Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 44:3 - ಪರಿಶುದ್ದ ಬೈಬಲ್‌

3 ಜನರ ಅಧಿಪತಿಯು ಯೆಹೋವನ ಸನ್ನಿಧಿಯಲ್ಲಿ ಊಟಮಾಡಲು ಬರುವಾಗ ಅವನು ಮಾತ್ರ ಈ ದ್ವಾರದ ಬಳಿ ಕುಳಿತುಕೊಳ್ಳಬಹುದು. ಅಧಿಪತಿಯು ದ್ವಾರದ ಮಂಟಪದ ಮೂಲಕ ಪ್ರವೇಶಿಸಬೇಕು ಮತ್ತು ಅದೇ ಮಾರ್ಗದಲ್ಲಿ ಹೊರ ಬರಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಇಸ್ರಾಯೇಲಿನ ಪ್ರಭುವೋ ಯೆಹೋವನ ಸನ್ನಿಧಿಯಲ್ಲಿ ಊಟ ಮಾಡುವುದಕ್ಕಾಗಿ ಇಲ್ಲಿ ಕುಳಿತುಕೊಳ್ಳಬಹುದು. ಅವನು ಹೆಬ್ಬಾಗಿಲ ಪಡಸಾಲೆಯ ಮಾರ್ಗವಾಗಿ ಪ್ರವೇಶಿಸಿ, ಅದೇ ಮಾರ್ಗವಾಗಿ ಹೊರಗೆ ಹೋಗಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ರಾಜರು ಸರ್ವೇಶ್ವರನ ಸನ್ನಿಧಿಯಲ್ಲಿ ಹವಿರ್ಭೋಜನ ಮಾಡುವುದಕ್ಕೆ ಇಲ್ಲಿ ಕುಳಿತುಕೊಳ್ಳಬಹುದು; ಅವನು ಹೆಬ್ಬಾಗಿಲ ಕೈಸಾಲೆಯ ಮಾರ್ಗವಾಗಿ ಬಂದು ಅದೇ ಮಾರ್ಗವಾಗಿ ಹೊರಡಬೇಕು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಪ್ರಭುವೋ ಯೆಹೋವನ ಸನ್ನಿಧಿಯಲ್ಲಿ ಹವಿರ್ಭೋಜನಮಾಡುವದಕ್ಕೆ ಇಲ್ಲಿ ಪ್ರಭುವಾಗಿ ಕೂತುಕೊಳ್ಳಬಹುದು; ಅವನು ಹೆಬ್ಬಾಗಿಲ ಕೈಸಾಲೆಯ ಮಾರ್ಗವಾಗಿ ಸೇರಿ ಅದೇ ಮಾರ್ಗವಾಗಿ ಹೊರಡಬೇಕು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಇದು ಪ್ರಭುವಿಗಾಗಿ ಇದೆ; ಪ್ರಭುವು ಅವರೊಳಗೆ ಕುಳಿತುಕೊಂಡು, ಯೆಹೋವ ದೇವರ ಮುಂದೆ ರೊಟ್ಟಿಯನ್ನು ತಿನ್ನಬೇಕು. ಆತನು ಆ ಬಾಗಿಲಿನ ಪಡಸಾಲೆಯ ಮೂಲಕ ಪ್ರವೇಶಿಸಿ ಅದೇ ಮಾರ್ಗವಾಗಿ ಹೊರಗೆ ಹೋಗಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 44:3
18 ತಿಳಿವುಗಳ ಹೋಲಿಕೆ  

ಅಧಿಪತಿಯು ಆ ದ್ವಾರದ ಕೈಸಾಲೆಯೊಳಗೆ ಪ್ರವೇಶಿಸಿ ಅದರ ನಿಲುವು ಕಂಬದ ಬಳಿಯಲ್ಲಿ ನಿಲ್ಲುವನು. ಅಧಿಪತಿಯು ಕೊಡುವ ಸರ್ವಾಂಗಹೋಮವನ್ನು ಮತ್ತು ಸಮಾಧಾನಯಜ್ಞವನ್ನು ಆಗ ಯಾಜಕರು ಸಮರ್ಪಿಸುವರು. ಅಧಿಪತಿಯು ಆ ದ್ವಾರದ ಮುಂಭಾಗದಲ್ಲಿ ಆರಾಧಿಸುವನು. ಅನಂತರ ಅವನು ಹೊರಗೆ ಹೋಗುವನು. ಆ ದ್ವಾರದ ಕದಗಳು ಸಾಯಂಕಾಲದ ತನಕ ತೆರೆದೇ ಇರುವವು.


ನಾನು ನನ್ನ ಸೇವಕನಾದ ಯಾಕೋಬನಿಗೆ ಕೊಟ್ಟಿರುವ ದೇಶದಲ್ಲಿ ಅವರು ವಾಸಿಸುವರು. ನಿಮ್ಮ ಪೂರ್ವಿಕರು ಆ ಪ್ರಾಂತ್ಯದಲ್ಲಿ ವಾಸವಾಗಿದ್ದರು. ನನ್ನ ಜನರು ಅಲ್ಲಿಯೇ ವಾಸಮಾಡುವರು. ಅವರೂ ಅವರ ಮಕ್ಕಳೂ ಮೊಮ್ಮಕ್ಕಳೂ ಅಲ್ಲಿ ನಿತ್ಯಕಾಲಕ್ಕೂ ಜೀವಿಸುವರು. ನನ್ನ ಸೇವಕನಾದ ದಾವೀದನು ಅವರ ನಿತ್ಯಕಾಲದ ರಾಜನು.


ಯೆಹೋವನಾದ ನಾನು ಅವರಿಗೆ ದೇವರಾಗಿರುವೆನು. ನನ್ನ ಸೇವಕನಾದ ದಾವೀದನು ಅವರೊಂದಿಗೆ ವಾಸಿಸುತ್ತಾ ಅವರನ್ನು ಆಳುವನು. ಇದು ಯೆಹೋವನಾದ ನನ್ನ ನುಡಿ.


ಆಮೇಲೆ ಯಾಕೋಬನು ಒಂದು ಪಶುವನ್ನು ಕೊಂದು ಅದನ್ನು ಬೆಟ್ಟದ ಮೇಲೆ ಯಜ್ಞವಾಗಿ ಅರ್ಪಿಸಿದನು; ತನ್ನ ಜನರನ್ನು ಊಟಕ್ಕೆ ಆಹ್ವಾನಿಸಿದನು. ಅವರು ಊಟ ಮಾಡಿದ ಮೇಲೆ, ಆ ರಾತ್ರಿ ಬೆಟ್ಟದ ಮೇಲೆ ಇದ್ದರು.


ಅದು ಎಂಟು ಮೊಳ ಉದ್ದವಾಗಿತ್ತು. ದ್ವಾರದ ಎರಡು ಬದಿಗಳ ಗೋಡೆಯನ್ನು ಅವನು ಅಳತೆ ಮಾಡಿದನು. ಅವು ಎರಡು ಮೊಳ ಅಗಲವಿದ್ದವು. ಆಲಯಕ್ಕೆ ಎದುರಾಗಿದ್ದ ದ್ವಾರದ ಕೊನೆಯಲ್ಲಿ ಕೈಸಾಲೆಯಿತ್ತು.


ಇಗೋ, ನಾನು ಬಾಗಿಲ ಬಳಿ ನಿಂತುಕೊಂಡು ತಟ್ಟುತ್ತಿದ್ದೇನೆ. ಯಾವನಾದರೂ ನನ್ನ ಸ್ವರವನ್ನು ಕೇಳಿ ಬಾಗಿಲನ್ನು ತೆರೆದರೆ, ನಾನು ಒಳಗೆ ಬಂದು ಅವನೊಂದಿಗೆ ಊಟ ಮಾಡುತ್ತೇನೆ ಮತ್ತು ಅವನು ನನ್ನೊಂದಿಗೆ ಊಟ ಮಾಡುತ್ತಾನೆ.


ಆಮೇಲೆ ಅರಸನು ತನ್ನ ಸ್ಥಳದಲ್ಲಿ ಎದ್ದುನಿಂತು, ಯೆಹೋವನ ಎಲ್ಲಾ ಕಟ್ಟಳೆಗಳಿಗೆ ವಿಧೇಯನಾಗಿ ಆತನನ್ನು ಪೂರ್ಣಹೃದಯದಿಂದಲೂ ಪೂರ್ಣಮನಸ್ಸಿನಿಂದಲೂ ಅನುಸರಿಸುವುದಾಗಿ ಪ್ರಮಾಣಮಾಡಿದನು.


ಒಬ್ಬನು ಆಹಾರವನ್ನು ಒಟ್ಟುಗೂಡಿಸಿ ತಾನೇ ತಿನ್ನುವನು. ಅವನು ದೇವರನ್ನು ಸ್ತುತಿಸುವನು. ದ್ರಾಕ್ಷಿಹಣ್ಣನ್ನು ಶೇಖರಿಸುವವನು ಅದರ ರಸವನ್ನು ಕುಡಿಯುವನು. ಇವೆಲ್ಲವೂ ನನ್ನ ಪರಿಶುದ್ಧ ದೇಶದಲ್ಲಿ ಆಗುವದು.”


ಆದರೆ ಆಕೆ ತಾನು ಗಳಿಸಿದ ಹಣವನ್ನು ತನ್ನಲ್ಲಿ ಇಟ್ಟುಕೊಳ್ಳುವದಿಲ್ಲ. ತೂರ್ ತನ್ನ ವ್ಯಾಪಾರದಲ್ಲಿ ಗಳಿಸಿದ ಲಾಭವನ್ನು ಯೆಹೋವನಿಗಾಗಿ ಶೇಖರಿಸಿಟ್ಟಿದ್ದಾಳೆ. ಯೆಹೋವನನ್ನು ಸೇವಿಸುವವರಿಗೆ ಆ ಲಾಭವನ್ನು ಮೀಸಲಾಗಿಟ್ಟಿದ್ದಾಳೆ. ಹೀಗೆ ಯೆಹೋವನ ಸೇವಕರು ಹೊಟ್ಟೆತುಂಬ ಊಟಮಾಡುವರು, ಒಳ್ಳೆಯ ಬಟ್ಟೆ ಧರಿಸಿಕೊಳ್ಳುವರು.


ಅವನು ಮುಂಭಾಗದ ಪ್ರವೇಶ ದ್ವಾರದಲ್ಲಿದ್ದ ರಾಜಸ್ತಂಭದ ಬಳಿ ನಿಂತಿದ್ದನು. ಸೇನಾಧಿಪತಿಗಳೂ ಅವರ ಜನರೂ ತುತ್ತೂರಿಯನ್ನು ಊದಿ ರಾಜನ ಬಳಿಯಲ್ಲಿಯೇ ನಿಂತಿದ್ದರು. ದೇಶದ ಪ್ರಜೆಗಳು ಸಂತೋಷದಿಂದ ತುತ್ತೂರಿಯನ್ನೂದಿದರು. ಗಾಯಕರು ವಾದ್ಯಗಳನ್ನು ಬಾರಿಸುತ್ತಿದ್ದರು. ಅವರು ಜನರನ್ನು ಸ್ತೋತ್ರಗೀತೆಯಲ್ಲಿ ನಡಿಸುತ್ತಿದ್ದರು. ಇದೆಲ್ಲವನ್ನು ಅತಲ್ಯಳು ನೋಡಿ ತನ್ನ ಬಟ್ಟೆಯನ್ನು ಹರಿದು, “ದ್ರೋಹ, ದ್ರೋಹ” ಎಂದು ಕಿರುಚಿದಳು.


ನೀವೂ ಮತ್ತು ನಿಮ್ಮ ಕುಟುಂಬಗಳವರೂ ಅಲ್ಲಿ ಒಟ್ಟಿಗೆ ಊಟ ಮಾಡಬೇಕು. ನಿಮ್ಮ ದೇವರಾದ ಯೆಹೋವನು ನಿಮ್ಮೊಂದಿಗಿರುವನು. ನೀವು ದುಡಿದು ಸಂಪಾದಿಸಿದ ಎಲ್ಲಾ ವಸ್ತುಗಳನ್ನು ಇತರರೊಂದಿಗೆ ಹಂಚಿಕೊಂಡು ಆ ಸ್ಥಳದಲ್ಲಿ ಆನಂದಿಸುವಿರಿ. ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಆಶೀರ್ವದಿಸಿ ಆ ಎಲ್ಲಾ ಒಳ್ಳೆಯವುಗಳನ್ನು ನಿಮಗೆ ಕೊಟ್ಟನೆಂದು ನೀವು ಜ್ಞಾಪಿಸಿಕೊಳ್ಳುವಿರಿ.


“ರಾಜನು ತನ್ನ ಇಚ್ಛೆಯ ಪ್ರಕಾರ ಯೆಹೋವನಿಗೆ ಸರ್ವಾಂಗಹೋಮ ಅಥವಾ ಸಮಾಧಾನಯಜ್ಞ ಅಥವಾ ಮನಃಪೂರ್ವಕವಾದ ಕಾಣಿಕೆಯನ್ನು ಸಮರ್ಪಿಸುವಾಗ ಅವನಿಗಾಗಿ ಪೂರ್ವದ ಬಾಗಿಲು ತೆಗೆಯಲ್ಪಡಬೇಕು. ಆದರೆ ಅವನು ಸಬ್ಬತ್ ದಿನದಂತೆ ತನ್ನ ಕಾಣಿಕೆಗಳನ್ನು ಸಮರ್ಪಿಸಿದ ನಂತರ ಅವನು ಹಿಂತಿರುಗಿದಾಗ ಪ್ರವೇಶ ದ್ವಾರವು ಮುಚ್ಚಲ್ಪಡಬೇಕು.


ಅಹಾಜನು ಸಬ್ಬತ್ ದಿನಕ್ಕಾಗಿ ಕಟ್ಟಿದ ಮಂಟಪವನ್ನು ಬದಲಾಯಿಸಿದನು. ಕೆಲಸಗಾರರು ಆಲಯದ ಒಳಗೆ ಇದನ್ನು ನಿರ್ಮಿಸಿದ್ದರು. ಅಹಾಜನು ರಾಜನಿಗಾಗಿ ಇದ್ದ ಹೊರಭಾಗದ ಬಾಗಿಲನ್ನು ಬದಲಾಯಿಸಿದನು. ಅಹಾಜನು ದೇವಾಲಯದಿಂದ ಇವುಗಳನ್ನೆಲ್ಲಾ ಅಶ್ಶೂರದ ರಾಜನ ದೆಸೆಯಿಂದ ಬದಲಾಯಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು