Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 46:9 - ಪರಿಶುದ್ದ ಬೈಬಲ್‌

9 “ಸಾಮಾನ್ಯ ಜನರು ವಿಶೇಷ ಹಬ್ಬದ ದಿವಸಗಳಲ್ಲಿ ಯೆಹೋವನನ್ನು ಸಂಧಿಸಲು ಬರುವಾಗ ಉತ್ತರ ದ್ವಾರದಿಂದ ಬರುವವರು ದಕ್ಷಿಣ ದ್ವಾರದ ಮೂಲಕ ಹೊರಗೆ ಹೋಗಬೇಕು. ದಕ್ಷಿಣದ ದ್ವಾರದಿಂದ ಒಳ ಪ್ರವೇಶಿಸುವವನು ಉತ್ತರ ದ್ವಾರದ ಮೂಲಕ ಹೊರಗೆ ಹೋಗಬೇಕು. ಯಾರೂ ಬಂದ ದಾರಿಯಿಂದ ಹಿಂದೆ ಹೋಗಬಾರದು. ಪ್ರತಿಯೊಬ್ಬನೂ ನೇರವಾಗಿ ಮುಂದಕ್ಕೆ ಹೋಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ದೇಶದ ಜನರಾದರೋ ಹಬ್ಬಗಳಲ್ಲಿ ಯೆಹೋವನ ಸಮ್ಮುಖದಲ್ಲಿ ಕಾಣಿಸಿಕೊಳ್ಳುವಾಗ ಉತ್ತರ ಬಾಗಿಲಿನಿಂದ ಆರಾಧಿಸುವುದಕ್ಕೆ ಪ್ರವೇಶಿಸಿದವನು ದಕ್ಷಿಣ ಬಾಗಿಲಿಂದ ಹೊರಗೆ ಹೋಗಬೇಕು. ದಕ್ಷಿಣದ ಬಾಗಿಲಿನಿಂದ ಪ್ರವೇಶಿಸಿದವನು ಉತ್ತರ ಬಾಗಿಲಿನಿಂದ ಹೊರಗೆ ಹೋಗಬೇಕು. ತಾನು ಪ್ರವೇಶಿಸಿದ ಬಾಗಿಲಿನಿಂದ ಹಿಂದಿರುಗದೆ ಅದಕ್ಕೆ ಎದುರಾಗಿರುವ ಬಾಗಿಲಿಂದ ಹೊರಗೆ ಹೋಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನಾಡಿನ ಜನರಾದರೋ ಹಬ್ಬಗಳಲ್ಲಿ ಸರ್ವೇಶ್ವರನ ಸಮ್ಮುಖದಲ್ಲಿ ಕಾಣಿಸಿಕೊಳ್ಳುವಾಗ ಉತ್ತರ ಬಾಗಿಲಿಂದ ಆರಾಧಿಸುವುದಕ್ಕೆ ಪ್ರವೇಸಿಸಿದವರು ದಕ್ಷಿಣ ಬಾಗಿಲಿಂದ ಹೊರಡಲಿ; ದಕ್ಷಿಣ ಬಾಗಿಲಿಂದ ಪ್ರವೇಶಿಸಿದವನು ಉತ್ತರ ಬಾಗಿಲಿಂದ ಹಿಂದಿರುಗದೆ ಬಂದ ಮುಖವಾಗಿಯೇ ಹೋಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ದೇಶದ ಜನರಾದರೋ ಹಬ್ಬಗಳಲ್ಲಿ ಯೆಹೋವನ ಸಮ್ಮುಖದಲ್ಲಿ ಕಾಣಿಸಿಕೊಳ್ಳುವಾಗ ಬಡಗಣ ಬಾಗಿಲಿಂದ ಆರಾಧಿಸುವದಕ್ಕೆ ಪ್ರವೇಶಿಸಿದವನು ತೆಂಕಣ ಬಾಗಿಲಿಂದ ಹೊರಡಲಿ; ತೆಂಕಣ ಬಾಗಿಲಿಂದ ಪ್ರವೇಶಿಸಿದವನು ಬಡಗಣ ಬಾಗಿಲಿಂದ ಹೊರಡಲಿ; ತಾನು ಪ್ರವೇಶಿಸಿದ ಬಾಗಿಲಿಂದ ಹಿಂದಿರುಗದೆ ಬಂದ ಮುಖವಾಗಿಯೇ ಹೋಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ ‘ಆದರೆ ದೇಶದ ಜನರು ನಿಶ್ಚಿತ ಹಬ್ಬಗಳಲ್ಲಿ ಯೆಹೋವ ದೇವರ ಮುಂದೆ ಬರುವಾಗ ಉತ್ತರದ ಬಾಗಿಲಿನಿಂದ ಪ್ರವೇಶಿಸಿ ಆರಾಧಿಸಿದ ಮೇಲೆ ಅವನು ದಕ್ಷಿಣದ ಬಾಗಿಲಿನ ಮಾರ್ಗವಾಗಿ ಹೊರಗೆ ಹೋಗಬೇಕು. ಮತ್ತು ದಕ್ಷಿಣ ಬಾಗಿಲಿನ ಮಾರ್ಗವಾಗಿ ಪ್ರವೇಶಿಸುವವನು ಉತ್ತರ ಬಾಗಿಲಿನ ಮಾರ್ಗವಾಗಿ ಹೊರಗೆ ಹೋಗಬೇಕು. ದಕ್ಷಿಣದ ಬಾಗಿಲಿನ ಮಾರ್ಗವಾಗಿ ಪ್ರವೇಶಿಸಿದ ಬಾಗಿಲಿನ ಮಾರ್ಗವಾಗಿಯೇ ತಿರುಗಿ ಹೊರಗೆ ಹೋಗಬಾರದು. ಆದರೆ ಅದಕ್ಕೆ ಎದುರಾಗಿರುವ ಬಾಗಿಲಿನಿಂದ ಹೊರಗೆ ಹೋಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 46:9
15 ತಿಳಿವುಗಳ ಹೋಲಿಕೆ  

“ನಿಮ್ಮ ದೇವರಾದ ಯೆಹೋವನು ತನ್ನ ಆಲಯಕ್ಕಾಗಿ ಆರಿಸಿಕೊಳ್ಳುವ ಆ ವಿಶೇಷ ಸ್ಥಳಕ್ಕೆ ನೀವೆಲ್ಲಾ ವರ್ಷದಲ್ಲಿ ಮೂರು ಬಾರಿ ಅಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬ, ಪಂಚಾಶತ್ತಮ ಹಬ್ಬ ಮತ್ತು ಪರ್ಣಶಾಲೆಗಳ ಹಬ್ಬದಲ್ಲಿ ಸೇರಿಬರಬೇಕು. ಯೆಹೋವನ ಬಳಿಗೆ ಬರುವ ಪ್ರತಿಯೊಬ್ಬನು ಕಾಣಿಕೆಯೊಂದಿಗೆ ಬರಬೇಕು.


ಜನರು ದೇವರನ್ನು ಸಂದರ್ಶಿಸಲು ಊರಿಂದ ಊರಿಗೆ ಪ್ರಯಾಣ ಮಾಡುತ್ತಾ ಚೀಯೋನಿಗೆ ಬರುವರು.


“ವರ್ಷದಲ್ಲಿ ಮೂರುಸಲ ನಿಮ್ಮಲ್ಲಿರುವ ಗಂಡಸರೆಲ್ಲರೂ, ಇಸ್ರೇಲರ ದೇವರಾಗಿರುವ ಒಡೆಯನಾದ ಯೆಹೋವನ ಸನ್ನಿಧಿಯಲ್ಲಿ ಸೇರಬೇಕು.


ನೀತಿವಂತನು ನಂಬಿಕೆಯಿಂದಲೇ ಜೀವವನ್ನು ಹೊಂದಿಕೊಳ್ಳುವನು. ಆದರೆ ಅವನು ಭಯದಿಂದ ಹಿಂಜರಿದರೆ ನಾನು ಅವನಲ್ಲಿ ಸಂತೋಷಪಡುವುದಿಲ್ಲ.”


“ನನ್ನ ಸೇವಕನಾದ ಮೋಶೆಯ ಕಟ್ಟಳೆಗಳನ್ನು ಅನುಸರಿಸಲು ಮರೆಯಬೇಡಿ. ಹೋರೇಬ್ ಬೆಟ್ಟದಲ್ಲಿ ನಾನು ಆ ನ್ಯಾಯವಿಧಿಗಳನ್ನು ಅವನಿಗೆ ಕೊಟ್ಟೆನು. ಆ ಕಟ್ಟಳೆಗಳೆಲ್ಲಾ ಇಸ್ರೇಲ್ ಜನರಿಗಾಗಿ ಇರುವದು.”


ಆ ಚಕ್ರಗಳು ಹೊರಳುವಾಗ ನಾಲ್ಕು ದಿಕ್ಕುಗಳಲ್ಲಿ ಯಾವ ದಿಕ್ಕಿಗೆ ಬೇಕಾದರೂ ತಿರುಗಬಲ್ಲವುಗಳಾಗಿದ್ದವು. ಆದರೆ ಜೀವಿಗಳು ಚಲಿಸುತ್ತಿರುವಾಗ ಅವು ತಿರುಗುತ್ತಿರಲಿಲ್ಲ.


ಆ ಜೀವಿಗಳು ಯಾವ ದಿಕ್ಕಿಗೆ ನೋಡುತ್ತಿದ್ದವೋ ಅದೇ ಕಡೆಗೆ ಹೋಗುತ್ತಿದ್ದವು. ದೇವರಾತ್ಮನು ಅವುಗಳನ್ನು ಯಾವ ಕಡೆಗೆ ನಡಿಸುತ್ತಾನೋ ಆ ದಿಕ್ಕಿಗೆ ಅವು ಹೋದವು. ಆದರೆ ಹೋಗುತ್ತಿರುವಾಗ ಅವುಗಳು ತಿರುಗಲಿಲ್ಲ.


ಆಗ ದೇವರು ನನ್ನನ್ನು ಯೆಹೋವನಾಲಯದ ಉತ್ತರ ದ್ವಾರದ ಪ್ರವೇಶ ಸ್ಥಳಕ್ಕೆ ನಡೆಸಿದನು. ಅಲ್ಲಿ ಹೆಂಗಸರು ಕುಳಿತುಕೊಂಡು ರೋಧಿಸುವುದನ್ನು ನೋಡಿದೆನು. ಅವರು ತಮ್ಮೂಜ್ ಎಂಬ ಸುಳ್ಳುದೇವತೆಗೋಸ್ಕರ ದುಃಖಪಡುತ್ತಿದ್ದರು.


ಆಮೇಲೆ ಅವನು ದಕ್ಷಿಣದ ಗೋಡೆಗೆ ಕರೆದುಕೊಂಡು ಹೋದನು. ಅಲ್ಲಿ ಒಂದು ದ್ವಾರವಿರುವದನ್ನು ಕಂಡೆನು. ಅವನು ಒಳಗಿನ ಗೋಡೆಗಳನ್ನೂ ಕೈಸಾಲೆಯನ್ನೂ ಅಳತೆಮಾಡಿದನು. ಅದರ ಅಳತೆ ಬೇರೆ ಪ್ರವೇಶ ದ್ವಾರಗಳಂತೆ ಇದ್ದವು.


ನಾನು ದೇವರಾದ ಯೆಹೋವನನ್ನು ಸಂಧಿಸಲು ಬರುವಾಗ ಏನನ್ನು ತೆಗೆದುಕೊಂಡು ಬರಲಿ? ಪರಲೋಕದ ದೇವರಿಗೆ ನಾನು ಅಡ್ಡಬಿದ್ದು ಆರಾಧಿಸುವಾಗ ಏನು ಮಾಡಲಿ? ನಾನು ಕರ್ತನ ಬಳಿಗೆ ಬರುವಾಗ ಸರ್ವಾಂಗಹೋಮದೊಡನೆ ಒಂದು ವರ್ಷದ ಕರುವನ್ನು ತೆಗೆದುಕೊಂಡು ಬರಲೋ?


ಹಬ್ಬದ ದಿವಸಗಳಲ್ಲಿ ಜೆರುಸಲೇಮ್ ಪರಿಶುದ್ಧಮಾಡಲ್ಪಟ್ಟ ಮಂದೆಗಳಿಂದ ತುಂಬಿಹೋಗುವಂತೆ ಜನರು ಹಾಳುಬಿದ್ದಿದ್ದ ನಗರ ಪಟ್ಟಣಗಳಲ್ಲಿ ತುಂಬಿಕೊಳ್ಳುವರು. ಆಗ ನಾನೇ ದೇವರಾದ ಯೆಹೋವನು ಎಂದು ಅವರು ತಿಳಿದುಕೊಳ್ಳುವರು.”


ವ್ಯಾಜ್ಯಗಳಿಗೆ ತೀರ್ಪು ನೀಡುವ ನ್ಯಾಯಾಧಿಶರಾಗಿ ಯಾಜಕರು ಸೇವೆಮಾಡಬೇಕು ಮತ್ತು ನನ್ನ ಆಡಳಿತವನ್ನು ಆಧರಿಸಿ ಅವರು ತೀರ್ಪು ನೀಡಬೇಕು. ಅವರು ವಿಶೇಷವಾದ ಕೂಟಗಳನ್ನು ಏರ್ಪಡಿಸುವಾಗ ನನ್ನ ವಿಧಿನಿಯಮಗಳನ್ನು ಅನುಸರಿಸುವರು ಮತ್ತು ವಿಶೇಷವಾದ ಎಲ್ಲಾ ರಜಾದಿನಗಳನ್ನು ಮತ್ತು ಸಬ್ಬತ್ ದಿನಗಳನ್ನು ಅವರು ಗೌರವಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು