Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 40:45 - ಪರಿಶುದ್ದ ಬೈಬಲ್‌

45 ಅವನು, “ದಕ್ಷಿಣಕ್ಕೆ ಅಭಿಮುಖವಾಗಿದ್ದ ಕೋಣೆಯು, ಆಲಯದಲ್ಲಿ ಯಾಜಕ ಉದ್ಯೋಗ ಮಾಡುತ್ತಿರುವ ಯಾಜಕರಿಗಾಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ಆಗ ಅವನು ನನಗೆ, “ದಕ್ಷಿಣಕ್ಕೆ ಅಭಿಮುಖವಾಗಿರುವ ಈ ಕೋಣೆಯು ದೇವಾಲಯದ ಮೇಲ್ವಿಚಾರಣೆಯನ್ನು ನಡೆಸುವ ಯಾಜಕರಿಗೆ ನೇಮಕವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

45 ಆಗ ಅವನು ನನಗೆ ದಕ್ಷಿಣಕ್ಕೆ ಅಭಿಮುಖವಾಗಿರುವ ಈ ಕೋಣೆ ದೇವಾಲಯ ಪಾರುಪತ್ಯವನ್ನು ನಡೆಸುವ ಯಾಜಕರಿಗೆ ನೇಮಕವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 ಆಗ ಅವನು ನನಗೆ - ತೆಂಕಲಿಗೆ ಅಭಿಮುಖವಾಗಿರುವ ಈ ಕೋಣೆಯು ದೇವಾಲಯದ ಪಾರುಪತ್ಯವನ್ನು ನಡಿಸುವ ಯಾಜಕರಿಗೆ ನೇಮಕವಾಗಿದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ಅವನು ನನಗೆ ಹೇಳಿದ್ದೇನೆಂದರೆ, “ದಕ್ಷಿಣಕ್ಕೆ ಅಭಿಮುಖವಾಗಿರುವ ಈ ಕೊಠಡಿ ದೇವಾಲಯದ ಮೇಲ್ವಿಚಾರಣೆಯನ್ನು ನೋಡಿಕೊಳ್ಳುವ ಯಾಜಕರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 40:45
18 ತಿಳಿವುಗಳ ಹೋಲಿಕೆ  

ಅವರೂ ಅವರ ಸಂತತಿಯವರೂ ದೇವದರ್ಶನಗುಡಾರದ ದ್ವಾರಪಾಲರಾಗಿದ್ದರು.


ಯೆಹೋವನ ಸೇವಕರೆಲ್ಲರೇ, ಆತನನ್ನು ಕೊಂಡಾಡಿರಿ. ರಾತ್ರಿಯೆಲ್ಲಾ ದೇವಾಲಯದಲ್ಲಿ ಸೇವೆ ಮಾಡಿದವರೇ, ಆತನಿಗೆ ಸ್ತೋತ್ರಮಾಡಿರಿ.


ನೀವು ಏಳು ದಿನಗಳು ಹಗಲುರಾತ್ರಿ ದೇವದರ್ಶನಗುಡಾರದ ಬಾಗಿಲಿನಲ್ಲಿ ಇರಬೇಕು. ನೀವು ಯೆಹೋವನ ಆಜ್ಞೆಗಳಿಗೆ ವಿಧೇಯರಾಗದಿದ್ದರೆ ಸಾಯುವಿರಿ! ಯೆಹೋವನು ಆ ಆಜ್ಞೆಗಳನ್ನು ನನಗೆ ಕೊಟ್ಟನು.”


ನಮ್ಮನ್ನು ಒಂದು ರಾಜ್ಯವನ್ನಾಗಿ ಮಾಡಿ ನಮ್ಮನ್ನು ತನ್ನ ತಂದೆಯಾದ ದೇವರ ಸೇವೆ ಮಾಡುವ ಯಾಜಕರನ್ನಾಗಿ ಮಾಡಿದನು. ಯೇಸುವಿಗೆ ಎಂದೆಂದಿಗೂ ಮಹಿಮೆ ಪ್ರಭಾವಗಳಿರಲಿ! ಆಮೆನ್.


ತಿಮೊಥೆಯನೇ, ನಿನ್ನ ವಶಕ್ಕೆ ಕೊಡಲಾಗಿರುವ ಸದ್ಬೋಧನೆಯನ್ನು ಸುರಕ್ಷಿತವಾಗಿ ಕಾಪಾಡು. ಪ್ರಾಪಂಚಿಕವಾದ ಮೂರ್ಖ ಸಂಗತಿಗಳನ್ನು ಹೇಳುವ ಜನರಿಂದಲೂ ಸತ್ಯದ ವಿರುದ್ಧವಾಗಿ ವಾದ ಮಾಡುವ ಜನರಿಂದಲೂ ದೂರವಾಗಿರು. ಅವರು ಅದನ್ನು ಜ್ಞಾನವೆಂದು ಕರೆದರೂ ಅದು ನಿಜವಾದ ಜ್ಞಾನವಲ್ಲ.


ದೇವರು ನನ್ನೊಂದಿಗೆ ಮಾತನಾಡುತ್ತಾ, “ನರಪುತ್ರನೇ, ಉತ್ತರ ದಿಕ್ಕಿಗೆ ನೋಡು” ಎಂದು ಹೇಳಿದನು. ನಾನು ಉತ್ತರ ದಿಕ್ಕಿಗೆ ನೋಡಿದಾಗ, ದೇವರನ್ನು ರೋಷಗೊಳಿಸುವ ವಿಗ್ರಹವು ಯಜ್ಞವೇದಿಕೆಯ ದ್ವಾರದ ಉತ್ತರ ದಿಕ್ಕಿನಲ್ಲಿರುವ ಪ್ರವೇಶದ ಸ್ಥಳದಲ್ಲಿ ಇತ್ತು.


ಅವರು ಪ್ರತಿದಿನವೂ ಮುಂಜಾನೆ ಸಾಯಂಕಾಲಗಳಲ್ಲಿ ಸರ್ವಾಂಗಹೋಮಗಳನ್ನೂ ಧೂಪಗಳನ್ನೂ ಅರ್ಪಿಸುವರು; ಮೇಜಿನ ಮೇಲೆ ನೈವೇದ್ಯದ ರೊಟ್ಟಿಗಳನ್ನಿಡುವರು. ಅವರು ಬಂಗಾರದ ದೀಪಸ್ತಂಭಗಳ ಮೇಲಿನ ಆರತಿಗಳನ್ನು ಸರಿಯಾಗಿ ನೋಡಿಕೊಳ್ಳುವುದರಿಂದ ಅವು ಹಗಲಿನಲ್ಲಿಯೂ ಸಾಯಂಕಾಲದಲ್ಲಿಯೂ ಪ್ರಕಾಶಮಾನವಾಗಿ ಉರಿಯುವವು. ನಾವು ಬಹಳ ಎಚ್ಚರಿಕೆಯಿಂದ ನಮ್ಮ ದೇವರ ಸೇವೆಮಾಡುತ್ತೇವೆ. ಆದರೆ ನೀವು ಆತನನ್ನು ತೊರೆದುಬಿಟ್ಟಿದ್ದೀರಿ.


ಆದರೆ ಸರ್ವಾಂಗಹೋಮ ಅರ್ಪಿಸುವ ಯಜ್ಞವೇದಿಕೆಯ ಮೇಲೆ ಮತ್ತು ಧೂಪಾರ್ಪಣೆಯ ಯಜ್ಞವೇದಿಕೆಯ ಮೇಲೆ ಧೂಪವರ್ಪಿಸಲು ಆರೋನನ ಸಂತತಿಯವರನ್ನು ಮಾತ್ರ ಆರಿಸಿಕೊಳ್ಳಲಾಗಿತ್ತು. ದೇವರ ನಿವಾಸದ ಮಹಾಪವಿತ್ರ ಸ್ಥಳದಲ್ಲಿ ಆರೋನನ ಸಂತತಿಯವರೇ ಎಲ್ಲಾ ಕೆಲಸಕಾರ್ಯಗಳನ್ನು ಮಾಡುತ್ತಿದ್ದರು. ಅಲ್ಲದೆ ಇಸ್ರೇಲ್ ಜನರನ್ನು ಶುದ್ಧೀಕರಿಸಲು ಶುದ್ಧೀಕರಣ ಆಚಾರವನ್ನು ಅವರೇ ಮಾಡುತ್ತಿದ್ದರು. ದೇವರ ಸೇವಕನಾದ ಮೋಶೆಯು ಆಜ್ಞಾಪಿಸಿದ ಎಲ್ಲಾ ಕಟ್ಟಳೆಗಳನ್ನು ಮತ್ತು ನಿಯಮಗಳನ್ನು ಅವರು ಅನುಸರಿಸುತ್ತಿದ್ದರು.


“ನಾನು ಮತ್ತೆ ಕೋಪಗೊಂಡು ಇಸ್ರೇಲರನ್ನು ದಂಡಿಸದಂತೆ ನೀವು ಪವಿತ್ರಸ್ಥಳವನ್ನು ಮತ್ತು ಯಜ್ಞವೇದಿಕೆಯನ್ನು ಕಾಯಬೇಕು.


ಮೋಶೆ, ಆರೋನ ಮತ್ತು ಆರೋನನ ಪುತ್ರರು ದೇವದರ್ಶನಗುಡಾರದ ಮುಂದೆ ಪವಿತ್ರ ಗುಡಾರದ ಪೂರ್ವ ದಿಕ್ಕಿನಲ್ಲಿ ಪಾಳೆಯಮಾಡಿಕೊಂಡರು. ಪವಿತ್ರಸ್ಥಳವನ್ನು ನೋಡಿಕೊಳ್ಳುವ ಕೆಲಸ ಅವರಿಗೆ ಕೊಡಲ್ಪಟ್ಟಿತು. ಅವರು ಇಸ್ರೇಲರೆಲ್ಲರಿಗೋಸ್ಕರ ಇದನ್ನು ಮಾಡಿದರು. ಇವರ ಕರ್ತವ್ಯಗಳನ್ನು ಬೇರೆ ಯಾವನಾದರೂ ಮಾಡಲು ಪ್ರಯತ್ನಿಸಿದರೆ ಅವನು ಕೊಲ್ಲಲ್ಪಡಬೇಕು.


ಮಹಾಯಾಜಕ ಆರೋನನ ಮಗನಾದ ಎಲ್ಲಾಜಾರನು ಲೇವಿಯರಿಗೆ ನಾಯಕನಾಗಿದ್ದನು. ಪವಿತ್ರವಸ್ತುಗಳನ್ನು ನೋಡಿಕೊಳ್ಳುವ ಜನರಿಗೆಲ್ಲಾ ಎಲ್ಲಾಜಾರನು ಮೇಲ್ವಿಚಾರಕನಾಗಿದ್ದನು.


ಆಮೇಲೆ ಅವನು ನನ್ನನ್ನು ಹೊರಗಿನ ಪ್ರಾಕಾರಕ್ಕೆ ಕರೆದುಕೊಂಡು ಹೋದನು. ಆ ಪ್ರಾಕಾರದ ಸುತ್ತಲೂ ಮೂವತ್ತು ಕೋಣೆಗಳೂ ನೆಲಗಟ್ಟೂ ಇದ್ದವು. ಆ ಕೋಣೆಗಳು ಗೋಡೆಗೆ ತಾಗಿ ನೆಲಗಟ್ಟಿಗೆ ಮುಖ ಮಾಡಿದ್ದವು.


ಈ ದ್ವಾರದ ಕೈಸಾಲೆಗೆ ಮುಖಮಾಡಿ ಬಾಗಿಲಿದ್ದ ಒಂದು ಕೋಣೆಯಿತ್ತು. ಇದು ಯಾಜಕರು ಸರ್ವಾಂಗಹೋಮದ ಪ್ರಾಣಿಗಳನ್ನು ತೊಳೆಯುವ ಸ್ಥಳವಾಗಿತ್ತು.


ನನ್ನ ಪವಿತ್ರಸ್ಥಳದಲ್ಲಿ ಸೇವೆಮಾಡಲು ಲೇವಿಯರು ಆರಿಸಲ್ಪಟ್ಟಿರುತ್ತಾರೆ. ಅವರು ಆಲಯದ ಪ್ರವೇಶ ದ್ವಾರವನ್ನು ಕಾವಲು ಕಾಯ್ದರು. ಆಲಯದೊಳಗೆ ಸೇವೆಮಾಡಿದರು. ಜನರು ಅರ್ಪಿಸುವ ಪ್ರಾಣಿಗಳನ್ನು ವಧಿಸಿ ಯಜ್ಞಕ್ಕಾಗಿ ಅವುಗಳನ್ನು ತಯಾರುಮಾಡಿ ಸರ್ವಾಂಗಹೋಮ ಯಜ್ಞಗಳನ್ನು ಸಮರ್ಪಿಸಿದರು. ಜನರಿಗೆ ಸಹಾಯ ಮಾಡಿ, ಅವರ ಸೇವೆಮಾಡಲು ಅವರು ಆರಿಸಲ್ಪಟ್ಟಿದ್ದಾರೆ.


“ಯಾಜಕರೆಲ್ಲರೂ ಲೇವಿ ಕುಲಕ್ಕೆ ಸಂಬಂಧಪಟ್ಟವರು. ಆದರೆ ಲೇವಿಯರು ನನ್ನನ್ನು ಬಿಟ್ಟು ತೊಲಗಿದಾಗ ಚಾದೋಕನ ಸಂತತಿಯವರಾದ ಯಾಜಕರು ನನ್ನ ಪವಿತ್ರ ಸ್ಥಳವನ್ನು ಪರಾಂಬರಿಸಿದರು. ಆದ್ದರಿಂದ ಚಾದೋಕನ ಸಂತತಿಯವರು ಮಾತ್ರ ನನಗೆ ಕಾಣಿಕೆಗಳನ್ನು ಸಮರ್ಪಿಸುವರು. ಅವರು ನನ್ನ ಸನ್ನಿಧಿಯಲ್ಲಿ ನಿಂತು ಯಜ್ಞಮಾಡಲ್ಪಡುವ ಪ್ರಾಣಿಗಳ ಕೊಬ್ಬು ಮತ್ತು ರಕ್ತವನ್ನು ನನಗೆ ಸಮರ್ಪಿಸುವರು.” ಇದು ನನ್ನ ಒಡೆಯನಾದ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು