Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 45:8 - ಪರಿಶುದ್ದ ಬೈಬಲ್‌

8 ಭೂಪ್ರದೇಶದ ಈ ಭಾಗವು ಅಧಿಪತಿಗೆ ಸೇರಿದೆ. ಹೀಗೆ, ಹಿಂದಿನ ಕಾಲದ ಅಧಿಪತಿಗಳು ಮಾಡಿದಂತೆ ಈ ಅಧಿಪತಿಯು ಜನರನ್ನು ಹಿಂಸಿಸಿ ಅವರ ಭೂಮಿಯನ್ನು ಕಸಿದುಕೊಳ್ಳುವುದಿಲ್ಲ. ಉಳಿದ ಭೂಭಾಗವು ಇಸ್ರೇಲಿನ ಇತರ ಕುಲಗಳವರಿಗೆ ಯಾವಾಗಲೂ ಸೇರಿರುತ್ತದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅದು ಅವನಿಗೆ ಇಸ್ರಾಯೇಲಿನಲ್ಲಿ ಭೂಸ್ವಾಸ್ತ್ಯವಾಗುವುದು; ಇನ್ನು ಮೇಲೆ ನನ್ನ ಪ್ರಭುಗಳು ನನ್ನ ಪ್ರಜೆಗಳನ್ನು ಹಿಂಸಿಸುವುದಿಲ್ಲ; ದೇಶದ ಭೂಮಿಯನ್ನು ಇಸ್ರಾಯೇಲರಿಗೆ ಕುಲಕ್ಕೆ ತಕ್ಕಂತೆ ಹಂಚುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅದು ಅವನಿಗೆ ಇಸ್ರಯೇಲಿನಲ್ಲಿ ಭೂಸೊತ್ತಾಗುವುದು; ಇನ್ನು ಮೇಲೆ ರಾಜರುಗಳು ನನ್ನ ಪ್ರಜೆಗಳನ್ನು ಹಿಂಸಿಸರು; ನಾಡಿನ ಭೂಮಿಯನ್ನು ಇಸ್ರಯೇಲರಿಗೆ ಕುಲಕುಲಕ್ಕೂ ಹಂಚುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅದು ಅವನಿಗೆ ಇಸ್ರಾಯೇಲಿನಲ್ಲಿ ಭೂಸ್ವಾಸ್ತ್ಯವಾಗುವದು; ಇನ್ನು ಮೇಲೆ ಪ್ರಭುಗಳು ನನ್ನ ಪ್ರಜೆಗಳನ್ನು ಹಿಂಸಿಸರು; ದೇಶದ ಭೂವಿುಯನ್ನು ಇಸ್ರಾಯೇಲ್ಯರಿಗೆ ಕುಲಕುಲಕ್ಕೂ ಹಂಚುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಈ ಭೂಮಿಯು ಅವನಿಗೆ ಇಸ್ರಾಯೇಲಿನಲ್ಲಿ ಸೊತ್ತಾಗಿರುವುದು. ಆಗ ನನ್ನ ಪ್ರಭುಗಳು ನನ್ನ ಜನರನ್ನು ಉಪದ್ರವ ಪಡಿಸುವುದೇ ಇಲ್ಲ. ಉಳಿದ ಭೂಮಿಯನ್ನು ಇಸ್ರಾಯೇಲಿನ ಮನೆತನದವರಿಗೆ ಅವರ ಗೋತ್ರಗಳ ಅನುಸಾರವಾಗಿ ಕೊಡಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 45:8
18 ತಿಳಿವುಗಳ ಹೋಲಿಕೆ  

ರಾಜನು ತನ್ನ ಪ್ರಜೆಯ ಭೂಮಿಯನ್ನು ತನ್ನ ಉಪಯೋಗಕ್ಕೆಂದು ಬಲತ್ಕಾರದಿಂದ ಇಟ್ಟುಕೊಳ್ಳಬಾರದು ಅಥವಾ ತೆಗೆದುಕೊಳ್ಳಲೂಬಾರದು. ತನ್ನ ಸ್ವಂತ ಭೂಮಿಯಿಂದ ಪಾಲನ್ನು ತನ್ನ ಮಕ್ಕಳಿಗೆ ಕೊಡಬೇಕು. ಹೀಗೆ ನನ್ನ ಜನರು ತಮ್ಮ ಭೂಮಿಯನ್ನು ಕಳೆದುಕೊಳ್ಳುವದಿಲ್ಲ.”


“ಜೆರುಸಲೇಮಿನ ನಾಯಕರು ತಾನು ಹಿಡಿದ ಪ್ರಾಣಿಯನ್ನು ತಿನ್ನುವ ತೋಳಕ್ಕೆ ಸಮಾನರಾಗಿದ್ದಾರೆ. ಅವರು ಧನಿಕರಾಗುವದಕ್ಕಾಗಿ ಜನರನ್ನು ಹಿಡಿದು ಕೊಲ್ಲುವರು.


ಇದು ಯೆಹೋವನ ಸಂದೇಶ: “ನಾನು ಒಳ್ಳೆಯ ‘ಸಸಿಯನ್ನು’ ಚಿಗುರಿಸುವ ಕಾಲ ಬಂದಿದೆ. ಅವನು ಬುದ್ಧಿವಂತಿಕೆಯಿಂದ ಆಳುವ ರಾಜನಾಗಿರುವನು. ಅವನು ದೇಶದಲ್ಲಿ ನೀತಿ ಮತ್ತು ನ್ಯಾಯಬದ್ಧವಾದದ್ದನ್ನು ಮಾಡುವನು.


ಬಹಳ ಹಿಂದೆಯೇ ಯೆಹೋವನು ಮೋಶೆಗೆ ಹೇಳಿದ ಪ್ರಕಾರ ಯೆಹೋಶುವನು ಇಸ್ರೇಲಿನ ಪ್ರದೇಶವನ್ನೆಲ್ಲ ಸ್ವಾಧೀನಪಡಿಸಿಕೊಂಡನು. ಯೆಹೋವನು ತಾನು ವಾಗ್ದಾನ ಮಾಡಿದಂತೆ ಆ ಪ್ರದೇಶವನ್ನು ಇಸ್ರೇಲರಿಗೆ ಕೊಟ್ಟುಬಿಟ್ಟನು. ಆಗ ಯೆಹೋಶುವನು ಆ ಪ್ರದೇಶವನ್ನು ಕುಲಗಳ ಪ್ರಕಾರ ಹಂಚಿಕೊಟ್ಟನು. ಆಗ ಯುದ್ಧವು ಮುಗಿಯಿತು, ಕೊನೆಗೆ ಆ ಪ್ರದೇಶದಲ್ಲಿ ಶಾಂತಿ ನೆಲೆಸಿತು.


ಇಸ್ರೇಲಿನಲ್ಲಿ ಉಳಿದವರು ದುಷ್ಕೃತ್ಯಗಳನ್ನು ಮಾಡುವುದಿಲ್ಲ. ಸುಳ್ಳು ಹೇಳುವದಿಲ್ಲ. ಜನರನ್ನು ಮೋಸಗೊಳಿಸುವದಿಲ್ಲ. ಅವರು ಕುರಿಗಳಂತೆ ಮೇದು ವಿಶ್ರಾಂತಿ ತೆಗೆದುಕೊಳ್ಳುವರು. ಯಾರೂ ಅವರ ಗೊಡವೆಗೆ ಹೋಗುವುದಿಲ್ಲ.”


ಅದು ಸ್ತ್ರೀಯರನ್ನು ವಿಧವೆಯರನ್ನಾಗಿ ಮಾಡಿತು; ಪಟ್ಟಣಗಳನ್ನು ನಿರ್ಜನವನ್ನಾಗಿ ಮಾಡಿತು; ಅದು ಗರ್ಜಿಸಿದಾಗ ದೇಶವೂ ಅದರಲ್ಲಿರುವ ಪ್ರತಿಯೊಂದೂ ಭಯಗೊಂಡವು.


ಮರಿಗಳಲ್ಲೊಂದು ಎದ್ದು ಗಟ್ಟಿಮುಟ್ಟಾದ ಸಿಂಹವಾಗಿ ಬೆಳೆಯುತ್ತಾ ಬಂತು. ತನ್ನ ಆಹಾರವನ್ನು ತಾನೇ ಬೇಟೆಯಾಡತೊಡಗಿ ಮನುಷ್ಯರನ್ನು ಕೊಂದು ತಿನ್ನಲಾರಂಭಿಸಿತು.


“ಯೆಹೋಯಾಕೀಮನೇ, ನಿನಗೆ ಲಾಭದಾಯಕವಾದದ್ದು ಮಾತ್ರ ನಿನ್ನ ಕಣ್ಣಿಗೆ ಕಾಣುತ್ತದೆ. ನೀನು ಯಾವಾಗಲೂ ನಿನಗೆ ಹೆಚ್ಚು ಲಾಭ ಬರುವದನ್ನು ನೋಡುವೆ. ನೀನು ನಿರಪರಾಧಿಗಳನ್ನು ಕೊಲ್ಲಲು ಸಿದ್ಧನಾಗಿರುವೆ. ನೀನು ಬೇರೆಯವರ ವಸ್ತುಗಳನ್ನು ಅಪಹರಿಸಲು ಸಿದ್ಧನಾಗಿರುವೆ.”


ವಿವೇಕವಿಲ್ಲದ ಅಧಿಪತಿ ತನ್ನ ಅಧೀನದಲ್ಲಿರುವವರಿಗೆ ಕೇಡುಮಾಡುವನು. ಅನ್ಯಾಯದ ಹಣವನ್ನು ತೆಗೆದುಕೊಳ್ಳದ ಅಧಿಪತಿ ಬಹುಕಾಲ ಆಳುವನು.


ಆದರೆ ಬಡವನಿಗೆ ನೀವು ಗೌರವವನ್ನೇ ತೋರುವುದಿಲ್ಲ. ಶ್ರೀಮಂತ ಜನರು ಯಾವಾಗಲೂ ನಿಮ್ಮ ಬದುಕನ್ನು ತಮ್ಮ ಹಿಡಿತದಲ್ಲಿ ಇಟ್ಟುಕೊಂಡಿದ್ದಾರೆಂಬುದು ನಿಮಗೆ ತಿಳಿದಿದೆ. ನಿಮ್ಮನ್ನು ನ್ಯಾಯಾಲಯಕ್ಕೆ ಕೊಂಡೊಯ್ಯುವವರು ಅವರೇ.


ಹೀಗೆ ದೇಶವನ್ನು ಆಯಾ ಕುಲಗಳವರಿಗೆ ನಾಯಕರು ಹಂಚಿಕೊಟ್ಟರು. ಆಗ ಇಸ್ರೇಲರು ನೂನನ ಮಗನಾದ ಯೆಹೋಶುವನಿಗೂ ಸ್ವಲ್ಪ ಭೂಮಿಯನ್ನು ಕೊಡಬೇಕೆಂದು ನಿರ್ಧರಿಸಿದರು. ಈ ಭೂಮಿಯನ್ನು ಅವನಿಗೆ ಕೊಡುವುದಾಗಿ ವಾಗ್ದಾನ ಮಾಡಲಾಗಿತ್ತು.


“‘ಇಗೋ, ಜೆರುಸಲೇಮಿನಲ್ಲಿ ಇತರರನ್ನು ಕೊಲ್ಲುವದಕ್ಕಾಗಿಯೇ ತಮ್ಮನ್ನು ಬಲಿಷ್ಠರನ್ನಾಗಿ ಮಾಡಿಕೊಂಡಿರುವ ಇಸ್ರೇಲಿನ ಅಧಿಪತಿಗಳು ಇದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು