Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 48:15 - ಪರಿಶುದ್ದ ಬೈಬಲ್‌

15 “ಯಾಜಕರಿಗೆ ಮತ್ತು ಲೇವಿಯರಿಗೆ ಸ್ಥಳ ಕೊಟ್ಟ ಮೇಲೆ ಇನ್ನೂ ಇಪ್ಪತ್ತೈದು ಸಾವಿರ ಮೊಳ ಉದ್ದ ಮತ್ತು ಐದು ಸಾವಿರ ಮೊಳ ಅಗಲದ ಒಂದು ತುಂಡು ಜಾಗ ಉಳಿಯುವದು. ಈ ಜಾಗವು ನಗರವನ್ನು ಕಟ್ಟುವುದಕ್ಕಾಗಿ; ಪಶುಗಳ ಹುಲ್ಲುಗಾವಲಿಗಾಗಿ ಮತ್ತು ಮನೆಗಳನ್ನು ಕಟ್ಟುವುದಕ್ಕಾಗಿ ಇರುವದು. ಸಾಮಾನ್ಯ ಜನರು ಈ ಜಾಗವನ್ನು ಉಪಯೋಗಿಸಬಹುದು. ನಗರವು ಇದರ ಮಧ್ಯದಲ್ಲಿ ಇರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಇಪ್ಪತ್ತೈದು ಸಾವಿರ ಮೊಳ ಉದ್ದದ ಆ ಕ್ಷೇತ್ರದ ಪಕ್ಕದಲ್ಲಿ ಮೀಸಲು ಪಾಲಿನ ಒಟ್ಟು ಅಳತೆಯಲ್ಲಿ ಉಳಿದ ಐದು ಸಾವಿರ ಮೊಳ ಅಗಲದ ಭೂಮಿಯು ಮೀಸಲಿಲ್ಲವೆಂದೆಣಿಸಿ ಪಟ್ಟಣಕ್ಕೆ ಅಂದರೆ ಜನರ ನಿವಾಸಕ್ಕೂ ಮತ್ತು ಸುತ್ತಣ ಪ್ರದೇಶಕ್ಕೂ ಪ್ರತ್ಯೇಕಿಸಲ್ಪಡಲಿ. ಪಟ್ಟಣವು ಅದರ ಮಧ್ಯದಲ್ಲಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಹನ್ನೆರಡುವರೆ ಕಿಲೋಮೀಟರ್ ಉದ್ದದ ಆ ಕ್ಷೇತ್ರದ ಪಕ್ಕದಲ್ಲಿ, (ಮೀಸಲುಪಾಲಿನ ಒಟ್ಟಳತೆಯಲ್ಲಿ), ಮಿಕ್ಕ ಎರಡುವರೆ ಕಿಲೋಮೀಟರ್ ಅಗಲದ ಭೂಮಿ ಮೀಸಲಿಲ್ಲವೆಂದೆಣಿಸಿ, ರಾಜಧಾನಿಗೆ ಅಂದರೆ, ಜನರ ನಿವಾಸಕ್ಕೂ ಸುತ್ತಣ ಪ್ರದೇಶಕ್ಕೂ ಪ್ರತ್ಯೇಕವಾಗಿರಲಿ. ರಾಜಧಾನಿ ಅದರ ಮಧ್ಯದಲ್ಲಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಇಪ್ಪತ್ತೈದು ಸಾವಿರ ಮೊಳ ಉದ್ದದ ಆ ಕ್ಷೇತ್ರದ ಪಕ್ಕದಲ್ಲಿ [ಮೀಸಲುಪಾಲಿನ ಒಟ್ಟಳತೆಯಲ್ಲಿ] ವಿುಕ್ಕ ಐದು ಸಾವಿರ ಮೊಳ ಅಗಲದ ಭೂವಿುಯು ಮೀಸಲಲ್ಲವೆಂದೆಣಿಸಿ ರಾಜಧಾನಿಗೆ ಅಂದರೆ ಜನರ ನಿವಾಸಕ್ಕೂ ಸುತ್ತಣ ಪ್ರದೇಶಕ್ಕೂ ಪ್ರತ್ಯೇಕಿಸಲ್ಪಡಲಿ, ರಾಜಧಾನಿಯು ಅದರ ಮಧ್ಯದಲ್ಲಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 “ಸುಮಾರು ಎರಡೂವರೆ ಕಿಲೋಮೀಟರ್ ಅಗಲ ಮತ್ತು ಸುಮಾರು ಹದಿಮೂರು ಕಿಲೋಮೀಟರ್ ಉದ್ದದ ಉಳಿದ ಪ್ರದೇಶವು ನಗರದ ಸಾಮಾನ್ಯ ಬಳಕೆಗಾಗಿ, ಇದು ಮನೆಗಳು ಮತ್ತು ಹುಲ್ಲುಗಾವಲುಗಳನ್ನು ಹೊಂದಿರುತ್ತದೆ. ನಗರವು ಅದರ ಮಧ್ಯದಲ್ಲಿ ಇರುತ್ತದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 48:15
5 ತಿಳಿವುಗಳ ಹೋಲಿಕೆ  

“ಪವಿತ್ರ ಪ್ರದೇಶ ಭಾಗದ ಪಕ್ಕದಲ್ಲಿ ಇಪ್ಪತ್ತೈದು ಸಾವಿರ ಮೊಳ ಉದ್ದದ ಮತ್ತು ಐದು ಸಾವಿರ ಮೊಳ ಅಗಲದ ಪ್ರದೇಶ ಭಾಗವು ಸಹ ಇರುತ್ತದೆ. ಇಸ್ರೇಲಿನ ಉಳಿದೆಲ್ಲ ಜನರಿಗೂ ಈ ಪ್ರದೇಶ ಭಾಗವು ಪಟ್ಟಣವಾಗಿರುತ್ತದೆ.


ಆಲಯದ ಸುತ್ತಲೂ ಇದ್ದ ನಾಲ್ಕು ಗೋಡೆಗಳನ್ನು ಅಳೆದನು. ಆ ಗೋಡೆ ಐನೂರು ಮೊಳ ಉದ್ದವಿದ್ದು ಐನೂರು ಮೊಳ ಅಗಲವಿತ್ತು. ಅದು ಪವಿತ್ರಸ್ಥಳವನ್ನೂ ಬೇರೆ ಸ್ಥಳವನ್ನೂ ಬೇರ್ಪಡಿಸಿತ್ತು.


ನಂತರ ನಾನು ನಿನ್ನ ಬಳಿಗೆ ಬೇಗ ಬಾರದೆ ಇದ್ದರೂ, ದೇವರ ಮನೆಯಲ್ಲಿ ಜನರು ಮಾಡಲೇಬೇಕಾದ ಕಾರ್ಯಗಳ ಬಗ್ಗೆ ನಿನಗೆ ತಿಳಿದಿದೆ. ಆ ಮನೆಯು ಜೀವಂತ ದೇವರ ಸಭೆ. ಅದು ಸತ್ಯದ ಅಡಿಪಾಯವೂ ಆಧಾರವೂ ಆಗಿದೆ.


“ಯಾಜಕರು ಜನರಿಗೆ ಪವಿತ್ರ ವಸ್ತುಗಳ ಮತ್ತು ಪವಿತ್ರವಲ್ಲದ ವಸ್ತುಗಳ ಬಗ್ಗೆ ಉಪದೇಶಿಸಬೇಕು. ಒಬ್ಬನನ್ನು ಅಶುದ್ಧನನ್ನಾಗಿ ಮಾಡುವಂಥವುಗಳ ಬಗ್ಗೆ ಇರುವ ನಿಯಮಗಳನ್ನು ಅವರು ಜನರಿಗೆ ಉಪದೇಶಿಸಬೇಕು.


“ಯಾಜಕರು ನನ್ನ ಉಪದೇಶವನ್ನು ನಿರಾಕರಿಸಿರುತ್ತಾರೆ; ಪರಿಶುದ್ಧ ವಸ್ತುಗಳನ್ನು ಸರಿಯಾಗಿ ಲಕ್ಷ್ಯ ಮಾಡುತ್ತಿಲ್ಲ; ಅವುಗಳಿಗೆ ಮಹತ್ವವನ್ನು ಕೊಡುತ್ತಿಲ್ಲ. ಅವರು ಪವಿತ್ರ ವಸ್ತುಗಳನ್ನು ಅಪವಿತ್ರ ವಸ್ತುಗಳಂತೆ ನೋಡುತ್ತಿದ್ದಾರೆ. ಯಾವುದು ಶುದ್ಧ, ಯಾವುದು ಅಶುದ್ಧ ಎಂಬುದರ ಬಗ್ಗೆ ಅವರು ಜನರಿಗೆ ಸರಿಯಾಗಿ ಉಪದೇಶಿಸುತ್ತಿಲ್ಲ. ನನ್ನ ವಿಶೇಷ ವಿಶ್ರಾಂತಿ ದಿವಸಗಳನ್ನು ಮಾನ್ಯ ಮಾಡುತ್ತಿಲ್ಲ. ನಾನು ಏನೂ ಅಲ್ಲವೆಂಬಂತೆ ನನ್ನನ್ನು ಅವರು ನೋಡುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು