Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 44:30 - ಪರಿಶುದ್ದ ಬೈಬಲ್‌

30 ಎಲ್ಲಾ ಪ್ರಥಮಫಲವು ಯಾಜಕರಿಗೆ ಸಲ್ಲತಕ್ಕದ್ದು. ಅಲ್ಲದೆ ನೀವು ನಾದುವ ಮೊದಲನೆ ರೊಟ್ಟಿಯ ಹಿಟ್ಟು ಯಾಜಕರಿಗೆ ಕೊಡಬೇಕು. ಹೀಗೆ ಮಾಡಿದ್ದಲ್ಲಿ ನೀವು ಆಶೀರ್ವದಿಸಲ್ಪಡುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 “ಎಲ್ಲಾ ಪ್ರಥಮಫಲಗಳಲ್ಲಿ ಉತ್ಕೃಷ್ಟವಾದದ್ದನ್ನು ನೀವು ನನಗೆ ಪ್ರತ್ಯೇಕಿಸಿ ಸಮರ್ಪಿಸುವ ಎಲ್ಲಾ ಪದಾರ್ಥಗಳೂ ಅವರಿಗಾಗಬೇಕು. ನಿಮ್ಮ ಮನೆಯು ಆಶೀರ್ವಾದಕ್ಕೆ ನೆಲೆಯಾಗುವಂತೆ ನೀವು ಮೊದಲನೆಯ ಹಿಟ್ಟನ್ನು ಯಾಜಕರಿಗೆ ಕೊಡತಕ್ಕದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಎಲ್ಲ ಪ್ರಥಮಫಲಗಳಲ್ಲಿ ಉತ್ಕೃಷ್ಟವಾದದ್ದು ಹಾಗು ನೀವು ನನಗೆ ಪ್ರತ್ಯೇಕಿಸಿ ಸಮರ್ಪಿಸುವ ಎಲ್ಲ ಪದಾರ್ಥಗಳು ಅವರದಾಗಬೇಕು. ನಿಮ್ಮ ಮನೆ ಆಶೀರ್ವಾದಕ್ಕೆ ನೆಲೆಯಾಗುವಂತೆ ನೀವು ಮೊದಲನೆಯ ಹಿಟ್ಟನ್ನು ಯಾಜಕರಿಗೆ ಕೊಡತಕ್ಕದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಎಲ್ಲಾ ಪ್ರಥಮಫಲಗಳಲ್ಲಿ ಉತ್ಕೃಷ್ಟವಾದದ್ದೂ ನೀವು ನನಗೆ ಪ್ರತ್ಯೇಕಿಸಿ ಸಮರ್ಪಿಸುವ ಎಲ್ಲಾ ಪದಾರ್ಥಗಳೂ ಅವರಿಗಾಗಬೇಕು; ನಿಮ್ಮ ಮನೆಯು ಆಶೀರ್ವಾದಕ್ಕೆ ನೆಲೆಯಾಗುವಂತೆ ನೀವು ಮೊದಲನೆಯ ಹಿಟ್ಟನ್ನು ಯಾಜಕರಿಗೆ ಕೊಡತಕ್ಕದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಇದಲ್ಲದೆ ಎಲ್ಲಾ ಪ್ರಥಮ ಫಲಗಳಲ್ಲಿ ಉತ್ಕೃಷ್ಟವಾದದ್ದೂ ನೀವು ನನಗೆ ಪ್ರತ್ಯೇಕಿಸಿ ಸಮರ್ಪಿಸಿದ ಎಲ್ಲಾ ಪದಾರ್ಥಗಳು ಯಾಜಕನದ್ದಾಗಬೇಕು. ನಿಮ್ಮ ಮನೆಯು ಆಶೀರ್ವಾದಕ್ಕೆ ನೆಲೆಯಾಗುವಂತೆ ನೀವು ಮೊದಲನೆಯ ಹಿಟ್ಟನ್ನು ನೀವು ಯಾಜಕರಿಗೆ ಕೊಡತಕ್ಕದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 44:30
17 ತಿಳಿವುಗಳ ಹೋಲಿಕೆ  

ಚಾದೋಕನ ಕುಲದ ಮಹಾಯಾಜಕನಾದ ಅಜರ್ಯನು ಹಿಜ್ಕೀಯನಿಗೆ, “ದೇವಾಲಯಕ್ಕೆ ಜನರು ಕಾಣಿಕೆಗಳನ್ನು ತರಲು ಪ್ರಾರಂಭ ಮಾಡಿದಂದಿನಿಂದ ನಮಗೆ ಊಟಕ್ಕೆ ಯಾವ ಕೊರತೆಯೂ ಇಲ್ಲವಾಗಿದೆ. ನಾವು ತೃಪ್ತಿಯಾಗುವಷ್ಟು ಊಟಮಾಡಿದರೂ ಇನ್ನೂ ಉಳಿದಿರುತ್ತದೆ. ದೇವರು ನಿಜವಾಗಲೂ ತನ್ನ ಜನರನ್ನು ಆಶೀರ್ವದಿಸಿರುತ್ತಾನೆ. ಆದ್ದರಿಂದಲೇ ನಮಗೆ ಹೇರಳವಾಗಿ ಉಳಿದಿದೆ” ಎಂದು ಹೇಳಿದನು.


ನಿಮ್ಮ ಯಾಜಕರಿಗೆ ನಿಮ್ಮ ಬೆಳೆಯ ಪ್ರಥಮ ಫಲವನ್ನು ಕೊಡಬೇಕು. ನಿಮ್ಮ ಧಾನ್ಯಗಳ ಪ್ರಥಮ ಫಲವನ್ನು, ದ್ರಾಕ್ಷಾರಸದಲ್ಲಿ, ಎಣ್ಣೆಯಲ್ಲಿ ಮತ್ತು ನಿಮ್ಮ ಉಣ್ಣೆಯಲ್ಲಿ ಪ್ರಥಮ ಫಲವನ್ನು ಕೊಡಬೇಕು.


ದೇವರು ಸತ್ಯವಾಕ್ಯದ ಮೂಲಕ ನಮಗೆ ಜೀವವನ್ನು ದಯಪಾಲಿಸಲು ತೀರ್ಮಾನಿಸಿದ್ದಾನೆ. ತನ್ನಿಂದ ಸೃಷ್ಟಿಸಲ್ಪಟ್ಟ ಎಲ್ಲಾ ವಸ್ತುಗಳಲ್ಲಿಯೂ ನಾವು ಅತ್ಯಂತ ಮುಖ್ಯರಾಗಬೇಕೆಂಬುದೇ ಆತನ ಅಪೇಕ್ಷೆ.


ನೀವು ಈಜಿಪ್ಟಿನಲ್ಲಿದ್ದಾಗ ನಾನು ಈಜಿಪ್ಟಿನವರ ಎಲ್ಲಾ ಚೊಚ್ಚಲು ಮಕ್ಕಳನ್ನು ಕೊಂದೆನು. ಆ ಕಾಲದಲ್ಲಿ ನಾನು ಇಸ್ರೇಲರ ಎಲ್ಲಾ ಚೊಚ್ಚಲು ಮಕ್ಕಳನ್ನು ನನ್ನವರನ್ನಾಗಿ ತೆಗೆದುಕೊಂಡೆನು. ಎಲ್ಲಾ ಚೊಚ್ಚಲು ಗಂಡುಮಕ್ಕಳು ಮತ್ತು ಚೊಚ್ಚಲು ಪಶುಗಳು ನನ್ನದಾಗಿದ್ದವು. ಆದರೆ ಈಗ ನಿಮ್ಮ ಎಲ್ಲಾ ಚೊಚ್ಚಲು ಗಂಡುಮಕ್ಕಳನ್ನು ನಿಮಗೇ ಹಿಂದಕ್ಕೆ ಕೊಡುತ್ತಿದ್ದೇನೆ ಮತ್ತು ಲೇವಿಯರನ್ನು ನನ್ನವರನ್ನಾಗಿ ಮಾಡುತ್ತಿದ್ದೇನೆ. ನಾನೇ ಯೆಹೋವನು!”


“ಸುಗ್ಗಿ ಕಾಲದಲ್ಲಿ ನಿಮ್ಮ ಬೆಳೆಯ ಫಲವನ್ನು ನಿಮ್ಮ ದೇವರಾದ ಯೆಹೋವನ ಆಲಯಕ್ಕೆ ತರಬೇಕು. “ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು.”


“ಸುಗ್ಗಿಕಾಲದಲ್ಲಿ ನೀವು ಪ್ರಥಮಫಲವಾದ ಧಾನ್ಯವನ್ನು ಮತ್ತು ನಿಮ್ಮ ಪ್ರಥಮಫಲವಾದ ದ್ರಾಕ್ಷಾರಸವನ್ನು ನನಗೆ ಕೊಡಬೇಕು. ನೀವು ಅದನ್ನು ನಿಮಗಾಗಿಯೇ ಇಟ್ಟುಕೊಳ್ಳಬಾರದು. “ನಿಮ್ಮ ಚೊಚ್ಚಲು ಗಂಡುಮಕ್ಕಳನ್ನು ನನಗೆ ಪ್ರತಿಷ್ಠಿಸಬೇಕು.


ನೀವು ನಿಮ್ಮ ಚೊಚ್ಚಲು ಗಂಡುಮಕ್ಕಳನ್ನು ಆತನಿಗಾಗಿ ಮೀಸಲಿಡಬೇಕು.


“ಇಸ್ರೇಲರಲ್ಲಿ ಹುಟ್ಟಿದ ಚೊಚ್ಚಲು ಗಂಡುಮಕ್ಕಳೆಲ್ಲಾ ನನಗೆ ಮೀಸಲಾಗಿರಬೇಕು; ಪ್ರತಿಯೊಬ್ಬ ಚೊಚ್ಚಲು ಮಗನು ನನ್ನವನೇ. ಪ್ರತಿಯೊಂದು ಚೊಚ್ಚಲು ಪಶುವು ನನ್ನದೇ” ಎಂದು ಹೇಳಿದನು.


ರೊಟ್ಟಿಯ ಮೊದಲನೇ ತುಂಡನ್ನು ದೇವರಿಗೆ ಅರ್ಪಿಸಿದಾಗ, ಇಡೀ ರೊಟ್ಟಿಯೇ ಪವಿತ್ರವಾಯಿತು. ಮರದ ಬೇರುಗಳು ಪವಿತ್ರವಾಗಿದ್ದರೆ, ಆ ಮರದ ಕೊಂಬೆಗಳು ಸಹ ಪವಿತ್ರವಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು