Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 5:9 - ಪರಿಶುದ್ದ ಬೈಬಲ್‌

9 ನಿಮ್ಮ ಎಲ್ಲಾ ಅಸಹ್ಯಕೃತ್ಯಗಳ ದೆಸೆಯಿಂದ ನಾನು ಹಿಂದೆಂದೂ ಮಾಡಿಲ್ಲದ, ಮುಂದೆಂದೂ ಮಾಡದ ಸಂಗತಿಗಳನ್ನು ನಿಮಗೆ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನೀನು ಬಹಳ ಅಸಹ್ಯಕಾರ್ಯಗಳನ್ನು ನಡಿಸಿದ್ದರಿಂದ ನಾನು ಈವರೆಗೂ ಇನ್ನು ಮುಂದೆಯೂ ಮಾಡದಂಥ ದಂಡನೆಯನ್ನು ಈಗ ನಿನಗೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನೀನು ಬಹಳ ಅಸಹ್ಯಕೃತ್ಯಗಳಲ್ಲಿ ತೊಡಗಿದ್ದರಿಂದ ನಾನು ಈವರೆಗೂ ಇನ್ನು ಮುಂದಕ್ಕೂ ಮಾಡದಂಥ ದಂಡನೆಯನ್ನು ಈಗ ನಿನಗೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನೀನು ಬಹಳ ಅಸಹ್ಯಕಾರ್ಯಗಳನ್ನು ನಡಿಸಿದ್ದರಿಂದ ನಾನು ಈವರೆಗೂ ಇನ್ನು ಮುಂದೆಯೂ ಮಾಡದಂಥ ದಂಡನೆಯನ್ನು ಈಗ ನಿನಗೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಾನು ಮಾಡದೆ ಇದ್ದದ್ದನ್ನೂ, ಇನ್ನು ಮೇಲೆ ಮಾಡದೇ ಇರುವಂಥದ್ದನ್ನೂ ನಿಮ್ಮ ಅಸಹ್ಯಗಳ ನಿಮಿತ್ತವಾಗಿ ನಿಮ್ಮಲ್ಲಿ ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 5:9
7 ತಿಳಿವುಗಳ ಹೋಲಿಕೆ  

ಏಕೆಂದರೆ ಆ ಸಮಯದಲ್ಲಿ ಮಹಾ ಸಂಕಟ ಇರುವುದು. ಲೋಕವು ಸೃಷ್ಟಿಯಾದಂದಿನಿಂದ ಇಂಥ ಸಂಕಟವು ಎಂದೂ ಸಂಭವಿಸಿಲ್ಲ. ಇನ್ನು ಮುಂದೆಯೂ ಸಂಭವಿಸುವುದಿಲ್ಲ.


“ನಮಗೂ ನಮ್ಮ ನಾಯಕರುಗಳಿಗೂ ನೀನು ಹೇಳಿದಂತೆಯೇ ಮಾಡಿರುವೆ. ನೀನು ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿರುವೆ. ಜೆರುಸಲೇಮ್ ನಗರಕ್ಕೆ ಉಂಟಾದಷ್ಟು ಕೇಡು ಭೂಮಂಡಲದಲ್ಲಿ ಯಾವ ನಗರಕ್ಕೂ ಆಗಿಲ್ಲ.


“ಈ ಭೂಮುಖದಲ್ಲಿ ಅನೇಕ ಕುಟುಂಬಗಳಿವೆ. ಅವರೆಲ್ಲರಲ್ಲಿ ನಿಮ್ಮನ್ನು ಮಾತ್ರವೇ ನಾನು ವಿಶೇಷ ರೀತಿಯಲ್ಲಿ ಬಲ್ಲೆನು. ಆದರೆ ನೀವು ನನಗೆ ವಿರುದ್ಧವಾದಿರಿ. ಆದ್ದರಿಂದ ನಾನು ನೀವು ಮಾಡಿದ ಪಾಪಗಳಿಗೆ ನಿಮ್ಮೆಲ್ಲರನ್ನು ಶಿಕ್ಷಿಸುವೆನು.”


ಬರಗಾಲದ ನಿಮಿತ್ತ ಸತ್ತವರಿಗಿಂತಲೂ ಖಡ್ಗಗಳಿಂದ ಹತರಾದವರ ಸಾವೇ ಮೇಲಾಗಿತ್ತು. ಹಸಿವೆಯಿಂದಿದ್ದ ಜನರು ನೋವಿನಿಂದ ನರಳಾಡಿದರು. ಭೂಮಿಯಿಂದ ಆಹಾರವನ್ನು ಪಡೆಯಲಾಗದೆ ಅವರು ಸತ್ತುಹೋದರು.


ನನ್ನ ಜನರ ಪಾಪವು ಬಹಳವಾಗಿತ್ತು. ಅವರ ಪಾಪವು ಸೊದೋಮ್ ಪಟ್ಟಣದ ಪಾಪಕ್ಕಿಂತಲೂ ಹೆಚ್ಚಾಗಿತ್ತು. ಸೊದೋಮ್ ಇದ್ದಕ್ಕಿದ್ದಂತೆ ನಾಶವಾಯಿತು. ಅದು ನಾಶವಾದದ್ದು ಯಾವ ಮಾನವನಿಂದಲೂ ಅಲ್ಲ.


“ದರ್ಶನದಲ್ಲಿ ಕಾಣಿಸಿಕೊಂಡ ಮನುಷ್ಯನು, ದಾನಿಯೇಲನೇ, ಆಗ ದೇವದೂತನಾದ ಮಿಕಾಯೇಲನು ಏಳುವನು. ಮಿಕಾಯೇಲನು ಯೆಹೂದ್ಯರಾದ ನಿಮ್ಮ ಹಿತಾಸಕ್ತಿಗಳನ್ನು ನೋಡಿಕೊಳ್ಳುವನು. ಮಹಾಸಂಕಟದ ಕಾಲ ಬರುವದು. ಭೂಮಿಯ ಮೇಲೆ ರಾಷ್ಟ್ರಗಳು ಹುಟ್ಟಿದಂದಿನಿಂದ ಸಂಭವಿಸದಂತಹ ಸಂಕಟಗಳು ಸಂಭವಿಸುವವು. ಆದರೆ ದಾನಿಯೇಲನೇ, ನಿಮ್ಮ ಜನಗಳಲ್ಲಿ ಯಾರ ಹೆಸರುಗಳು ‘ಜೀವಬಾಧ್ಯರ ಗ್ರಂಥದಲ್ಲಿ’ ಬರೆಯಲ್ಪಟ್ಟಿದೆಯೋ ಅವರೆಲ್ಲರನ್ನು ರಕ್ಷಿಸಲಾಗುವುದು.


ಅವರು ಅನೇಕ ಭಯಂಕರ ಕೃತ್ಯಗಳನ್ನು ಮಾಡಿದ್ದಾರೆ. ಆದ್ದರಿಂದ ಅವರ ರಾಜ್ಯವನ್ನು ಬಂಜರು ಭೂಮಿಯನ್ನಾಗಿ ಮಾಡುವೆನು. ಆಗ ಈ ಜನರು ನಾನು ಯೆಹೋವನೆಂದು ತಿಳಿದುಕೊಳ್ಳುವರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು