Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 4:14 - ಪರಿಶುದ್ದ ಬೈಬಲ್‌

14 ಆಗ ನಾನು ಹೇಳಿದ್ದೇನೆಂದರೆ, “ಅಯ್ಯೋ, ನನ್ನ ಒಡೆಯನಾದ ಯೆಹೋವನೇ, ನಾನು ಎಂದೂ ಅಶುದ್ಧ ಆಹಾರವನ್ನು ತಿನ್ನಲಿಲ್ಲ. ತಾನಾಗಿಯೇ ಸತ್ತ ಪ್ರಾಣಿಯ ಮಾಂಸವನ್ನಾಗಲಿ ಕಾಡುಪ್ರಾಣಿಯು ಕೊಂದ ಪ್ರಾಣಿಯ ಮಾಂಸವನ್ನಾಗಲಿ ಎಂದೂ ತಿಂದದ್ದಿಲ್ಲ. ಬಾಲ್ಯ ಪ್ರಾಯದಿಂದ ಈ ದಿವಸ ಪರ್ಯಂತ ಅಶುದ್ಧ ಆಹಾರ ತಿಂದಿಲ್ಲ; ಅಂತಹ ಮಾಂಸವೂ ನನ್ನ ಬಾಯೊಳಕ್ಕೆ ಹೋಗಲಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅದಕ್ಕೆ ನಾನು, “ಅಯ್ಯೋ, ಕರ್ತನಾದ ಯೆಹೋವನೇ, ನಾನು ಹೊಲಸನ್ನು ಮುಟ್ಟಿದವನಲ್ಲ, ನಾನು ಹುಟ್ಟಿದಂದಿನಿಂದ ಇಂದಿನವರೆಗೂ ಸತ್ತ ಪಶುವಿನ ಮಾಂಸವನ್ನಾಗಲಿ, ಕಾಡುಮೃಗವು ಕೊಂದ ಪಶುವಿನ ಮಾಂಸವನ್ನಾಗಲಿ ತಿಂದವನೇ ಅಲ್ಲ; ಯಾವ ಅಸಹ್ಯಪದಾರ್ಥವೂ ನನ್ನ ಬಾಯೊಳಗೆ ಸೇರಲಿಲ್ಲ” ಎಂದು ಅರಿಕೆಮಾಡಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅದಕ್ಕೆ ನಾನು, “ಅಯ್ಯೋ, ದೇವರಾದ ಸರ್ವೇಶ್ವರ ನಾನು ಹೊಲಸನ್ನು ಮುಟ್ಟಿದವನಲ್ಲ, ನಾನು ಹುಟ್ಟಿದಂದಿನಿಂದ ಇಂದಿನವರೆಗೂ ಸತ್ತ ಪಶುವಿನ ಮಾಂಸವನ್ನಾಗಲಿ, ಕಾಡುಮೃಗ ಕೊಂದ ಪಶುವಿನ ಮಾಂಸವನ್ನಾಗಲಿ ತಿಂದವನೇ ಅಲ್ಲ; ಯಾವ ಅಸಹ್ಯಪದಾರ್ಥವೂ ನನ್ನ ಬಾಯೊಳಗೆ ಸೇರಲಿಲ್ಲ,” ಎಂದು ಅರಿಕೆಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅದಕ್ಕೆ ನಾನು - ಅಯ್ಯೋ, ಕರ್ತನಾದ ಯೆಹೋವನೇ, ನಾನು ಹೊಲಸನ್ನು ಮುಟ್ಟಿದವನಲ್ಲ. ನಾನು ಹುಟ್ಟಿದಂದಿನಿಂದ ಇಂದಿನವರೆಗೂ ಸತ್ತ ಪಶುವಿನ ಮಾಂಸವನ್ನಾಗಲಿ ಕಾಡುಮೃಗವು ಕೊಂದ ಪಶುವಿನ ಮಾಂಸವನ್ನಾಗಲಿ ತಿಂದವನೇ ಅಲ್ಲ; ಯಾವ ಅಸಹ್ಯಪದಾರ್ಥವೂ ನನ್ನ ಬಾಯೊಳಗೆ ಸೇರಲಿಲ್ಲ ಎಂದು ಅರಿಕೆಮಾಡಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅದಕ್ಕೆ ನಾನು, “ಅಯ್ಯೋ, ಸಾರ್ವಭೌಮ ಯೆಹೋವ ದೇವರೇ, ನಾನು ಹೊಲಸನ್ನು ಮುಟ್ಟಿದವನಲ್ಲ, ನಾನು ಹುಟ್ಟಿದ ದಿನದಿಂದ ಇಂದಿನವರೆಗೂ ಸತ್ತ ಪಶುವಿನ ಮಾಂಸವನ್ನಾಗಲಿ, ಕಾಡುಮೃಗ ಕೊಂದ ಪಶುವಿನ ಮಾಂಸವನ್ನಾಗಲಿ ತಿಂದವನೇ ಅಲ್ಲ. ಯಾವ ಅಸಹ್ಯ ಪದಾರ್ಥವೂ ನನ್ನ ಬಾಯೊಳಗೆ ಸೇರಲಿಲ್ಲ,” ಎಂದು ಅರಿಕೆಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 4:14
17 ತಿಳಿವುಗಳ ಹೋಲಿಕೆ  

ಆದರೆ ಪೇತ್ರನು, “ಪ್ರಭುವೇ, ನಾನು ಹಾಗೆ ಮಾಡಲಾರೆ! ಅಪವಿತ್ರವಾದದ್ದನ್ನು ಮತ್ತು ಅಶುದ್ಧವಾದದ್ದನ್ನು ನಾನೆಂದೂ ತಿಂದವನಲ್ಲ” ಎಂದು ಹೇಳಿದನು.


ಆಗ ನಾನು (ಯೆಹೆಜ್ಕೇಲ್), “ಅಯ್ಯೋ, ನನ್ನ ಒಡೆಯನಾದ ಯೆಹೋವನೇ, ನಾನು ಇದನ್ನೆಲ್ಲಾ ಹೇಳಿದರೆ, ನಿಗೂಢವಾದ ಕಥೆಗಳನ್ನು ಹೇಳುತ್ತಿದ್ದೇನೆಂದು ಹೇಳುವರು. ಮತ್ತು ನನಗೆ ಇನ್ನೆಂದಿಗೂ ಕಿವಿಗೊಡುವದಿಲ್ಲ” ಎಂದು ಹೇಳಿದೆನು.


ಅವರು ಜನರನ್ನು ಕೊಲ್ಲಲು ಹೊರಟಾಗ ನಾನೊಬ್ಬನೇ ಅಲ್ಲಿದ್ದೆನು. ನಾನು ಬಾಗಿ ನಮಸ್ಕರಿಸಿ, “ಅಯ್ಯೋ, ನನ್ನ ಒಡೆಯನಾದ ಯೆಹೋವನೇ, ನೀನು ಜೆರುಸಲೇಮಿನ ಮೇಲೆ ನಿನ್ನ ಕೋಪವನ್ನು ಪ್ರದರ್ಶಿಸುವಾಗ ಉಳಿದ ಇಸ್ರೇಲರನ್ನು ನೀನು ನಿರ್ಮೂಲ ಮಾಡುವೆ!” ಎಂದು ಹೇಳಿದೆನು.


ಆಗ ಯೆರೆಮೀಯನೆಂಬ ನಾನು, “ಸರ್ವಶಕ್ತನಾದ ಯೆಹೋವನೇ, ಹೇಗೆ ಮಾತನಾಡಬೇಕೆಂಬುದೇ ನನಗೆ ತಿಳಿಯದು. ನಾನು ಕೇವಲ ಹುಡುಗನಷ್ಟೇ” ಎಂದು ಹೇಳಿದೆ.


ಅವರು ಸತ್ತವರಿಂದ ಸಂದೇಶ ಪಡೆಯಲು ಸಮಾಧಿಗಳ ನಡುವೆ ಕುಳಿತುಕೊಳ್ಳುವರು. ಅವರು ಹಂದಿ ಮಾಂಸವನ್ನು ತಿನ್ನುತ್ತಾರೆ. ಅವರು ತೆಗೆದುಕೊಳ್ಳುವ ಭಕ್ಷ್ಯಗಳು ಕೊಳೆತ ಮಾಂಸದಿಂದ ಮಲಿನವಾಗಿವೆ.


“ಯೆಹೋವನು ಅಸಹ್ಯಪಡುವ ವಸ್ತುಗಳನ್ನು ನೀವು ತಿನ್ನಬಾರದು.


ಅವರು ತಮ್ಮ ವಿಶೇಷವಾದ ತೋಟದೊಳಗೆ ಪೂಜೆಮಾಡಲು ತಮ್ಮನ್ನು ಶುದ್ಧಮಾಡಿಕೊಳ್ಳುವಂತೆ ಸ್ನಾನಮಾಡುವರು. ತಮ್ಮ ವಿಶೇಷ ತೋಟದೊಳಗೆ ಹೋಗಲು ಒಬ್ಬರನ್ನೊಬ್ಬನು ಹಿಂಬಾಲಿಸುವರು. ಅಲ್ಲಿ ಅವರ ವಿಗ್ರಹಗಳನ್ನು ಪೂಜಿಸುವರು. ಆದರೆ ಯೆಹೋವನು ಅವರೆಲ್ಲರನ್ನು ನಾಶಮಾಡುವನು. “ಆ ಜನರು ಹಂದಿ, ಇಲಿ ಮತ್ತು ಇತರ ಅಶುದ್ಧ ಪ್ರಾಣಿಗಳ ಮಾಂಸವನ್ನು ತಿನ್ನುತ್ತಾರೆ. ಆದರೆ ಅವರೆಲ್ಲರೂ ಒಟ್ಟಾಗಿ ನಾಶವಾಗುವರು.” ಇದು ಯೆಹೋವನು ಹೇಳಿದ ಮಾತುಗಳು.


“ಅಲ್ಲದೆ ಯಾವನಾದರೂ ತನ್ನಷ್ಟಕ್ಕೆ ಸತ್ತ ಪ್ರಾಣಿಯನ್ನು ತಿಂದರೆ ಅಥವಾ ಬೇರೆ ಪ್ರಾಣಿಯಿಂದ ಕೊಲ್ಲಲ್ಪಟ್ಟ ಪ್ರಾಣಿಯನ್ನು ತಿಂದರೆ, ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು. ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಿಕೊಳ್ಳಬೇಕು. ಅವನು ಇಸ್ರೇಲನಾಗಿದ್ದರೂ ನಿಮ್ಮ ಮಧ್ಯದಲ್ಲಿ ವಾಸಿಸುವ ಪರದೇಶಸ್ಥನಾಗಿದ್ದರೂ ಹಾಗೆಯೇ ಮಾಡಬೇಕು.


“ನೀವು ನನ್ನ ವಿಶೇಷ ಜನರಾಗಿದ್ದೀರಿ. ಆದ್ದರಿಂದ ಕ್ರೂರಪ್ರಾಣಿಗಳಿಂದ ಕೊಲ್ಲಲ್ಪಟ್ಟ ಪ್ರಾಣಿಯ ಮಾಂಸವನ್ನು ನೀವು ತಿನ್ನಬಾರದು. ಅದನ್ನು ನಾಯಿಗಳು ತಿನ್ನಲಿ.


ಯಾಜಕರು ಸ್ವಾಭಾವಿಕವಾಗಿ ಸತ್ತು ಅಥವಾ ವನ್ಯಜಂತುಗಳು ಕೊಂದಿರುವ ಯಾವ ಪ್ರಾಣಿಯಾಗಲಿ ಪಕ್ಷಿಯಾಗಲಿ ಅದರ ಮಾಂಸವನ್ನು ತಿನ್ನಬಾರದು.


ಅದರಲ್ಲಿ ಯಾವುದನ್ನಾದರೂ ಮೂರನೆಯ ದಿನದಲ್ಲಿ ತಿಂದರೆ, ಅದು ಅಪವಿತ್ರವಾಗುವುದು. ಅದು ಅಂಗೀಕೃತವಾಗುವುದಿಲ್ಲ.


“ಯಾಜಕನು ಸತ್ತ ಪ್ರಾಣಿಯನ್ನಾಗಲಿ ಕ್ರೂರ ಪ್ರಾಣಿಗಳಿಂದ ಕೊಲ್ಲಲ್ಪಟ್ಟ ಪ್ರಾಣಿಯನ್ನಾಗಲಿ ತಿನ್ನಬಾರದು. ಅವನು ಅದನ್ನು ತಿಂದರೆ ಅಶುದ್ಧನಾಗುವನು. ನಾನೇ ಯೆಹೋವನು!


“ಸತ್ತುಬಿದ್ದ ಯಾವ ಪ್ರಾಣಿಯನ್ನಾಗಲೀ ತಿನ್ನಬಾರದು. ನಿಮ್ಮ ಊರಲ್ಲಿರುವ ಪರದೇಶಿಗೆ ಕೊಡಿರಿ. ಅವನು ತಿನ್ನಬಹುದು, ಅಥವಾ ಆ ಸತ್ತ ಪ್ರಾಣಿಯನ್ನು ಪರದೇಶಿಗೆ ಮಾರಬಹುದು. ಆದರೆ ನೀವು ತಿನ್ನಬಾರದು. ಯಾಕೆಂದರೆ ನೀವು ಯೆಹೋವನ ಜನರಾಗಿದ್ದೀರಿ; ಆತನ ಸ್ವಕೀಯ ಪ್ರಜೆಗಳಾಗಿದ್ದೀರಿ. ಆಡಿನ ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬೇಡಿರಿ.


ಆಗ ದೇವರು ನನಗೆ, “ಸರಿ! ಹಾಗಾದರೆ, ರೊಟ್ಟಿಯನ್ನು ಮಾಡುವದಕ್ಕಾಗಿ ಮನುಷ್ಯನ ಮಲದ ಬದಲಾಗಿ ದನದ ಒಣಗಿದ ಸಗಣಿಯನ್ನು ಉಪಯೋಗಿಸು” ಎಂದು ಉತ್ತರಕೊಟ್ಟನು.


ದಾನಿಯೇಲನು ಅರಸನ ಪುಷ್ಟಿದಾಯಕ ಆಹಾರವನ್ನು ಮತ್ತು ಪಾನೀಯವನ್ನು ಇಷ್ಟಪಡಲಿಲ್ಲ. ಆ ಆಹಾರ ಮತ್ತು ಪಾನೀಯಗಳಿಂದ ತನ್ನನ್ನು ಅಶುದ್ಧಗೊಳಿಸಿಕೊಳ್ಳಲು ದಾನಿಯೇಲನಿಗೆ ಇಷ್ಟವಿರಲಿಲ್ಲ. ಆದ್ದರಿಂದ ಈ ರೀತಿ ತನ್ನನ್ನು ಅಶುದ್ಧಗೊಳಿಸಿಕೊಳ್ಳದೆ ಇರುವದಕ್ಕಾಗಿ ಅಶ್ಪೆನಜನ ಅಪ್ಪಣೆಯನ್ನು ಕೇಳಿದನು.


ಮಾತ್ರವಲ್ಲದೆ, ನಿಮ್ಮ ಕುರಿದನಗಳಲ್ಲಿ ಚೊಚ್ಚಲಾದವುಗಳನ್ನು ನನಗೆ ಅರ್ಪಿಸಬೇಕು. ಚೊಚ್ಚಲಾದವುಗಳು ತನ್ನ ತಾಯಿಯೊಂದಿಗೆ ಏಳು ದಿನಗಳಿರಲಿ. ಬಳಿಕ, ಎಂಟನೆಯ ದಿನದಲ್ಲಿ ನೀವು ಅದನ್ನು ನನಗೆ ಅರ್ಪಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು