Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 39:28 - ಪರಿಶುದ್ದ ಬೈಬಲ್‌

28 ನಾನು ಅವರ ಒಡೆಯನಾದ ಯೆಹೋವನೆಂದು ತಿಳಿಯುವರು. ಯಾಕೆಂದರೆ ನಾನು, ಅವರನ್ನು ಅವರ ಸ್ವದೇಶವನ್ನು ಬಿಟ್ಟು ಸೆರೆಹಿಡಿಯಲ್ಪಟ್ಟವರಾಗಿ ಬೇರೆ ದೇಶಗಳಿಗೆ ಹೋಗುವಂತೆ ಮಾಡಿದೆನು. ಆಮೇಲೆ ತಿರುಗಿ ಅವರನ್ನು ಒಟ್ಟುಗೂಡಿಸಿ ಅವರ ದೇಶಕ್ಕೆ ಹಿಂದಕ್ಕೆ ಕರೆಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 “ನಾನು ಅವರನ್ನು ಅನ್ಯಜನಾಂಗಗಳೊಳಗೆ ಸೆರೆಹೋಗುವಂತೆ ಮಾಡಿದ ಮೇಲೆ ಅವರನ್ನು ಒಟ್ಟುಗೂಡಿಸಿ, ಸ್ವದೇಶಕ್ಕೆ ಬರಮಾಡಿದುದರಿಂದ ನಾನೇ ಅವರ ದೇವರಾದ ಯೆಹೋವನು ಎಂದು ದೃಢಮಾಡಿಕೊಳ್ಳುವರು. ಅವರಲ್ಲಿ ಯಾರನ್ನೂ ದೇಶದಲ್ಲಿ ವಾಸಿಸುವುದಕ್ಕೆ ಬಿಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ನಾನು ಅವರನ್ನು ಜನಾಂಗಗಳೊಳಗೆ ಸೆರೆಹೋಗುವಂತೆ ಮಾಡಿ, ಆಮೇಲೆ ಒಟ್ಟುಗೂಡಿಸಿ, ಸ್ವದೇಶಕ್ಕೆ ತಂದದ್ದರಿಂದ ನಾನೇ ತಮ್ಮ ದೇವರಾದ ಸರ್ವೇಶ್ವರ ಎಂದು ದೃಢಮಾಡಿಕೊಳ್ಳುವರು. ಅವರಲ್ಲಿ ಯಾರನ್ನೂ ಸೆರೆಯಲ್ಲಿ ಬಿಟ್ಟುಬಿಡೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ನಾನು ಅವರನ್ನು ಜನಾಂಗಗಳೊಳಗೆ ಸೆರೆಹೋಗುವಂತೆ ಮಾಡಿ ಆಮೇಲೆ ಒಟ್ಟುಗೂಡಿಸಿ ಸ್ವದೇಶಕ್ಕೆ ತಂದದರಿಂದ ನಾನೇ ತಮ್ಮ ದೇವರಾದ ಯೆಹೋವನು ಎಂದು ದೃಢಮಾಡಿಕೊಳ್ಳುವರು. ಅವರಲ್ಲಿ ಯಾರನ್ನೂ ಸೆರೆಯಲ್ಲಿ ಬಿಟ್ಟುಬಿಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ನಾನು ಅವರನ್ನು ಜನಾಂಗಗಳೊಳಗಿಂದ ಸೆರೆಹೋಗುವಂತೆ ಮಾಡಿ, ಆಮೇಲೆ ಅವರಲ್ಲಿ ಒಬ್ಬರನ್ನಾದರೂ ಉಳಿಸದೆ ಒಟ್ಟುಗೂಡಿಸಿ ಸ್ವದೇಶಕ್ಕೆ ಬರಮಾಡಿದುದರಿಂದ ನಾನೇ ಅವರ ಯೆಹೋವ ದೇವರೆಂದು ಅವರು ತಿಳಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 39:28
14 ತಿಳಿವುಗಳ ಹೋಲಿಕೆ  

ಆ ದಿವಸದಿಂದ ಇಸ್ರೇಲಿನ ಜನಾಂಗ ನಾನು ಅವರ ಒಡೆಯನಾದ ಯೆಹೋವನೆಂದು ಅರಿಯುವರು.


ಇಸ್ರೇಲನ್ನು ನಾಶನ ಮಾಡುವದಕ್ಕಾಗಿ ಆಜ್ಞಾಪಿಸುವೆನು. ಇಸ್ರೇಲರನ್ನು ನಾನು ಪರದೇಶಗಳಲ್ಲಿ, ಚದರಿಸಿಬಿಡುವೆನು. ಒಬ್ಬನು ಜಾಳಿಗೆಯಲ್ಲಿ ಹಿಟ್ಟನ್ನು ಜಾಳಿಸುವಂತೆ ಇರುವುದು. ಒಳ್ಳೆಯ ಹಿಟ್ಟು ಜಾಳಿಗೆಯ ರಂಧ್ರದ ಮೂಲಕ ಕೆಳಗೆ ಬಿದ್ದರೆ, ಹಿಟ್ಟಿನ ಗಂಟುಗಳು ಜಾಳಿಗೆಯ ಮೇಲೆ ಸಿಕ್ಕಿಕೊಳ್ಳುವವು. ಯಾಕೋಬನ ಕುಟುಂಬಕ್ಕೆ ಇದೇ ರೀತಿಯಾಗುವುದು.


ಆ ಸಮಯದಲ್ಲಿ, ಯೆಹೋವನು ತನ್ನ ಜನರನ್ನು ಬೇರೆಯವರಿಂದ ಬೇರ್ಪಡಿಸುವನು. ಆತನು ಯೂಫ್ರೇಟೀಸ್ ನದಿಯಿಂದ ಪ್ರಾರಂಭಿಸಿ ಈಜಿಪ್ಟಿನ ನದಿಯತನಕ ಎಲ್ಲಾ ಜನರನ್ನು ಒಟ್ಟುಗೂಡಿಸುವನು. ಇಸ್ರೇಲ್ ಜನರೇ, ನೀವು ಒಬ್ಬೊಬ್ಬರಾಗಿಯೇ ಒಟ್ಟುಗೂಡಿಸಲ್ಪಡುವಿರಿ.


ಆಗ ನಾನು ಅವರ ದೇವರೆಂದೂ ನಾನು ಅವರೊಂದಿಗೆ ಇದ್ದೇನೆ ಎಂದೂ ಅವರು ತಿಳಿದುಕೊಳ್ಳುವರು. ಇಸ್ರೇಲ್ ಜನಾಂಗವು ಸಹ ತಾವು ನನ್ನ ಜನರು ಎಂದು ತಿಳಿದುಕೊಳ್ಳುವರು.” ಇದು ಒಡೆಯನಾದ ಯೆಹೋವನ ನುಡಿ.


ನಿನ್ನನ್ನು ನಾನು ನನ್ನ ನಂಬಿಗಸ್ತಳಾದ ವಧುವನ್ನಾಗಿ ಮಾಡುವೆನು. ಆಗ ನೀನು ನನ್ನನ್ನು ನಿಜವಾಗಿಯೂ ಅರಿತುಕೊಳ್ಳುವೆ.


ಯೆಹೋವನು ಜೆರುಸಲೇಮನ್ನು ಕಟ್ಟಿದನು. ಸೆರೆಯಾಳುಗಳಾಗಿ ಒಯ್ಯಲ್ಪಟ್ಟಿದ್ದ ಇಸ್ರೇಲರನ್ನು ಆತನು ಹಿಂದಕ್ಕೆ ಕರೆತಂದನು.


ಬಹುಕಾಲದ ನಂತರ, ನಿಮ್ಮನ್ನು ಕೆಲಸಕ್ಕೆ ತೆಗೆದುಕೊಳ್ಳಲಾಗುವುದು. ಅನಂತರದ ವರ್ಷಗಳಲ್ಲಿ, ನೀವು ಯುದ್ಧದಿಂದ ಗುಣಹೊಂದಿರುವ ದೇಶಕ್ಕೆ ಬರುವಿರಿ. ಆ ದೇಶದಲ್ಲಿರುವ ಜನರು ತಾವು ಕಳುಹಿಸಲ್ಪಟ್ಟಿದ್ದ ಅನೇಕ ದೇಶಗಳಿಂದ ಹಿಂತಿರುಗಿ ಬಂದು ಒಟ್ಟಾಗಿ ಸೇರಿದವರಾಗಿದ್ದಾರೆ. ಅವರು ಇಸ್ರೇಲಿನ ಪರ್ವತಗಳಿಗೆ ಮತ್ತೆ ಬರಮಾಡಲ್ಪಟ್ಟರಾಗಿದ್ದಾರೆ. ಹಿಂದಿನ ಕಾಲದಲ್ಲಿ ಅನೇಕ ಸಲ ಈ ಪರ್ವತಗಳು ಹಾಳು ಮಾಡಲ್ಪಟ್ಟಿದ್ದರೂ ಸಹ ಈಗ ಜನರನ್ನು ಮತ್ತೆ ಕರೆದುಕೊಂಡು ಬರಲಾಗಿದೆ ಮತ್ತು ಅವರೆಲ್ಲರೂ ಅಲ್ಲಿ ಸುರಕ್ಷಿತವಾಗಿ ನೆಲೆಸುವರು.


ಬೇರೆಬೇರೆ ದೇಶಗಳಿಂದ ನಾನು ನನ್ನ ಜನರನ್ನು ಹಿಂದಕ್ಕೆ ತರಿಸುವೆನು. ಅವರ ಶತ್ರುಗಳ ದೇಶದಿಂದ ನಾನು ಅವರನ್ನು ಒಟ್ಟುಗೂಡಿಸುವೆನು. ಆಗ ಅನೇಕ ಜನಾಂಗಗಳು ನಾನು ಎಷ್ಟು ಪವಿತ್ರನೆಂದು ಅರಿತುಕೊಳ್ಳುವರು.


ನಾನು ಇಸ್ರೇಲ್ ಜನಾಂಗದವರ ಮೇಲೆ ನನ್ನ ಆತ್ಮವನ್ನು ಸುರಿಸುವೆನು. ಅನಂತರ ನಾನು ಎಂದಿಗೂ ಅವರಿಗೆ ವಿಮುಖನಾಗಿರುವದಿಲ್ಲ.” ಇದು ನನ್ನ ಒಡೆಯನಾದ ಯೆಹೋವನ ನುಡಿ.


ಯೆಹೋವನು ಹೀಗೆ ಹೇಳುತ್ತಾನೆ ಎಂದು ಆ ಜನರಿಗೆ ಹೇಳು: ‘ನಾನು ಇಸ್ರೇಲ್ ಜನರನ್ನು ಅವರು ಚದರಿದ ದೇಶಗಳಿಂದಲೂ ಸುತ್ತಲಿರುವ ದೇಶಗಳಿಂದಲೂ ಅವರನ್ನು ಒಟ್ಟುಗೂಡಿಸಿ ಅವರ ಸ್ವದೇಶಕ್ಕೆ ತರುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು