Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 44:5 - ಪರಿಶುದ್ದ ಬೈಬಲ್‌

5 ಆಗ ಯೆಹೋವನು ಹೇಳಿದ್ದೇನೆಂದರೆ, “ನರಪುತ್ರನೇ, ಕಿವಿಯಾರೆ ಕೇಳು, ಕಣ್ಣಾರೆ ನೋಡಿ ಅರ್ಥಮಾಡಿಕೊ. ಪವಿತ್ರಾಲಯದ ಎಲ್ಲಾ ವಿಧಿನಿಯಮಗಳನ್ನು ಗಮನವಿಟ್ಟು ಕೇಳು. ಆಲಯದೊಳಕ್ಕೆ ಬರುವ ಪ್ರವೇಶ ದ್ವಾರಗಳನ್ನೂ ಪವಿತ್ರಸ್ಥಳದಿಂದ ಹೊರ ಹೋಗುವ ಪ್ರವೇಶ ದ್ವಾರಗಳನ್ನೂ ಗಮನವಿಟ್ಟು ನೋಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ಯೆಹೋವನು ನನಗೆ ಹೀಗೆ ಹೇಳಿದನು, “ನರಪುತ್ರನೇ, ಯೆಹೋವನ ಆಲಯದ ಸಕಲ ನೇಮನಿಷ್ಠೆಗಳ ವಿಷಯವಾಗಿ ನಾನು ನಿನಗೆ ಹೇಳುವುದನ್ನೆಲ್ಲಾ ನೀನು ಕಿವಿಯಾರೆ ಕೇಳಿ, ಕಣ್ಣಾರೆ ಕಂಡು ಮನದಟ್ಟು ಮಾಡಿಕೋ ಮತ್ತು ಪವಿತ್ರಾಲಯದ ಪ್ರವೇಶವನ್ನೂ, ಪರಿಶುದ್ಧ ಸ್ಥಳದ ಪ್ರತಿಯೊಂದು ಹಾಗುಹೋಗುಗಳನ್ನೂ ಗಮನಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆಗ ಸರ್ವೇಶ್ವರ ನನಗೆ ಹೀಗೆ ಹೇಳಿದರು: “ನರಪುತ್ರನೇ, ಸರ್ವೇಶ್ವರನ ಆಲಯದ ಸಕಲ ನಿಯಮ ನಿಷ್ಠೆಗಳ ವಿಷಯವಾಗಿ ನಾನು ನಿನಗೆ ಹೇಳುವುದನ್ನೆಲ್ಲಾ ನೀನು ಕಿವಿಯಾರೆ ಕೇಳಿ, ಕಣ್ಣಾರೆ ಕಂಡು, ಮನದಟ್ಟು ಮಾಡಿಕೋ; ಮತ್ತು ಪವಿತ್ರಾಲಯದ ಗಮನಾಗಮನವಿಧಿಗಳನ್ನು ಗಮನಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಗ ಯೆಹೋವನು ನನಗೆ ಹೀಗೆ ಹೇಳಿದನು - ನರಪುತ್ರನೇ, ಯೆಹೋವನ ಆಲಯದ ಸಕಲ ನಿಯಮನಿಷ್ಠೆಗಳ ವಿಷಯವಾಗಿ ನಾನು ನಿನಗೆ ಹೇಳುವದನ್ನೆಲ್ಲಾ ನೀನು ಕಿವಿಯಾರೆ ಕೇಳಿ ಕಣ್ಣಾರೆ ಕಂಡು ಮಂದಟ್ಟುಮಾಡಿಕೋ; ಮತ್ತು ಪವಿತ್ರಾಲಯದ ಗಮನಾಗಮನ ವಿಧಿಗಳನ್ನು ಗಮನಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ, “ಮನುಷ್ಯಪುತ್ರನೇ, ಯೆಹೋವ ದೇವರ ಆಲಯದ ಸಕಲ ನೇಮನಿಷ್ಠೆಗಳ ವಿಷಯವಾಗಿಯೂ ನಿಯಮದ ವಿಷಯವಾಗಿಯೂ ನಾನು ನಿನಗೆ ಹೇಳುವುದನ್ನೆಲ್ಲಾ ನೀನು ಕಿವಿಯಾರೆ ಕೇಳಿ, ಕಣ್ಣಾರೆ ಕಂಡು ಮನದಟ್ಟು ಮಾಡಿಕೋ. ಆಲಯದೊಳಗಿನ ಪ್ರವೇಶವನ್ನೂ ಪರಿಶುದ್ಧಸ್ಥಳದ ಪ್ರತಿಯೊಂದು ಹಾದುಹೋಗುಗಳನ್ನೂ ಗಮನಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 44:5
17 ತಿಳಿವುಗಳ ಹೋಲಿಕೆ  

ಆಗ ಅವನು ಹೀಗೆ ಹೇಳಿದನು, “ನರಪುತ್ರನೇ, ನೀನು ನಿನ್ನ ಕಣ್ಣು, ಕಿವಿಗಳನ್ನು ಉಪಯೋಗಿಸು, ಇವೆಲ್ಲವನ್ನೂ ಗಮನಿಸಿ ನನ್ನ ಮಾತುಗಳನ್ನು ಕೇಳು. ನಾನು ತೋರಿಸುವ ಪ್ರತಿಯೊಂದು ವಸ್ತುಗಳ ಮೇಲೆ ಚೆನ್ನಾಗಿ ಲಕ್ಷ್ಯವಿಡು. ಯಾಕೆಂದರೆ ಈ ವಿಷಯಗಳನ್ನು ನಿನಗೆ ತೋರಿಸಬೇಕೆಂದೇ ನಿನ್ನನ್ನು ಇಲ್ಲಿಗೆ ತಂದಿರುವೆ. ನೀನು ನೋಡಿದ್ದೆಲ್ಲವನ್ನೂ ಇಸ್ರೇಲ್ ವಂಶದವರಿಗೆ ತಿಳಿಸಬೇಕು.”


ಹೀಗೆ ಹೇಳಿದನು: “ನಾನು ಈ ದಿನ ಹೇಳಿದ ಎಲ್ಲಾ ಆಜ್ಞೆಗಳನ್ನು ಅನುಸರಿಸಲು ಜಾಗರೂಕರಾಗಿರಿ. ಅವುಗಳನ್ನು ನಿಮ್ಮ ಮಕ್ಕಳಿಗೂ ತಿಳಿಸಿ; ಕಟ್ಟಳೆಗಳನ್ನು ಸಂಪೂರ್ಣವಾಗಿ ಕೈಗೊಳ್ಳುವಂತೆ ಅವರಿಗೆ ಬೋಧಿಸಿರಿ, ಕಲಿಸಿರಿ.


“ನಾನು ಆಜ್ಞಾಪಿಸಿದ ಪ್ರಕಾರವೇ ನೀವು ಮಾಡಿರಿ. ಅದಕ್ಕೆ ಏನೂ ಕೂಡಿಸಬಾರದು; ಅದರಿಂದ ಏನೂ ತೆಗೆಯಬಾರದು.


ಅವರು ಪ್ರಯಾಣ ಮಾಡುತ್ತಾ ನೀರಿದ್ದ ಒಂದು ಸ್ಥಳಕ್ಕೆ ಬಂದಾಗ ಅಧಿಕಾರಿಯು, “ಇಗೋ! ಇಲ್ಲಿ ನೀರಿದೆ! ನಾನು ದೀಕ್ಷಾಸ್ನಾನ ತೆಗೆದುಕೊಳ್ಳಲು ಏನಾದರೂ ಅಡ್ಡಿಯಿದೆಯೇ?” ಎಂದು ಫಿಲಿಪ್ಪನನ್ನು ಕೇಳಿದನು.


ನಾನು ನಿಮಗೆ ಆಜ್ಞಾಪಿಸಿದವುಗಳಿಗೆಲ್ಲಾ ವಿಧೇಯರಾಗುವಂತೆ ಜನರಿಗೆ ಉಪದೇಶಿಸಿ, ಲೋಕಾಂತ್ಯದವರೆಗೂ ಸದಾಕಾಲ ನಾನು ನಿಮ್ಮೊಂದಿಗಿರುತ್ತೇನೆ” ಎಂದು ಹೇಳಿದನು.


ಆಮೇಲೆ ದರ್ಶನದಲ್ಲಿನ ಆ ಮನುಷ್ಯನು ಪುನಃ ಮಾತನಾಡಲು ಪ್ರಾರಂಭಿಸಿದನು. ಅವನು, “ದಾನಿಯೇಲನೇ, ಭಯಪಡಬೇಡ. ನೀನು ಜ್ಞಾನಸಂಪಾದನೆ ಮಾಡಬೇಕೆಂದೂ ದೇವರೆದುರಿಗೆ ಭಕ್ತಿವಿನಯಗಳಿಂದ ವರ್ತಿಸಬೇಕೆಂದೂ ತೀರ್ಮಾನಿಸಿದ ಮೊದಲ ದಿನದಿಂದಲೇ ಆತನು ನಿನ್ನ ಪ್ರಾರ್ಥನೆಗಳನ್ನು ಆಲಿಸುತ್ತಿದ್ದಾನೆ. ನೀನು ಪ್ರಾರ್ಥನೆ ಮಾಡಿದ್ದರಿಂದಲೇ ನಾನು ಇಲ್ಲಿಗೆ ಬಂದೆನು.


ಅದನ್ನು ನೋಡಿ, ಆಲೋಚಿಸಿದೆ; ಒಂದು ಪಾಠವನ್ನು ಕಲಿತುಕೊಂಡೆ;


ಯೆಹೋವನೇ, ನಮಗೆ ಆಜ್ಞೆಗಳನ್ನು ಕೊಟ್ಟವನೂ ನೀನೇ. ಅವುಗಳಿಗೆ ಸಂಪೂರ್ಣವಾಗಿ ವಿಧೇಯರಾಗಬೇಕೆಂದು ನಮಗೆ ಹೇಳಿದವನೂ ನೀನೇ.


ಲೇವಿಯರು ಇಸ್ರೇಲನ್ನು ಬಿಟ್ಟುಬಂದ ಬಳಿಕ ಇಸ್ರೇಲರಲ್ಲಿ ದೇವರಾದ ಯೆಹೋವನಿಗೆ ನಂಬಿಗಸ್ತರಾಗಿ ಸೇವಿಸುವವರು ಜೆರುಸಲೇಮ್ ನಗರಕ್ಕೆ ಬಂದು ದೇವರಿಗೆ ಯಜ್ಞಗಳನ್ನು ಅರ್ಪಿಸಿ ಆರಾಧಿಸಿದರು.


ಈಗ ನಿಮ್ಮ ಹೃದಯಗಳನ್ನೂ ಆತ್ಮಗಳನ್ನೂ ನಿಮ್ಮ ದೇವರಾದ ಯೆಹೋವನಿಗೆ ಕೊಡಿರಿ. ಆತನಿಗೆ ಪರಿಶುದ್ಧ ನಿವಾಸವನ್ನು ಆತನ ಹೆಸರಿಗಾಗಿ ಕಟ್ಟಿರಿ; ಒಡಂಬಡಿಕೆಯ ಪೆಟ್ಟಿಗೆಯನ್ನೂ ಇತರ ಪವಿತ್ರ ಸಾಮಾಗ್ರಿಗಳನ್ನೂ ಆತನ ಆಲಯಕ್ಕೆ ತನ್ನಿರಿ” ಎಂದು ಹೇಳಿದನು.


ಆದರೆ ಇತರರು ಯೆಹೋವನ ಸಂದೇಶವನ್ನು ನಿರ್ಲಕ್ಷ್ಯಮಾಡಿ ತಮ್ಮ ಎಲ್ಲಾ ಗುಲಾಮರನ್ನೂ ಪಶುಗಳನ್ನೂ ಹೊಲಗಳಲ್ಲಿಯೇ ಬಿಟ್ಟರು.


ಕಟ್ಟಡದ ಪೂರ್ವ ಭಾಗದಲ್ಲಿ ಪ್ರವೇಶ ದ್ವಾರವು ಇತ್ತು. ಇದರ ಮೂಲಕ ಹೊರಗಿನ ಪ್ರಾಕಾರದಿಂದ ಜನರು ಒಳ ಪ್ರವೇಶ ಮಾಡಬಹುದು.


ಬಳಿಕ ಆ ಪುರುಷನು ನನ್ನನ್ನು ಮಹಾದ್ವಾರದ ಪಕ್ಕದಲ್ಲಿನ ಪ್ರವೇಶಮಾರ್ಗವಾಗಿ ಉತ್ತರದಲ್ಲಿರುವ ಯಾಜಕರ ಪವಿತ್ರ ಕೋಣೆಗಳಿಗೆ ಕರೆದುಕೊಂಡು ಹೋದನು.


ಆಗ ಅವನು ನನಗೆ, “ನರಪುತ್ರನೇ, ನೀನು ನೋಡಿರುವ ವಿಷಯಗಳ ಬಗ್ಗೆ ಗಮನವಿಟ್ಟಿಯಾ?” ಎಂದು ಕೇಳಿದನು. ಆಗ ಅವನು ನನ್ನನ್ನು ಹೊಳೆಯ ಪಕ್ಕದಲ್ಲೇ ಕರೆದುಕೊಂಡು ಹೋದನು.


ಯೆಹೋವನ ಪರ್ವತವನ್ನು ಹತ್ತುವವರು ಎಂಥವರಾಗಿರಬೇಕು? ಆತನ ಪವಿತ್ರ ಆಲಯದಲ್ಲಿ ನಿಂತುಕೊಳ್ಳುವವರು ಎಂಥವರಾಗಿರಬೇಕು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು