Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 4:3 - ಪರಿಶುದ್ದ ಬೈಬಲ್‌

3 ಆ ಬಳಿಕ ಒಂದು ಕಬ್ಬಿಣದ ರೊಟ್ಟಿ ಕಲ್ಲನ್ನು ನಿನಗೂ ನಗರಕ್ಕೂ ಮಧ್ಯೆ ಇಡು. ಅದು ನಿನಗೂ ನಗರಕ್ಕೂ ನಡುವೆ ಇರುವ ಕಬ್ಬಿಣದ ಗೋಡೆಯಂತಿರುವುದು. ಈ ರೀತಿಯಾಗಿ ನೀನು ಆ ನಗರಕ್ಕೆ ವಿರುದ್ಧವಾಗಿರುವಂತೆ ಕಂಡುಬರುವೆ. ನೀನು ಆ ನಗರಕ್ಕೆ ಮುತ್ತಿಗೆ ಹಾಕಿ ಅದರ ಮೇಲೆ ಯುದ್ಧ ಮಾಡುವಿ. ಯಾಕೆಂದರೆ, ಶೀಬ್ರದಲ್ಲೇ ಏನು ಸಂಭವಿಸುತ್ತದೆ ಎಂಬುದಕ್ಕೆ ಇಸ್ರೇಲ್ ಜನರಿಗೆ ಇದು ಸೂಚನೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಮೇಲೆ ಕಬ್ಬಿಣದ ಹಂಚನ್ನು ತೆಗೆದುಕೊಂಡು ಅದನ್ನು ನಿನಗೂ ಮತ್ತು ಆ ಪಟ್ಟಣಕ್ಕೂ ಮಧ್ಯೆ ಕಬ್ಬಿಣದ ಗೋಡೆಯನ್ನಾಗಿ ನಿಲ್ಲಿಸಿ ಆ ಪಟ್ಟಣದ ಮೇಲೆ ದೃಷ್ಟಿಯಿಡು; ಅದು ಮುತ್ತಿಗೆ ಹಾಕಲ್ಪಡುವುದು, ನೀನು ಅದನ್ನು ಮುತ್ತಿಗೆ ಹಾಕಿದಂತಾಗುವುದು. ಇದು ಇಸ್ರಾಯೇಲ್ ವಂಶದವರಿಗೆ ಒಂದು ಗುರುತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆಮೇಲೆ ಕಬ್ಬಿಣದ ಹೆಂಚನ್ನು ತೆಗೆದುಕೊಂಡು ಅದನ್ನು ನಿನಗೂ ಆ ಪಟ್ಟಣಕ್ಕೂ ಮಧ್ಯೆ ಕಬ್ಬಿಣದ ಗೋಡೆಯನ್ನಾಗಿ ನಿಲ್ಲಿಸಿ ಆ ಪಟ್ಟಣದ ಮೇಲೆ ದೃಷ್ಟಿಯಿಡು; ಅದು ಮುತ್ತಲ್ಪಡುವುದು. ನೀನು ಅದನ್ನು ಮುತ್ತಿದಂತಾಗುವುದು. ಇದು ಇಸ್ರಯೇಲ್ ವಂಶದವರಿಗೆ ಒಂದು ಸಂಕೇತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಮೇಲೆ ಕಬ್ಬಿಣದ ಹಂಚನ್ನು ತೆಗೆದುಕೊಂಡು ಅದನ್ನು ನಿನಗೂ ಆ ಪಟ್ಟಣಕ್ಕೂ ಮಧ್ಯೆ ಕಬ್ಬಿಣದ ಗೋಡೆಯನ್ನಾಗಿ ನಿಲ್ಲಿಸಿ ಆ ಪಟ್ಟಣದ ಮೇಲೆ ದೃಷ್ಟಿಯಿಡು; ಅದು ಮುತ್ತಲ್ಪಡುವದು, ನೀನು ಅದನ್ನು ಮುತ್ತಿದಂತಾಗುವದು. ಇದು ಇಸ್ರಾಯೇಲ್ ವಂಶದವರಿಗೆ ಗುರುತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಮೇಲೆ ಕಬ್ಬಿಣದ ಹಂಚನ್ನು ತೆಗೆದುಕೊಂಡು, ಅದನ್ನು ನಿನಗೂ, ಆ ಪಟ್ಟಣಕ್ಕೂ ಮಧ್ಯೆ ಕಬ್ಬಿಣದ ಗೋಡೆಯನ್ನಾಗಿ ನಿಲ್ಲಿಸಿ, ಆ ಪಟ್ಟಣದ ಮೇಲೆ ದೃಷ್ಟಿಯಿಡು, ಅದು ಮುತ್ತಲಾಗುವುದು. ನೀನು ಅದನ್ನು ಮುತ್ತಿದಂತಾಗುವುದು. ಇದು ಇಸ್ರಾಯೇಲಿನ ಜನರಿಗೆ ಒಂದು ಸಂಕೇತ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 4:3
13 ತಿಳಿವುಗಳ ಹೋಲಿಕೆ  

ರಾತ್ರಿಕಾಲದಲ್ಲಿ ಚೀಲವನ್ನು ಹೆಗಲಿಗೇರಿಸಿ ಹೊರಗೆ ನಡಿ. ನೀನು ನೆಲವನ್ನು ನೋಡಲಾಗದಂತೆ ನಿನ್ನ ಮುಖವನ್ನು ಮುಚ್ಚಿಕೋ. ಇದೆಲ್ಲಾ ಮಾಡುವಾಗ ಜನರು ನಿನ್ನನ್ನು ನೋಡುತ್ತಿರಬೇಕು. ಯಾಕೆಂದರೆ ನಿನ್ನನ್ನು ನಾನು ಇಸ್ರೇಲರಿಗೆ ಒಂದು ನಿದರ್ಶನವಾಗಿ ಉಪಯೋಗಿಸುತ್ತಿದ್ದೇನೆ.”


ಆಗ ಯೆಹೋವನು, “ಮೂರು ವರ್ಷಗಳ ತನಕ ನನ್ನ ಸೇವಕನಾದ ಯೆಶಾಯನು ಬಟ್ಟೆ ಇಲ್ಲದೆ, ಪಾದರಕ್ಷೆ ಇಲ್ಲದೆ ನಡೆದಾಡಿದ್ದಾನೆ. ಇದು ಈಜಿಪ್ಟಿಗೂ ಇಥಿಯೋಪ್ಯಕ್ಕೂ ಗುರುತಾಗಿದೆ.


“ನಾನೂ ನನ್ನ ಮಕ್ಕಳೂ ಇಸ್ರೇಲ್ ಜನರಿಗೆ ಒಂದು ಗುರುತಾಗಿದ್ದೇವೆ. ಸರ್ವಶಕ್ತನಾದ ಯೆಹೋವನು ನಮ್ಮನ್ನು ಕಳುಹಿಸಿದ್ದಾನೆ. ಆತನು ಚೀಯೋನ್ ಬೆಟ್ಟದಲ್ಲಿ ವಾಸಿಸುತ್ತಾನೆ.”


‘ನೀನು ಅವರಿಗೆ ಹೀಗೆ ಹೇಳು: ನಾನು ನಿಮಗೆ ಒಂದು ಸೂಚನೆಯಾಗಿದ್ದೇನೆ. ನಾನು ಮಾಡಿದ ಸೂಚಕಕಾರ್ಯ ಖಂಡಿತವಾಗಿ ನಿಮಗೆ ಸಂಭವಿಸುವುದು. ನೀವು ದೂರದೇಶಕ್ಕೆ ಸೆರೆಯಾಳುಗಳಾಗಿ ಹೋಗುವಿರಿ.’


ಇದಲ್ಲದೆ, ದೇವರು ಅದ್ಭುತಕಾರ್ಯಗಳಿಂದ, ಸೂಚಕಕಾರ್ಯಗಳಿಂದ, ನಾನಾ ವಿಧವಾದ ಮಹತ್ಕಾರ್ಯಗಳಿಂದ ಮತ್ತು ಪವಿತ್ರಾತ್ಮನ ವರಗಳನ್ನು ತನ್ನ ಇಷ್ಟಾನುಸಾರವಾಗಿ ದಯಪಾಲಿಸುವುದರ ಮೂಲಕ ಅದನ್ನು ಸ್ಥಿರಪಡಿಸಿದನು.


ಬಳಿಕ ಸಿಮೆಯೋನನು ಅವರನ್ನು ಆಶೀರ್ವದಿಸಿ ಮರಿಯಳಿಗೆ, “ಈ ಮಗುವಿನ ನಿಮಿತ್ತ ಯೆಹೂದ್ಯರಲ್ಲಿ ಅನೇಕರು ಬೀಳುವರು. ಅನೇಕರು ಏಳುವರು. ಕೆಲವರು ಅಂಗೀಕರಿಸರು ಎಂಬುದಕ್ಕೆ ಈತನು ದೇವರಿಂದ ಬಂದ ಗುರುತಾಗಿರುವನು.


ಜೆರುಸಲೇಮನ್ನು ಹೀಗೆ ವಶಪಡಿಸಿಕೊಳ್ಳಲಾಯಿತು: ಚಿದ್ಕೀಯನು ಯೆಹೂದದ ರಾಜನಾಗಿ ಆಳುತ್ತಿದ್ದ ಒಂಭತ್ತನೇ ವರ್ಷದ ಹತ್ತನೆಯ ತಿಂಗಳಿನಲ್ಲಿ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ತನ್ನ ಇಡೀ ಸೈನ್ಯದೊಂದಿಗೆ ಜೆರುಸಲೇಮಿನ ಮೇಲೆ ಧಾಳಿ ಮಾಡಿದನು. ಅದನ್ನು ವಶಪಡಿಸಿಕೊಳ್ಳುವದಕ್ಕಾಗಿ ಅವನು ಆ ನಗರವನ್ನು ಮುತ್ತಿದನು.


ನಿಮ್ಮ ಧಾನ್ಯನೈವೇದ್ಯವು ಕಬ್ಬಿಣದ ಹಂಚಿನಲ್ಲಿ ಬೇಯಿಸಲ್ಪಟ್ಟಿದ್ದರೆ, ಅದು ಎಣ್ಣೆ ಬೆರೆಸಿದ ಹುಳಿಯಿಲ್ಲದ ಶ್ರೇಷ್ಠ ಹಿಟ್ಟಿನಿಂದ ಮಾಡಿದ್ದಾಗಿರಬೇಕು.


ಚಿದ್ಕೀಯನ ಆಳ್ವಿಕೆಯ ಹನ್ನೊಂದನೆ ವರ್ಷದ ನಾಲ್ಕನೆಯ ತಿಂಗಳಿನ ಒಂಭತ್ತನೇ ದಿನದಂದು ಜೆರುಸಲೇಮಿನ ಪೌಳಿಗೋಡೆಯನ್ನು ಒಡೆಯಲಾಯಿತು.


ಉತ್ತರದ ರಾಜನು ತನ್ನ ಸರ್ವಶಕ್ತಿಯಿಂದ ದಕ್ಷಿಣದ ರಾಜನೊಂದಿಗೆ ಹೋರಾಡಲು ನಿರ್ಧರಿಸುವನು. ಅವನು ದಕ್ಷಿಣದ ರಾಜನೊಂದಿಗೆ ಒಂದು ಒಪ್ಪಂದವನ್ನು ಮಾಡಿಕೊಳ್ಳುವನು. ಉತ್ತರದ ರಾಜನು ತನ್ನ ಮಗಳನ್ನು ದಕ್ಷಿಣದ ರಾಜನಿಗೆ ಮದುವೆ ಮಾಡಿಕೊಡುವನು. ದಕ್ಷಿಣದ ರಾಜನನ್ನು ಸೋಲಿಸುವ ಉದ್ದೇಶದಿಂದ ಉತ್ತರದ ರಾಜನು ಹೀಗೆ ಮಾಡುವನು. ಆದರೆ ಅವನ ತಂತ್ರಗಳು ಯಶಸ್ವಿಯಾಗುವದಿಲ್ಲ. ಅವುಗಳಿಂದ ಅವನಿಗೆ ಸಹಾಯ ಸಿಕ್ಕುವದಿಲ್ಲ.


ಸೈನ್ಯಗಳು ನಿಮ್ಮ ವಿಶೇಷವಾದ ಕಣಿವೆಯಲ್ಲಿ ಎದುರುಬದುರಾಗಿ ಭೇಟಿಯಾಗುವರು. ಕಣಿವೆಯು ರಥಗಳಿಂದ ತುಂಬಿಹೋಗುವದು. ಅಶ್ವದಳದವರನ್ನು ದ್ವಾರದ ಮುಂದೆ ನಿಲ್ಲಿಸಲಾಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು