Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 45:19 - ಪರಿಶುದ್ದ ಬೈಬಲ್‌

19 ಪಾಪಪರಿಹಾರಕಯಜ್ಞಕ್ಕೆ ಬಲಿಯರ್ಪಿಸಿದ್ದ ಪ್ರಾಣಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಅದನ್ನು ಆಲಯದ ಬಾಗಿಲಿನ ನಿಲುವು ಕಂಬಗಳಿಗೂ, ಯಜ್ಞವೇದಿಕೆಯ ಸಜ್ಜದ ನಾಲ್ಕು ಮೂಲೆಗಳಿಗೂ ಮತ್ತು ಒಳಗಿನ ಪ್ರಾಕಾರದ ಪ್ರವೇಶ ದ್ವಾರದ ಎರಡು ನಿಲುವು ಕಂಬಗಳಿಗೂ ಹಚ್ಚಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆಗ ಯಾಜಕನು ಆ ದೋಷಪರಿಹಾರಕ ಯಜ್ಞಪಶುವಿನ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ದೇವಸ್ಥಾನದ ಬಾಗಿಲ ಚೌಕಟ್ಟಿಗೂ, ಯಜ್ಞವೇದಿಯ ದೊಡ್ಡ ಅಂತಸ್ತಿನ ನಾಲ್ಕು ಮೂಲೆಗಳಿಗೂ ಒಳಗಿನ ಅಂಗಳದ ಹೆಬ್ಬಾಗಿಲಿನ ಕಂಬಗಳಿಗೂ ಹಚ್ಚಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಆಗ ಯಾಜಕನು ಆ ದೋಷಪರಿಹಾರಕ ಬಲಿಪ್ರಾಣಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ದೇವಸ್ಥಾನದ ಬಾಗಿಲ ಚೌಕಟ್ಟಿಗೂ ಬಲಿಪೀಠದ ದೊಡ್ಡ ಅಂತಸ್ತಿನ ನಾಲ್ಕು ಮೂಲೆಗಳಿಗೂ ಒಳಗಣ ಪ್ರಾಕಾರದ ಹೆಬ್ಬಾಗಿಲ ನಿಲವುಕಂಬಗಳಿಗೂ ಹಚ್ಚಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆಗ ಯಾಜಕನು ಆ ದೋಷಪರಿಹಾರಕಯಜ್ಞಪಶುವಿನ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ದೇವಸ್ಥಾನದ ಬಾಗಿಲ ಚೌಕಟ್ಟಿಗೂ ಯಜ್ಞವೇದಿಯ ದೊಡ್ಡ ಅಂತಸ್ತಿನ ನಾಲ್ಕು ಮೂಲೆಗಳಿಗೂ ಒಳಗಣ ಪ್ರಾಕಾರದ ಹೆಬ್ಬಾಗಿಲ ನಿಲವುಕಂಬಗಳಿಗೂ ಹಚ್ಚಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಯಾಜಕನು ದೋಷಪರಿಹಾರ ಬಲಿಯ ರಕ್ತವನ್ನು ತೆಗೆದುಕೊಂಡು ಬಲಿಪೀಠದ ಅಂಚಿನ ನಾಲ್ಕು ಮೂಲೆಗಳಿಗೂ ಒಳಗಿನ ಅಂಗಳದ ಬಾಗಿಲಿನ ಅಂಚಿಗೆ ಹಚ್ಚಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 45:19
8 ತಿಳಿವುಗಳ ಹೋಲಿಕೆ  

“ನೀನು ಹೋರಿಯ ರಕ್ತವನ್ನು ತೆಗೆದು ವೇದಿಯ ನಾಲ್ಕು ಕೊಂಬುಗಳಲ್ಲಿ ಪ್ರೋಕ್ಷಿಸಬೇಕು; ಮತ್ತು ಮೆಟ್ಟಿಲಿನ ನಾಲ್ಕು ಮೂಲೆಗಳಿಗೂ, ಅದರ ಸುತ್ತಲೂ ಇರುವ ದಿಂಡಿನ ಮೇಲೂ ರಕ್ತ ಪ್ರೋಕ್ಷಿಸಬೇಕು. ಹೀಗೆ ಮಾಡುವಾಗ ನೀನು ವೇದಿಯನ್ನು ಪವಿತ್ರಗೊಳಿಸುವೆ.


ನೆಲದಿಂದ ಅಡಿಪಾಯದ ತಳದವರೆಗೆ ಅಡಿಪಾಯದ ಎತ್ತರ ಎರಡು ಮೊಳ, ಅದರ ಅಗಲ ಒಂದು ಮೊಳ, ಚಿಕ್ಕ ಸಜ್ಜದಿಂದ ದೊಡ್ಡ ಸಜ್ಜದವರೆಗೆ ನಾಲ್ಕು ಮೊಳ ಎತ್ತರ, ಎರಡು ಮೊಳ ಅಗಲ.


ಅದರ ಮೆಟ್ಟಲು ಹದಿನಾಲ್ಕು ಮೊಳ ಅಗಲ, ಹದಿನಾಲ್ಕು ಮೊಳ ಉದ್ದವಾಗಿದ್ದು ಚೌಕವಾಗಿತ್ತು. ಅದರ ಸುತ್ತಲೂ ಇದ್ದ ಅಂಚು ಅರ್ಧ ಮೊಳ ಅಗಲವಾಗಿತ್ತು. (ಅಡಿಪಾಯದ ಸುತ್ತಲೂ ಇದ್ದ ಕಾಲುವೆಯ ಅಗಲ ಎರಡು ಮೊಳ.) ಯಜ್ಞವೇದಿಯ ಮೇಲೆ ಹತ್ತುವ ಮೆಟ್ಟಲುಗಳು ಪೂರ್ವಭಾಗದಲ್ಲಿದ್ದವು.”


ಚಾದೋಕನ ಸಂತತಿಯ ಯಾಜಕರ ಪಾಪಪರಿಹಾರಕ್ಕಾಗಿ ನೀನು ಒಂದು ಎಳೆ ಹೋರಿಯನ್ನು ಅರ್ಪಿಸು. ಇವರು ಲೇವಿಕುಲದ ಯಾಜಕರು. ಇವರು ನನಗೆ ಕಾಣಿಕೆಗಳನ್ನು ಅರ್ಪಿಸುವ ಸೇವೆ ಮಾಡುವವರಾಗಿರುತ್ತಾರೆ.’” ಇದು ನನ್ನ ಒಡೆಯನಾದ ಯೆಹೋವನ ನುಡಿ.


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಒಳಗಿನ ಪ್ರಾಕಾರದ ಪೂರ್ವ ದಿಕ್ಕಿನ ದ್ವಾರವು ಆರು ಕೆಲಸದ ದಿವಸಗಳಲ್ಲಿ ಮುಚ್ಚಲ್ಪಡುವದು. ಅದು ಸಬ್ಬತ್ ದಿವಸಗಳಲ್ಲಿಯೂ ಅಮಾವಾಸ್ಯೆಯ ದಿವಸಗಳಲ್ಲಿಯೂ ತೆರೆಯಲ್ಪಡುವದು.


ಅಧಿಪತಿಯು ಆ ದ್ವಾರದ ಕೈಸಾಲೆಯೊಳಗೆ ಪ್ರವೇಶಿಸಿ ಅದರ ನಿಲುವು ಕಂಬದ ಬಳಿಯಲ್ಲಿ ನಿಲ್ಲುವನು. ಅಧಿಪತಿಯು ಕೊಡುವ ಸರ್ವಾಂಗಹೋಮವನ್ನು ಮತ್ತು ಸಮಾಧಾನಯಜ್ಞವನ್ನು ಆಗ ಯಾಜಕರು ಸಮರ್ಪಿಸುವರು. ಅಧಿಪತಿಯು ಆ ದ್ವಾರದ ಮುಂಭಾಗದಲ್ಲಿ ಆರಾಧಿಸುವನು. ಅನಂತರ ಅವನು ಹೊರಗೆ ಹೋಗುವನು. ಆ ದ್ವಾರದ ಕದಗಳು ಸಾಯಂಕಾಲದ ತನಕ ತೆರೆದೇ ಇರುವವು.


ಆರೋನನು ಮಹಾ ಪವಿತ್ರಸ್ಥಳವನ್ನು ಪರಿಶುದ್ಧ ಮಾಡಲು ಅನುಸರಿಸಬೇಕಾದ ನಿಯಮಗಳು: ಇಸ್ರೇಲರ ಅಶುದ್ಧತ್ವ, ದಂಗೆಕೋರತನ ಮತ್ತು ಅವರ ಯಾವುದೇ ಪಾಪಗಳ ಪರಿಹಾರಕ್ಕಾಗಿ ಆರೋನನು ಇದನ್ನು ಮಾಡಬೇಕು. ಅವರ ಅಶುದ್ಧತ್ವದ ನಡುವೆ ಇರುವ ದೇವದರ್ಶನಗುಡಾರಕ್ಕೂ ಅವನು ಇದನ್ನೇ ಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು