Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 47:14 - ಪರಿಶುದ್ದ ಬೈಬಲ್‌

14 ನೀವು ದೇಶವನ್ನು ಸಮಾನವಾಗಿ ಪಾಲು ಮಾಡಬೇಕು. ನಾನು ನಿಮ್ಮ ಪೂರ್ವಿಕರಿಗೆ ಈ ದೇಶವನ್ನು ಕೊಡುತ್ತೇನೆಂದು ವಾಗ್ದಾನ ಮಾಡಿದ್ದೆನು. ಈಗ ನಾನು ಇದನ್ನು ನಿಮಗೆ ಕೊಡುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಾನು ನಿಮ್ಮ ಪೂರ್ವಿಕರಿಗೆ ಪ್ರಮಾಣವಾಗಿ ವಾಗ್ದಾನ ಮಾಡಿದ ಈ ದೇಶವನ್ನು ನೀವೆಲ್ಲರೂ ಸರಿಸಮಾನವಾಗಿ ಅನುಭವಿಸುವಿರಿ. ಇದು ನಿಮಗೆ ಸ್ವತ್ತಾಗಿಯೇ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನಾನು ನಿಮ್ಮ ಪಿತೃಗಳಿಗೆ ಪ್ರಮಾಣವಾಗಿ ವಾಗ್ದಾನಮಾಡಿದ ಈ ನಾಡನ್ನು ನೀವೆಲ್ಲರೂ ಸರಿಸಮಾನವಾಗಿ ಅನುಭವಿಸಿರಿ; ಇದು ನಿಮಗೆ ಸೊತ್ತಾಗಿಯೇ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಾನು ನಿಮ್ಮ ಪಿತೃಗಳಿಗೆ ಪ್ರಮಾಣವಾಗಿ ವಾಗ್ದಾನಮಾಡಿದ ಈ ದೇಶವನ್ನು ನೀವೆಲ್ಲರೂ ಸರಿಸಮಾನವಾಗಿ ಅನುಭವಿಸುವಿರಿ; ಇದು ನಿಮಗೆ ಸ್ವಾಸ್ತ್ಯವಾಗಿಯೇ ಇರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನೀವು ಒಬ್ಬೊಬ್ಬರೂ ಸರಿಯಾಗಿ ಅದನ್ನು ಬಾಧ್ಯವಾಗಿ ಹೊಂದಬೇಕು. ಏಕೆಂದರೆ ಅದನ್ನು ನಿಮ್ಮ ಪಿತೃಗಳಿಗೆ ಕೊಡುವ ಹಾಗೆ ನಾನು ಕೈಯೆತ್ತಿ ಪ್ರಮಾಣ ಮಾಡಿದ್ದೇನೆ. ಈ ದೇಶವು ನಿಮಗೆ ಬಾಧ್ಯವಾಗಿ ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 47:14
16 ತಿಳಿವುಗಳ ಹೋಲಿಕೆ  

ಯೆಹೋವನು ಅಬ್ರಾಮನಿಗೆ ಕಾಣಿಸಿಕೊಂಡು, “ನಿನ್ನ ಸಂತತಿಯವರಿಗೆ ಈ ದೇಶವನ್ನು ಕೊಡುವೆನು” ಎಂದು ಹೇಳಿದನು. ಆ ಸ್ಥಳದಲ್ಲಿ ಯೆಹೋವನು ಅಬ್ರಾಮನಿಗೆ ಕಾಣಿಸಿಕೊಂಡನು. ಆದ್ದರಿಂದ ಅಬ್ರಾಮನು ಯೆಹೋವನನ್ನು ಆರಾಧಿಸುವುದಕ್ಕಾಗಿ ಅಲ್ಲಿ ಒಂದು ಯಜ್ಞವೇದಿಕೆಯನ್ನು ಕಟ್ಟಿದನು.


ಈ ಪ್ರಾಂತ್ಯವನ್ನು ನೀವು ಇಸ್ರೇಲರ ಕುಲದವರಿಗೆ ವಿಭಾಗಿಸಿ ಹಂಚಬೇಕು. ಇದು ಪ್ರತೀ ಕುಲದವರಿಗೆ ದೊರಕುವ ಭೂಮಿಯ ವಿವರ.” ಇದು ನನ್ನ ಒಡೆಯನಾದ ಯೆಹೋವನ ನುಡಿ.


ನಾನು ನಿಮ್ಮನ್ನು ತಿರುಗಿ ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದ ಇಸ್ರೇಲ್ ದೇಶಕ್ಕೆ ಬರಮಾಡಿದಾಗ ನಾನೇ ಯೆಹೋವನೆಂದು ಅರಿತುಕೊಳ್ಳುವಿರಿ.


ನಾನು ಅವರಿಗೆ ಕೊಡುವುದಾಗಿ ವಾಗ್ದಾನ ಮಾಡಿದ ದೇಶಕ್ಕೆ ಅವರನ್ನು ಕರೆದುಕೊಂಡು ಬಂದೆನು. ಆದರೆ ಎತ್ತರವಾದ ಬೆಟ್ಟವನ್ನಾಗಲಿ ಎಲೆಗಳುಳ್ಳ ಮರವನ್ನಾಗಲಿ ಅವರು ಕಂಡಾಗಲೆಲ್ಲಾ ಅವರು ಅಲ್ಲಿಗೆ ಹೋದರು ಮತ್ತು ವಿಗ್ರಹಗಳನ್ನು ಪೂಜಿಸಿದರು. ಅಲ್ಲಿ ಅವರು ಯಜ್ಞಗಳನ್ನೂ ನನ್ನನ್ನು ಕೋಪಗೊಳಿಸುವ ಕಾಣಿಕೆಗಳನ್ನೂ ಧೂಪವನ್ನೂ ಮತ್ತು ಪಾನದ್ರವ್ಯಾರ್ಪಣೆಗಳನ್ನೂ ಅರ್ಪಿಸಿದರು.


ಜನರು ಚೀಟುಹಾಕಿ ನಿರ್ಧಾರ ಮಾಡಿದರೂ ಆ ನಿರ್ಧಾರಗಳು ಬರುವುದು ಯೆಹೋವನಿಂದಲೇ.


ನಾನು ನಿಮಗೆ ಆ ಪ್ರಾಂತ್ಯವನ್ನೆಲ್ಲಾ ಕೊಡುವೆನು. ಅಲ್ಲಿಗೆ ಹೋಗಿ ಅದನ್ನು ತೆಗೆದುಕೊಳ್ಳಿರಿ. ನಿಮ್ಮ ಪೂರ್ವಿಕರಾದ ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ಮತ್ತು ಅವರ ಸಂತತಿಯವರಿಗೆ ಆ ಪ್ರದೇಶವನ್ನು ಕೊಡುವೆನು ಎಂದು ನಾನು ವಾಗ್ದಾನ ಮಾಡಿದ್ದೇನೆ.’”


ಯೆಫುನ್ನೆಯ ಮಗನಾದ ಕಾಲೇಬ್ ಮತ್ತು ನೂನನ ಮಗನಾದ ಯೆಹೋಶುವ ಇವರಿಬ್ಬರೇ ಹೊರತು ನಿಮ್ಮಲ್ಲಿ ಬೇರೆ ಯಾರೂ ನಾನು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶವನ್ನು ಸೇರುವುದಿಲ್ಲ.


‘ಯೆಹೋವನು ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ದೇಶದಲ್ಲಿ ಇಸ್ರೇಲರನ್ನು ಸೇರಿಸುವುದಕ್ಕೆ ಶಕ್ತಿಸಾಲದೆ ಅವರನ್ನು ಮರುಭೂಮಿಯಲ್ಲಿ ನಾಶಮಾಡಿದನು’ ಎಂದು ಮಾತಾಡಿಕೊಳ್ಳುವರು.


ಯೆಹೋವನು ಏಣಿಯ ತುದಿಯಲ್ಲಿ ನಿಂತಿರುವುದನ್ನು ಯಾಕೋಬನು ಕಂಡನು. ಯೆಹೋವನು ಅವನಿಗೆ, “ನಿನ್ನ ತಾತನಾದ ಅಬ್ರಹಾಮನ ದೇವರಾಗಿರುವ ಯೆಹೋವನೇ ನಾನು. ನಾನು ಇಸಾಕನ ದೇವರು. ಈಗ ನೀನು ಮಲಗಿಕೊಂಡಿರುವ ದೇಶವನ್ನು ನಾನು ನಿನಗೆ ಕೊಡುವೆನು. ನಾನು ಈ ದೇಶವನ್ನು ನಿನಗೂ ನಿನ್ನ ಮಕ್ಕಳಿಗೂ ಕೊಡುವೆನು.


ನಾನು ನಿನ್ನ ಸಂಗಡವಿದ್ದು ನಿನ್ನನ್ನು ಆಶೀರ್ವದಿಸಿ ನಿನಗೂ ನಿನ್ನ ಕುಟುಂಬಕ್ಕೂ ಈ ಪ್ರದೇಶಗಳನ್ನೆಲ್ಲ ಕೊಡುವೆನು. ನಾನು ನಿನ್ನ ತಂದೆಯಾದ ಅಬ್ರಹಾಮನಿಗೆ ಪ್ರಮಾಣ ಮಾಡಿದ್ದನ್ನು ನೆರವೇರಿಸುವೆನು.


ನೀನು ಪ್ರಯಾಣ ಮಾಡುತ್ತಿರುವ ಈ ಕಾನಾನ್ ದೇಶವನ್ನೆಲ್ಲ ನಿನಗೂ ನಿನ್ನ ಸಂತತಿಯವರಿಗೂ ಶಾಶ್ವತವಾಗಿ ಕೊಡುವೆನು. ನಾನೇ ನಿಮ್ಮ ದೇವರಾಗಿರುವೆನು” ಎಂದು ಹೇಳಿದನು.


ಆತನು ಅಬ್ರಾಮನಿಗೆ, “ಯೆಹೋವನಾದ ನಾನು ನಿನ್ನನ್ನು ಕಲ್ದೀಯರ ಊರ್ ಪಟ್ಟಣದಿಂದ ಬರಮಾಡಿದೆನು. ನಿನಗೆ ಈ ದೇಶವನ್ನು ಕೊಡಬೇಕೆಂತಲೂ ನೀನು ಈ ದೇಶವನ್ನು ಹೊಂದಿಕೊಳ್ಳಬೇಕೆಂತಲೂ ನಾನು ನಿನ್ನನ್ನು ಬರಮಾಡಿದೆನು” ಎಂದು ಹೇಳಿದನು.


ನೀನು ನೋಡುವ ಈ ದೇಶವನ್ನೆಲ್ಲಾ ನಿನಗೂ ನಿನ್ನ ನಂತರ ಜೀವಿಸುವ ನಿನ್ನ ಸಂತತಿಯವರಿಗೂ ಕೊಡುತ್ತೇನೆ. ಇದು ಎಂದೆಂದಿಗೂ ನಿನ್ನದಾಗಿರುವುದು.


ಹೌದು, ನಾನು ಅನೇಕಾನೇಕ ಇಸ್ರೇಲ್ ಜನರನ್ನು ನಿನ್ನ ದೇಶಕ್ಕೆ ನಡೆಸುವೆನು. ನೀನು ಅವರ ಸೊತ್ತಾಗುವೆ. ಅವರ ಮಕ್ಕಳನ್ನು ನೀನು ಮತ್ತೆಂದಿಗೂ ತೆಗೆದುಹಾಕುವುದಿಲ್ಲ.”


ಇದಲ್ಲದೆ ಅಬ್ರಹಾಮ, ಇಸಾಕ ಮತ್ತು ಯಾಕೋಬರಿಗೆ ನಾನು ವಾಗ್ದಾನ ಮಾಡಿದ ದೇಶಕ್ಕೆ ನಿಮ್ಮನ್ನು ನಡಿಸುವೆನು. ನಾನು ಆ ದೇಶವನ್ನು ನಿಮಗೆ ಕೊಡುವೆನು. ಅದು ನಿಮ್ಮದಾಗಿರುವುದು. ನಾನೇ ಯೆಹೋವನು’” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು