Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 39:5 - ಪರಿಶುದ್ದ ಬೈಬಲ್‌

5 ನೀನು ನಗರವನ್ನು ಪ್ರವೇಶಿಸುವದಿಲ್ಲ. ನಗರದ ಹೊರಗೆ ಹೊಲದಲ್ಲಿ ನೀನು ಕೊಲ್ಲಲ್ಪಡುವೆ. ಇದನ್ನು ನಾನು ನುಡಿದಿದ್ದೇನೆ.’” ಈ ಸಂಗತಿಗಳನ್ನು ನನ್ನ ಒಡೆಯನಾದ ಯೆಹೋವನು ನುಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನೀನು ತೆರೆದ ಬಯಲಿನಲ್ಲಿ ಬೀಳುವಿ. ಏಕೆಂದರೆ ನಾನೇ ಅಪ್ಪಣೆ ಕೊಟ್ಟಿದ್ದೇನೆ’ ಎಂದು ಕರ್ತನಾದ ಯೆಹೋವನ ನುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನಾನೇ ಅಪ್ಪಣೆಕೊಟ್ಟಿದ್ದೇನೆ. ಇದು ಸರ್ವೇಶ್ವರನಾದ ದೇವರ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನೀವು ಬೈಲಿನಲ್ಲಿ ಬೀಳುವಿರಿ; ನಾನೇ ಅಪ್ಪಣೆಕೊಟ್ಟಿದ್ದೇನಲ್ಲಾ; ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನೀನು ತೆರೆದ ಬಯಲಿನಲ್ಲಿ ಬೀಳುವೆ, ಏಕೆಂದರೆ ನಾನೇ ಇದನ್ನು ಹೇಳಿರುವೆನು ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 39:5
8 ತಿಳಿವುಗಳ ಹೋಲಿಕೆ  

ಆಮೇಲೆ ನಿನ್ನನ್ನು ಒಣನೆಲದ ಮೇಲೆ ಹಾಕುವೆನು. ಹೊಲದ ಮೇಲೆ ನಿನ್ನನ್ನು ಬಿಸಾಡುವೆನು. ಎಲ್ಲಾ ಪಕ್ಷಿಗಳು ನಿನ್ನನ್ನು ತಿಂದುಬಿಡುವಂತೆ ಮಾಡುವೆನು. ಎಲ್ಲಾ ಕಡೆಗಳಿಂದ ಕಾಡುಮೃಗಗಳು ಬಂದು ನಿನ್ನನ್ನು ಹೊಟ್ಟೆತುಂಬಾ ತಿನ್ನುವಂತೆ ಮಾಡುವೆನು.


ನಾನು ನಿನ್ನನ್ನೂ ನಿನ್ನ ಮೀನುಗಳನ್ನೂ ನೀರಿನೊಳಗಿಂದ ಹೊರಕ್ಕೆತ್ತಿ ಒಣನೆಲದ ಮೇಲೆ ಹಾಕುವೆನು. ನೀನು ನೆಲದ ಮೇಲೆ ಬೀಳುವೆ. ಯಾರೂ ನಿನ್ನನ್ನು ಮೇಲಕ್ಕೆ ಎತ್ತುವುದೂ ಇಲ್ಲ ಹೂಣಿಡುವುದೂ ಇಲ್ಲ. ನಾನು ನಿನ್ನನ್ನು ಕಾಡುಪ್ರಾಣಿಗಳಿಗೂ ಪಕ್ಷಿಗಳಿಗೂ ಕೊಡುವೆನು. ಅವರಿಗೆ ನೀನು ಆಹಾರವಾಗುವೆ.


ಜೆರುಸಲೇಮಿನ ಜನರು ಯೆಹೋಯಾಕೀಮನನ್ನು ಒಂದು ಕತ್ತೆಯನ್ನು ಹೂಳಿದಂತೆ ಹೂಳಿಬಿಡುತ್ತಾರೆ. ಅವರು ಅವನ ಶವವನ್ನು ದೂರ ಎಳೆದುಕೊಂಡು ಹೋಗುತ್ತಾರೆ. ಅವನ ಶವವನ್ನು ಜೆರುಸಲೇಮಿನ ದ್ವಾರಗಳ ಹೊರಗೆ ಎಸೆದುಬಿಡುತ್ತಾರೆ.


ಜೆರುಸಲೇಮಿನ ಜನರು ಸೂರ್ಯನನ್ನು, ಚಂದ್ರನನ್ನು, ನಕ್ಷತ್ರಗಣಗಳನ್ನು ಪ್ರೀತಿಸಿ, ಅನುಸರಿಸಿ, ವಿಚಾರಿಸಿ, ಪೂಜಿಸಿದ್ದರಿಂದ ಅವರ ಎಲುಬುಗಳನ್ನು ಅವುಗಳ ಕೆಳಗೆ ಭೂಮಿಯ ಮೇಲೆ ಹರಡುವರು. ಯಾರೊಬ್ಬರೂ ಆ ಎಲುಬುಗಳನ್ನು ಪುನಃ ಒಂದೆಡೆ ಸೇರಿಸಿ ಹೂಳುವುದಿಲ್ಲ. ಆ ಎಲುಬುಗಳು ಭೂಮಿಯ ಮೇಲೆ ಎಸೆದ ಸಗಣಿಯಂತಾಗುವವು.


ಅದರ ಬೆಟ್ಟಪ್ರಾಂತ್ಯಗಳನ್ನು ಸತ್ತ ಹೆಣಗಳಿಂದ ಮುಚ್ಚುವೆನು. ಹೆಣಗಳು ಎಲ್ಲಾ ಕಡೆಗಳಲ್ಲಿಯೂ ಬೆಟ್ಟಗುಡ್ಡಗಳಲ್ಲಿಯೂ ತಗ್ಗುಗಳಲ್ಲಿಯೂ ಇರುವವು.


ನೀನು ಇಸ್ರೇಲಿನ ಪರ್ವತದಲ್ಲಿ ಸಾಯುವೆ, ನೀನೂ, ನಿನ್ನ ಎಲ್ಲಾ ಸೈನ್ಯ, ನಿನ್ನೊಂದಿಗೆ ಬಂದಿದ್ದ ಇತರ ದೇಶದವರೆಲ್ಲಾ ರಣರಂಗದಲ್ಲಿ ಸಾಯುವರು. ನಿಮ್ಮ ಹೆಣಗಳನ್ನು ಆಕಾಶದ ಸಕಲ ಮಾಂಸಹಾರಿ ಪಕ್ಷಿಗಳಿಗೂ, ಕಾಡುಪ್ರಾಣಿಗಳಿಗೂ ಆಹಾರವಾಗಿ ಕೊಡುವೆನು.


ದೇವರು ಹೇಳಿದ್ದೇನೆಂದರೆ, “ನಾನು ಮಾಗೋಗ್ ಮತ್ತು ಕಡಲ ತೀರದಲ್ಲಿ ವಾಸಿಸುವ ಜನರ ಮೇಲೆ ಬೆಂಕಿಯನ್ನು ಕಳುಹಿಸುತ್ತೇನೆ. ತಾವು ಸುರಕ್ಷಿತವಾಗಿದ್ದೇವೆ ಎಂದು ಅವರು ನೆನಸುತ್ತಾರೆ. ಆದರೆ ನಾನು ಯೆಹೋವನು ಎಂದು ಅವರಿಗೆ ತಿಳಿಯುವದು.


ಆ ಸಮಯದಲ್ಲಿ ಯೆಹೋವನು ಪರಲೋಕ ಸೈನ್ಯಕ್ಕೆ ಪರಲೋಕದಲ್ಲಿ ನ್ಯಾಯತೀರಿಸುವನು. ಭೂಮಿಯ ಅರಸರನ್ನು ಭೂಮಿಯ ಮೇಲೆ ನ್ಯಾಯವಿಚಾರಣೆಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು