Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 47:19 - ಪರಿಶುದ್ದ ಬೈಬಲ್‌

19 “ದಕ್ಷಿಣ ಮೇರೆಯು ತಾಮಾರಿನಿಂದ ಹೊರಟು ಮೆರೀಬೋತ್-ಕಾದೇಶ್ ನಲ್ಲಿರುವ ನೀರಿನ ಬುಗ್ಗೆಯವರೆಗೂ ಹೋಗುವರು. ಬಳಿಕ ಅಲ್ಲಿಂದ ಹೊರಟು ಈಜಿಪ್ಟಿನ ನೀರಿನ ತೊರೆಯ ಮಾರ್ಗದಿಂದ ಭೂಮಧ್ಯ ಸಮುದ್ರವನ್ನು ಸೇರುವದು. ಇದು ದಕ್ಷಿಣದ ಮೇರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಇದು ದಕ್ಷಿಣದ ಮೇರೆಯಾಗಿದೆ: ದಕ್ಷಿಣದ ಮೇರೆಯು ತಾಮಾರಿನಿಂದ ಹೊರಟು, ಮೆರೀಬೋತ್ ಕಾದೇಶಿನ ಹಳ್ಳದ ಮೇಲೆ ಐಗುಪ್ತದವರೆಗೆ ಮುಂದುವರೆಯುವ ನದಿಯ ಮಾರ್ಗವಾಗಿ ಮಹಾ ಸಮುದ್ರವನ್ನು ಮುಟ್ಟಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 “ದಕ್ಷಿಣದ ಮೇರೆ ತಾಮಾರಿನಿಂದ ಹೊರಟು ಮೆರೀಬೋತ್‍ಕಾದೇಶಿನ ಹಳ್ಳದ ಮೇಲೆ, ಈಜಿಪ್ಟಿನ ಮುಂದಿರುವ, ತೊರೆಯ ಮಾರ್ಗವಾಗಿ ದೊಡ್ಡ ಸಮುದ್ರಕ್ಕೆ ಮುಟ್ಟಬೇಕು. ಇದು ದಕ್ಷಿಣದ ಮೇರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ತೆಂಕಣ ಮೇರೆಯು ತಾಮಾರಿನಿಂದ ಹೊರಟು ಮೆರೀಬೋತ್ ಕಾದೇಶಿನ ಹಳ್ಳದ ಮೇಲೆ [ಐಗುಪ್ತದ ಮುಂದಿರುವ] ತೊರೆಯ ಮಾರ್ಗವಾಗಿ ದೊಡ್ಡ ಸಮುದ್ರಕ್ಕೆ ಮುಟ್ಟಬೇಕು. ಇದು ತೆಂಕಣ ಮೇರೆಯು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ದಕ್ಷಿಣದ ಕಡೆಗಿರುವ ದಕ್ಷಿಣದ ಮೇರೆಯೂ ತಾಮಾರ್ ಮೊದಲುಗೊಂಡು ಮೆರೀಬಾ ಕಾದೇಶಿನ ಹಳ್ಳದ ಮೇಲೆ ಈಜಿಪ್ಟಿನ ಮುಂದಿರುವ, ತೊರೆಯ ಮಾರ್ಗವಾಗಿ ದೊಡ್ಡ ಸಮುದ್ರದವರೆಗೆ ಇರುವುದು. ಇದೇ ದಕ್ಷಿಣದ ಮೇರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 47:19
15 ತಿಳಿವುಗಳ ಹೋಲಿಕೆ  

“ದೇವರ ಪ್ರಾಂತ್ಯದ ದಕ್ಷಿಣದ ಮೇರೆಯು ತಾಮಾರಿನಿಂದ ಪ್ರಾರಂಭವಾಗಿ ಮೆರೀಬೋತ್‌ಕಾದೇಶ್ ಎಂಬ ಮರುಭೂಮಿಯ ನೀರಿನಾಶ್ರಯಕ್ಕೆ ಹೋಗುತ್ತದೆ. ಅನಂತರ ಈಜಿಪ್ಟಿನ ನದಿಯ ಅಂಚಿನಲ್ಲಿ ಮುಂದುವರಿದು ಭೂಮಧ್ಯ ಸಮುದ್ರಕ್ಕೆ ತಾನು ಸೇರುವ ಸ್ಥಳಕ್ಕೆ ಹೋಗುತ್ತದೆ.


ಯಾಕೆಂದರೆ ನೀವಿಬ್ಬರೂ ನನಗೆ ವಿರುದ್ಧವಾಗಿ ಪಾಪಮಾಡಿದಿರಿ. ಚಿನ್ ಮರುಭೂಮಿಯಲ್ಲಿರುವ ಕಾದೇಶ್ ಬಳಿಯಲ್ಲಿದ್ದ ಮೆರೀಬಾ ಎಂಬ ಸ್ಥಳದ ನೀರಿನ ಬಳಿಯಲ್ಲಿ ನೀನು ಜನರ ಮುಂದೆ ನನ್ನನ್ನು ಅವಮಾನಪಡಿಸಿದೆ. ನೀನು ನನ್ನನ್ನು ಮಹಾಪವಿತ್ರನೆಂದು ಗೌರವಿಸಬೇಕಿತ್ತು, ಆದರೆ ನೀನು ಗೌರವಿಸಲಿಲ್ಲ.


ಗಡಿಯು ಅಚ್ಮೋನಿನಿಂದ ಈಜಿಪ್ಟಿನ ನದಿಯ ಕಡೆಗೆ ತಿರುಗಿಕೊಂಡು ಸಮುದ್ರವನ್ನು ಸೇರುವುದು.


ಇಸ್ರೇಲರು ಅಲ್ಲಿ ಯೆಹೋವನೊಡನೆ ವಾದ ಮಾಡಿದ್ದರಿಂದ ಆ ಸ್ಥಳವು “ಮೆರೀಬಾ ಬುಗ್ಗೆ” ಎಂದು ಕರೆಯಲ್ಪಟ್ಟಿತು. ಅದಲ್ಲದೆ ಯೆಹೋವನು ತಾನು ಪರಿಶುದ್ಧನು ಎಂಬುದನ್ನು ಅವರಿಗೆ ತೋರಿಸಿದ ಸ್ಥಳವು ಇದೇ.


ಆ ಸಮಯದಲ್ಲಿ, ಯೆಹೋವನು ತನ್ನ ಜನರನ್ನು ಬೇರೆಯವರಿಂದ ಬೇರ್ಪಡಿಸುವನು. ಆತನು ಯೂಫ್ರೇಟೀಸ್ ನದಿಯಿಂದ ಪ್ರಾರಂಭಿಸಿ ಈಜಿಪ್ಟಿನ ನದಿಯತನಕ ಎಲ್ಲಾ ಜನರನ್ನು ಒಟ್ಟುಗೂಡಿಸುವನು. ಇಸ್ರೇಲ್ ಜನರೇ, ನೀವು ಒಬ್ಬೊಬ್ಬರಾಗಿಯೇ ಒಟ್ಟುಗೂಡಿಸಲ್ಪಡುವಿರಿ.


ನೀವು ಆಪತ್ತಿನಲ್ಲಿದ್ದಾಗ ಸಹಾಯಕ್ಕಾಗಿ ಮೊರೆಯಿಟ್ಟಿರಿ. ಆಗ ನಾನು ನಿಮ್ಮನ್ನು ಬಿಡಿಸಿದೆನು. ನಾನು ಕಾರ್ಮೋಡದಲ್ಲಿ ಮರೆಯಾಗಿದ್ದರೂ ನಿಮಗೆ ಉತ್ತರಿಸಿದೆನು. ನಾನು ನಿಮ್ಮನ್ನು ಮೆರೀಬಾದ ನೀರಿನಿಂದ ಪರೀಕ್ಷಿಸಿದೆನು.”


ಗಲಿಲಾಯ ಸರೋವರದಿಂದ ಲವಣಸಮುದ್ರದವರೆಗೆ ಹಬ್ಬಿದ ಜೋರ್ಡನ್ ಕಣಿವೆಯ ಪೂರ್ವಭಾಗವು ಕೂಡ ಅವನ ಆಳ್ವಿಕೆಗೆ ಒಳಪಟ್ಟಿತ್ತು. ಬೇತ್‌ಯೆಷಿಮೋತಿನಿಂದ ದಕ್ಷಿಣದಲ್ಲಿ ಪಿಸ್ಗಾ ಬೆಟ್ಟದವರೆಗೆ ಹಬ್ಬಿದ ಪ್ರದೇಶವನ್ನು ಸಹ ಅವನು ಆಳುತ್ತಿದ್ದನು.


ಲೇವಿಯ ವಿಷಯವಾಗಿ ಮೋಶೆ ಹೇಳಿದ ಮಾತುಗಳು: “ಲೇವಿಯು ನಿನ್ನ ನಿಜವಾದ ಹಿಂಬಾಲಕ. ಅವನು ಊರೀಮ್‌ತುಮ್ಮೀಮ್ ಇಟ್ಟುಕೊಂಡಿರುವನು. ಮಸ್ಸಾದಲ್ಲಿ ಲೇವಿಯರನ್ನು ನೀನು ಪರೀಕ್ಷಿಸಿದೆ. ಮೆರೀಬ ಬುಗ್ಗೆಯ ಬಳಿ ಅವರು ನಿನ್ನವರೆಂದು ನಿನಗೆ ಖಚಿತವಾಯಿತು.


ದಕ್ಷಿಣಭಾಗವು ಎದೋಮಿನ ಗಡಿಯಲ್ಲಿರುವ ಚಿನ್ ಮರುಭೂಮಿಯನ್ನು ಒಳಗೊಂಡಿದೆ. ಪೂರ್ವದ ಕಡೆಯಿರುವ ದಕ್ಷಿಣ ಗಡಿಯು ಉಪ್ಪುಸಮುದ್ರದ ದಕ್ಷಿಣಭಾಗದಿಂದ ಆರಂಭವಾಗುತ್ತದೆ.


ರಾಜನಾದ ಸೊಲೊಮೋನನು ಮತ್ತು ಇಸ್ರೇಲಿನ ಜನರೆಲ್ಲರು ವಿಶ್ರಾಂತಿ ಹಬ್ಬವನ್ನು ಆಚರಿಸಿದರು. ಉತ್ತರದಲ್ಲಿದ್ದ ಹಮಾತ್ ದಾರಿಯಿಂದ ದಕ್ಷಿಣದ ಈಜಿಪ್ಟಿನ ಗಡಿಯವರೆಗಿನ ಎಲ್ಲ ಇಸ್ರೇಲರು ಅಲ್ಲಿದ್ದರು. ಅವರೆಲ್ಲರೂ ಒಟ್ಟಾಗಿ ಏಳು ದಿನಗಳ ಕಾಲ ಯೆಹೋವನ ಮುಂದೆ ತಿಂದು, ಕುಡಿದು ಆನಂದಿಸಿದರು. ಆಗ ಅವರು ಮತ್ತೆ ಏಳು ದಿನಗಳು ಅಲ್ಲಿಯೇ ಉಳಿದರು. ಅವರು ಒಟ್ಟಿಗೆ ಹದಿನಾಲ್ಕು ದಿನಗಳು ಹಬ್ಬವನ್ನು ಆಚರಿಸಿದರು!


ಎಂಗೇದಿಯಿಂದ ಪ್ರಾರಂಭವಾಗಿ ಏನ್‌ಎಗ್ಲಯಿಮ್ ತನಕ ಬೆಸ್ತರು ಹೊಳೆಯ ದಡದಲ್ಲಿ ನಿಂತಿರುವದನ್ನು ನೀನು ನೋಡಬಹುದು. ಅವರು ತಮ್ಮ ಬಲೆಗಳನ್ನು ಬೀಸಿ ನಾನಾ ತರದ ಮೀನುಗಳನ್ನು ಹಿಡಿಯುವದನ್ನು ನೀನು ನೋಡಬಹುದು. ಭೂಮಧ್ಯ ಸಮುದ್ರದೊಳಗೆ ಎಷ್ಟು ವಿಧವಾದ ಮೀನುಗಳಿವೆಯೋ ಅಷ್ಟೇ ವಿಧವಾದ ಮೀನುಗಳು ಈ ಹೊಳೆಯಲ್ಲಿಯೂ ಇವೆ.


“ದೇಶದ ಮೇರೆ ಯಾವದೆಂದರೆ, ಉತ್ತರದ ಮೇರೆಯು ಭೂಮಧ್ಯ ಸಮುದ್ರದಲ್ಲಿ ಪ್ರಾರಂಭವಾಗಿ ಹೆತ್ಲೋನ್ ಕಡೆಗೂ ಅಲ್ಲಿಂದ ಚೆದಾದ್ ಕಡೆಗೂ


ಮೊದಲನೆಯ ತಿಂಗಳಲ್ಲಿ ಇಡೀ ಇಸ್ರೇಲ್ ಸಮುದಾಯವು ಚಿನ್ ಮರುಭೂಮಿಗೆ ಬಂದಿತು. ಅವರು ಕಾದೇಶಿನಲ್ಲಿ ಇಳಿದುಕೊಂಡರು. ಅಲ್ಲಿ ಮಿರ್ಯಾಮಳು ಸತ್ತಳು. ಆಕೆಯ ಶವವನ್ನು ಅಲ್ಲಿ ಸಮಾಧಿ ಮಾಡಲಾಯಿತು.


ಮರಳುಗಾಡಿನಲ್ಲಿರುವ ಬಾಲಾತ್ ಮತ್ತು ತಾಮಾರ್ ನಗರಗಳನ್ನೂ ಕಟ್ಟಿಸಿದನು;


ಕೆಲವು ಜನರು ಯೆಹೋಷಾಫಾಟನ ಬಳಿಗೆ ಬಂದು, “ಎದೋಮ್ಯರ ದೊಡ್ಡ ಸೈನ್ಯವು ಲವಣಸಮುದ್ರದ ಆಚೆಕಡೆಯಿಂದ ನಿನಗೆ ವಿರುದ್ಧವಾಗಿ ಬರುತ್ತಿದೆ. ಈಗಾಗಲೇ ಅವರು ಹಚೆಚೋನ್ ತಾಮಾರಿನಲ್ಲಿದ್ದಾರೆ” (ಇದನ್ನು ಏಂಗೆದಿ ಎಂತಲೂ ಕರೆಯುತ್ತಾರೆ.) ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು