Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 44:7 - ಪರಿಶುದ್ದ ಬೈಬಲ್‌

7 ನೀವು ನನ್ನ ಆಲಯದೊಳಗೆ ಅನ್ಯರನ್ನು ತಂದಿರುತ್ತೀರಿ. ಅವರು ಸುನ್ನತಿಯಾದವರಾಗಿರಲಿಲ್ಲ. ಅವರು ಸಂಪೂರ್ಣವಾಗಿ ನನ್ನನ್ನು ನಂಬಿರಲಿಲ್ಲ. ಈ ರೀತಿಯಾಗಿ ನೀವು ನನ್ನ ಆಲಯವನ್ನು ಹೊಲೆ ಮಾಡಿರುತ್ತೀರಿ. ನೀವು ನಾವು ಮಾಡಿಕೊಂಡ ಒಡಂಬಡಿಕೆಯನ್ನು ಮುರಿದುಬಿಟ್ಟಿರಿ. ಭಯಂಕರ ಕೃತ್ಯಗಳನ್ನು ಮಾಡಿ ಆಮೇಲೆ ನನಗೆ ರೊಟ್ಟಿ, ಕೊಬ್ಬು, ರಕ್ತಗಳ ಕಾಣಿಕೆ ಅರ್ಪಿಸುತ್ತೀರಿ. ಆದರೆ ಇವೆಲ್ಲಾ ನನ್ನ ಆಲಯವನ್ನು ಅಶುದ್ಧಗೊಳಿಸುತ್ತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ‘ಇಸ್ರಾಯೇಲ್ ವಂಶದವರೇ, ನೀವು ನನ್ನ ರೊಟ್ಟಿಯನ್ನೂ, ಕೊಬ್ಬನ್ನೂ, ರಕ್ತವನ್ನೂ ಅರ್ಪಿಸುವಾಗ, ಹೃದಯದಲ್ಲಿಯೂ, ಶರೀರದಲ್ಲಿಯೂ ಸುನ್ನತಿಹೀನರಾದ ಮ್ಲೇಚ್ಛರನ್ನು ನನ್ನ ಪವಿತ್ರಾಲಯದೊಳಗೆ ಬರಮಾಡಿ, ನನ್ನ ಮಂದಿರವನ್ನು ಅಪವಿತ್ರಗೊಳಿಸಿ, ನನ್ನ ಒಡಂಬಡಿಕೆಯನ್ನು ಭಂಗಪಡಿಸಿ, ನಿಮ್ಮ ದುರಾಚಾರಗಳ ಲೆಕ್ಕವನ್ನು ಹೆಚ್ಚಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಇಸ್ರಯೇಲ್ ವಂಶದವರೇ, ನೀವು ನನ್ನ ಆಹಾರವಾದ ರಕ್ತಮೇದಸ್ಸುಗಳನ್ನು ಅರ್ಪಿಸುವಾಗ, ತನುಮನಗಳಲ್ಲಿ ಸುನ್ನತಿಹೀನರಾದ ಮ್ಲೇಚ್ಛರನ್ನು, ನನ್ನ ಪವಿತ್ರಾಲಯದೊಳಗೆ ಬರಮಾಡಿ ನನ್ನ ಮಂದಿರವನ್ನು ಅಶುದ್ಧಗೊಳಿಸಿದ್ದೀರಿ. ನನ್ನ ಒಡಂಬಡಿಕೆಯನ್ನು ಉಲ್ಲಂಘಿಸಿ ನಿಮ್ಮ ಅಮಿತ ದುರಾಚಾರಗಳ ಲೆಕ್ಕವನ್ನು ಹೆಚ್ಚಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಇಸ್ರಾಯೇಲ್ ವಂಶದವರೇ, ನೀವು ನನ್ನ ಆಹಾರವಾದ ರಕ್ತಮೇದಸ್ಸುಗಳನ್ನು ಅರ್ಪಿಸುವಾಗ ತನುಮನಗಳಲ್ಲಿ ಸುನ್ನತಿಹೀನರಾದ ಮ್ಲೇಚ್ಫರನ್ನು ನನ್ನ ಪವಿತ್ರಾಲಯದೊಳಗೆ ಬರಮಾಡಿ ನನ್ನ ಮಂದಿರವನ್ನು ಹೊಲೆಗೆಡಿಸಿ ನನ್ನ ಒಡಂಬಡಿಕೆಯನ್ನು ಭಂಗಪಡಿಸಿ ನಿಮ್ಮ ಅವಿುತದುರಾಚಾರಗಳ ಲೆಕ್ಕವನ್ನು ಹೆಚ್ಚಿಸಿದ್ದೀರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವುಗಳಲ್ಲಿ ನೀವು ನನ್ನ ರೊಟ್ಟಿಯನ್ನೂ ಕೊಬ್ಬನ್ನೂ ರಕ್ತವನ್ನೂ ಅರ್ಪಿಸುವಾಗ ನಿಮ್ಮ ಎಲ್ಲಾ ಅಸಹ್ಯಗಳಿಗೋಸ್ಕರ ನನ್ನ ಒಡಂಬಡಿಕೆಯನ್ನು ಮೀರುವಂಥ ಹೃದಯದಲ್ಲಿಯೂ ಶರೀರದಲ್ಲಿಯೂ ಸುನ್ನತಿಯಿಲ್ಲದಂಥ ಪರಕೀಯರನ್ನು ನನ್ನ ಪರಿಶುದ್ಧ ಸ್ಥಳಕ್ಕೆ ಕರೆತಂದು ನನ್ನ ಆಲಯವನ್ನು ಅಪವಿತ್ರಪಡಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 44:7
38 ತಿಳಿವುಗಳ ಹೋಲಿಕೆ  

“ಪರದೇಶಸ್ಥರಿಂದ ಯೆಹೋವನಿಗೆ ಬಲಿಪಶುಗಳನ್ನು ತೆಗೆದುಕೊಳ್ಳಬಾರದು. ಯಾಕೆಂದರೆ ಆ ಪಶುಗಳಿಗೆ ಒಂದುವೇಳೆ ಪೆಟ್ಟಾಗಿರಬಹುದು. ಅವುಗಳಲ್ಲಿ ಏನಾದರೂ ದೋಷವಿರಬಹುದು. ಅವುಗಳು ಸಮರ್ಪಕವಾಗುವುದಿಲ್ಲ.”


ನಾನು ಈಜಿಪ್ಟ್, ಯೆಹೂದ, ಎದೋಮ್, ಅಮ್ಮೋನ್, ಮೋವಾಬ್ ಜನಾಂಗಗಳ ಜನರ ಬಗ್ಗೆ ಮತ್ತು ಮರಳು ಪ್ರದೇಶದಲ್ಲಿ ವಾಸಮಾಡುತ್ತಿರುವ ಎಲ್ಲಾ ಜನಗಳ ಬಗ್ಗೆ ಮಾತನಾಡುತ್ತಿದ್ದೇನೆ. ಈ ಎಲ್ಲಾ ದೇಶಗಳ ಜನರಿಗೆ ದೈಹಿಕವಾಗಿ ಸುನ್ನತಿ ಆಗಿದ್ದಿಲ್ಲ. ಆದರೆ ಇಸ್ರೇಲ್ ವಂಶದವರು ಹೃದಯ ಸುನ್ನತಿಯಿಲ್ಲದವರು” ಎಂದು ಯೆಹೋವನು ಅನ್ನುತ್ತಾನೆ.


ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ಇಸ್ರೇಲರೊಂದಿಗೆ ವಾಸವಾಗಿರುವ ಅನ್ಯಜನರೊಳಗೆ ತನುಮನಗಳಲ್ಲಿ ಸುನ್ನತಿಯಾಗಿಲ್ಲದವನು ನನ್ನ ಪವಿತ್ರಾಲಯವನ್ನು ಪ್ರವೇಶಿಸಕೂಡದು.


ಯೆಹೋವನ ಮನುಷ್ಯರಾಗಿರಿ, ನಿಮ್ಮ ಹೃದಯ ಪರಿವರ್ತನೆ ಮಾಡಿಕೊಳ್ಳಿರಿ. ಯೆಹೂದದ ಜನಗಳೇ, ಜೆರುಸಲೇಮಿನ ಜನರೇ, ನೀವು ಬದಲಾಗದಿದ್ದರೆ ನನಗೆ ವಿಪರೀತ ಕೋಪ ಬರುವುದು. ನನ್ನ ಕೋಪವು ಬೆಂಕಿಯ ಜ್ವಾಲೆಯಂತೆ ಭರದಿಂದ ಹಬ್ಬುವದು. ನನ್ನ ಕೋಪವು ನಿಮ್ಮನ್ನು ಸುಟ್ಟು ಬೂದಿ ಮಾಡುವುದು. ಯಾರಿಂದಲೂ ಆ ಬೆಕಿಯನ್ನು ಆರಿಸುವುದು ಸಾಧ್ಯವಾಗುವದಿಲ್ಲ. ಇದೆಲ್ಲ ಏಕೆ ನಡೆಯುವುದು? ನೀವು ಮಾಡಿದ ದುಷ್ಕೃತ್ಯಗಳಿಂದಲೇ.”


ನಾನು ಅವರಿಗೆ ವಿಮುಖನಾಗಿ ಅವರನ್ನು ಶತ್ರುಗಳ ದೇಶಕ್ಕೆ ಕರೆದುಕೊಂಡು ಬಂದೆನೆಂದು ಅವರು ಅರಿತುಕೊಂಡು ತಮ್ಮನ್ನು ತಗ್ಗಿಸಿಕೊಂಡು ತಮ್ಮ ಪಾಪಕ್ಕೆ ಬರತಕ್ಕ ಶಿಕ್ಷೆಯನ್ನು ಸ್ವೀಕರಿಸಲು ಯೋಗ್ಯರೆಂದು ಹೇಳಿಕೊಂಡರೆ


“ಯೆಹೂದ್ಯ ಜನರೇ, ನಮಗೆ ಸಹಾಯಮಾಡಿ! ಮೋಶೆಯ ಧರ್ಮಶಾಸ್ತ್ರಕ್ಕೂ ನಮ್ಮ ಜನರಿಗೂ ಮತ್ತು ಈ ಸ್ಥಳಕ್ಕೂ (ದೇವಾಲಯ) ವಿರೋಧವಾಗಿ ಎಲ್ಲಾ ಕಡೆಗಳಲ್ಲಿ ಜನರಿಗೆ ಉಪದೇಶಿಸುತ್ತಿದ್ದವನು ಇವನೇ. ಈಗ ಇವನು ಕೆಲವು ಗ್ರೀಕರನ್ನು ದೇವಾಲಯದೊಳಕ್ಕೆ ಕರೆದುಕೊಂಡು ಬಂದಿದ್ದಾನೆ! ಈ ಪವಿತ್ರ ಸ್ಥಳವನ್ನು ಇವನು ಅಶುದ್ಧಗೊಳಿಸಿದ್ದಾನೆ!” ಎಂದು ಕೂಗಿಹೇಳಿ ಗಲಿಬಿಲಿ ಮಾಡಿದರು.


ಸ್ತೆಫನನು ಮಾತನ್ನು ಮುಂದುವರಿಸಿದನು: “ಮೊಂಡರಾದ ಯೆಹೂದ್ಯನಾಯಕರೇ! ನೀವು ನಿಮ್ಮ ಹೃದಯಗಳನ್ನು ದೇವರಿಗೆ ಕೊಟ್ಟಿಲ್ಲ. ನೀವು ಆತನಿಗೆ ಕಿವಿಗೊಡುವುದಿಲ್ಲ. ಪವಿತ್ರಾತ್ಮನು ನಿಮಗೆ ತಿಳಿಸಲು ಪ್ರಯತ್ನಿಸುತ್ತಿರುವ ವಿಷಯಕ್ಕೆ ನೀವು ಯಾವಾಗಲೂ ವಿರೋಧಿಗಳಾಗಿದ್ದೀರಿ. ನಿಮ್ಮ ಪಿತೃಗಳು ಹೀಗೆಯೇ ಮಾಡಿದರು ಮತ್ತು ನೀವೂ ಅವರಂತೆಯೇ ಇದ್ದೀರಿ!


“ಆದ್ದರಿಂದ ಹಠಮಾರಿಗಳಾಗಬೇಡಿರಿ. ನಿಮ್ಮ ಹೃದಯಗಳನ್ನು ಯೆಹೋವನಿಗೆ ಕೊಡಿರಿ.


ಅದು, ಅವರ ಪಿತೃಗಳೊಡನೆ ನಾನು ಮಾಡಿಕೊಂಡ ಒಡಂಬಡಿಕೆಯಂತಿರುವುದಿಲ್ಲ. ಅವರನ್ನು ಈಜಿಪ್ಟಿನಿಂದ ಕೈಹಿಡಿದು ಹೊರಗೆ ಕರೆದುಕೊಂಡು ಬಂದ ಕಾಲದಲ್ಲಿ ಅವರೊಡನೆ ಆ ಒಡಂಬಡಿಕೆಯನ್ನೂ ಮಾಡಿಕೊಂಡೆನು. ಆದರೆ ಅವರು ಅದನ್ನು ಅನುಸರಿಸಲಿಲ್ಲವಾದ್ದರಿಂದ ಅವರಿಗೆ ವಿಮುಖನಾದೆನು ಎಂದು ಪ್ರಭು ಹೇಳುತ್ತಾನೆ.


“ನನ್ನ ಯಜ್ಞವೇದಿಕೆಗೆ ನೀವು ಅಶುದ್ಧ ರೊಟ್ಟಿಗಳನ್ನು ಅರ್ಪಿಸುತ್ತೀರಿ” ಎಂದು ಯೆಹೋವನು ಹೇಳುತ್ತಾನೆ. “ಯಾವ ವಿಷಯದಲ್ಲಿ ಅದು ಅಶುದ್ಧವಾಯಿತು?” ಎಂದು ನೀವು ಕೇಳುತ್ತೀರಿ. ಅದಕ್ಕೆ ಯೆಹೋವನು, “ನನ್ನ ಯಜ್ಞವೇದಿಕೆಯನ್ನು ನೀವು ಗೌರವಿಸುವದಿಲ್ಲ.


“ಯಾಜಕರು ನನ್ನ ಉಪದೇಶವನ್ನು ನಿರಾಕರಿಸಿರುತ್ತಾರೆ; ಪರಿಶುದ್ಧ ವಸ್ತುಗಳನ್ನು ಸರಿಯಾಗಿ ಲಕ್ಷ್ಯ ಮಾಡುತ್ತಿಲ್ಲ; ಅವುಗಳಿಗೆ ಮಹತ್ವವನ್ನು ಕೊಡುತ್ತಿಲ್ಲ. ಅವರು ಪವಿತ್ರ ವಸ್ತುಗಳನ್ನು ಅಪವಿತ್ರ ವಸ್ತುಗಳಂತೆ ನೋಡುತ್ತಿದ್ದಾರೆ. ಯಾವುದು ಶುದ್ಧ, ಯಾವುದು ಅಶುದ್ಧ ಎಂಬುದರ ಬಗ್ಗೆ ಅವರು ಜನರಿಗೆ ಸರಿಯಾಗಿ ಉಪದೇಶಿಸುತ್ತಿಲ್ಲ. ನನ್ನ ವಿಶೇಷ ವಿಶ್ರಾಂತಿ ದಿವಸಗಳನ್ನು ಮಾನ್ಯ ಮಾಡುತ್ತಿಲ್ಲ. ನಾನು ಏನೂ ಅಲ್ಲವೆಂಬಂತೆ ನನ್ನನ್ನು ಅವರು ನೋಡುತ್ತಾರೆ.


“ಆ ಜನರು ತಮ್ಮ ಬೆಳ್ಳಿಬಂಗಾರಗಳ ಆಭರಣಗಳನ್ನು ಅಲಂಕಾರದ ವಸ್ತುಗಳನ್ನಾಗಿ ಪರಿವರ್ತಿಸಿದರು. ಅವುಗಳಿಂದ ತಮ್ಮ ಕೊಳಕಾದ ಮತ್ತು ಅಸಹ್ಯಕರವಾದ ವಿಗ್ರಹಗಳನ್ನು ಮಾಡಿಕೊಂಡರು. ಆದ್ದರಿಂದ ಅವರ ಬೆಳ್ಳಿಬಂಗಾರಗಳನ್ನು ಅವರಿಗೆ ಕೊಳೆಯ ಬಟ್ಟೆಯನ್ನಾಗಿ ಮಾಡುವೆನು.


ಈ ಒಡಂಬಡಿಕೆ ನಾನು ಅವರ ಪೂರ್ವಿಕರೊಂದಿಗೆ ಮಾಡಿಕೊಂಡ ಒಡಂಬಡಿಕೆಯಂತಲ್ಲ. ನಾನು ಅವರ ಕೈಹಿಡಿದು ಈಜಿಪ್ಟಿನಿಂದ ಹೊರತಂದಾಗ ಮಾಡಿಕೊಂಡ ಒಡಂಬಡಿಕೆಯದು. ನಾನು ಅವರ ಒಡೆಯನಾಗಿದ್ದೆ. ಆದರೆ ಅವರು ಒಡಂಬಡಿಕೆಯನ್ನು ಮುರಿದರು.” ಇದು ಯೆಹೋವನ ನುಡಿ.


ಅವರು ತಮ್ಮ ಪೂರ್ವಿಕರು ಮಾಡಿದ ಪಾಪಗಳನ್ನೇ ಮಾಡುತ್ತಿದ್ದಾರೆ. ಅವರ ಪೂರ್ವಿಕರು ನನ್ನ ಸಂದೇಶವನ್ನು ಕೇಳಲು ಒಪ್ಪಲಿಲ್ಲ. ಅವರು ಬೇರೆ ದೇವರುಗಳನ್ನು ಅನುಸರಿಸಿ ಪೂಜಿಸಿದರು. ನಾನು ಅವರ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಯೆಹೂದ ಮತ್ತು ಇಸ್ರೇಲ್ ವಂಶದವರು ಮೀರಿದ್ದಾರೆ.”


ದೇಶದ ಜನರು ದೇವರ ಉಪದೇಶಗಳಿಗೆ ವಿರುದ್ಧವಾಗಿ ನಡೆದು ತಮ್ಮ ದೇಶವನ್ನು ಹೊಲಸುಮಾಡಿದರು. ದೇವರ ಕಟ್ಟಳೆಗಳನ್ನು ಅವರು ಅನುಸರಿಸಲಿಲ್ಲ. ಬಹಳ ಕಾಲದ ಹಿಂದೆ ಜನರು ದೇವರೊಂದಿಗೆ ಒಡಂಬಡಿಕೆ ಮಾಡಿಕೊಂಡರು. ಆದರೆ ಆ ಜನರು ಆ ಒಡಂಬಡಿಕೆಯನ್ನು ಮುರಿದರು.


ನಾನು ಅವರ ಪೂರ್ವಿಕರಿಗೆ ವಾಗ್ದಾನ ಮಾಡಿದ ದೇಶಕ್ಕೆ ಅವರನ್ನು ಕರೆದುಕೊಂಡು ಹೋಗುವೆನು. ಆ ದೇಶವು ಹಾಲೂಜೇನೂ ಹರಿಯುವ ದೇಶವಾಗಿರುತ್ತದೆ. ಅವರಿಗೆ ಇಷ್ಟ ಬಂದದ್ದನ್ನೆಲ್ಲಾ ತಿನ್ನಲು ಅವರಿಗೆ ಸಿಗುವುದು. ಅವರಿಗೆ ಸಮೃದ್ಧಿಯಾದ ಜೀವಿತವು ಇರುವುದು. ಆದರೆ ಅವರು ಸುಳ್ಳುದೇವರ ಕಡೆಗೆ ತಿರುಗಿ ಅವುಗಳನ್ನು ಪೂಜಿಸುವರು. ಅವರು ನನ್ನಿಂದ ತೊಲಗಿ ನನ್ನ ಒಡಂಬಡಿಕೆಯನ್ನು ಮುರಿದುಬಿಡುವರು.


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ನೀನು ಬೇಗನೇ ಸಾಯುವೆ. ನಿನ್ನ ಪೂರ್ವಿಕರ ಬಳಿಗೆ ನೀನು ಸೇರಿದಾಗ ಈ ಜನರು ನನಗೆ ನಂಬಿಗಸ್ತರಾಗಿರುವುದಿಲ್ಲ. ನಾನು ಅವರೊಡನೆ ಮಾಡಿರುವ ಒಡಂಬಡಿಕೆಯನ್ನು ಅವರು ಮುರಿಯುವರು. ಅವರು ನನ್ನನ್ನು ತೊರೆದು ತಾವು ಸ್ವಾಧೀನಮಾಡಿಕೊಳ್ಳುವ ದೇಶದ ಅನ್ಯದೇವತೆಗಳನ್ನು ಪೂಜಿಸುವರು.


ನೀವು ಮತ್ತು ನಿಮ್ಮ ಸಂತತಿಯವರು ತನಗೆ ವಿಧೇಯರಾಗುವಂತೆ ನಮ್ಮ ದೇವರಾದ ಯೆಹೋವನು ಮಾಡುತ್ತಾನೆ. ಆಗ ನೀವು ಯೆಹೋವನನ್ನು ನಿಮ್ಮ ಪೂರ್ಣಹೃದಯದಿಂದ ಪ್ರೀತಿಸುವಿರಿ ಮತ್ತು ಜೀವಿಸುವಿರಿ.


ನೀವು ನನ್ನ ಕಟ್ಟಳೆಗಳಿಗೆ ಮತ್ತು ಆಜ್ಞೆಗಳಿಗೆ ವಿಧೇಯರಾಗದಿದ್ದರೆ, ಆಗ ನೀವು ನನ್ನ ಒಡಂಬಡಿಕೆಯನ್ನು ಮುರಿದವರಾಗುತ್ತೀರಿ.


“ಆರೋನನ ಸಂತತಿಯವರಲ್ಲಿ ಅಂಗವಿಕಲರಾದ ಯಾರೂ ಯೆಹೋವನಿಗೆ ಹೋಮದ್ರವ್ಯಗಳನ್ನು ಸಮರ್ಪಿಸಬಾರದು; ಅಂಥವನು ವಿಶೇಷ ರೊಟ್ಟಿಯನ್ನು ದೇವರ ಬಳಿಗೆ ತೆಗೆದುಕೊಂಡು ಹೋಗಕೂಡದು.


“ಆರೋನನಿಗೆ ಹೀಗೆ ಹೇಳು: ನಿನ್ನ ಸಂತತಿಯವರ ಮಕ್ಕಳಲ್ಲಿ ಯಾರಾದರೂ ಅಂಗವಿಕಲರಾಗಿದ್ದರೆ, ಅವರು ವಿಶೇಷ ರೊಟ್ಟಿಯನ್ನು ದೇವರ ಬಳಿಗೆ ತೆಗೆದುಕೊಂಡು ಹೋಗಬಾರದು.


ಯಾಜಕನು ವಿಶೇಷವಾದ ರೀತಿಯಲ್ಲಿ ದೇವರ ಸೇವೆ ಮಾಡುತ್ತಾನೆ. ಆದ್ದರಿಂದ ನೀವು ಅವನನ್ನು ವಿಶೇಷವಾದ ರೀತಿಯಲ್ಲಿ ನೋಡಿಕೊಳ್ಳಬೇಕು. ಯಾಕೆಂದರೆ ಅವನು ಪವಿತ್ರ ವಸ್ತುಗಳನ್ನು ಸಮರ್ಪಿಸುತ್ತಾನಲ್ಲ! ಅವನು ದೇವರ ಬಳಿಗೆ ಪವಿತ್ರ ರೊಟ್ಟಿಯನ್ನು ತರುತ್ತಾನೆ. ನಾನೇ ಪರಿಶುದ್ಧನು! ನಾನೇ ಯೆಹೋವನು! ಮತ್ತು ನಾನು ನಿಮ್ಮನ್ನು ಪರಿಶುದ್ಧಗೊಳಿಸುತ್ತೇನೆ.


ಅವರು ತಮ್ಮ ದೇವರಿಗೆ ಪ್ರತಿಷ್ಠಿತರಾಗಿರಬೇಕು. ಅವರು ದೇವರ ಹೆಸರಿಗೆ ಗೌರವ ತೋರಿಸಬೇಕು. ಯಾಕೆಂದರೆ ಅವರು ಅಗ್ನಿಯ ಮೂಲಕ ಅರ್ಪಿಸಿದ ರೊಟ್ಟಿಯನ್ನು ಮತ್ತು ಕಾಣಿಕೆಗಳನ್ನು ಯೆಹೋವನಿಗೆ ತೆಗೆದುಕೊಂಡು ಹೋಗುತ್ತಾರೆ. ಆದ್ದರಿಂದ ಅವರು ಪವಿತ್ರರಾಗಿರಬೇಕು.


ಯಾಕೆಂದರೆ ದೇಹದ ಜೀವ ರಕ್ತದಲ್ಲಿದೆ. ನೀವು ನಿಮಗೋಸ್ಕರವಾಗಿ ಯಜ್ಞವೇದಿಕೆಯ ಮೇಲೆ ಪ್ರಾಯಶ್ಚಿತ್ತ ಮಾಡಲಿ ಎಂದು ನಾನು ಅದನ್ನು ನಿಮಗೆ ಕೊಟ್ಟಿದ್ದೇನೆ. ನೀವು ನಿಮಗೋಸ್ಕರವಾಗಿ ಪ್ರಾಯಶ್ಚಿತ್ತ ಮಾಡಲು ಈ ನಿಯಮಗಳನ್ನು ಉಪಯೋಗಿಸಬೇಕು. ಒಬ್ಬನ ಜೀವಕ್ಕೆ ರಕ್ತವೇ ಪ್ರಾಯಶ್ಚಿತ್ತವಾಗಿದೆ. ಜೀವಿಯೊಂದನ್ನು ಕೊಂದಿದ್ದರ ಬೆಲೆಯಾಗಿ ನೀವು ನನಗೆ ಆ ರಕ್ತವನ್ನು ಕೊಡಬೇಕು.


ನಿಮ್ಮ ಮಧ್ಯದಲ್ಲಿ ವಾಸವಾಗಿರುವ ಪರದೇಶದವನು ಯೆಹೋವನ ಪಸ್ಕ ಭೋಜನದಲ್ಲಿ ಪಾಲುಗಾರನಾಗಬೇಕೆಂದು ಬಯಸಿದರೆ ಅವನು ಸುನ್ನತಿ ಮಾಡಿಸಿಕೊಳ್ಳಬೇಕು. ಆಗ ಅವನು ಇಸ್ರೇಲಿನವನಾಗುವುದರಿಂದ ಭೋಜನದಲ್ಲಿ ಪಾಲುಗಾರನಾಗಬಹುದು. ಆದರೆ ಸುನ್ನತಿಯಾಗಿಲ್ಲದವನು ಪಸ್ಕದ ಊಟ ಮಾಡಕೂಡದು.


ಯೆಹೋವನು ಮೋಶೆ ಆರೋನರಿಗೆ, “ಪಸ್ಕಹಬ್ಬದ ನಿಯಮಗಳು ಇಂತಿವೆ: ಯಾವ ಪರದೇಶಿಯೂ ಪಸ್ಕಹಬ್ಬದ ಊಟವನ್ನು ಮಾಡಬಾರದು.


“ಯಾಜಕರೆಲ್ಲರೂ ಲೇವಿ ಕುಲಕ್ಕೆ ಸಂಬಂಧಪಟ್ಟವರು. ಆದರೆ ಲೇವಿಯರು ನನ್ನನ್ನು ಬಿಟ್ಟು ತೊಲಗಿದಾಗ ಚಾದೋಕನ ಸಂತತಿಯವರಾದ ಯಾಜಕರು ನನ್ನ ಪವಿತ್ರ ಸ್ಥಳವನ್ನು ಪರಾಂಬರಿಸಿದರು. ಆದ್ದರಿಂದ ಚಾದೋಕನ ಸಂತತಿಯವರು ಮಾತ್ರ ನನಗೆ ಕಾಣಿಕೆಗಳನ್ನು ಸಮರ್ಪಿಸುವರು. ಅವರು ನನ್ನ ಸನ್ನಿಧಿಯಲ್ಲಿ ನಿಂತು ಯಜ್ಞಮಾಡಲ್ಪಡುವ ಪ್ರಾಣಿಗಳ ಕೊಬ್ಬು ಮತ್ತು ರಕ್ತವನ್ನು ನನಗೆ ಸಮರ್ಪಿಸುವರು.” ಇದು ನನ್ನ ಒಡೆಯನಾದ ಯೆಹೋವನ ನುಡಿ.


“ಕೇವಲ ದೈಹಿಕವಾಗಿ ಸುನ್ನತಿಯನ್ನು ಮಾಡಿಕೊಂಡ ಜನರನ್ನು ನಾನು ಶಿಕ್ಷಿಸುವ ಕಾಲ ಬರಲಿದೆ.


ಆಗ ನೀವು ನಾನು ಈ ಆಜ್ಞೆಯನ್ನು ಯಾಕೆ ಕೊಡುತ್ತಿದ್ದೇನೆಂದು ಅರಿಯುವಿರಿ. ಲೇವಿಯರೊಂದಿಗೆ ನಾನು ಮಾಡಿರುವ ಒಡಂಬಡಿಕೆಯು ಮುಂದುವರಿಯುವ ಹಾಗೆ ನಾನು ಈ ಸಂಗತಿಗಳನ್ನು ನಿಮಗೆ ತಿಳಿಸುತ್ತಿದ್ದೇನೆ.” ಸೇನಾಧೀಶ್ವರನಾದ ಯೆಹೋವನು ಈ ಮಾತುಗಳನ್ನು ಅಂದಿದ್ದಾನೆ.


“ಆದರೆ ಯಾಜಕರೇ, ನೀವು ನನ್ನನ್ನು ಹಿಂಬಾಲಿಸುವದನ್ನು ನಿಲ್ಲಿಸಿ ಬಿಟ್ಟಿರಿ. ಅನೇಕ ಜನರು ತಪ್ಪು ದಾರಿಯಲ್ಲಿ ಹೋಗುವಂತೆ ಮಾಡಲು ನೀವು ಉಪದೇಶವನ್ನು ಬಳಸಿಕೊಂಡಿರಿ. ಲೇವಿಯೊಂದಿಗೆ ಮಾಡಿದ ಒಡಂಬಡಿಕೆಯನ್ನು ನೀವು ಹಾಳುಮಾಡಿಬಿಟ್ಟಿರಿ.” ಇದು ಸರ್ವಶಕ್ತನಾದ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು