Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 44:8 - ಪರಿಶುದ್ದ ಬೈಬಲ್‌

8 ನೀವು ನನ್ನ ಪವಿತ್ರ ವಸ್ತುಗಳನ್ನು ಅಲಕ್ಷ್ಯಮಾಡಿದಿರಿ. ನನ್ನ ಪವಿತ್ರಸ್ಥಳದ ಜವಾಬ್ದಾರಿಕೆಯನ್ನು ನೀವು ಅನ್ಯರ ವಶಮಾಡಿದ್ದೀರಿ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನೀವು ನನ್ನ ಪರಿಶುದ್ಧ ವಸ್ತುಗಳನ್ನು ಕಾಯಲಿಲ್ಲ. ಈ ಮ್ಲೇಚ್ಛರನ್ನು ನನ್ನ ಪವಿತ್ರಾಲಯದಲ್ಲಿ ನನ್ನ ವಸ್ತುಗಳನ್ನು ಕಾಯುವುದಕ್ಕಾಗಿ ನೇಮಿಸಿಕೊಂಡಿರಿ; ನಿಮ್ಮ ದುರಾಚಾರಗಳು ಇನ್ನು ಸಾಕು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನೀವು ನನ್ನ ಪರಿಶುದ್ಧ ವಸ್ತುಗಳ ಪಾರುಪತ್ಯ ಮಾಡಲಿಲ್ಲ; ಈ ಮ್ಲೇಚ್ಛರನ್ನು ನನ್ನ ಪವಿತ್ರಾಲಯದಲ್ಲಿ ನನ್ನ ವಸ್ತುಗಳ ಮೇಲೆ ಪಾರುಪತ್ಯಗಾರರನ್ನಾಗಿ ನೇಮಿಸಿಕೊಂಡಿರಿ; ನಿಮ್ಮ ಅಪಾರ ದುರಾಚಾರಗಳು ಇನ್ನು ಸಾಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನೀವು ನನ್ನ ಪರಿಶುದ್ಧವಸ್ತುಗಳ ಪಾರುಪತ್ಯ ಮಾಡಲಿಲ್ಲ; ಈ ಮ್ಲೇಚ್ಫರನ್ನು ನನ್ನ ಪವಿತ್ರಾಲಯದಲ್ಲಿ ನನ್ನ ವಸ್ತುಗಳ ಮೇಲೆ ಪಾರುಪತ್ಯಗಾರರನ್ನಾಗಿ ನೇವಿುಸಿಕೊಂಡಿರಿ; ನಿಮ್ಮ ಅಪಾರದುರಾಚಾರಗಳು ಇನ್ನು ಸಾಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನೀವು ನನ್ನ ಪರಿಶುದ್ಧ ವಸ್ತುಗಳನ್ನು ಕಾಯಲಿಲ್ಲ, ಬದಲಿಗೆ ಅನ್ಯದೇಶೀಯರನ್ನು ನನ್ನ ಪರಿಶುದ್ಧ ಸ್ಥಳದಲ್ಲಿ ನನ್ನ ವಸ್ತುಗಳ ಮೇಲೆ ಪಾರುಪತ್ಯಗಾರರನ್ನಾಗಿ ನೇಮಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 44:8
12 ತಿಳಿವುಗಳ ಹೋಲಿಕೆ  

ಜೀವಂತರಾಗಿರುವ ಜನರಿಗೂ ಸತ್ತುಹೋಗಿರುವ ಜನರಿಗೂ ನ್ಯಾಯತೀರಿಸುವಾತನು ಕ್ರಿಸ್ತ ಯೇಸುವೇ. ಆತನು ತನ್ನ ರಾಜ್ಯವನ್ನು ಹೊಂದಿದ್ದಾನೆ. ಆತನು ಮತ್ತೆ ಬರುವನು. ಆದ್ದರಿಂದ ಯೇಸು ಕ್ರಿಸ್ತನ ಮತ್ತು ದೇವರ ಸನ್ನಿಧಿಯಲ್ಲಿ ನಾನು ನಿನಗೆ ಆಜ್ಞಾಪಿಸುವುದೇನೆಂದರೆ,


ಪೊಂತ್ಯ ಪಿಲಾತನ ಮುಂದೆ ಸಾಕ್ಷಿ ನೀಡಿದ ಕ್ರಿಸ್ತ ಯೇಸುವಿನ ಸನ್ನಿಧಿಯಲ್ಲಿಯೂ ಸರ್ವಸೃಷ್ಟಿಗೆ ಜೀವದಾಯಕನಾದ ದೇವರ ಸನ್ನಿಧಿಯಲ್ಲಿಯೂ ನಾನು ನಿನಗೆ ಆಜ್ಞಾಪಿಸುವುದೇನೆಂದರೆ,


ದೇವರು ತನ್ನ ದೂತರ ಮೂಲಕ ಕೊಟ್ಟ ಮೋಶೆಯ ಧರ್ಮಶಾಸ್ತ್ರವನ್ನು ಪಡೆದುಕೊಂಡ ನೀವೇ ಅದಕ್ಕೆ ವಿಧೇಯರಾಗುವುದಿಲ್ಲ!”


“ಅವರು ನನ್ನ ಪವಿತ್ರಸ್ಥಳವನ್ನು ಪ್ರವೇಶಿಸುವರು. ನನ್ನ ಮೇಜಿನ ಬಳಿಗೆ ನನಗೆ ಸೇವೆಮಾಡಲು ಬರುವರು. ನಾನು ಅವರಿಗೆ ವಹಿಸಿರುವ ವಸ್ತುಗಳನ್ನು ಪರಾಂಬರಿಸುವರು.


ಆದರೆ ನಾನು ನನ್ನ ಆಲಯದಲ್ಲಿ ಸೇವೆಮಾಡಲು ಅವರಿಗೆ ಬಿಡುವೆನು. ಅವರು ಅದರೊಳಗೆ ಮಾಡಬೇಕಾದ ಸೇವೆಯನ್ನು ಮಾಡುವರು.


ಹೀಗೆ ಲೇವಿಯರು ತಾವು ಮಾಡಬೇಕಾದ ಕೆಲಸಗಳನ್ನೆಲ್ಲಾ ಮಾಡಿದರು. ಅವರು ಪವಿತ್ರ ಗುಡಾರವನ್ನು ಮತ್ತು ಪವಿತ್ರಸ್ಥಳವನ್ನು ನೋಡಿಕೊಂಡರು; ತಮ್ಮ ಸಂಬಂಧಿಕರೂ ಆರೋನನ ಕುಲದವರೂ ಆಗಿದ್ದ ಯಾಜಕರಿಗೆ ಸಹಾಯ ಮಾಡಿದರು.


ಆದರೆ ಆರೋನನೇ, ನೀನೂ ನಿನ್ನ ಪುತ್ರರೂ ನಿಮ್ಮ ಯಾಜಕತ್ವವನ್ನು ಕಾಪಾಡಿಕೊಳ್ಳಬೇಕು. ಅಯೋಗ್ಯನಾದ ಯಾವನೂ ಯಜ್ಞವೇದಿಕೆಯ ಬಳಿ ಕೆಲಸ ಮಾಡುವುದಕ್ಕಾಗಲೀ ತೆರೆಯ ಆಚೆಯಿರುವ ಮಹಾ ಪವಿತ್ರಸ್ಥಳಕ್ಕೆ ಪ್ರವೇಶಿಸುವುದಕ್ಕಾಗಲೀ ನೀವು ಬಿಡಕೂಡದು. ನಾನು ನಿಮಗೆ ಅಮೂಲ್ಯವಾದ ಯಾಜಕತ್ವವನ್ನು ಕೊಟ್ಟಿದ್ದೇನೆ. ಆದರೆ ಅಯೋಗ್ಯನಾದ ಯಾವನಾದರೂ ಯಾಜಕತ್ವದ ಈ ಕರ್ತವ್ಯಗಳನ್ನು ಮಾಡಲು ಪ್ರಯತ್ನಿಸಿದರೆ ಅವನು ಕೊಲ್ಲಲ್ಪಡುವನು.”


ಅವರು ಕಾವಲುಗಾರರಾಗಿ ದೇವದರ್ಶನಗುಡಾರದ ಬಳಿ ಇತರ ಲೇವಿಯರಿಗೆ ಸಹಾಯ ಮಾಡಬಹುದೇ ಹೊರತು ಭಾರವಾದ ಕೆಲಸವನ್ನು ಮಾಡಲೇಕೂಡದು. ನೀನು ಈ ರೀತಿಯಲ್ಲಿ ಲೇವಿಯರಿಗೆ ಕೆಲಸವನ್ನು ಹಂಚಿಕೊಡಬೇಕು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು