Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 47:18 - ಪರಿಶುದ್ದ ಬೈಬಲ್‌

18 “ಪೂರ್ವ ಭಾಗದಲ್ಲಿ, ಮೇರೆಯು ಹವ್ರಾನ್ ಮತ್ತು ದಮಸ್ಕದ ಮಧ್ಯದಲ್ಲಿರುವ ಹಚರ್ ಐನೋನ್ ಇಲ್ಲಿಂದ ಹೊರಟು ಜೋರ್ಡನ್ ಹೊಳೆಯ ತೀರದಲ್ಲಿ ಮುಂದುವರಿದು ಗಿಲ್ಯಾದಿಗೂ ಇಸ್ರೇಲ್ ರಾಜ್ಯಕ್ಕೂ ಮಧ್ಯದಲ್ಲಿ ಹರಿದು ಪೂರ್ವದ ಸಮುದ್ರದ ಕಡೆಗೆ ಹೋಗುತ್ತದೆ. ಅಲ್ಲಿಂದ ತಾಮಾರಿಗೆ ಸೇರುತ್ತದೆ. ಇದು ಪೂರ್ವ ಕಡೆಯ ಮೇರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 “ಇದು ಪೂರ್ವದಿಕ್ಕಿನ ಮೇರೆಯಾಗಿದೆ: ಹವ್ರಾನ್, ದಮಸ್ಕ, ಗಿಲ್ಯಾದ್ ಇವುಗಳಿಗೂ ಇಸ್ರಾಯೇಲ್ ದೇಶಕ್ಕೂ ಮಧ್ಯದಲ್ಲಿರುವ ಯೊರ್ದನ್ ಹೊಳೆಯು ಮೇರೆಯಾಗಿರುವುದು. ಉತ್ತರ ಮೇರೆಯಿಂದ ದಕ್ಷಿಣ ಸಮುದ್ರದವರೆಗೆ ನೀವು ಗುರುತು ಹಾಕಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 “ಪೂರ್ವದಲ್ಲಿ ಹವ್ರಾನ್, ದಮಸ್ಕ, ಗಿಲ್ಯಾದ್ ಇವುಗಳಿಗೂ ಇಸ್ರಯೇಲ್ ನಾಡಿಗೂ ಮಧ್ಯೆ ಜೋರ್ಡನ್ ಹೊಳೆ ಎಲ್ಲೆಯಾಗಿರುವುದು; ಉತ್ತರದ ಮೇರೆಯಿಂದ ಪೂರ್ವದ ಸಮುದ್ರದವರೆಗೆ ನೀವು ಗುರುತುಹಾಕಿಕೊಳ್ಳಬೇಕು. ಇದು ಪೂರ್ವದಿಕ್ಕಿನ ಮೇರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಮೂಡಲಲ್ಲಿ ಹವ್ರಾನ್, ದಮಸ್ಕ, ಗಿಲ್ಯಾದ್ ಇವುಗಳಿಗೂ ಇಸ್ರಾಯೇಲ್ ದೇಶಕ್ಕೂ ಮಧ್ಯೆ ಯೊರ್ದನ್ ಹೊಳೆಯು ಎಲ್ಲೆಯಾಗಿರುವದು; [ಬಡಗಣ] ಮೇರೆಯಿಂದ ಮೂಡಣ ಸಮುದ್ರದವರೆಗೆ ನೀವು ಗುರುತು ಹಾಕಿಕೊಳ್ಳಬೇಕು. ಇದು ಮೂಡಣ ಮೇರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಪೂರ್ವದಲ್ಲಿ ಹವ್ರಾನ್, ದಮಸ್ಕ, ಗಿಲ್ಯಾದ್ ಇವುಗಳಿಗೂ ಇಸ್ರಾಯೇಲ್ ದೇಶಕ್ಕೂ ಮಧ್ಯೆ ಯೊರ್ದನ್ ಹೊಳೆಯ ಮೇರೆಯಿಂದ ಲವಣ ಸಮುದ್ರದಿಂದ ಮತ್ತು ತಾಮರ್ ನೀವು ಅಳೆಯಬೇಕು. ಇದೇ ಪೂರ್ವದಿಕ್ಕಿನ ಮೇರೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 47:18
12 ತಿಳಿವುಗಳ ಹೋಲಿಕೆ  

ಲೋಟನು ಕಣ್ಣೆತ್ತಿ ನೋಡಿದಾಗ ಜೋರ್ಡನ್ ಕಣಿವೆಯೆಲ್ಲಾ ಕಾಣಿಸಿತು. ಅಲ್ಲಿ ಬೇಕಾದಷ್ಟು ನೀರಿರುವುದನ್ನು ಲೋಟನು ನೋಡಿದನು. (ಆ ಕಾಲದಲ್ಲಿ ಸೊದೋಮ್ ಮತ್ತು ಗೊಮೋರ ಪಟ್ಟಣಗಳು ಯೆಹೋವನಿಂದ ನಾಶವಾಗಿರಲಿಲ್ಲ. ಆ ಕಾಲದಲ್ಲಿ ಜೋರ್ಡನ್ ಕಣಿವೆಯು ಚೋಗರ್ ತನಕ ಯೆಹೋವನ ತೋಟದಂತಿತ್ತು. ಅದು ಈಜಿಪ್ಟಿನ ಭೂಮಿಯಂತೆ ಫಲವತ್ತಾಗಿತ್ತು.)


ನದಿಯು ತುಂಬಿಹರಿದರೂ ಅದು ಓಡಿಹೋಗುವುದಿಲ್ಲ. ಜೋರ್ಡನ್ ನದಿಯು ಅದರ ಮುಖಕ್ಕೆ ರಭಸದಿಂದ ಬಡಿದರೂ ಅದಕ್ಕೆ ಭಯವಿಲ್ಲ.


ಅದೇ ವರ್ಷ ಅವರು ಜೋರ್ಡನ್ ನದಿಯ ಪೂರ್ವಕ್ಕಿರುವ ಗಿಲ್ಯಾದಿನಲ್ಲಿದ್ದ ಇಸ್ರೇಲರನ್ನು ನಾಶಮಾಡಿದರು. ಅದು ಮೊದಲು ಅಮೋರಿಯರ ಪ್ರದೇಶವಾಗಿತ್ತು. ಇಸ್ರೇಲರು ಹದಿನೆಂಟು ವರ್ಷಗಳವರೆಗೆ ಕಷ್ಟವನ್ನು ಅನುಭವಿಸಿದರು.


ರೂಬೇನ್ ಕುಲದವರಿಗೂ ಗಾದ್ ಕುಲದವರಿಗೂ ಬಹಳ ದನಕುರಿಗಳಿದ್ದವು. ಅವರು ಯಗ್ಜೇರ್ ಮತ್ತು ಗಿಲ್ಯಾದ್ ಪ್ರದೇಶಗಳನ್ನು ನೋಡಿದಾಗ ಅವು ಅವರ ಪಶುಗಳ ಮೇವಿಗೆ ಒಳ್ಳೆಯ ಸ್ಥಳವೆಂದು ತಿಳಿದುಕೊಂಡರು.


ಲಾಬಾನನು ಆ ಸ್ಥಳಕ್ಕೆ ಯಗರ್‌ಸಾಹದೂತ ಎಂದು ಹೆಸರಿಟ್ಟನು. ಆದರೆ ಯಾಕೋಬನು ಆ ಸ್ಥಳಕ್ಕೆ ಗಲೀದ್ ಎಂದು ಹೆಸರಿಟ್ಟನು.


ಆದ್ದರಿಂದ ಲಾಬಾನನು ತನ್ನ ಜನರನ್ನು ಕರೆದುಕೊಂಡು ಯಾಕೋಬನನ್ನು ಬೆನ್ನಟ್ಟಿದನು. ಏಳು ದಿನಗಳಾದ ಮೇಲೆ ಲಾಬಾನನು ಯಾಕೋಬನನ್ನು ಬೆಟ್ಟದ ಸೀಮೆಯಾದ ಗಿಲ್ಯಾದಿನಲ್ಲಿ ಕಂಡನು.


ಆದ್ದರಿಂದ ಲೋಟನು ಜೋರ್ಡನ್ ಕಣಿವೆಯನ್ನೆಲ್ಲಾ ತನಗಾಗಿ ಆರಿಸಿಕೊಂಡನು. ಅವರಿಬ್ಬರೂ ಪ್ರತ್ಯೇಕವಾದರು. ಲೋಟನು ಪೂರ್ವದ ಕಡೆಗೆ ಪ್ರಯಾಣ ಮಾಡಿದನು.


ಯೋಸೇಫನು ಬಾವಿಯೊಳಗಿದ್ದಾಗ, ಅವನ ಅಣ್ಣಂದಿರು ಊಟಕ್ಕೆ ಕುಳಿತುಕೊಂಡರು. ಅವರು ಕಣ್ಣೆತ್ತಿ ನೋಡಿದಾಗ ಗಿಲ್ಯಾದಿನಿಂದ ಈಜಿಪ್ಟಿಗೆ ಹೋಗುತ್ತಿದ್ದ ವ್ಯಾಪಾರಿಗಳನ್ನು ಕಂಡರು. ಅವರ ಒಂಟೆಗಳು ಅನೇಕ ಬಗೆಯ ಸಾಂಬಾರ ಪದಾರ್ಥಗಳನ್ನು ಮತ್ತು ಬೆಲೆಬಾಳುವ ವಸ್ತುಗಳನ್ನು ಹೊತ್ತುಕೊಂಡು ಹೋಗುತ್ತಿದ್ದವು.


ನಿಮ್ಮ ಪೂರ್ವದಿಕ್ಕಿನಲ್ಲಿರುವ ಮೇರೆಯು ಹಚರೇನಾನಿನಿಂದ ಹೊರಟು ಶೆಫಾಮಿಗೆ ಹೋಗುವುದು.


“‘ಆದರೆ ಇಸ್ರೇಲನ್ನು ಪುನಃ ಅದರ ಹುಲ್ಲುಗಾವಲಿಗೆ ತರುವೆನು. ಅದು ಕರ್ಮೆಲ್ ಬೆಟ್ಟದ ಮೇಲೆ ಮತ್ತು ಬಾಷಾನಿನ ಪ್ರದೇಶದಲ್ಲಿ ಮೇಯುವದು. ಅದು ತಿಂದು ತೇಗುವದು. ಅದು ಎಫ್ರಾಯೀಮಿನ ಮತ್ತು ಗಿಲ್ಯಾದಿನ ಬೆಟ್ಟಗಳಲ್ಲಿ ತಿಂದು ತೃಪ್ತಿಪಡುವದು.’”


ಅಲ್ಲಿಂದ ಬೇರೋತ್ ಕಡೆಗೂ ಅಲ್ಲಿಂದ ಸಿಬ್ರಯಿಮ್ (ಇದು ದಮಸ್ಕ ಮತ್ತು ಹಾಮತ್‌ಗಳ ಮೇರೆಯಲ್ಲಿದೆ) ಕಡೆಗೂ ಅಲ್ಲಿಂದ ಹಾಚೇರ್ ಕಡೆಗೂ ಅಲ್ಲಿಂದ ಹತ್ತೀಕೋನ್ (ಇದು ಹವಾನದ ಮೇರೆಯಲ್ಲಿದೆ) ಕಡೆಗೂ ಹೋಗುತ್ತದೆ.


ಉತ್ತರದಿಂದ ಬಂದ ದಂಡನ್ನು ನಿಮ್ಮ ದೇಶದಿಂದ ಹೊರಡಿಸುವೆನು. ಅವರನ್ನು ಒಣ ಬೆಂಗಾಡಿಗೆ ಕಳುಹಿಸುವೆನು. ಅವರಲ್ಲಿ ಕೆಲವರು ಪೂರ್ವದ ಸಮುದ್ರಕ್ಕೆ ಹೋಗುವರು, ಕೆಲವರು ಪಶ್ಚಿಮದ ಸಮುದ್ರಕ್ಕೆ ಹೋಗುವರು. ಅವರು ಭಯಂಕರ ಕೃತ್ಯಗಳನ್ನು ಮಾಡಿದುದರಿಂದ ಸತ್ತು ಕೊಳೆಯುವ ಸ್ಥಿತಿಗೆ ಬರಮಾಡುವೆನು. ಆಗ ಭಯಂಕರ ಹೊಲಸು ವಾಸನೆ ಇರುವದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು