Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 47:11 - ಪರಿಶುದ್ದ ಬೈಬಲ್‌

11 ಆದರೆ ಜವುಗು ನೆಲಗಳೂ ಸವುಳು ನೆಲಗಳೂ ಸಿಹಿಯಾಗುವದಿಲ್ಲ. ಅವು ಉಪ್ಪು ತಯಾರಿಸುವದಕ್ಕಾಗಿ ಉಪಯೋಗಿಸಲ್ಪಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆದರೆ ಅದರ ಸುತ್ತಣ ಕೆಸರಾದ ಸ್ಥಳಗಳು, ಕೊಳಚೆಗಳು ಸಿಹಿಯಾಗುವುದಿಲ್ಲ. ಅವು ಉಪ್ಪಿನ ಗಣಿಯಾಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆದರೆ ಅದರ ಸುತ್ತಣ ಜವುಗುನೆಲವೂ ಸವುಳುಹೊಂಡಗಳೂ ಸಿಹಿಯಾಗುವುದಿಲ್ಲ, ಅವು ಉಪ್ಪಿನ ಗಣಿಯಾಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆದರೆ ಅದರ ಸುತ್ತಣ ಜವುಗು ನೆಲವೂ ಸವುಳುಹೊಂಡಗಳೂ ಸಿಹಿಯಾಗುವದಿಲ್ಲ, ಅವು ಉಪ್ಪಿನ ಗಣಿಯಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆದರೆ ಅದರ ಕೆಸರಾದ ಸ್ಥಳಗಳು, ಕೊಳಚೆಗಳು, ಶುದ್ಧವಾಗುವುದಿಲ್ಲ. ಅವು ಉಪ್ಪಿನ ಗಣಿಯಾಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 47:11
11 ತಿಳಿವುಗಳ ಹೋಲಿಕೆ  

ನಿಮ್ಮ ದೇಶವೆಲ್ಲಾ ನಿಷ್ಪ್ರಯೋಜಕವಾಗಿರುವುದು. ಅದರ ಮೇಲೆ ಉಪ್ಪೂ ಗಂಧಕವೂ ತುಂಬಿರುವುದು. ಅದರ ಮೇಲೆ ಯಾವ ಸಸಿಯೂ ಬೆಳೆಯಲಾರದು; ಕೂಳೆಯೂ ಬೆಳೆಯುವುದಿಲ್ಲ. ಸೊದೋಮ್, ಗೊಮೋರ, ಅದ್ಮಾ ಮತ್ತು ಚೆಬೋಯೀಮ್ ಎಂಬ ಪಟ್ಟಣಗಳು ಯೆಹೋವನ ಕೋಪದ ನಿಮಿತ್ತ ನಾಶವಾದಂತೆ ನಿಮ್ಮ ದೇಶವೂ ನಾಶವಾಗುವುದು.


ತಪ್ಪು ಮಾಡುತ್ತಿರುವವನು ತಪ್ಪುಮಾಡುತ್ತಲೇ ಮುಂದುವರಿಯಲು ಬಿಡು. ಅಶುದ್ಧನಾದವನು ಅಶುದ್ಧತೆಯಲ್ಲೇ ಮುಂದುವರಿಯಲು ಬಿಡು. ಯೋಗ್ಯವಾದುದನ್ನು ಮಾಡುವವನು ಯೋಗ್ಯವಾದುದನ್ನೇ ಮಾಡಲಿ. ಪರಿಶುದ್ಧನಾಗಿರುವವನು ಪರಿಶುದ್ಧನಾಗಿಯೇ ಇರಲಿ” ಎಂದು ಹೇಳಿದನು.


ಆದರೆ ಹೇಡಿಗಳಿಗೆ, ನಂಬಿಕೆಯಿಲ್ಲದವರಿಗೆ, ಅಸಹ್ಯಕೃತ್ಯ ಮಾಡುವವರಿಗೆ, ಕೊಲೆಗಾರರಿಗೆ, ಲೈಂಗಿಕ ಪಾಪಮಾಡುವವರಿಗೆ, ಮಾಟಮಂತ್ರಗಾರರಿಗೆ, ವಿಗ್ರಹಾರಾಧಕರಿಗೆ, ಸುಳ್ಳುಗಾರರಿಗೆ ಸಿಕ್ಕುವ ಸ್ಥಳ ಬೆಂಕಿಗಂಧಕಗಳು ಉರಿಯುವ ಕೆರೆಯೇ. ಇದು ಎರಡನೆಯ ಮರಣವಾಗಿರುತ್ತದೆ.”


ಆ ಜನರು ನಿರ್ಜನವಾದ ಪ್ರದೇಶದಲ್ಲಿದ್ದ, ಸುಡುವ ಬರಡು ಭೂಮಿಯಲ್ಲಿದ್ದ, ಬಂಜರು ಭೂಮಿಯಲ್ಲಿ ಬೆಳೆದ, ದೇವರು ನೀಡಬಹುದಾದ ಒಳ್ಳೆಯ ವಸ್ತುಗಳ ಬಗ್ಗೆ ಏನೂ ಅರಿಯದ ಒಂದು ಪೊದೆಯಂತಿರುತ್ತಾರೆ.


ಆತನು ಫಲವತ್ತಾದ ಭೂಮಿಯನ್ನು ಉಪಯೋಗವಿಲ್ಲದ ಉಪ್ಪುಭೂಮಿಯನ್ನಾಗಿ ಪರಿವರ್ತಿಸಿದನು, ಯಾಕೆಂದರೆ ಅಲ್ಲಿ ಕೆಟ್ಟಜನರು ನೆಲೆಸಿದ್ದರು.


ಆ ಇಡೀ ದಿವಸ ಅಬೀಮೆಲೆಕ ಮತ್ತು ಅವನ ಜನರು ಶೆಕೆಮಿನ ಜನರೊಂದಿಗೆ ಯುದ್ಧ ಮಾಡಿದರು. ಅಬೀಮೆಲೆಕ ಮತ್ತು ಅವನ ಜನರು ಶೆಕೆಮ್ ನಗರವನ್ನು ಸ್ವಾಧೀನಪಡಿಸಿಕೊಂಡರು; ಆ ನಗರದ ಜನರನ್ನು ಕೊಂದುಹಾಕಿದರು. ಅಬೀಮೆಲೆಕನು ಊರನ್ನು ಕೆಡವಿ ಹಾಕಿ ಉಪ್ಪನ್ನು ಚೆಲ್ಲಿದನು.


ಎಲ್ಲಾ ತರಹದ ಹಣ್ಣಿನ ಮರಗಳು ನದಿಯ ಇಕ್ಕೆಡೆಗಳಲ್ಲಿಯೂ ಬೆಳೆಯುವವು. ಅವುಗಳ ಎಲೆಗಳು ಎಂದಿಗೂ ಒಣಗಿ ನೆಲಕ್ಕೆ ಉದುರವು. ಆ ಮರಗಳಲ್ಲಿ ಸದಾಕಾಲ ಹಣ್ಣುಗಳು ಇರುವವು. ಪ್ರತೀ ತಿಂಗಳಿಗೆ ಹಣ್ಣುಗಳನ್ನು ಕೊಡುವವು. ಯಾಕೆಂದರೆ ಆ ಮರಗಳಿಗೆ ನೀರು ಆಲಯದಿಂದ ಬರುತ್ತದೆ. ಅದರ ಹಣ್ಣುಗಳನ್ನು ಆಹಾರಕ್ಕಾಗಿಯೂ ಅದರ ಎಲೆಗಳಿಂದ ಔಷಧಿಯನ್ನೂ ತಯಾರಿಸಬಹುದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು