Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 36:23 - ಪರಿಶುದ್ದ ಬೈಬಲ್‌

23 ನನ್ನ ಹೆಸರು ಅತ್ಯಂತ ಪವಿತ್ರವಾದದ್ದು ಎಂದು ನಾನು ಅವರಿಗೆ ತೋರಿಸುವೆನು. ನನ್ನ ಪವಿತ್ರ ನಾಮವನ್ನು ಆ ದೇಶಗಳಲ್ಲಿ ಅವಮಾನಪಡಿಸಿದಿರಿ. ಆದರೆ ನಾನು ಪವಿತ್ರನೆಂದು ನಿಮಗೆ ತೋರಿಸುತ್ತೇನೆ. ನನ್ನ ನಾಮವನ್ನು ಗೌರವಿಸಲು ನಾನು ನಿಮಗೆ ಕಲಿಸುವೆನು. ಆಗ ಆ ದೇಶದವರಿಗೆ ನಾನು ಯೆಹೋವನು ಎಂದು ಗೊತ್ತಾಗುವದು.’” ನನ್ನ ಒಡೆಯನಾದ ಯೆಹೋವನ ನುಡಿಗಳಿವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಜನಾಂಗಗಳಲ್ಲಿ ಅಪಕೀರ್ತಿಗೆ ಗುರಿಯಾದ, ಅಂದರೆ ನೀವು ಜನಾಂಗಗಳ ನಡುವೆ ಅಪಕೀರ್ತಿಗೆ ಗುರಿಮಾಡಿದ ನನ್ನ ಘನವುಳ್ಳ ನಾಮದ ಗೌರವವನ್ನು ನಾನು ಕಾಪಾಡಿಕೊಳ್ಳುವೆನು; ಹೀಗೆ ನಾನು ಅವುಗಳ ಕಣ್ಣೆದುರಿಗೆ ನಿಮ್ಮ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವಾಗ ನಾನೇ ಯೆಹೋವನು ಎಂದು ಅವರಿಗೆ ತಿಳಿಯುವುದು” ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಜನಾಂಗಗಳಲ್ಲಿ ಅಪಕೀರ್ತಿಗೆ ಗುರಿಯಾದ, ಅಂದರೆ ನೀವು ಜನಾಂಗಗಳ ನಡುವೆ ಅಪಕೀರ್ತಿಗೆ ಗುರಿಮಾಡಿದ ನನ್ನ ಶ್ರೀನಾಮದ ಗೌರವವನ್ನು ನಾನು ಕಾಪಾಡಿಕೊಳ್ಳುವೆನು. ಹೀಗೆ ನಾನು ಅವುಗಳ ಕಣ್ಣೆದುರಿಗೆ, ನಿಮ್ಮ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು. ಆಗ ನಾನೇ ಸರ್ವೇಶ್ವರ ಎಂದು ಅವುಗಳಿಗೆ ನಿಶ್ಚಿತವಾಗುವುದು. ಇದು ಸರ್ವೇಶ್ವರನಾದ ದೇವರ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಜನಾಂಗಗಳಲ್ಲಿ ಅಪಕೀರ್ತಿಗೆ ಗುರಿಯಾದ, ಅಂದರೆ ನೀವು ಜನಾಂಗಗಳ ನಡುವೆ ಅಪಕೀರ್ತಿಗೆ ಗುರಿಮಾಡಿದ ನನ್ನ ಘನನಾಮದ ಗೌರವವನ್ನು ನಾನು ಕಾಪಾಡಿಕೊಳ್ಳುವೆನು; ಹೀಗೆ ನಾನು ಅವುಗಳ ಕಣ್ಣೆದುರಿಗೆ ನಿಮ್ಮ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವಾಗ ನಾನೇ ಯೆಹೋವನು ಎಂದು ಅವುಗಳಿಗೆ ನಿಶ್ಚಿತವಾಗುವದು; ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ನೀನು ನನ್ನ ಮಹತ್ವದ ನಾಮವನ್ನು ಅಪವಿತ್ರತೆಗೆ ಗುರಿಮಾಡಿದ ಇತರ ಜನಾಂಗಗಳಲ್ಲಿ ನನ್ನ ಪವಿತ್ರ ನಾಮವನ್ನು ತೋರಿಸುವೆನು. ಜನಾಂಗಗಳ ಕಣ್ಣುಗಳ ಮುಂದೆ ನಿನ್ನ ಮೂಲಕವಾಗಿ ನನ್ನನ್ನು ಪವಿತ್ರನೆಂದು ತೋರಿಸುವಾಗ ಅವರು ನಾನು ಯೆಹೋವ ದೇವರೆಂಬುದನ್ನು ತಿಳಿದುಕೊಳ್ಳುವರು ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 36:23
26 ತಿಳಿವುಗಳ ಹೋಲಿಕೆ  

ಆಗ ನಿಮ್ಮ ಕಾಣಿಕೆಯ ಸುವಾಸನೆಯಿಂದ ಸಂತೋಷಭರಿತನಾಗುವೆನು. ಇದು ನಿಮ್ಮನ್ನು ಹಿಂದಕ್ಕೆ ನಿಮ್ಮ ದೇಶಕ್ಕೆ ಕರೆತಂದಾಗ ಆಗುವದು. ನಾನು ನಿಮ್ಮನ್ನು ಅನೇಕ ದೇಶಗಳಲ್ಲಿ ಚದರಿಸಿದೆನು. ಆದರೆ ನಾನು ನಿಮ್ಮನ್ನು ಒಟ್ಟುಗೂಡಿಸಿ ನಿಮ್ಮ ಮೂಲಕ ನನ್ನ ಪವಿತ್ರತೆಯನ್ನು ಪ್ರದರ್ಶಿಸುವೆನು. ಆ ಎಲ್ಲಾ ದೇಶಗಳವರು ಇದನ್ನು ನೋಡುವರು.


ನನ್ನ ಜನರಾದ ಇಸ್ರೇಲರಲ್ಲಿ ನನ್ನ ಪವಿತ್ರನಾಮವನ್ನು ಪ್ರಸಿದ್ಧಿಪಡಿಸುವೆನು. ಅವರು ನನ್ನ ಪವಿತ್ರ ನಾಮವನ್ನು ಇನ್ನು ಮುಂದೆ ಅವಮಾನಕ್ಕೆ ಗುರಿಪಡಿಸುವದಿಲ್ಲ. ರಾಜ್ಯಗಳೆಲ್ಲಾ ನಾನು ಯೆಹೋವನೆಂದು ಅರಿತುಕೊಳ್ಳುವರು. ನಾನೇ ಇಸ್ರೇಲಿನ ಪವಿತ್ರನಾದ ದೇವರು ಎಂದು ತಿಳಿಯುವರು.


ಸರ್ವಶಕ್ತನಾದ ಯೆಹೋವನು ನೀತಿಯಿಂದ ನ್ಯಾಯತೀರಿಸುವನು. ಯೆಹೋವನು ಉನ್ನತೋನ್ನತನೆಂದು ಜನರೆಲ್ಲರೂ ಅರಿತುಕೊಳ್ಳುವರು. ಪರಿಶುದ್ಧನಾದ ದೇವರು ನ್ಯಾಯವಾದದ್ದನ್ನೇ ಮಾಡುವನು. ಜನರು ಆತನನ್ನು ಗೌರವಿಸುವರು.


ನೀವಾದರೋ ದೇವರಾದುಕೊಂಡ ಜನಾಂಗವೂ ರಾಜವಂಶಸ್ಥರಾದ ಯಾಜಕರೂ ಮೀಸಲಾದ ಜನರೂ ದೇವರ ಸ್ವಕೀಯ ಪ್ರಜೆಯೂ ಆಗಿದ್ದೀರಿ. ದೇವರು ತಾನು ಮಾಡಿದ ಅತ್ಯಾಶ್ಚರ್ಯ ಸಂಗತಿಗಳನ್ನು ತಿಳಿಸಲು ನಿಮ್ಮನ್ನು ಅಂಧಕಾರದಿಂದ (ಪಾಪಗಳಿಂದ) ತನ್ನ ಅದ್ಭುತವಾದ ಬೆಳಕಿಗೆ ಕರೆತಂದನು.


ನಾನು ಅವರ ಒಡೆಯನಾದ ಯೆಹೋವನೆಂದು ತಿಳಿಯುವರು. ಯಾಕೆಂದರೆ ನಾನು, ಅವರನ್ನು ಅವರ ಸ್ವದೇಶವನ್ನು ಬಿಟ್ಟು ಸೆರೆಹಿಡಿಯಲ್ಪಟ್ಟವರಾಗಿ ಬೇರೆ ದೇಶಗಳಿಗೆ ಹೋಗುವಂತೆ ಮಾಡಿದೆನು. ಆಮೇಲೆ ತಿರುಗಿ ಅವರನ್ನು ಒಟ್ಟುಗೂಡಿಸಿ ಅವರ ದೇಶಕ್ಕೆ ಹಿಂದಕ್ಕೆ ಕರೆಸಿದೆನು.


ದೇವರು ಹೀಗೆನ್ನುವನು: “ಹೋರಾಡುವುದನ್ನು ನಿಲ್ಲಿಸಿ, ನಾನೇ ದೇವರೆಂಬುದನ್ನು ಕಲಿತುಕೊಳ್ಳಿ! ನಾನು ಜನಾಂಗಗಳನ್ನು ಸೋಲಿಸುವೆನು! ಇಡೀ ಲೋಕವನ್ನು ಹತೋಟಿಗೆ ತೆಗೆದುಕೊಳ್ಳುವೆನು!”


“ನಿನ್ನ ದೇವರು ಸರ್ವಶ್ರೇಷ್ಠನು ಮತ್ತು ಪ್ರಬಲನು ಎನ್ನುವದು ನನಗೆ ಖಚಿತವಾಯಿತು. ಆತನು ಎಲ್ಲ ಅರಸರ ಒಡೆಯನಾಗಿದ್ದಾನೆ. ಆತನು ಜನರಿಗೆ ನಿಗೂಢವಾಗಿದ್ದ ರಹಸ್ಯವನ್ನು ತಿಳಿಸುತ್ತಾನೆ. ನೀನು ನನಗೆ ಈ ರಹಸ್ಯವನ್ನು ತಿಳಿಸಲು ಸಮರ್ಥನಾದುದರಿಂದ ಇದೆಲ್ಲ ನಿಜವೆಂದು ನಾನು ನಂಬುತ್ತೇನೆ” ಎಂದು ಹೇಳಿದನು.


ನನ್ನ ಒಡೆಯನಾದ ಯೆಹೋವನು ಈ ಮಾತುಗಳನ್ನು ಹೇಳಿದನೆಂದು ಅವನಿಗೆ ತಿಳಿಸು: “‘ಚೀದೋನೇ, ನಾನು ನಿನಗೆ ವಿರುದ್ಧವಾಗಿದ್ದೇನೆ. ನಿನ್ನ ಜನರು ನನ್ನನ್ನು ಗೌರವಿಸಲು ಕಲಿಯುವರು. ನಾನು ಚೀದೋನನ್ನು ಶಿಕ್ಷಿಸಿದಾಗ ನಾನೇ ಯೆಹೋವನೆಂದು ಜನರಿಗೆ ಗೊತ್ತಾಗುವದು. ನಾನು ಪವಿತ್ರನು ಎಂದು ಅವರು ತಿಳಿದು ಆ ರೀತಿಯಾಗಿ ಅವರು ನನ್ನೊಂದಿಗೆ ವರ್ತಿಸುವರು.


ನಿಮ್ಮ ಹೃದಯಗಳಲ್ಲಿ ಕ್ರಿಸ್ತನೇ ಪ್ರಭುವಾಗಿರಲಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೇನೆಂದು ನಿಮ್ಮನ್ನು ಕೇಳುವ ಪ್ರತಿಯೊಬ್ಬರಿಗೂ ಉತ್ತರ ಹೇಳಲು ಯಾವಾಗಲೂ ಸಿದ್ಧವಾಗಿರಿ.


ಆದರೆ ನೀನು ನಮ್ಮ ದೇವರಾದ ಯೆಹೋವನು. ಆದ್ದರಿಂದ ದಯಮಾಡಿ ನಮ್ಮನ್ನು ಅಶ್ಶೂರದ ಅರಸನ ಕೈಯಿಂದ ರಕ್ಷಿಸು. ಆಗ ಭೂಮಿಯ ಎಲ್ಲಾ ರಾಜ್ಯಗಳೂ ಯೆಹೋವನಾದ ನೀನೇ ದೇವರೆಂದು ತಿಳಿದುಕೊಳ್ಳುವವು.”


ಈಗ ನೋಡು, ಸಂಭವಿಸಿದ್ದನ್ನು ಗಮನಿಸು. ಇನ್ನೊಂದು ಜನಾಂಗವು ಅವರನ್ನು ಗುಲಾಮರನ್ನಾಗಿ ಮಾಡಿತು. ಈ ದೇಶವು ನನ್ನ ಜನರನ್ನು ತೆಗೆದುಕೊಂಡು ಹೋಗಲು ಹಣ ಕೊಡಲಿಲ್ಲ. ಈ ದೇಶವು ನನ್ನ ಜನರ ಮೇಲೆ ದಬ್ಬಾಳಿಕೆ ನಡಿಸಿ ನಕ್ಕಿತ್ತು. ಈಗ ಜನರು ನನ್ನನ್ನೂ ನನ್ನ ಹೆಸರನ್ನೂ ಯಾವಾಗಲೂ ಗೇಲಿ ಮಾಡುತ್ತಾರೆ.”


ನಾನು ನಿಮ್ಮನ್ನು ತಿರುಗಿ ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದ ಇಸ್ರೇಲ್ ದೇಶಕ್ಕೆ ಬರಮಾಡಿದಾಗ ನಾನೇ ಯೆಹೋವನೆಂದು ಅರಿತುಕೊಳ್ಳುವಿರಿ.


ನನ್ನ ಜನರಾದ ಇಸ್ರೇಲಿನವರೊಂದಿಗೆ ಯುದ್ಧಕ್ಕೆ ಬರುವಿರಿ. ನೀವು ಕರೀ ಮೋಡದಂತೆ ದೇಶವನ್ನು ಕವಿಯುವಿರಿ. ಆ ಸಮಯ ಬಂದಾಗ ನನ್ನ ದೇಶಕ್ಕೆ ವಿರುದ್ಧವಾಗಿ ಯುದ್ಧ ಮಾಡಲು ನಿಮ್ಮನ್ನು ತರಿಸುವೆನು. ಆಗ ಗೋಗ್ ಮತ್ತು ಅವನೊಂದಿಗಿರುವ ರಾಜ್ಯಗಳು ನಾನು ಎಷ್ಟು ಸಾಮರ್ಥ್ಯಶಾಲಿ ಎಂದು ತಿಳಿದುಕೊಳ್ಳುವರು. ಅವರು ನನ್ನನ್ನು ಗೌರವಿಸಲು ಕಲಿಯುವರು. ನಾನು ಪವಿತ್ರನು ಎಂದು ತಿಳಿಯುವರು. ನಾನು ನಿನಗೇನು ಮಾಡಬೇಕಿದ್ದೇನೆಂದು ಅವರು ಕಾದು ನೋಡುವರು.’”


ದೇವರು ಹೇಳಿದ್ದೇನೆಂದರೆ, “ನಾನು ಮಾಡಿದ್ದನ್ನು ಇತರ ದೇಶಗಳವರು ನೋಡುವಂತೆ ಮಾಡುವೆನು. ಆಗ ಆ ದೇಶದವರು ನನ್ನನ್ನು ಗೌರವಿಸಲು ಪ್ರಾರಂಭಿಸುವರು. ಆ ಶತ್ರುವಿಗೆದುರಾಗಿ ನನ್ನ ಸಾಮರ್ಥ್ಯ ತೋರಿಸಿದುದನ್ನು ಅವರು ನೋಡುವರು.


ಆದ್ದರಿಂದ ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ಈಗ ನಾನು ಯಾಕೋಬನ ವಂಶದವರನ್ನು ಸೆರೆಯಿಂದ ಬಿಡಿಸಿ ಹಿಂದಕ್ಕೆ ತರುವೆನು. ಇಸ್ರೇಲಿನ ಜನಾಂಗದವರ ಮೇಲೆಲ್ಲಾ ನನ್ನ ದಯೆ ಇರುವದು. ನನ್ನ ಪವಿತ್ರನಾಮದ ಸಲುವಾಗಿ ಅವರನ್ನು ಉದ್ಧರಿಸುವೆನು.


ಬೇರೆಬೇರೆ ದೇಶಗಳಿಂದ ನಾನು ನನ್ನ ಜನರನ್ನು ಹಿಂದಕ್ಕೆ ತರಿಸುವೆನು. ಅವರ ಶತ್ರುಗಳ ದೇಶದಿಂದ ನಾನು ಅವರನ್ನು ಒಟ್ಟುಗೂಡಿಸುವೆನು. ಆಗ ಅನೇಕ ಜನಾಂಗಗಳು ನಾನು ಎಷ್ಟು ಪವಿತ್ರನೆಂದು ಅರಿತುಕೊಳ್ಳುವರು.


ನನ್ನ ಒಡೆಯನಾದ ಯೆಹೋವನು ಹೀಗೆ ಹೇಳಿದನು: “ಬೇರೆ ದೇಶಗಳಿಗೆ ನಾನು ಇಸ್ರೇಲರನ್ನು ಚದರಿಸಿದೆನು. ಆದರೆ ತಿರುಗಿ ಇಸ್ರೇಲರನ್ನೆಲ್ಲಾ ಒಟ್ಟುಗೂಡಿಸುವೆನು. ಆಗ ಆ ದೇಶದವರು ನಾನು ಪವಿತ್ರವಾದ ದೇವರೆಂದು ತಿಳಿದು ಆ ರೀತಿಯಾಗಿ ನನ್ನನ್ನು ನೋಡುವರು. ಆಗ ಇಸ್ರೇಲರು ತಮ್ಮ ದೇಶದಲ್ಲಿ ವಾಸಮಾಡುವರು. ಆ ದೇಶವನ್ನು ನನ್ನ ಸೇವಕನಾದ ಯಾಕೋಬನಿಗೆ ನಾನು ಕೊಟ್ಟಿದ್ದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು