Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 36:12 - ಪರಿಶುದ್ದ ಬೈಬಲ್‌

12 ಹೌದು, ನಾನು ಅನೇಕಾನೇಕ ಇಸ್ರೇಲ್ ಜನರನ್ನು ನಿನ್ನ ದೇಶಕ್ಕೆ ನಡೆಸುವೆನು. ನೀನು ಅವರ ಸೊತ್ತಾಗುವೆ. ಅವರ ಮಕ್ಕಳನ್ನು ನೀನು ಮತ್ತೆಂದಿಗೂ ತೆಗೆದುಹಾಕುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಬೆಟ್ಟದ ಸೀಮೆಯೇ, ನಾನು ನಿನ್ನಲ್ಲಿ ಜನ ಸಂಚಾರವನ್ನು ಉಂಟುಮಾಡುವೆನು; ನನ್ನ ಜನರಾದ ಇಸ್ರಾಯೇಲರೇ, ನಿನ್ನಲ್ಲಿ ಸಂಚರಿಸುತ್ತಾ ನಿನ್ನನ್ನು ಸ್ವತ್ತಾಗಿ ಅನುಭವಿಸುವರು; ನೀನು ಇನ್ನು ಅವರಿಗೆ ಪುತ್ರ ಶೋಕವನ್ನು ಕೊಡುವುದಿಲ್ಲ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಬೆಟ್ಟದ ಸೀಮೆಯೇ, ನಾನು ನಿನ್ನಲ್ಲಿ ಜನಸಂಚಾರವನ್ನು ಉಂಟುಮಾಡುವೆನು; ನನ್ನ ಜನರಾದ ಇಸ್ರಯೇಲರೇ, ನಿನ್ನಲ್ಲಿ ಸಂಚರಿಸುತ್ತಾ, ನಿನ್ನನ್ನು ಸೊತ್ತಾಗಿ ಅನುಭವಿಸುವರು; ನೀನು ಇನ್ನು ಅವರಿಗೆ ಪುತ್ರಶೋಕವನ್ನು ಕೊಡದಿರುವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಬೆಟ್ಟದ ಸೀಮೆಯೇ, ನಾನು ನಿನ್ನಲ್ಲಿ ಜನಸಂಚಾರವನ್ನುಂಟುಮಾಡುವೆನು; ನನ್ನ ಜನರಾದ ಇಸ್ರಾಯೇಲ್ಯರೇ ನಿನ್ನಲ್ಲಿ ಸಂಚರಿಸುತ್ತಾ ನಿನ್ನನ್ನು ಸ್ವಾಸ್ತ್ಯವಾಗಿ ಅನುಭವಿಸುವರು; ನೀನು ಇನ್ನು ಅವರಿಗೆ ಪುತ್ರಶೋಕವನ್ನು ಕೊಡದಿರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನನ್ನ ಜನರಾದ ಇಸ್ರಾಯೇಲ್ಯರನ್ನು ನಿಮ್ಮಲ್ಲಿ ವಾಸಿಸುವಂತೆ ಮಾಡುವೆನು. ಅವರು ನಿನ್ನನ್ನು ಸ್ವಾಧೀನಪಡಿಸಿಕೊಳ್ಳುವರು ಮತ್ತು ನೀವು ಅವರ ಸೊತ್ತಾಗಿರುವಿರಿ; ನೀವು ಎಂದಿಗೂ ಅವರ ಮಕ್ಕಳಿಂದ ವಂಚಿತರಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 36:12
12 ತಿಳಿವುಗಳ ಹೋಲಿಕೆ  

ಯೆಹೂದದ ಜನರನ್ನು ನಾನು ಕವೆಗೋಲಿನಿಂದ ವಿಂಗಡಿಸಿದ ದೇಶದ ಎಲ್ಲಾ ನಗರಗಳ ದ್ವಾರದಲ್ಲಿ ಚದರಿಸುತ್ತೇನೆ. ನನ್ನ ಜನರು ಬದಲಾಗಲಿಲ್ಲ. ನಾನು ಅವರನ್ನು ನಾಶಮಾಡುತ್ತೇನೆ. ನಾನು ಅವರ ಮಕ್ಕಳನ್ನು ಕಸಿದುಕೊಳ್ಳುತ್ತೇನೆ.


ನೀವು ದೇಶವನ್ನು ಸಮಾನವಾಗಿ ಪಾಲು ಮಾಡಬೇಕು. ನಾನು ನಿಮ್ಮ ಪೂರ್ವಿಕರಿಗೆ ಈ ದೇಶವನ್ನು ಕೊಡುತ್ತೇನೆಂದು ವಾಗ್ದಾನ ಮಾಡಿದ್ದೆನು. ಈಗ ನಾನು ಇದನ್ನು ನಿಮಗೆ ಕೊಡುತ್ತಿದ್ದೇನೆ.


ನನ್ನ ಒಡೆಯನಾದ ಯೆಹೋವನು ಹೇಳಿದ ಮಾತುಗಳಿವು, “ಇಸ್ರೇಲ್ ದೇಶವೇ, ಜನರು ನಿನ್ನ ವಿಷಯದಲ್ಲಿ ಕೆಟ್ಟ ಮಾತುಗಳನ್ನು ಆಡುತ್ತಾರೆ. ನೀನು ನಿನ್ನ ಜನರನ್ನು ನಾಶ ಮಾಡಿದಿ ಎಂದು ಹೇಳುತ್ತಾರೆ. ನಿನ್ನ ಮಕ್ಕಳನ್ನು ನೀನೇ ತೆಗೆದುಹಾಕಿದಿ ಎಂದು ಹೇಳುತ್ತಾರೆ.


ಜನರು ಹಣ ಕೊಟ್ಟು ಭೂಮಿಯನ್ನು ಕೊಂಡುಕೊಳ್ಳುವರು. ಅವರು ಕರಾರುಪತ್ರಗಳಿಗೆ ಸಹಿಹಾಕುವರು. ಜನರು ಕ್ರಯಪತ್ರಗಳಿಗೆ ಸಹಿ ಹಾಕುವದನ್ನು ಬೇರೆಯವರು ನೋಡುವರು. ಬೆನ್ಯಾಮೀನ್ ಕುಲದವರು ವಾಸಿಸುವ ಪ್ರದೇಶದಲ್ಲಿ ಜನರು ಪುನಃ ಹೊಲಗಳನ್ನು ಕೊಂಡುಕೊಳ್ಳುವರು. ಜೆರುಸಲೇಮಿನ ಸುತ್ತಲಿನ ಪ್ರದೇಶದಲ್ಲಿ ಅವರು ಹೊಲಗಳನ್ನು ಕೊಂಡುಕೊಳ್ಳುವರು. ಅವರು ಯೆಹೂದ ಪ್ರದೇಶದ ಊರುಗಳಲ್ಲಿಯೂ ಬೆಟ್ಟಪ್ರದೇಶದಲ್ಲಿಯೂ ಪಶ್ಚಿಮದ ಇಳಿಜಾರು ಪ್ರದೇಶದಲ್ಲಿಯೂ ದಕ್ಷಿಣದ ಮರಳುಗಾಡಿನಲ್ಲಿಯೂ ಹೊಲಗಳನ್ನು ಕೊಂಡುಕೊಳ್ಳುವರು. ನಾನು ನಿಮ್ಮ ಜನರನ್ನು ನಿಮ್ಮ ಪ್ರದೇಶಕ್ಕೆ ಪುನಃ ಕರೆದುಕೊಂಡು ಬರುವದರಿಂದ ಹೀಗಾಗುವುದು.” ಇದು ಯೆಹೋವನ ನುಡಿ.


ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು, ‘ಮುಂದಿನಕಾಲದಲ್ಲಿ ಇಸ್ರೇಲ್ ದೇಶದಲ್ಲಿ ನನ್ನ ಜನರು ಪುನಃ ಮನೆಗಳನ್ನು, ಹೊಲಗಳನ್ನು, ದ್ರಾಕ್ಷಿತೋಟಗಳನ್ನು ಕೊಂಡುಕೊಳ್ಳುವರು’ ಎಂದು ಅನ್ನುತ್ತಾನೆ.”


“ನಾವು ಸಂಚರಿಸಿ ವಿಷಯ ಸಂಗ್ರಹಿಸಿಕೊಂಡು ಬಂದ ದೇಶವು ಅಲ್ಲಿ ವಾಸಿಸುವವರನ್ನು ನಾಶಪಡಿಸುವ ದೇಶವಾಗಿದೆ. ನಾವು ಅಲ್ಲಿ ನೋಡಿದ ಎಲ್ಲಾ ಜನರು ರಾಕ್ಷಸರಂತಿದ್ದಾರೆ.


ಜೆರುಸಲೇಮಿನಲ್ಲಿ ನೀವು ಕೊಲೆ ಮಾಡುವದಕ್ಕಾಗಿ ಹಣ ತೆಗೆದುಕೊಳ್ಳುತ್ತೀರಿ. ಸಾಲಕೊಟ್ಟು ಅದಕ್ಕೆ ಬಡ್ಡಿ ತೆಗೆದುಕೊಳ್ಳುತ್ತೀರಿ. ಸ್ವಲ್ಪ ಹಣ ಮಾಡುವದಕ್ಕಾಗಿ ನಿಮ್ಮ ನೆರೆಯವನನ್ನೆ ಮೋಸ ಮಾಡುತ್ತೀರಿ. ನನ್ನನ್ನು ನೀವು ಮರೆತುಬಿಟ್ಟಿರುವಿರಿ.’” ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದ್ದಾನೆ.


“ಜೆರುಸಲೇಮಿನ ನಾಯಕರು ತಾನು ಹಿಡಿದ ಪ್ರಾಣಿಯನ್ನು ತಿನ್ನುವ ತೋಳಕ್ಕೆ ಸಮಾನರಾಗಿದ್ದಾರೆ. ಅವರು ಧನಿಕರಾಗುವದಕ್ಕಾಗಿ ಜನರನ್ನು ಹಿಡಿದು ಕೊಲ್ಲುವರು.


ನನ್ನ ಕುರಿಗಳನ್ನು ಆ ದೇಶಗಳಿಂದ ಬರಮಾಡುವೆನು. ಆ ದೇಶಗಳಿಂದ ಅವುಗಳನ್ನು ಒಟ್ಟುಗೂಡಿಸುವೆನು. ಅವುಗಳ ಸ್ವಂತ ದೇಶಕ್ಕೆ ಹಿಂದಿರುಗಿಸುವೆನು. ಇಸ್ರೇಲರ ಬೆಟ್ಟಗಳಲ್ಲಿ ಅವುಗಳನ್ನು ಮೇಯಿಸುವೆನು. ನೀರಿನ ತೊರೆಗಳ ಬದಿಯಲ್ಲಿ ಜನರಿರುವ ಸ್ಥಳಗಳಲ್ಲಿ ನಾನು ಅವುಗಳನ್ನು ಮೇಯಿಸುವೆನು.


ಹುಲ್ಲುಗಾವಲಿಗೆ ನಾನು ಅವುಗಳನ್ನು ನಡೆಸುವೆನು. ಇಸ್ರೇಲಿನ ಎತ್ತರವಾದ ಬೆಟ್ಟಗಳಲ್ಲಿ ಅವು ಮೇಯುವವು. ಅಲ್ಲಿ ಒಳ್ಳೆಯ ಸ್ಥಳದಲ್ಲಿ ಅವುಗಳು ಮಲಗಿ ಹುಲ್ಲನ್ನು ಮೇಯುವವು.


ನಾನು ಯಾಕೋಬನ ಜನರಲ್ಲಿ ಕೆಲವರನ್ನು ಉಳಿಸುವೆನು. ಯೆಹೂದದ ಕೆಲವರು ನನ್ನ ಪರ್ವತವನ್ನು ಪಡೆದುಕೊಳ್ಳುವರು. ನನ್ನ ಸೇವಕರು ಅಲ್ಲಿ ವಾಸಿಸುವರು. ಅಲ್ಲಿ ವಾಸಿಸಬೇಕಾದವರನ್ನು ನಾನೇ ಆರಿಸಿಕೊಳ್ಳುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು