Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 4:17 - ಪರಿಶುದ್ದ ಬೈಬಲ್‌

17 ಯಾಕೆಂದರೆ ಎಲ್ಲರಿಗೆ ಸಾಕಾಗುವಷ್ಟು ಆಹಾರಸಾಮಾಗ್ರಿಯಾಗಲಿ ನೀರಾಗಲಿ ಇರುವದಿಲ್ಲ. ಅವರು ಒಬ್ಬರನ್ನೊಬ್ಬರು ಕಂಡು ಗಾಬರಿಗೊಳ್ಳುವರು. ತಮ್ಮ ಪಾಪಗಳ ನಿಮಿತ್ತವಾಗಿ ಅವರು ಬಡಕಲಾಗಿಯೂ ಹಸಿವೆಯಿಂದಲೂ ಇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅವರಲ್ಲಿ ಪ್ರತಿಯೊಬ್ಬರೂ ಅನ್ನ ಮತ್ತು ನೀರಿನ ಕೊರತೆಯಿಂದ ಕುಗ್ಗಿ ತಮ್ಮ ಅಧರ್ಮದಿಂದ ನಾಶವಾಗಿ ಹೋಗುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅವರಲ್ಲಿ ಪ್ರತಿಯೊಬ್ಬರು ಅನ್ನನೀರಿನ ಕೊರತೆಯಿಂದ ಕುಗ್ಗಿಹೋಗಿ ತಮ್ಮ ಅಧರ್ಮದಿಂದ ಕ್ಷಯಿಸಿಹೋಗುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅವರಲ್ಲಿ ಪ್ರತಿಯೊಬ್ಬರೂ ಅನ್ನನೀರಿನ ಕೊರತೆಗೊಳಪಟ್ಟು ಸ್ತಬ್ಧರಾಗಿ ತಮ್ಮ ಅಧರ್ಮದಿಂದ ಕ್ಷಯಿಸಿಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅವರಿಗೆ ರೊಟ್ಟಿ ಮತ್ತು ನೀರಿನ ಕೊರತೆಯಿಂದ ಸ್ತಬ್ಧರಾಗಿ, ಒಬ್ಬರ ಸಂಗಡ ಒಬ್ಬರು ತಮ್ಮ ಪಾಪಗಳಿಗಾಗಿ ಕ್ಷಯಿಸಿ ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 4:17
7 ತಿಳಿವುಗಳ ಹೋಲಿಕೆ  

ನೀವು ನಿಮ್ಮ ಮುಂಡಾಸವನ್ನು ಧರಿಸಿಕೊಂಡು ಕಾಲಿಗೆ ಕೆರವನ್ನು ಹಾಕಿಕೊಳ್ಳುವಿರಿ. ನೀವು ನಿಮ್ಮ ದುಃಖವನ್ನು ತೋರಿಸಿಕೊಳ್ಳುವುದಿಲ್ಲ. ನೀವು ಅಳುವದೂ ಇಲ್ಲ. ಆದರೆ ನೀವು ನಿಮ್ಮ ಪಾಪಗಳ ದೆಸೆಯಿಂದ ಕೃಶರಾಗುವಿರಿ. ನೀವು ಒಬ್ಬರಿಗೊಬ್ಬರು ದುಃಖದ ಶಬ್ದಗಳನ್ನು ಮಾಡುವಿರಿ.


ಆದ್ದರಿಂದ ನಿಮ್ಮಲ್ಲಿ ಜೀವಂತವಾಗಿ ಉಳಿದವರು ತಮ್ಮ ಪಾಪದ ದೆಸೆಯಿಂದಲೂ ತಮ್ಮ ಪೂರ್ವಿಕರ ಪಾಪದ ದೆಸೆಯಿಂದಲೂ ಅವರಂತೆಯೇ ಶತ್ರುಗಳ ದೇಶಗಳಲ್ಲಿ ಕ್ಷಯಿಸಿಹೋಗುವರು.


“ಆದ್ದರಿಂದ ನರಪುತ್ರನೇ, ನನ್ನ ಪರವಾಗಿ ಇಸ್ರೇಲ್ ಜನರೊಂದಿಗೆ ಮಾತನಾಡು. ‘ನಾವು ಪಾಪಮಾಡಿದ್ದೇವೆ. ಕಟ್ಟಳೆಗಳನ್ನು ಮೀರಿದ್ದೇವೆ. ನಮ್ಮ ಪಾಪಗಳು ಹೊರಲಾರದಷ್ಟು ಭಾರವಾಗಿವೆ. ನಾವು ಆ ಪಾಪಗಳಿಂದಾಗಿ ಕ್ಷೀಣಿಸುತ್ತಿದ್ದೇವೆ. ನಾವು ಜೀವಿಸಬೇಕಾದರೆ ಏನು ಮಾಡಬೇಕು?’ ಎಂದು ಅವರು ಕೇಳಿಯಾರು.


ನಿಮಗೆ ರೊಟ್ಟಿ ದಯಪಾಲಿಸುವುದನ್ನು ನಾನು ನಿಲ್ಲಿಸಿದಾಗ, ಹತ್ತು ಮಂದಿ ಸ್ತ್ರೀಯರು ತಮ್ಮಲ್ಲಿರುವ ಎಲ್ಲಾ ರೊಟ್ಟಿಗಳನ್ನು ಒಂದೇ ಒಲೆಯಲ್ಲಿ ಸುಡುವರು. ಅವರು ಪ್ರತಿ ರೊಟ್ಟಿಯ ತುಂಡನ್ನು ತೂಕ ಮಾಡಿ ಹಂಚಿಕೊಳ್ಳುವರು. ನೀವು ತಿಂದರೂ ಹಸಿದವರಾಗಿಯೇ ಇರುವಿರಿ.


ಹೀಗೆ ಎರಡು ಮೂರು ಪಟ್ಟಣಗಳ ನಿವಾಸಿಗಳು ನೀರಿಗಾಗಿ ಇನ್ನೊಂದು ಪಟ್ಟಣಕ್ಕೆ ಕಷ್ಟಪಟ್ಟು ಕೊಂಡುಹೋದರು. ಆದರೆ ಅಲ್ಲಿ ಎಲ್ಲರಿಗೂ ನೀರು ದೊರಕಲಿಲ್ಲ. ಹೀಗಾದರೂ ನೀವು ಸಹಾಯಕ್ಕಾಗಿ ನನ್ನ ಬಳಿಗೆ ಬರಲಿಲ್ಲ.” ಇವು ಯೆಹೋವನ ನುಡಿಗಳು.


ಜನರು ನಗರದೊಳಕ್ಕೆ ಆಹಾರವನ್ನು ತರಲು ಸೈನಿಕರು ಅವಕಾಶ ಕೊಡಲಿಲ್ಲ. ಆದ್ದರಿಂದ ಸಮಾರ್ಯದಲ್ಲಿ ಭೀಕರ ಬರಗಾಲವು ಆ ಕಾಲದಲ್ಲಾಯಿತು. ಸಮಾರ್ಯದಲ್ಲಿ ಒಂದು ಹೇಸರಕತ್ತೆಯ ತಲೆಯು ಎಂಭತ್ತು ಬೆಳ್ಳಿಯ ನಾಣ್ಯಗಳಿಗೆ ಮಾರಾಟವಾಗುವಷ್ಟು ಕೆಟ್ಟ ಪರಿಸ್ಥಿತಿಯಿತ್ತು. ಅರ್ಧಸೇರು ಪಾರಿವಾಳದ ಮಲದ ಲದ್ದಿಯು ಐದು ಬೆಳ್ಳಿನಾಣ್ಯಗಳಿಗೆ ಮಾರಾಟವಾಗುತ್ತಿತ್ತು.


ಯೆಹೋವನು ಹೇಳುವುದೇನೆಂದರೆ, ‘ನಾನು ಈ ಸ್ಥಳಕ್ಕೂ ಇಲ್ಲಿ ವಾಸಿಸುವವರಿಗೂ ಸಂಕಟವನ್ನು ಬರಮಾಡುವೆನು. ಯೆಹೂದ ದೇಶದ ಅರಸನ ಮುಂದೆ ಓದಿದಂಥ ಪುಸ್ತಕದಲ್ಲಿ ಬರೆಯಿಸಿದ ಎಲ್ಲಾ ಶಾಪಗಳನ್ನು ನಾನು ಬರಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು