ಅನೇಕ ಅಪರಾಧಗಳನ್ನು ಮಾಡಿದ ಎದೋಮ್ಯರನ್ನು ನಾನು ಖಂಡಿತವಾಗಿ ಶಿಕ್ಷಿಸುವೆನು. ಯಾಕೆಂದರೆ ಎದೋಮ್ ತನ್ನ ಸಹೋದರನಾದ ಇಸ್ರೇಲನ್ನು ಕತ್ತಿಯಿಂದ ಹತಿಸಿತು. ಎದೋಮ್ ಯಾವ ಕರುಣೆಯನ್ನೂ ತೋರಲಿಲ್ಲ. ಅದರ ಕೋಪವು ನಿರಂತರವಾಗಿ ಮುಂದುವರಿಯಿತು; ಕ್ರೂರಪ್ರಾಣಿಯಂತೆ ಇಸ್ರೇಲನ್ನು ಹರಿದುಹರಿದು ಹಾಕಿತು.


ಯೆಹೋವನೇ ನಿಶ್ಚಯವಾಗಿ ಎದೋಮ್ಯರನ್ನು ದಂಡಿಸು. ಯಾಕೆಂದರೆ ಜೆರುಸಲೇಮ್ ಸೆರೆಹಿಡಿಯಲ್ಪಟ್ಟಾಗ ಅವರು, “ಅದರ ಕಟ್ಟಡಗಳನ್ನು ಕೆಡವಿಹಾಕಿ. ಅವುಗಳನ್ನು ಅಸ್ತಿವಾರ ಸಹಿತ ಹಾಳುಮಾಡಿರಿ” ಎಂದು ಆರ್ಭಟಿಸಿದರು.


ಹೌದು, ಇತರರಿಗೆ ನೀವು ಕರುಣೆ ತೋರಬೇಕು. ಇಲ್ಲವಾದರೆ ದೇವರು ತೀರ್ಪು ನೀಡುವಾಗ ನಿಮಗೂ ಕರುಣೆ ತೋರನು. ಕರುಣೆ ತೋರುವವನು ದೇವರ ನ್ಯಾಯತೀರ್ಪಿನಲ್ಲಿ ಭಯವಿಲ್ಲದೆ ಇರುವನು.


ನಾನು ನನ್ನ ಇಸ್ರೇಲ್ ಜನರನ್ನು ಉಪಯೋಗಿಸಿ ಎದೋಮ್ಯರಿಗೆ ಮುಯ್ಯಿ ತೀರಿಸುವೆನು. ಈ ರೀತಿಯಾಗಿ ಎದೋಮಿನ ಮೇಲಿರುವ ನನ್ನ ಕೋಪವನ್ನು ಇಸ್ರೇಲರು ಅವರಿಗೆ ತೋರಿಸುವರು. ಆಗ ಎದೋಮ್ಯರು ನಾನು ಅವರನ್ನು ಶಿಕ್ಷಿಸಿದ್ದೇನೆಂದು ತಿಳಿದುಕೊಳ್ಳುವರು.” ಇದು ನನ್ನ ಒಡೆಯನಾದ ಯೆಹೋವನ ವಾಕ್ಯ.


ಎಲ್ಲಾ ಜನಾಂಗಗಳವರಿಗೆ ಯೆಹೋವನ ದಿನವು ಬೇಗನೇ ಬರುವದು. ನೀನು ಬೇರೆಯವರಿಗೆ ಮಾಡಿದ ದುಷ್ಕೃತ್ಯಗಳನ್ನು ಅವರು ನಿನ್ನ ಮೇಲೆಯೇ ನಡೆಸುವರು. ಅದೇ ದುಷ್ಕೃತ್ಯಗಳು ನಿನ್ನ ತಲೆ ಮೇಲೆ ಬೀಳುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು