Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 4:16 - ಪರಿಶುದ್ದ ಬೈಬಲ್‌

16 ಬಳಿಕ ದೇವರು ನನಗೆ, “ನರಪುತ್ರನೇ, ನಾನು ಜೆರುಸಲೇಮಿಗೆ ರೊಟ್ಟಿಯ ಸರಬರಾಜನ್ನು ನಿಲ್ಲಿಸುವೆನು. ಜನರಿಗೆ ತಿನ್ನಲು ಕೊಂಚ ರೊಟ್ಟಿ ಸಿಗುವುದು. ಆಹಾರವು ಮುಗಿದು ಹೋಗುತ್ತಿರುವದರಿಂದ ಅವರು ಬಹಳವಾಗಿ ಚಿಂತಿಸುವರು. ಅವರಿಗೆ ಸ್ವಲ್ಪವೇ ಕುಡಿಯುವ ನೀರು ಇರುವುದು. ಆ ನೀರನ್ನು ಕುಡಿಯುವಾಗ ಅವರಿಗೆ ಭಯಹಿಡಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಇದಲ್ಲದೆ ಆತನು ನನಗೆ ಹೀಗೆ ಹೇಳಿದನು, “ನರಪುತ್ರನೇ, ನಾನು ಯೆರೂಸಲೇಮಿನಲ್ಲಿ ಆಹಾರ ಸರಬರಾಜನ್ನು ನಿಲ್ಲಿಸಿಬಿಡುವೆನು. ನಿವಾಸಿಗಳು ಅನ್ನವನ್ನು ತೂಕದ ಪ್ರಕಾರ ಕಳವಳದಿಂದ ತಿನ್ನುವರು, ನೀರನ್ನು ಅಳತೆಯ ಪ್ರಕಾರ ನಡುಗುತ್ತಾ ಕುಡಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಇದಲ್ಲದೆ ಅವರು ನನಗೆ ಹೀಗೆ ಹೇಳಿದರು: “ನರಪುತ್ರನೇ, ನಾನು ಜೆರುಸಲೇಮಿನಲ್ಲಿ ಆಹಾರ ಸರಬರಾಜನ್ನು ನಿಲ್ಲಿಸಿಬಿಡುವೆನು. ನಿವಾಸಿಗಳು ಅನ್ನವನ್ನು ತೂಕಮಾಡಿ ಅಂಜಿಕೆಯಿಂದ ತಿನ್ನುವರು, ನೀರನ್ನು ಅಳತೆಮಾಡಿ ಕಳವಳದಿಂದ ಕುಡಿಯುವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಇದಲ್ಲದೆ ಆತನು ನನಗೆ ಹೀಗೆ ಹೇಳಿದನು - ನರಪುತ್ರನೇ, ನಾನು ಯೆರೂಸಲೇವಿುನಲ್ಲಿ ಜೀವನಾಧಾರವನ್ನು ಮುರಿದುಬಿಡುವೆನು, ನಿವಾಸಿಗಳು ಅನ್ನವನ್ನು ತೂಕದ ಪ್ರಕಾರ ಬೆದರಿನಿಂದ ತಿನ್ನುವರು, ನೀರನ್ನು ಅಳತೆಯ ಪ್ರಕಾರ ಬೆರಗಾಗಿ ಕುಡಿಯುವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಇದಾದ ಮೇಲೆ ಅವರು ನನಗೆ, “ಮನುಷ್ಯಪುತ್ರನೇ, ಇಗೋ, ನಾನು ಯೆರೂಸಲೇಮಿನಲ್ಲಿ ಆಹಾರ ಸರಬರಾಜನ್ನು ಮುರಿಯುವೆನು. ಅವರು ತೂಕದ ಪ್ರಕಾರ ಚಿಂತೆಯಿಂದ ರೊಟ್ಟಿಯನ್ನು ತಿನ್ನುವರು. ನೀರನ್ನು ಅಳತೆಯ ಪ್ರಕಾರ ನಿರಾಶೆಯಿಂದ ಕುಡಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 4:16
18 ತಿಳಿವುಗಳ ಹೋಲಿಕೆ  

ಬರಗಾಲವೆಂಬ ಮರಣಕರವಾದ ಮತ್ತು ನಾಶಕರವಾದ ಬಾಣಗಳಿಂದ ನಾನು ನಿನ್ನನ್ನು ನಾಶಗೊಳಿಸುವದಕ್ಕಾಗಿಯೇ ಹೊಡೆಯುತ್ತೇನೆ. ನಾನು ನಿನ್ನ ದೇಶಕ್ಕೆ ಕ್ಷಾಮದ ಮೇಲೆ ಕ್ಷಾಮವನ್ನು ಬರಮಾಡುವೆನು ಮತ್ತು ನಿನ್ನ ಆಹಾರ ಸರಬರಾಜನ್ನು ನಿಲ್ಲಿಸುವೆನು.


ನಾನು ಹೇಳುವದನ್ನೆಲ್ಲಾ ಮನದಟ್ಟುಮಾಡಿಕೊಳ್ಳಿರಿ: ನಮ್ಮ ಒಡೆಯನೂ ಸರ್ವಶಕ್ತನೂ ಆದ ಯೆಹೋವನು ಯೆಹೂದ ಮತ್ತು ಇಸ್ರೇಲಿನ ಆಧಾರಗಳನ್ನೆಲ್ಲಾ ತೆಗೆದುಬಿಡುವನು. ಆತನು ಅವರ ಅನ್ನಪಾನಗಳನ್ನೆಲ್ಲಾ ತೆಗೆದುಬಿಡುವನು.


ನಿಮಗೆ ರೊಟ್ಟಿ ದಯಪಾಲಿಸುವುದನ್ನು ನಾನು ನಿಲ್ಲಿಸಿದಾಗ, ಹತ್ತು ಮಂದಿ ಸ್ತ್ರೀಯರು ತಮ್ಮಲ್ಲಿರುವ ಎಲ್ಲಾ ರೊಟ್ಟಿಗಳನ್ನು ಒಂದೇ ಒಲೆಯಲ್ಲಿ ಸುಡುವರು. ಅವರು ಪ್ರತಿ ರೊಟ್ಟಿಯ ತುಂಡನ್ನು ತೂಕ ಮಾಡಿ ಹಂಚಿಕೊಳ್ಳುವರು. ನೀವು ತಿಂದರೂ ಹಸಿದವರಾಗಿಯೇ ಇರುವಿರಿ.


“ನರಪುತ್ರನೇ, ನನಗೆ ಅಪನಂಬಿಗಸ್ತರಾಗಿದ್ದು ನನ್ನ ವಿರುದ್ಧ ಪಾಪಮಾಡುವ ಯಾವ ದೇಶವನ್ನಾದರೂ ನಾನು ದಂಡಿಸುತ್ತೇನೆ. ನಾನು ಅವರ ಆಹಾರ ಸರಬರಾಜನ್ನು ನಿಲ್ಲಿಸುತ್ತೇನೆ. ನಾನು ಕ್ಷಾಮವನ್ನು ಕಳುಹಿಸಿ ಅವರ ಜನರನ್ನೂ ಪ್ರಾಣಿಗಳನ್ನೂ ನಾಶಮಾಡುವೆ.


ದೇವರು ಆ ದೇಶಕ್ಕೆ ಬರಗಾಲವನ್ನು ಬರಮಾಡಿದನು. ಜನರಿಗೆ ತಿನ್ನುವುದಕ್ಕೂ ಸಾಕಷ್ಟು ಆಹಾರವಿರಲಿಲ್ಲ.


ಆಹಾರಕ್ಕಾಗಿ ನಾವು ನಮ್ಮ ಪ್ರಾಣಗಳನ್ನೇ ಆಪತ್ತಿಗೆ ಗುರಿ ಮಾಡಿಕೊಳ್ಳುತ್ತೇವೆ. ಊರ ಹೊರಗೆ ಖಡ್ಗಗಳನ್ನು ಹಿಡಿದುಕೊಂಡಿರುವ ಜನರಿದ್ದಾರೆ.


ಜೆರುಸಲೇಮಿನ ಎಲ್ಲ ಜನರು ನರಳಾಡುತ್ತಿದ್ದಾರೆ. ಅವಳ ಎಲ್ಲ ಜನರು ಆಹಾರಕ್ಕಾಗಿ ಹುಡುಕುತ್ತಿದ್ದಾರೆ. ಅವರು ತಮ್ಮ ಎಲ್ಲ ಒಳ್ಳೆಯ ವಸ್ತುಗಳನ್ನು ಆಹಾರಕ್ಕಾಗಿ ಕೊಟ್ಟುಬಿಡುತ್ತಿದ್ದಾರೆ. ಬದುಕಿರುವ ಸಲುವಾಗಿ ಅವರು ಹೀಗೆ ಮಾಡುತ್ತಿದ್ದಾರೆ. “ಯೆಹೋವನೇ, ನನ್ನ ಕಡೆಗೆ ನೋಡು! ಜನರು ನನ್ನನ್ನು ಹೇಗೆ ದ್ವೇಷಿಸುತ್ತಾರೆ ನೋಡು” ಎಂದು ಜೆರುಸಲೇಮ್ ಬೇಡಿಕೊಂಡಳು.


ನೀನು ನಿನ್ನ ಜನರಿಗೆ ಅನೇಕ ಕಷ್ಟಗಳನ್ನು ಕೊಟ್ಟಿರುವೆ. ನಾವು ಕುಡಿದವರಂತೆ ತೂರಾಡುತ್ತಾ ಬೀಳುತ್ತಿದ್ದೇವೆ.


ಆ ಕುರಿಮರಿಯು ಮೂರನೆಯ ಮುದ್ರೆಯನ್ನು ತೆಗೆಯಿತು. ಆಗ ಮೂರನೆಯ ಜೀವಿಯು, “ಬಾ” ಎಂದು ಹೇಳುವುದನ್ನು ನಾನು ಕೇಳಿದೆನು. ನಾನು ನೋಡಿದಾಗ, ನನ್ನ ಮುಂದೆ ಒಂದು ಕಪ್ಪು ಕುದುರೆಯಿರುವುದು ನನಗೆ ಕಾಣಿಸಿತು. ಆ ಕುದುರೆಯ ಮೇಲಿದ್ದ ಸವಾರನು ತನ್ನ ಕೈಯಲ್ಲಿ ಎರಡು ತಕ್ಕಡಿಗಳನ್ನು ಹಿಡಿದಿದ್ದನು.


ಆ ವರ್ಷದ ನಾಲ್ಕನೆ ತಿಂಗಳಿನ ಒಂಭತ್ತನೆ ದಿನದವರೆಗೆ ಆ ನಗರದಲ್ಲಿ ಹಸಿವಿನ ಹಾವಳಿ ತುಂಬ ಹೆಚ್ಚಾಗಿತ್ತು. ಆ ನಗರದಲ್ಲಿ ಜನರಿಗೆ ತಿನ್ನಲು ಆಹಾರವೇ ಇರಲಿಲ್ಲ.


ನಾವು ಕುಡಿಯುವ ನೀರನ್ನೂ ನಾವು ಕೊಂಡುಕೊಳ್ಳಬೇಕಾಗಿದೆ. ನಮ್ಮ ಸೌದೆಗೂ ಸಹ ನಾವು ಹಣ ಕೊಡಬೇಕಾಗಿದೆ.


ಆಗ ದೇವರು ನನಗೆ, “ಸರಿ! ಹಾಗಾದರೆ, ರೊಟ್ಟಿಯನ್ನು ಮಾಡುವದಕ್ಕಾಗಿ ಮನುಷ್ಯನ ಮಲದ ಬದಲಾಗಿ ದನದ ಒಣಗಿದ ಸಗಣಿಯನ್ನು ಉಪಯೋಗಿಸು” ಎಂದು ಉತ್ತರಕೊಟ್ಟನು.


ಹೀಗೆ ಎರಡು ಮೂರು ಪಟ್ಟಣಗಳ ನಿವಾಸಿಗಳು ನೀರಿಗಾಗಿ ಇನ್ನೊಂದು ಪಟ್ಟಣಕ್ಕೆ ಕಷ್ಟಪಟ್ಟು ಕೊಂಡುಹೋದರು. ಆದರೆ ಅಲ್ಲಿ ಎಲ್ಲರಿಗೂ ನೀರು ದೊರಕಲಿಲ್ಲ. ಹೀಗಾದರೂ ನೀವು ಸಹಾಯಕ್ಕಾಗಿ ನನ್ನ ಬಳಿಗೆ ಬರಲಿಲ್ಲ.” ಇವು ಯೆಹೋವನ ನುಡಿಗಳು.


ಜನರು ನಗರದೊಳಕ್ಕೆ ಆಹಾರವನ್ನು ತರಲು ಸೈನಿಕರು ಅವಕಾಶ ಕೊಡಲಿಲ್ಲ. ಆದ್ದರಿಂದ ಸಮಾರ್ಯದಲ್ಲಿ ಭೀಕರ ಬರಗಾಲವು ಆ ಕಾಲದಲ್ಲಾಯಿತು. ಸಮಾರ್ಯದಲ್ಲಿ ಒಂದು ಹೇಸರಕತ್ತೆಯ ತಲೆಯು ಎಂಭತ್ತು ಬೆಳ್ಳಿಯ ನಾಣ್ಯಗಳಿಗೆ ಮಾರಾಟವಾಗುವಷ್ಟು ಕೆಟ್ಟ ಪರಿಸ್ಥಿತಿಯಿತ್ತು. ಅರ್ಧಸೇರು ಪಾರಿವಾಳದ ಮಲದ ಲದ್ದಿಯು ಐದು ಬೆಳ್ಳಿನಾಣ್ಯಗಳಿಗೆ ಮಾರಾಟವಾಗುತ್ತಿತ್ತು.


ನಾಲ್ಕನೆಯ ತಿಂಗಳ ಒಂಭತ್ತನೆಯ ದಿನದಂದು ನಗರದಲ್ಲಿ ಭೀಕರ ಬರಗಾಲವಿತ್ತು. ಅಲ್ಲಿನ ಸಾಮಾನ್ಯರಿಗೆ ಆಹಾರವೇನೂ ಇರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು