Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 4:4 - ಪರಿಶುದ್ದ ಬೈಬಲ್‌

4 “ಆಮೇಲೆ ನೀನು ನಿನ್ನ ಎಡಮಗ್ಗುಲಲ್ಲಿ ಮಲಗಿಕೊಂಡು ಇಸ್ರೇಲ್ ಜನರ ದೋಷವನ್ನು ನಿನ್ನ ಎಡಮಗ್ಗುಲ ಮೇಲೆ ಹಾಕು. ನೀನು ನಿನ್ನ ಎಡಮಗ್ಗುಲಲ್ಲಿ ಮಲಗಿರುವಷ್ಟು ದಿನ ಇಸ್ರೇಲರ ದೋಷಗಳನ್ನು ಹೊತ್ತುಕೊಳ್ಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 “ಇದಲ್ಲದೆ, ನೀನು ನಿನ್ನ ಎಡಮಗ್ಗುಲಲ್ಲಿ ಮಲಗಿಕೋ. ಇಸ್ರಾಯೇಲ್ ವಂಶದವರ ಪಾಪದ ಭಾರವನ್ನು ಅದರ ಮೇಲಿಡಬೇಕು. ನೀನು ಎಡಮಗ್ಗುಲಲ್ಲಿ ಮಲಗುವ ದಿನಗಳ ಪ್ರಕಾರ ಅವರ ಪಾಪದ ಭಾರವನ್ನು ಹೊತ್ತುಕೊಂಡಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 “ಇದಲ್ಲದೆ ನೀನು ನಿನ್ನ ಎಡಮಗ್ಗುಲಲ್ಲಿ ಮಲಗು. ಇಸ್ರಯೇಲ್ ವಂಶದವರ ಅಧರ್ಮದ ಭಾರ ನಿನ್ನ ಮೇಲೆ ಬಿದ್ದಿದೆ ಎಂದು ಗೊತ್ತಾಗಲಿ; ನೀನು ಎಷ್ಟು ದಿವಸ ಹೀಗೆ ಮಲಗಿಕೊಂಡಿರುವಿಯೋ ಅಷ್ಟು ದಿವಸ ಅವರ ಅಧರ್ಮವನ್ನು ಹೊತ್ತುಕೊಂಡಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಇದಲ್ಲದೆ ನೀನು ನಿನ್ನ ಎಡಮಗ್ಗುಲಲ್ಲಿ ಮಲಗಿಕೋ, ಇಸ್ರಾಯೇಲ್ ವಂಶದವರ ಅಧರ್ಮದ ಭಾರವು ಅದರ ಮೇಲೆ ಬಿದ್ದಿದೆ ಎಂದು ಗೊತ್ತಾಗಲಿ; ನೀನು ಎಷ್ಟು ದಿವಸ ಹೀಗೆ ಮಲಗಿಕೊಂಡಿರುವಿಯೋ ಅಷ್ಟು ದಿವಸ ಅವರ ಅಧರ್ಮವನ್ನು ಹೊತ್ತುಕೊಂಡಿರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 “ನೀನು ನಿನ್ನ ಎಡಗಡೆಯಲ್ಲಿ ಮಲಗಿ, ಇಸ್ರಾಯೇಲಿನ ಜನರ ಅಕ್ರಮಗಳನ್ನು ನಿಮ್ಮ ಮೇಲಿಡಬೇಕು. ನೀನು ಎಡಗಡೆಯಲ್ಲಿ ಮಲಗುವ ದಿವಸಗಳ ಲೆಕ್ಕದ ಪ್ರಕಾರ ಅವರ ಅಕ್ರಮಗಳನ್ನು ನಿಮ್ಮ ಮೇಲೆ ಹೊತ್ತುಕೊಂಡಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 4:4
11 ತಿಳಿವುಗಳ ಹೋಲಿಕೆ  

ಹೀಗೆ ಹೋತವು ಜನರ ಪಾಪಗಳನ್ನು ಹೊತ್ತುಕೊಂಡು ಬರಿದಾದ ಮರುಭೂಮಿಗೆ ಹೋಗುವುದು. ಹೋತವನ್ನು ನಡಿಸಿಕೊಂಡು ಹೋಗುವ ಮನುಷ್ಯನು ಮರುಭೂಮಿಯಲ್ಲಿ ಅದನ್ನು ಬಿಟ್ಟುಬಿಡುವನು.


ನೋಡು, ಈಗ ನಾನು ನಿನ್ನನ್ನು ಹಗ್ಗದಿಂದ ಕಟ್ಟುತ್ತಿದ್ದೇನೆ. ನೀನು ಜೆರುಸಲೇಮ್ ನಗರದ ಮೇಲೆ ನಿನ್ನ ಆಕ್ರಮಣವನ್ನು ಮುಗಿಸುವ ತನಕ ಒಂದು ಕಡೆಯಿಂದ ಮತ್ತೊಂದು ಕಡೆಗೆ ಹೊರಳಲು ನಿನ್ನಿಂದಾಗುವದಿಲ್ಲ.”


ಆಗ ಯೆಹೋವನು ಆರೋನನಿಗೆ, “ಪವಿತ್ರ ವಸ್ತುಗಳ ವಿಷಯದಲ್ಲಿ ಏನಾದರೂ ಹೊಲಸುತನ ನಡೆದರೆ, ನೀನೂ ನಿನ್ನ ಗಂಡುಮಕ್ಕಳೂ ನಿನ್ನ ಕುಲದವರೆಲ್ಲರೂ ಅದರ ಅಪರಾಧದ ಫಲವನ್ನು ಅನುಭವಿಸಬೇಕು. ಯಾಜಕತ್ವದ ವಿಷಯದಲ್ಲಿ ಏನಾದರೂ ಹೊಲಸುತನ ನಡೆದರೆ, ನೀನು ಮತ್ತು ನಿನ್ನ ಗಂಡುಮಕ್ಕಳು ಮಾತ್ರ ಅದರ ಅಪರಾಧದ ಫಲವನ್ನು ಅನುಭವಿಸಬೇಕು.


ಮೋಶೆ, “ನೀವು ಹೋತದ ಮಾಂಸವನ್ನು ಪವಿತ್ರಸ್ಥಳದಲ್ಲಿ ತಿನ್ನಬೇಕಾಗಿತ್ತು. ಅದು ಬಹಳ ಪವಿತ್ರವಾದದ್ದಲ್ಲವೇ? ನೀವು ಯಾಕೆ ಅದನ್ನು ಯೆಹೋವನ ಸನ್ನಿಧಿಯಲ್ಲಿ ತಿನ್ನಲಿಲ್ಲ? ನೀವು ಜನರ ಪಾಪಪರಿಹಾರ ಮಾಡುವಂತೆಯೂ ಜನರ ದೋಷವನ್ನು ಪರಿಹಾರಮಾಡುವಂತೆಯೂ ಯೆಹೋವನು ಅದನ್ನು ನಿಮಗೆ ಕೊಟ್ಟನು.


ಕ್ರಿಸ್ತನು ನಮ್ಮ ಪಾಪಗಳನ್ನೆಲ್ಲಾ ತನ್ನ ದೇಹದಲ್ಲಿ ಹೊತ್ತುಕೊಂಡು ಶಿಲುಬೆಯನ್ನೇರಿದನು. ನಾವು ಪಾಪಕ್ಕೋಸ್ಕರ ಜೀವಿಸದೆ, ನೀತಿವಂತರಾಗಿ ಜೀವಿಸಬೇಕೆಂಬುದೇ ಆತನ ಉದ್ದೇಶವಾಗಿತ್ತು. ಆತನ (ಕ್ರಿಸ್ತನ) ಬಾಸುಂಡೆಗಳಿಂದ ನಿಮಗೆ ಗುಣವಾಯಿತು.


ಅದರಂತೆಯೇ ಕ್ರಿಸ್ತನು ಅನೇಕ ಜನರ ಪಾಪಗಳನ್ನು ತೆಗೆದುಹಾಕಲು ಒಂದು ಸಲ ಮಾತ್ರ ತನ್ನನ್ನು ಯಜ್ಞವನ್ನಾಗಿ ಅರ್ಪಿಸಿಕೊಂಡನು. ಕ್ರಿಸ್ತನು ಎರಡನೆ ಸಲ ಪ್ರತ್ಯಕ್ಷನಾಗುವುದು ಜನರ ಪಾಪನಿವಾರಣೆಗೋಸ್ಕರವಲ್ಲ. ತನಗಾಗಿ ಕಾಯುತ್ತಿರುವ ಜನರನ್ನು ಬಿಡುಗಡೆ ಮಾಡುವುದಕ್ಕಾಗಿಯಷ್ಟೇ.


“ಆತನು ನಮ್ಮ ಬೇನೆಗಳನ್ನು ತೆಗೆದುಕೊಂಡನು, ನಮ್ಮ ರೋಗಗಳನ್ನು ಹೊತ್ತುಕೊಂಡನು” ಎಂದು ಪ್ರವಾದಿಯಾದ ಯೆಶಾಯನು ಹೇಳಿದ್ದು ಇದರ ಮೂಲಕ ನೆರವೇರಿತು.


ನೀನು ಮುನ್ನೂರತೊಂಭತ್ತು ದಿವಸಗಳ ತನಕ ಇಸ್ರೇಲರ ದೋಷಗಳನ್ನು ಹೊತ್ತುಕೊಳ್ಳಬೇಕು. ಈ ರೀತಿಯಾಗಿ ಇಸ್ರೇಲರು ಎಷ್ಟು ಕಾಲ ಶಿಕ್ಷೆ ಅನುಭವಿಸುವರೆಂದು ತೋರಿಸುತ್ತೇನೆ. ಆ ಒಂದು ದಿವಸವು ಒಂದು ವರ್ಷದಂತಿರುವುದು.


ನೀವು ಆ ದೇಶವನ್ನು ಸಂಚರಿಸಿ ನೋಡಿದ ನಲವತ್ತು ದಿನಗಳಿಗೆ ಸಮನಾಗಿ, ದಿನ ಒಂದಕ್ಕೆ ಒಂದು ಸಂವತ್ಸರದ ಮೇರೆಗೆ ನಲವತ್ತು ವರ್ಷ ನಿಮ್ಮ ಪಾಪದ ಫಲವನ್ನು ಅನುಭವಿಸುವಿರಿ. ನನ್ನನ್ನು ತಿರಸ್ಕರಿಸುವುದೆಂದರೆ ಏನೆಂಬುದು ನಿಮಗೆ ಗೊತ್ತಾಗುತ್ತದೆ.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು