Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 48:35 - ಪರಿಶುದ್ದ ಬೈಬಲ್‌

35 “ನಗರದ ಸುತ್ತಳತೆಯು ಹದಿನೆಂಟು ಸಾವಿರ ಮೊಳ. ಇಂದಿನಿಂದ ಈ ನಗರದ ಹೆಸರು ‘ಯೆಹೋವನು ಅಲ್ಲಿದ್ದಾನೆ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಪಟ್ಟಣದ ಸುತ್ತಳತೆಯು ಹದಿನೆಂಟು ಸಾವಿರ ಮೊಳವು; ಅದನ್ನು ನಿರ್ಮಿಸಿದ ದಿನದಿಂದ ಆ ಪಟ್ಟಣಕ್ಕೆ “ಯೆಹೋವನ ನೆಲೆ” ಎಂದು ಹೆಸರಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಪಟ್ಟಣದ ಸುತ್ತಳತೆ ಒಂಬತ್ತು ಸಾವಿರ ಮೀಟರ್‍ಗಳು. ಅದನ್ನು ನಿರ್ಮಿಸಿದಂದಿನಿಂದ ಆ ಪಟ್ಟಣಕ್ಕೆ ‘ಸರ್ವೇಶ್ವರನ ನೆಲೆ’ ಎಂದು ಹೆಸರಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಪಟ್ಟಣದ ಸುತ್ತಳತೆಯು ಹದಿನೆಂಟು ಸಾವಿರ ಮೊಳ; ಅದನ್ನು ನಿರ್ಮಿಸಿದಂದಿನಿಂದ ಆ ಪಟ್ಟಣಕ್ಕೆ ಯೆಹೋವನ ನೆಲೆ ಎಂಬ ಹೆಸರಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 “ಸುತ್ತಲೂ ಹದಿನೆಂಟು ಸಾವಿರ ಅಳತೆಗಳು. “ಆ ದಿನದಿಂದ ಆ ಪಟ್ಟಣದ ಹೆಸರು, ‘ಯೆಹೋವ ದೇವರ ನೆಲೆ’ ” ಎಂಬುದೇ ಆಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 48:35
33 ತಿಳಿವುಗಳ ಹೋಲಿಕೆ  

ಸಿಂಹಾಸನದಿಂದ ಒಂದು ಗಟ್ಟಿಯಾದ ಧ್ವನಿಯನ್ನು ನಾನು ಕೇಳಿದೆನು. ಆ ಧ್ವನಿಯು, “ಈಗ ದೇವರ ಮನೆಯು ಜನರ ಸಂಗಡವಿದೆ. ಆತನು ಅವರೊಂದಿಗೆ ನೆಲೆಸುತ್ತಾನೆ. ಅವರು ಆತನವರಾಗಿರುತ್ತಾರೆ. ದೇವರು ತಾನೇ ಅವರೊಂದಿಗೆ ಇರುತ್ತಾನೆ ಮತ್ತು ಅವರ ದೇವರಾಗಿರುತ್ತಾನೆ.


ಯೆಹೋವನು ಹೀಗೆನ್ನುತ್ತಾನೆ, “ಚೀಯೋನೇ, ಆನಂದಿಸು, ಯಾಕೆಂದರೆ ನಾನು ಬಂದು ನಿಮ್ಮ ಪಟ್ಟಣದಲ್ಲಿ ವಾಸಿಸುವೆನು.


ದೇವರಿಂದ ಶಾಪ ಹೊಂದಿದ ಯಾವುದೂ ಆ ಪಟ್ಟಣದಲ್ಲಿರುವುದಿಲ್ಲ. ದೇವರ ಮತ್ತು ಕುರಿಮರಿಯಾದಾತನ (ಯೇಸು) ಸಿಂಹಾಸನವು ಆ ನಗರದಲ್ಲಿರುತ್ತದೆ. ದೇವರ ಸೇವಕರು ಆತನನ್ನು ಆರಾಧಿಸುತ್ತಾರೆ.


ಆಗ ಯೆಹೂದ್ಯರು ಸುರಕ್ಷಿತರಾಗಿರುವರು. ಜೆರುಸಲೇಮಿನಲ್ಲಿ ಜನರು ಸುರಕ್ಷಿತರಾಗಿರುವರು. ಆ ‘ಮೊಳಕೆಯ’ ಹೆಸರು ‘ಯೆಹೋವನು ಒಳ್ಳೆಯವನು.’”


ಚೀಯೋನಿನ ನಿವಾಸಿಗಳೇ, ಇದರ ವಿಷಯವಾಗಿ ಹರ್ಷಧ್ವನಿ ಮಾಡಿರಿ. ಇಸ್ರೇಲರ ಪರಿಶುದ್ಧನು ನಿಮ್ಮೊಂದಿಗೆ ಬಲವಾಗಿದ್ದಾನೆ. ಆದ್ದರಿಂದ ಹರ್ಷಿಸಿರಿ.


ಆ ಕಾಲದಲ್ಲಿ ಜೆರುಸಲೇಮ್ ನಗರಕ್ಕೆ ‘ಯೆಹೋವನ ಸಿಂಹಾಸನ’ ಎಂದು ಕರೆಯುವರು. ಯೆಹೋವನ ಹೆಸರಿಗೆ ಗೌರವ ಸೂಚಿಸಲು ಎಲ್ಲಾ ಜನಾಂಗದವರು ಜೆರುಸಲೇಮಿನಲ್ಲಿ ಬಂದು ಸೇರುವರು. ಅವರು ತಮ್ಮ ದುಷ್ಟ ಮತ್ತು ಹಟಮಾರಿ ಹೃದಯಗಳನ್ನು ಅನುಸರಿಸುವುದಿಲ್ಲ.


ಆ ಜನರು ನನ್ನ ಜನರನ್ನು ಕೊಂದರು. ಆದ್ದರಿಂದ ನಾನು ನಿಜವಾಗಿಯೂ ಅವರನ್ನು ಶಿಕ್ಷಿಸುವೆನು.” ಯಾಕೆಂದರೆ ದೇವರಾದ ಯೆಹೋವನು ಚೀಯೋನಿನಲ್ಲಿ ವಾಸಿಸುವನು.


ಯೆಹೋವನು ಜೆರುಸಲೇಮಿನ ಚೀಯೋನ್ ಪರ್ವತದಿಂದ ರಾಜ್ಯವನ್ನಾಳುವನು. ಆತನ ಮಹಿಮೆಯು ಹಿರಿಯರ ಮುಂದಿರುವದು. ಆತನ ಮಹಿಮೆಯ ಪ್ರಕಾಶಕ್ಕೆ ಚಂದ್ರನು ನಾಚಿಕೊಳ್ಳುವನು; ಸೂರ್ಯನು ಲಜ್ಜೆಗೊಳ್ಳುವನು.


ಆ ಸೈನ್ಯದವರು ತಮ್ಮ ದೇಶಕ್ಕೆ ಸಂದೇಶವಾಹಕರನ್ನು ಕಳುಹಿಸುತ್ತಾರೆ. ಆ ಸಂದೇಶವು ಏನಿರಬಹುದು? “ಫಿಲಿಷ್ಟಿಯರು ಸೋತುಹೋದರು. ಆದರೆ ಯೆಹೋವನು ಚೀಯೋನನ್ನು ಬಲಪಡಿಸಿದ್ದಾನೆ. ಆತನ ಬಡಜನರು ರಕ್ಷಣೆಗಾಗಿ ಅಲ್ಲಿಗೆ ಹೋಗಿದ್ದಾರೆ” ಎಂಬುದೇ ಆ ಸಂದೇಶ.


“ಈ ಎರಡು ದೇಶಗಳು (ಇಸ್ರೇಲ್ ಮತ್ತು ಯೆಹೂದ) ನನ್ನವು. ಅವುಗಳನ್ನು ಸ್ವಂತಕ್ಕಾಗಿ ತೆಗೆದುಕೊಳ್ಳೋಣ” ಎಂದು ಹೇಳಿರುತ್ತೀ. ಆದಾಗ್ಯೂ ಯೆಹೋವನು ಅಲ್ಲಿದ್ದನು.


ಸದ್ಧರ್ಮದ ‘ಸಸಿಯ’ ಸಮಯದಲ್ಲಿ ಯೆಹೂದದ ಜನರು ರಕ್ಷಿಸಲ್ಪಡುವರು ಮತ್ತು ಇಸ್ರೇಲ್ ಸುರಕ್ಷಿತವಾಗಿರುವುದು. ಯೆಹೋವನೇ, ನಮ್ಮ ಸದ್ಧರ್ಮ ಎಂಬ ಹೆಸರು ಅವನಿಗಾಗುವುದು.”


ನೀನು ಸ್ತಬ್ಧನಾಗಿರುವೆ; ಯಾರನ್ನೂ ರಕ್ಷಿಸಲಾಗದ ಸೈನಿಕನಂತಾಗಿರುವೆ. ಯೆಹೋವನೇ, ನೀನಾದರೋ ನಮ್ಮ ಜೊತೆಯಲ್ಲಿರುವೆ. ನಾವು ನಿನ್ನ ಹೆಸರಿನವರಾಗಿದ್ದೇವೆ. ಆದ್ದರಿಂದ ನಮ್ಮನ್ನು ಕೈಬಿಡಬೇಡ.”


“ಇದು ನನ್ನ ಶಾಶ್ವತ ನಿವಾಸಸ್ಥಾನ. ನಾನು ಇಲ್ಲೇ ಆಸನಾರೂಢನಾಗಿರುವೆನು. ಇದೇ ನನಗೆ ಇಷ್ಟವಾದ ಸ್ಥಳ.


ದೇವರೇ, ನಿನ್ನ ಮಾರ್ಗಗಳು ಪರಿಶುದ್ಧವಾಗಿವೆ. ದೇವರೇ, ನಿನ್ನಂತೆ ಮಹತ್ವವುಳ್ಳವರು ಬೇರೆ ಯಾರೂ ಇಲ್ಲ.


ಗಿದ್ಯೋನನು ಯೆಹೋವನ್ನು ಆರಾಧಿಸಲು ಆ ಸ್ಥಳದಲ್ಲಿ ಒಂದು ಯಜ್ಞವೇದಿಕೆಯನ್ನು ಕಟ್ಟಿದನು. ಗಿದ್ಯೋನನು ಅದಕ್ಕೆ “ಯೆಹೋವನು ಶಾಂತಿಸ್ವರೂಪನು” ಎಂದು ಹೆಸರಿಟ್ಟನು. ಆ ಯಜ್ಞವೇದಿಕೆಯು ಇಂದಿಗೂ ಅಬೀಯೆಜೆರ್ ಗೋತ್ರದವರು ವಾಸಿಸುವ ಒಫ್ರದಲ್ಲಿದೆ.


ಆಗ ಮೋಶೆಯು ಒಂದು ಯಜ್ಞವೇದಿಕೆಯನ್ನು ಕಟ್ಟಿದನು. ಮೋಶೆಯು ಯಜ್ಞವೇದಿಕೆಗೆ, “ಯೆಹೋವನು ನನ್ನ ಧ್ವಜ” ಎಂದು ಹೆಸರಿಟ್ಟನು.


ಆತನು ಅವರಿಗೆ, “ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ ಆತನ ದೃಷ್ಟಿಗೆ ಯೋಗ್ಯವಾದವುಗಳನ್ನು ಮಾಡಬೇಕು; ಆತನ ಆಜ್ಞೆಗಳಿಗೆ ವಿಧೇಯರಾಗಿದ್ದು ಆತನ ಕಟ್ಟಳೆಗಳನ್ನೆಲ್ಲಾ ಅನುಸರಿಸಬೇಕು. ಆಗ ನಾನು ಈಜಿಪ್ಟಿನವರಿಗೆ ಉಂಟುಮಾಡಿದ ಕಾಯಿಲೆಗಳಲ್ಲಿ ಒಂದನ್ನೂ ನಿಮಗೆ ಬರಗೊಡಿಸುವುದಿಲ್ಲ. ಯೆಹೋವನೆಂಬ ನಾನೇ ನಿಮಗೆ ಆರೋಗ್ಯದಾಯಕನಾಗಿದ್ದೇನೆ” ಎಂದು ಹೇಳಿದನು.


ಅಲ್ಲದೆ ಆ ಸ್ಥಳಕ್ಕೆ “ಯೆಹೋವ ಯೀರೆ” ಎಂದು ಹೆಸರಿಟ್ಟನು. ಇಂದಿಗೂ ಜನರು, “ಯೆಹೋವನ ಬೆಟ್ಟದಲ್ಲಿ ಒದಗಿಸಲ್ಪಡುವುದು” ಎಂದು ಹೇಳುತ್ತಾರೆ.


ವಾಸ್ತವವಾಗಿ ಜೆರುಸಲೇಮಿನ ಮತ್ತು ಯೆಹೊದದ ಪ್ರತಿಯೊಂದು ಪಾತ್ರೆಯ ಮೇಲೆ, “ಸರ್ವಶಕ್ತನಾದ ಯೆಹೋವನಿಗೆ ಮೀಸಲಾಗಿದೆ” ಎಂದು ಬರೆದಿರುತ್ತದೆ. ಯಜ್ಞಗಳನ್ನರ್ಪಿಸಲು ಬರುವ ಜನರೆಲ್ಲರೂ ಆ ಪಾತ್ರೆಗಳನ್ನು ತೆಗೆದುಕೊಂಡು ಅವುಗಳಲ್ಲಿ ವಿಶೇಷ ಅಡಿಗೆಯನ್ನು ಮಾಡುವರು. ಆ ಸಮಯದಲ್ಲಿ ಸರ್ವಶಕ್ತನಾದ ಯೆಹೋವನ ಆಲಯದೊಳಗೆ ಯಾವ ವರ್ತಕನೂ ವ್ಯಾಪಾರ ನಡೆಸುವದಿಲ್ಲ.


ಆತನು ಸೆರೆಯಾಳುಗಳನ್ನು ನಡೆಸಿಕೊಂಡು ಬೆಟ್ಟದ ಮೇಲೇರಿ ಹೋದನು; ತನಗೆ ದ್ರೋಹಮಾಡಿದ ಜನರಿಂದ ಆತನು ಕಷ್ಟಕಾಣಿಕೆಗಳನ್ನು ತೆಗೆದುಕೊಳ್ಳುವನು. ದೇವರಾದ ಯೆಹೋವನು ಮೇಲೇರಿಹೋದದ್ದು ಅಲ್ಲಿ ವಾಸಿಸುವುದಕ್ಕಾಗಿಯೇ.


ಈ ದೇವರೇ ಎಂದೆಂದಿಗೂ ನಮ್ಮ ದೇವರು! ನಮ್ಮನ್ನು ಶಾಶ್ವತವಾಗಿ ನಡೆಸುವಾತನು ಆತನೇ!


ದೇವರು ಆ ಪಟ್ಟಣಗಳ ಅರಮನೆಗಳಲ್ಲಿ, ತಾನೇ ಆಶ್ರಯದುರ್ಗವೆಂದು ಹೆಸರುವಾಸಿಯಾಗಿದ್ದಾನೆ.


ದೇವರು ಆ ಪಟ್ಟಣದಲ್ಲಿದ್ದಾನೆ, ಆದ್ದರಿಂದ ಅದೆಂದಿಗೂ ನಾಶವಾಗುವುದಿಲ್ಲ. ಸೂರ್ಯೋದಯಕ್ಕಿಂತ ಮೊದಲೇ ದೇವರು ಅದರ ಸಹಾಯಕ್ಕಾಗಿ ಬರುವನು.


ಜಯಗಳಿಸಿದ ವ್ಯಕ್ತಿಯನ್ನು ನನ್ನ ದೇವರ ಆಲಯದಲ್ಲಿ ಆಧಾರಸ್ತಂಭವನ್ನಾಗಿ ಮಾಡುವೆನು. ಅವನು ದೇವರ ಆಲಯವನ್ನು ಮತ್ತೆಂದಿಗೂ ಬಿಟ್ಟುಹೋಗುವ ಅಗತ್ಯವಿಲ್ಲ. ನನ್ನ ದೇವರ ಹೆಸರನ್ನೂ ನನ್ನ ದೇವರ ಪಟ್ಟಣದ ಹೆಸರನ್ನೂ ಅವನ ಮೇಲೆ ಬರೆಯುತ್ತೇನೆ. ಹೊಸ ಜೆರುಸಲೇಮೇ ಆ ಪಟ್ಟಣ. ಆ ಪಟ್ಟಣವು ನನ್ನ ದೇವರ ಬಳಿಯಿಂದ ಪರಲೋಕದಿಂದ ಇಳಿದುಬರುತ್ತದೆ. ನನ್ನ ಹೊಸ ಹೆಸರನ್ನೂ ಅವನ ಮೇಲೆ ಬರೆಯುತ್ತೇನೆ.


ನನ್ನ ಜನರ ಮೊರೆಯನ್ನು ಆಲಿಸು. ದೇಶದ ಎಲ್ಲೆಡೆಯಲ್ಲಿಯೂ ಅವರು ಸಹಾಯಕ್ಕಾಗಿ ಕೂಗುತ್ತಿದ್ದಾರೆ. “ಈಗಲೂ ಯೆಹೋವನು ಚೀಯೋನಿನಲ್ಲಿದ್ದಾನೆಯೇ? ಚೀಯೋನಿನ ರಾಜನು ಈಗಲೂ ಅಲ್ಲಿದ್ದಾನೆಯೇ?” ಎಂದು ಅವರು ಕೇಳುತ್ತಾರೆ. ದೇವರು ಹೀಗೆನ್ನುತ್ತಾನೆ: “ಯೆಹೂದದ ಜನರು ತಮ್ಮ ವಿಗ್ರಹಗಳನ್ನು ಪೂಜಿಸಿ ನನ್ನ ಕೋಪವನ್ನು ಏಕೆ ಕೆರಳಿಸುತ್ತಾರೆ? ಅವರು ನಿಷ್ಪ್ರಯೋಜಕವಾದ ಅನ್ಯದೇವರ ವಿಗ್ರಹಗಳನ್ನು ಪೂಜಿಸಿದರು.”


“ನಗರದ ಪಶ್ಚಿಮದ ಮೇರೆಯು ನಾಲ್ಕು ಸಾವಿರದ ಐನೂರು ಮೊಳ ಉದ್ದವಿರುವದು. ಅದಕ್ಕೆ ಮೂರು ಬಾಗಿಲುಗಳು ಇರುವವು. ಗಾದ್ ಬಾಗಿಲು, ಆಶೇರ್ ಬಾಗಿಲು ಮತ್ತು ನಫ್ತಾಲಿ ಬಾಗಿಲು.


ಯಾಕೋಬನ ಜನರಲ್ಲಿ ಯಾವ ದೋಷವೂ ಇಲ್ಲ. ಇಸ್ರೇಲಿನ ಜನರಲ್ಲಿ ಯಾವ ಆಪತ್ತು ಕಾಣುತ್ತಿಲ್ಲ. ಯೆಹೋವನೇ ಅವರ ದೇವರು. ಆತನು ಅವರೊಂದಿಗಿದ್ದಾನೆ.


ದಾವೀದನು, “ಇಸ್ರೇಲರ ದೇವರಾದ ಯೆಹೋವನು ತನ್ನ ಜನರಿಗೆ ಸಮಾಧಾನವನ್ನು ಅನುಗ್ರಹಿಸಿದ್ದಾನೆ. ದೇವರು ನಿರಂತರವೂ ಜೆರುಸಲೇಮಿನಲ್ಲಿ ವಾಸಿಸಲು ಬಂದಿರುತ್ತಾನೆ.


ಆತನು ಗರ್ಜಿಸಲು, ಜನಾಂಗಗಳು ಭಯದಿಂದ ನಡುಗುತ್ತವೆ, ರಾಷ್ಟ್ರಗಳು ಬಿದ್ದುಹೋಗುತ್ತವೆ; ಭೂಮಿಯು ಕರಗಿಹೋಗುವುದು.


ದೇವರ ಪಟ್ಟಣವೇ, ಜನರು ನಿನ್ನ ಬಗ್ಗೆ ಆಶ್ಚರ್ಯಕರವಾದ ಸಂಗತಿಗಳನ್ನು ಹೇಳುವರು.


ನಾನು ಸಮಾಧಾನದ ಒಡಂಬಡಿಕೆಯನ್ನು ಅವರ ಜೊತೆ ಮಾಡುವೆನು. ಇದು ನಿರಂತರದ ಒಡಂಬಡಿಕೆಯಾಗಿರುವದು. ನಾನು ಅವರ ಸ್ವದೇಶವನ್ನು ಹಿಂತಿರುಗಿಸಿ ಕೊಡುವೆನು. ಅವರನ್ನು ಅಭಿವೃದ್ಧಿಪಡಿಸಿ ಹೆಚ್ಚಿಸುವೆನು ಮತ್ತು ಅವರ ಮಧ್ಯೆ ನನ್ನ ಪವಿತ್ರ ಸ್ಥಳವನ್ನು ಇರಿಸುವೆನು. ಇದು ನಿರಂತರವಾದ ಒಡಂಬಡಿಕೆ.


ಇತರ ದೇಶಗಳವರು ನಾನು ಯೆಹೋವನೆಂದು ತಿಳಿಯುವರು. ಇಸ್ರೇಲರನ್ನು ನನ್ನ ವಿಶೇಷ ಜನರೆಂದು ಅವರಿಗೆ ತಿಳಿದುಬರುವದು. ಯಾಕೆಂದರೆ ಅವರ ಮಧ್ಯೆ ನನ್ನ ಪರಿಶುದ್ಧ ಸ್ಥಾನವನ್ನು ನಿರಂತರಕ್ಕೂ ಇರಿಸುವೆನು.’”


ಯೆಹೋವನು ಹೇಳುವುದೇನೆಂದರೆ, “ನಾನು ಚೀಯೋನಿಗೆ ಹಿಂದಿರುಗಿ ಬಂದಿದ್ದೇನೆ. ನಾನು ಜೆರುಸಲೇಮಿನಲ್ಲಿ ವಾಸಿಸುತ್ತೇನೆ. ಜೆರುಸಲೇಮ್ ನಂಬಿಗಸ್ತನಗರವೆಂದು ಕರೆಯಲ್ಪಡುವುದು. ಸರ್ವಶಕ್ತನ ಪರ್ವತವು ಪವಿತ್ರ ಪರ್ವತವೆಂದು ಕರೆಯಲ್ಪಡುವುದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು