Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 43:5 - ಪರಿಶುದ್ದ ಬೈಬಲ್‌

5 ಆಗ ದೇವರಾತ್ಮವು ನನ್ನನ್ನು ಎತ್ತಿಕೊಂಡು ಒಳಗಿನ ಪ್ರಾಕಾರಕ್ಕೆ ತಂದಿತು. ಯೆಹೋವನ ಮಹಿಮೆಯು ಆಲಯವನ್ನು ತುಂಬಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ದೇವರಾತ್ಮವು ನನ್ನನ್ನು ಎತ್ತಿಕೊಂಡು ಒಳಗಿನ ಅಂಗಳಕ್ಕೆ ಕರೆದು ತಂದಿತು. ಆಗ ಯೆಹೋವನ ಮಹಿಮೆಯು ಆಲಯವನ್ನು ತುಂಬಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ದೇವರಾತ್ಮ ನನ್ನನ್ನು ಎತ್ತಿ ಒಳಗಿನ ಪ್ರಾಕಾರಕ್ಕೆ ತಂದಿತು. ಆಗ ಏನಾಶ್ಚರ್ಯ! ಸರ್ವೇಶ್ವರನ ತೇಜಸ್ಸು ದೇವಸ್ಥಾನವನ್ನು ತುಂಬಿಕೊಂಡಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ದೇವರಾತ್ಮವು ನನ್ನನ್ನು ಎತ್ತಿ ಒಳಗಣ ಪ್ರಾಕಾರಕ್ಕೆ ತರಲು ಆಹಾ, ಯೆಹೋವನ ತೇಜಸ್ಸು ದೇವಸ್ಥಾನವನ್ನು ತುಂಬಿಕೊಂಡಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಗ ಆತ್ಮವು ನನ್ನನ್ನು ಎತ್ತಿಕೊಂಡು ಒಳಗಿನ ಅಂಗಳಕ್ಕೆ ಕರೆತಂದಿತು. ಯೆಹೋವ ದೇವರ ಮಹಿಮೆಯಿಂದ ಆಲಯವು ತುಂಬಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 43:5
20 ತಿಳಿವುಗಳ ಹೋಲಿಕೆ  

ಆಗ ಆತ್ಮವು ನನ್ನನ್ನು ಆಕಾಶಕ್ಕೆ ಎತ್ತಿ ಬಾಬಿಲೋನ್ ದೇಶಕ್ಕೆ ಮರಳಿ ತಂದಿತು. ಸೆರೆ ಒಯ್ಯಲ್ಪಟ್ಟಿದ್ದ ಜನರ ಮಧ್ಯೆ ನಾನು ಬಂದೆನು. ದೇವಾರಾತ್ಮವು ಕೊಟ್ಟ ದರ್ಶನದಲ್ಲಿ ನಾನು ಆ ಎಲ್ಲಾ ವಿಷಯಗಳನ್ನು ಕಂಡೆನು. ಬಳಿಕ, ನಾನು ಕಂಡ ಆ ದರ್ಶನವು ನನ್ನನ್ನು ಬಿಟ್ಟುಹೋಯಿತು.


ಆಗ ಅದು ಕೈಯಂತಿದ್ದ ಒಂದನ್ನು ಚಾಚಿ ನನ್ನ ತಲೆಯ ಕೂದಲನ್ನು ಹಿಡಿದುಕೊಂಡಿತು. ಬಳಿಕ ಆತ್ಮವು ನನ್ನನ್ನು ಮೇಲಕ್ಕೆ ಎತ್ತಿ ದಿವ್ಯದರ್ಶನದಲ್ಲಿ ಜೆರುಸಲೇಮಿಗೆ ಕೊಂಡೊಯ್ಯಿತು. ಅದು ನನ್ನನ್ನು ಒಳದ್ವಾರಕ್ಕೆ ಕೊಂಡೊಯ್ಯಿತು. ಇದು ಉತ್ತರ ದಿಕ್ಕಿನಲ್ಲಿತ್ತು. ದೇವರನ್ನು ಸಿಟ್ಟಿಗೆಬ್ಬಿಸುವ ವಿಗ್ರಹವು ಈ ದ್ವಾರದ ಬಳಿ ಇತ್ತು.


ಅವರು ನೀರಿನಿಂದ ಮೇಲಕ್ಕೆ ಬಂದಾಗ ಪ್ರಭುವಿನ ಆತ್ಮನಿಂದ ಫಿಲಿಪ್ಪನು ಎತ್ತಲ್ಪಟ್ಟನು. ಅವನು ಫಿಲಿಪ್ಪನನ್ನು ಮತ್ತೆಂದೂ ನೋಡಲಿಲ್ಲ. ಅವನು ಬಹಳ ಸಂತೋಷದಿಂದ ತನ್ನ ಪ್ರಯಾಣವನ್ನು ಮುಂದುವರಿಸಿದನು.


ಆ ಬಳಿಕ ನನ್ನನ್ನು ಉತ್ತರದ ದ್ವಾರದ ಮೂಲಕ ಆಲಯದ ಮುಂಭಾಗಕ್ಕೆ ಅವನು ಕರೆದುಕೊಂಡು ಹೋದನು. ನಾನು ನೋಡಿದಾಗ ಯೆಹೋವನ ತೇಜಸ್ಸು ಆತನ ಆಲಯವನ್ನು ತುಂಬುತ್ತಿತ್ತು. ನಾನು ಸಾಷ್ಟಾಂಗವೆರಗಿದೆನು.


ಯೆಹೋವನ ಶಕ್ತಿಯು ನನ್ನ ಮೇಲೆ ಬಂದಿತು. ಯೆಹೋವನ ಆತ್ಮವು ನನ್ನನ್ನು ನಗರದೊಳಗಿಂದ ಎತ್ತಿಕೊಂಡು ತಗ್ಗಿನ ಮಧ್ಯಕ್ಕೆ ಕೊಂಡೊಯ್ದನು. ಆ ಬಯಲಿನ ತುಂಬಾ ಒಣಗಿದ ಎಲುಬುಗಳು ತುಂಬಿದ್ದವು.


ದರ್ಶನವೊಂದರಲ್ಲಿ ಯೆಹೋವನು ನನ್ನನ್ನು ಇಸ್ರೇಲ್ ದೇಶಕ್ಕೆ ಒಯ್ದನು. ಆತನು ನನ್ನನ್ನು ಬಹಳ ಉನ್ನತ ಪರ್ವತದ ಬಳಿ ಇರಿಸಿದನು. ನನ್ನೆದುರಿಗಿದ್ದ ಆ ಪರ್ವತ ಒಂದು ನಗರದಂತೆ ಕಂಡಿತು.


ಯೆಹೋವನ ಮಹಿಮೆಯು ಕೆರೂಬಿದೂತರ ಮೇಲಿನಿಂದ ಹೊರಟು ಆಲಯದ ಹೊಸ್ತಿಲಿಗೆ ಬಂದಿತು. ಆಗ ಮೋಡವು ಆಲಯದಲ್ಲಿ ತುಂಬಿಕೊಂಡಿತು. ಯೆಹೋವನ ಮಹಿಮೆಯ ಪ್ರಕಾಶವು ಇಡೀ ಅಂಗಳವನ್ನು ತುಂಬಿಕೊಂಡಿತು.


ಪ್ರತಿಯೊಬ್ಬ ದೂತನು ಇನ್ನೊಬ್ಬ ದೂತನನ್ನು ಕರೆದು, “ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು, ಸರ್ವಶಕ್ತನಾದ ಯೆಹೋವನು ಮಹಾ ಪರಿಶುದ್ಧನು. ಆತನ ಮಹಿಮೆಯು ಇಡೀ ಭೂಮಂಡಲವನ್ನು ಆವರಿಸಿಕೊಂಡಿದೆ” ಎಂದು ಗಟ್ಟಿಯಾದ ಸ್ವರದಲ್ಲಿ ಹೇಳುತ್ತಿದ್ದರು.


ನನ್ನನ್ನು ಕರೆದುಕೊಂಡು ಹೋಗು! ನಾವು ಓಡಿಹೋಗೋಣ! ರಾಜನು ನನ್ನನ್ನು ಅಂತಃಪುರಕ್ಕೆ ಬರಮಾಡಿದ್ದಾನೆ. ನಿನ್ನಲ್ಲಿ ಹರ್ಷಿಸಿ ಉಲ್ಲಾಸಿಸುವೆವು. ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತಲೂ ಉತ್ತಮ. ಯುವತಿಯರು ನಿನ್ನನ್ನು ಹೃದಯಪೂರ್ವಕವಾಗಿ ಪ್ರೀತಿಸುವರು.


ಆಗ ಯಾಜಕರು ನಿಂತುಕೊಂಡು ಸೇವೆಯನ್ನು ಮಾಡಲಾಗಲಿಲ್ಲ. ಯಾಕೆಂದರೆ ದೇವರ ಮಹಿಮೆಯು ದೇವಾಲಯವನ್ನು ತುಂಬಿಕೊಂಡಿತ್ತು.


ಅವರು ಅವನಿಗೆ, “ನೋಡು, ನಮ್ಮಲ್ಲಿ ಐವತ್ತು ಮಂದಿ ಬಲಿಷ್ಠ ಜನರಿದ್ದಾರೆ. ನಿನ್ನ ಒಡೆಯನನ್ನು ಹುಡುಕಲು ದಯವಿಟ್ಟು ಅವರಿಗೆ ಅವಕಾಶಕೊಡು. ಯೆಹೋವನ ಆತ್ಮವು ಎಲೀಯನನ್ನು ಮೇಲಕ್ಕೆ ಎತ್ತಿಕೊಂಡು ಹೋಗಿ ಯಾವುದಾದರೂ ಬೆಟ್ಟದ ಮೇಲಾಗಲಿ ಅಥವಾ ಕಣಿವೆಯಲ್ಲಾಗಲಿ ಬೀಳಿಸಿರಬೇಕು” ಎಂದು ಹೇಳಿದರು. ಆದರೆ ಎಲೀಷನು, “ಇಲ್ಲ, ಎಲೀಯನನ್ನು ಹುಡುಕಲು ಜನರನ್ನು ಕಳುಹಿಸಬೇಡಿ!” ಎಂದು ಉತ್ತರಿಸಿದನು.


ನಾನು ಹೋಗಿ ರಾಜನಾದ ಅಹಾಬನಿಗೆ ನೀನು ಇಲ್ಲಿರುವೆಯೆಂಬುದನ್ನು ತಿಳಿಸಿದರೆ, ನಂತರ ಯೆಹೋವನು ನಿನ್ನನ್ನು ಬೇರೊಂದು ಸ್ಥಳಕ್ಕೆ ಕರೆದೊಯ್ಯುವನು. ರಾಜನಾದ ಅಹಾಬನು ಇಲ್ಲಿಗೆ ಬಂದಾಗ, ನಿನ್ನನ್ನು ಕಂಡುಹಿಡಿಯಲು ಸಮರ್ಥನಾಗುವುದಿಲ್ಲ. ಆಗ ಅವನು ನನ್ನನ್ನು ಕೊಂದುಬಿಡುತ್ತಾನೆ! ನನ್ನ ಬಾಲ್ಯದಿಂದಲೂ ನಾನು ಯೆಹೋವನನ್ನೇ ಅನುಸರಿಸುತ್ತಿದ್ದೇನೆ.


ತರುವಾಯ ಮೋಡವು ದೇವದರ್ಶನಗುಡಾರವನ್ನು ಕವಿಯಿತು. ಯೆಹೋವನ ಮಹಿಮೆಯು ಪವಿತ್ರಗುಡಾರವನ್ನು ತುಂಬಿಕೊಂಡಿತು.


ಆತನ ಸುತ್ತಲೂ ಇದ್ದ ಪ್ರಕಾಶವು ಮೇಘಬಿಲ್ಲಿನಂತೆಯೂ ಯೆಹೋವನ ಮಹಿಮೆಯಂತೆಯೂ ಕಾಣುತ್ತಿತ್ತು. ನಾನು ಅದನ್ನು ನೋಡಿದ ಕೂಡಲೇ ನೆಲಕ್ಕೆ ಬಿದ್ದೆನು. ಮುಖವನ್ನು ನೆಲದ ಮೇಲಿಟ್ಟು ಅಡ್ಡಬಿದ್ದೆನು. ಆಗ ನನ್ನೊಂದಿಗೆ ಮಾತನಾಡುತ್ತಿದ್ದ ಸ್ವರವನ್ನು ಕೇಳಿದೆನು.


ಆಗ ಆತ್ಮವು ನನ್ನನ್ನು ಯೆಹೋವನಾಲಯದ ಪೂರ್ವದ ಬಾಗಿಲಿಗೆ ಕೊಂಡೊಯ್ಯಿತು. ಬಾಗಿಲಿನ ಪ್ರವೇಶ ಸ್ಥಳದಲ್ಲಿ ನಾನು ಇಪ್ಪತ್ತೈದು ಮಂದಿ ಜನರನ್ನು ನೋಡಿದೆನು. ಅವರಲ್ಲಿ ಅಜ್ಜೂರನ ಮಗನಾದ ಯಾಜನ್ಯನನ್ನು, ಬೆನಾಯನ ಮಗನಾದ ಪೆಲತ್ಯನನ್ನು ನಾನು ನೋಡಿದೆನು. ಅವರಿಬ್ಬರು ಜನರಿಗೆ ನಾಯಕರಾಗಿದ್ದರು.


ನೀನು ಕಷ್ಟಕರವಾದ ಭಾಷೆಯನ್ನು ಅರ್ಥಮಾಡಿಕೊಳ್ಳುವುದಕ್ಕಾಗಲಿ ಮಾತನಾಡುವುದಕ್ಕಾಗಲಿ ಪರದೇಶಿಯರ ಬಳಿಗೆ ನಾನು ಕಳುಹಿಸುತ್ತಿಲ್ಲ. ನಾನು ಇಸ್ರೇಲ್ ವಂಶದವರ ಬಳಿಗೆ ನಿನ್ನನ್ನು ಕಳುಹಿಸುತ್ತಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು