Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 36:7 - ಪರಿಶುದ್ದ ಬೈಬಲ್‌

7 ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ನಿನ್ನ ಸುತ್ತಲೂ ಇರುವ ದೇಶಗಳು ನಿನ್ನ ವಿರುದ್ಧವಾಗಿ ಅವಮಾನಕರವಾದ ಮಾತುಗಳನ್ನು ಆಡಿದ್ದರಿಂದ ಅವುಗಳನ್ನು ನಾನು ದಂಡಿಸುವುದಾಗಿ ಪರಲೋಕದ ಕಡೆಗೆ ನನ್ನ ಕೈಯೆತ್ತಿ ಪ್ರಮಾಣ ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆದಕಾರಣ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನಿಮ್ಮ ಸುತ್ತಣ ಆ ಅನ್ಯಜನಾಂಗಗಳೇ ತಮ್ಮ ಮೇಲೆ ಬಿದ್ದ ಅವಮಾನವನ್ನು ಅನುಭವಿಸುವುದು ಖಂಡಿತ ಎಂದು ಕೈಯೆತ್ತಿ ಪ್ರಮಾಣಮಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆದಕಾರಣ ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನಿಮ್ಮ ಸುತ್ತಣ ಆ ಅನ್ಯ ಜನಾಂಗಗಳೇ ತಮ್ಮ ಮೇಲೆ ಬಿದ್ದ ಅವಮಾನವನ್ನು ಅನುಭವಿಸುವುದು ಖಂಡಿತ ಎಂದು ಕೈಯೆತ್ತಿ ಪ್ರಮಾಣಮಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆದಕಾರಣ ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಿಮ್ಮ ಸುತ್ತಣ ಆ ಅನ್ಯಜನಾಂಗಗಳೇ ತಮ್ಮ ಮೇಲೆ ಬಿದ್ದ ಅವಮಾನವನ್ನು ಅನುಭವಿಸುವದು ಖಂಡಿತ ಎಂದು ಕೈಯೆತ್ತಿ ಪ್ರಮಾಣಮಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ನನ್ನ ಕೈಯೆತ್ತಿ ಪ್ರಮಾಣ ಮಾಡಿದ್ದೇನೆ, ನಿಶ್ಚಯವಾಗಿ ನಿನ್ನ ಮೇಲಿರುವ ಆ ಜನಾಂಗಗಳು ತಮ್ಮ ನಿಂದೆಯನ್ನು ಹೊರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 36:7
14 ತಿಳಿವುಗಳ ಹೋಲಿಕೆ  

ನೀನು ಅವರಿಗೆ, ‘ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ನಾನು ಇಸ್ರೇಲನ್ನು ಆರಿಸಿಕೊಂಡ ದಿವಸ ನಾನು ನನ್ನನ್ನು ಈಜಿಪ್ಟ್ ದೇಶದಲ್ಲಿ ಅವರಿಗೆ ಪ್ರಕಟಿಸಿಕೊಂಡೆನು. ನಾನು ನನ್ನ ಕೈಯನ್ನು ಮೇಲೆತ್ತಿ ಯಾಕೋಬನ ಕುಟುಂಬಕ್ಕೆ ವಾಗ್ದಾನ ಮಾಡಿದೆನು. ನಾನು ಅವರಿಗೆ, “ನಿಮ್ಮ ಒಡೆಯನಾದ ಯೆಹೋವನು ನಾನೇ.” ಎಂದು ಹೇಳಿದೆನು.


ಅವರು ಅಡವಿಯಲ್ಲಿದ್ದಾಗ ನಾನು ಮತ್ತೊಂದು ಪ್ರಮಾಣವನ್ನು ಮಾಡಿದೆನು. ನಾನು ಅವರಿಗೆ ಕೊಟ್ಟಿದ್ದ ದೇಶಕ್ಕೆ ಅವರನ್ನು ಹೋಗಗೊಡಿಸುವದಿಲ್ಲ ಎಂದು ಪ್ರಮಾಣ ಮಾಡಿದೆನು. ಆ ದೇಶವು ಅತ್ಯುತ್ತಮವಾಗಿತ್ತು. ಎಲ್ಲಾ ದೇಶಗಳಿಗಿಂತ ಬಹು ಸುಂದರವಾದ ದೇಶ.


ಆದ್ದರಿಂದ ನಾನು ಉತ್ತರದ ಎಲ್ಲಾ ಜನಾಂಗಗಳನ್ನು ಕರೆಸುತ್ತೇನೆ.” ಇದು ಯೆಹೋವನ ಸಂದೇಶ. “ನಾನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಕೂಡಲೇ ಕರೆಸುವೆನು. ಅವನು ನನ್ನ ಸೇವಕ. ನಾನು ಆ ಜನರನ್ನು ಯೆಹೂದ ದೇಶದ ವಿರುದ್ಧವಾಗಿಯೂ ಯೆಹೂದ್ಯರ ವಿರುದ್ಧವಾಗಿಯೂ ತರುತ್ತೇನೆ. ನಾನು ನಿಮ್ಮ ಸುತ್ತಮುತ್ತಲಿನಲ್ಲಿದ್ದ ಜನಾಂಗಗಳ ವಿರುದ್ಧವಾಗಿಯೂ ಅವರನ್ನು ಕರೆತರುವೆನು. ನಾನು ಆ ದೇಶಗಳನ್ನೆಲ್ಲ ನಾಶಮಾಡುವೆನು. ನಾನು ಆ ಭೂಮಿಗಳನ್ನು ಶಾಶ್ವತವಾಗಿ ಬರಿದಾದ ಮರುಭೂಮಿಗಳನ್ನಾಗಿ ಮಾಡುವೆನು. ಜನರು ಆ ದೇಶಗಳನ್ನು ನೋಡಿ ಅವು ಹಾಳಾಗಿರುವುದನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು.


ನನ್ನ ಕೈಗಳನ್ನು ಆಕಾಶದ ಕಡೆಗೆತ್ತಿ ವಚನ ಕೊಡುತ್ತೇನೆ. ನಾನು ನಿತ್ಯಕಾಲಕ್ಕೆ ಜೀವಿಸುವುದು ಎಷ್ಟು ಸತ್ಯವೋ ಅದೇರೀತಿ ಇವೆಲ್ಲವೂ ನೆರವೇರುವವು.


“ಇಸ್ರೇಲ್ ದೇಶದ ವಿಷಯವಾಗಿ ಅವರಿಗೆ ಹೇಳು. ಪರ್ವತ, ಬೆಟ್ಟ, ತಗ್ಗು, ಹೊಳೆಗಳಿಗೆ ಹೇಳು. ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ ಎಂದು ತಿಳಿಸು. ‘ನೀನು ಆ ದೇಶಗಳವರ ನಿಂದನೆಯ ಮಾತುಗಳನ್ನು ಕೇಳಬೇಕಾಯಿತಲ್ಲಾ ಎಂದು ನನ್ನ ಹೃದಯವು ಸಿಟ್ಟಿನಲ್ಲಿ ಕುದಿಯುತ್ತದೆ.’”


“ಆದರೆ ಇಸ್ರೇಲಿನ ಪರ್ವತಗಳೇ, ನೀವು ಹೊಸ ಮರಗಳನ್ನು ಬೆಳೆಯಿಸಿ ನನ್ನ ಜನರಾದ ಇಸ್ರೇಲರಿಗೆ ಹಣ್ಣುಗಳನ್ನು ಒದಗಿಸುತ್ತೀರಿ.


“ನಾನು ಆ ಜನಾಂಗಗಳು ಇನ್ನು ಮೇಲೆ ನಿನ್ನನ್ನು ತುಚ್ಛೀಕರಿಸಲು ಬಿಡುವದಿಲ್ಲ. ಅವರ ಮಾತುಗಳಿಂದ ಇನ್ನು ನೀನು ಬೇಸರಪಟ್ಟುಕೊಳ್ಳಲಾರೆ. ನಿನ್ನ ಜನರಿಂದ ಮಕ್ಕಳನ್ನು ಕಿತ್ತುಕೊಳ್ಳಲಾರೆ.” ಇದು ನನ್ನ ಒಡೆಯನಾದ ಯೆಹೋವನ ನುಡಿ.


ಒಡೆಯನೇ, ನಮ್ಮ ಸುತ್ತಮುತ್ತಲಿನ ಜನರು ಮಾಡಿದ ಕಾರ್ಯಗಳಿಗಾಗಿ ಅವರನ್ನು ಏಳರಷ್ಟು ದಂಡಿಸು. ನಿನಗೆ ಅವಮಾನಮಾಡಿದ್ದರಿಂದ ಅವರನ್ನು ದಂಡಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು