Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 6:7 - ಪರಿಶುದ್ದ ಬೈಬಲ್‌

7 ಜನರು ನಿಮ್ಮ ಮಧ್ಯದಲ್ಲಿ ಕೊಲ್ಲಲ್ಪಟ್ಟು ಬೀಳುವರು. ಆಗ ನೀನು, ನಾನು ಯೆಹೋವನೆಂದು ತಿಳಿಯುವಿ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನೀವು ರೂಪಿಸಿದ ವಿಗ್ರಹಗಳು ಅಳಿದುಹೋಗುವುವು; ಹತರಾದವರು ನಿಮ್ಮ ಮಧ್ಯದಲ್ಲಿ ಬೀಳುವರು; ಆಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಹತರಾದವರು ನಿಮ್ಮ ಮಧ್ಯದಲ್ಲಿ ಬೀಳುವರು; ಆಗ ನಾನೇ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಹತರಾದವರು ನಿಮ್ಮ ಮಧ್ಯದಲ್ಲಿ ಬೀಳುವರು; ಆಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಹತರಾದವರು ನಿಮ್ಮ ಮಧ್ಯದಲ್ಲಿ ಬೀಳುವರು. ಆಗ ನೀವು ನಾನೇ ಯೆಹೋವ ದೇವರೆಂದು ತಿಳಿಯುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 6:7
43 ತಿಳಿವುಗಳ ಹೋಲಿಕೆ  

ನಾನು ಎಷ್ಟು ಶಕ್ತಿಶಾಲಿ ಎಂದು ತೋರಿಸುವೆನು. ನಾನು ಪವಿತ್ರನು ಎಂದು ಅವರಿಗೆ ತೋರಿಸುವೆನು. ಅನೇಕ ಜನಾಂಗಗಳು ನಾನು ಯಾರು ಎಂದು ತಿಳಿಯುವರು. ನಾನು ಯೆಹೋವನೆಂದು ಆಗ ಅವರು ತಿಳಿಯುವರು.


ಇಸ್ರೇಲ್ ರಾಜ್ಯವು ನಾಶವಾದಾಗ ನೀನು ಸಂತೋಷಪಟ್ಟಿರುವೆ. ನಾನು ಕೂಡ ಹಾಗೆಯೇ ಮಾಡುವೆನು. ಸೇಯೀರ್ ಪರ್ವತ ಮತ್ತು ಎದೋಮ್ ರಾಜ್ಯವೆಲ್ಲಾ ನಾಶವಾಗುವದು. ಆಗ ನಾನು ಯೆಹೋವನೆಂದು ನೀನು ತಿಳಿಯುವೆ.”


ನಾನು ಈಜಿಪ್ಟಿನ ಜನರನ್ನು ದೇಶಾಂತರ ಚದರಿಸಿಬಿಡುವೆನು. ಆಗ ನಾನು ಯೆಹೋವನೆಂದು ಅವರು ತಿಳಿದುಕೊಳ್ಳುವರು.”


ಚೀದೋನಿಗೆ ನಾನು ರೋಗಮರಣಗಳನ್ನು ಕಳುಹಿಸುವೆನು. ನಗರದೊಳಗೆ ವಾಸಿಸುವ ಅನೇಕ ಮಂದಿ ಸಾಯುವರು. ನಗರದ ಹೊರಗೆ ಖಡ್ಗವು ಅನೇಕರನ್ನು ಕೊಲ್ಲುವದು, ಆಗ ಅವರು ನಾನು ಯೆಹೋವನೆಂದು ತಿಳಿಯುವರು.’”


ಆಕೆಯ ಹೆಣ್ಣುಮಕ್ಕಳು (ಚಿಕ್ಕ ಪಟ್ಟಣಗಳು) ಯುದ್ಧದಲ್ಲಿ ಕೊಲ್ಲಲ್ಪಡುವರು. ನಾನು ಯೆಹೋವನೆಂದು ಆಗ ತಿಳಿಯುವರು.”


ನಾನು ಅವರೊಂದಿಗೆ ಮುಯ್ಯಿತೀರಿಸಿಕೊಳ್ಳುವೆನು. ನನ್ನ ಕೋಪವು ಅವರಿಗೆ ಪಾಠ ಕಲಿಸುವದು. ನಾನು ಯೆಹೋವನೆಂದು ಆಗ ಅವರು ತಿಳಿದುಕೊಳ್ಳುವರು.”


ಆ ಸಮಯದಲ್ಲಿ ನಿನಗೆ ಆ ಮನುಷ್ಯನೊಂದಿಗೆ ಮಾತನಾಡಲಾಗುವುದು. ನೀನು ಆಮೇಲೆ ಎಂದಿಗೂ ಮೌನವಾಗಿರುವುದಿಲ್ಲ. ಈ ರೀತಿಯಾಗಿ ನೀನು ಅವರಿಗೆ ಒಂದು ಮಾದರಿಯಾಗುವೆ. ನಾನು ಯೆಹೋವನೆಂದು ಆಗ ಅವರು ತಿಳಿಯುವರು.”


ಯೆಹೆಜ್ಕೇಲನು ನಿಮಗೆ ಒಬ್ಬ ಮಾದರಿಯಾಗಿದ್ದಾನೆ. ಆತನು ಮಾಡಿದ ಹಾಗೆ ನೀವೂ ಮಾಡುವಿರಿ. ನಿಮ್ಮ ಶಿಕ್ಷಾ ಸಮಯವು ಹತ್ತಿರ ಬಂದಿದೆ. ನಾನು ಒಡೆಯನಾದ ಯೆಹೋವನೆಂದು ಆಗ ನೀವು ತಿಳಿಯುವಿರಿ.’”


ನಿನ್ನ ನಾಚಿಕೆಕರವಾದ ಕಾರ್ಯಗಳಿಗಾಗಿ ಅವರು ನಿನ್ನನ್ನು ಶಿಕ್ಷಿಸುವರು. ನೀನು ಅಸಹ್ಯವಾದ ವಿಗ್ರಹಗಳನ್ನು ಪೂಜೆಮಾಡಿದ್ದಕ್ಕೆ ಶಿಕ್ಷಿಸಲ್ಪಡುವಿ. ಆಗ ನಾನೇ ಒಡೆಯನೂ ಯೆಹೋವನೂ ಎಂದು ನೀನು ತಿಳಿಯುವಿ.”


ಇಸ್ರೇಲ್ ಜನಾಂಗಗಳೇ, ನೀವು ಅನೇಕ ಕೆಟ್ಟ ವಿಷಯಗಳನ್ನು ಮಾಡಿರುತ್ತೀರಿ. ಆ ದುಷ್ಕೃತ್ಯಗಳಿಗಾಗಿ ನೀವು ನಾಶವಾಗಿ ಹೋಗಬೇಕಾಗಿತ್ತು. ಆದರೆ ನನ್ನ ಒಳ್ಳೆಯ ಹೆಸರಿನ ಸಲುವಾಗಿ ನೀವು ಹೊಂದಬೇಕಾದ ಶಿಕ್ಷೆಯನ್ನು ನಾನು ನಿಮಗೆ ವಿಧಿಸುವುದಿಲ್ಲ. ಆಗ ನಾನೇ ಒಡೆಯನಾದ ಯೆಹೋವನೆಂದು ತಿಳಿದುಕೊಳ್ಳುವಿರಿ.” ಇದು ನನ್ನ ಒಡೆಯನಾದ ಯೆಹೋವನ ನುಡಿ.


ನಾನು ನಿಮ್ಮನ್ನು ತಿರುಗಿ ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದ ಇಸ್ರೇಲ್ ದೇಶಕ್ಕೆ ಬರಮಾಡಿದಾಗ ನಾನೇ ಯೆಹೋವನೆಂದು ಅರಿತುಕೊಳ್ಳುವಿರಿ.


ನನಗೆ ವಿರೋಧವಾಗಿ ಎದ್ದು ಪಾಪಮಾಡಿದ ಜನರನ್ನು ಅವರ ಸ್ವದೇಶದಿಂದ ತೆಗೆದುಬಿಡುವೆನು. ಅವರು ಇನ್ನೆಂದಿಗೂ ಇಸ್ರೇಲ್ ದೇಶಕ್ಕೆ ಹಿಂತಿರುಗಿ ಬರುವುದೇ ಇಲ್ಲ. ನಾನೇ ಯೆಹೋವನೆಂಬುದು ಆಗ ನಿಮಗೆ ತಿಳಿಯುವುದು.”


“ನಾನು ಅವರನ್ನು ದಂಡಿಸುವೆನು. ಅವರು ಒಂದು ಬೆಂಕಿಯಿಂದ ತಪ್ಪಿಸಿಕೊಂಡರೂ ಮತ್ತೊಂದು ಬೆಂಕಿಯಿಂದ ಸುಟ್ಟುಹೋಗುವರು. ನಾನು ಅವರನ್ನು ದಂಡಿಸಿದಾಗ, ನಾನೇ ಯೆಹೋವನೆಂದು ನೀನು ತಿಳಿದುಕೊಳ್ಳುವೆ.


ನಾನು ಅವನ ವಿರುದ್ಧವಾಗಿ ತಿರುಗಿ ಅವನನ್ನು ನಾಶಮಾಡುವೆನು. ಅವನು ಇಸ್ರೇಲರಿಗೆ ನಿದರ್ಶನವಾಗಿರಬೇಕು, ಜನರು ಅವನನ್ನು ನೋಡಿ ನಗಾಡುವರು. ನಾನು ಅವನನ್ನು ನನ್ನ ಜನರ ಮಧ್ಯದಿಂದ ತೆಗೆದು ಬಿಡುವೆನು. ಆಗ ನೀವು ನಾನೇ ಯೆಹೋವನೆಂದು ತಿಳಿಯುವಿರಿ.


ಆದ್ದರಿಂದ ನೀವು ಪ್ರಯೋಜನವಿಲ್ಲದ ದರ್ಶನವನ್ನು ಇನ್ನು ಮೇಲೆ ನೋಡುವುದಿಲ್ಲ. ನೀವು ನಿಮ್ಮ ಮಂತ್ರತಂತ್ರಗಳನ್ನು ಇನ್ನು ಮಾಡುವುದಿಲ್ಲ. ನನ್ನ ಶಕ್ತಿಯಿಂದ ನಾನು ನನ್ನ ಜನರನ್ನು ಕಾಪಾಡುತ್ತೇನೆ. ಆಗ ನಾನು ಯೆಹೋವನು ಎಂದು ನೀವು ತಿಳಿಯುವಿರಿ.’”


ನಾನು ನಿಮ್ಮ ಮುಸುಕುಗಳನ್ನು ಹರಿದುಹಾಕುವೆನು. ಮತ್ತು ನಿಮ್ಮ ಹಿಡಿತದಿಂದ ಅವರನ್ನು ಬಿಡಿಸುವೆನು. ಆ ಜನರು ನಿಮ್ಮ ಉರುಲಿನಿಂದ ತಪ್ಪಿಸಿಕೊಳ್ಳುವರು. ಆಗ ನಾನೇ ಒಡೆಯನಾದ ಯೆಹೋವನು ಎಂದು ಗೊತ್ತಾಗುವುದು.


ನೀವು ಗೋಡೆಗೆ ಗಾರೆ ಹಾಕಿದಿರಿ. ಆದರೆ ನಾನು ಇಡೀ ಗೋಡೆಯನ್ನೆ ನಾಶಮಾಡುವೆನು. ಅದನ್ನು ನೆಲಸಮ ಮಾಡುವೆನು. ಆ ಗೋಡೆಯು ನಿಮ್ಮ ಮೇಲೆ ಬಿದ್ದು ನಿಮ್ಮನ್ನು ಕೊಲ್ಲುವುದು. ಆಗ ನಾನು ಯೆಹೋವನೆಂದು ಗೊತ್ತಾಗುವುದು.


ಯೆಹೋವನು ಹೇಳುವುದೇನೆಂದರೆ, “ಯಾವ ಪ್ರವಾದಿಗಳು ಸುಳ್ಳುದರ್ಶನವನ್ನು ನೋಡಿ ಸುಳ್ಳನ್ನು ಹೇಳಿದ್ದಾರೋ, ಅವರನ್ನು ಶಿಕ್ಷಿಸುವೆನು. ನನ್ನ ಜನರ ಮಧ್ಯೆಯಿಂದ ಅವರನ್ನು ತೆಗೆದುಬಿಡುವೆನು. ಅವರ ಹೆಸರುಗಳು ಇಸ್ರೇಲರ ವಂಶಾವಳಿ ಪಟ್ಟಿಯಲ್ಲಿ ಇರುವುದಿಲ್ಲ. ಅವರು ಇಸ್ರೇಲ್ ದೇಶಕ್ಕೆ ಹಿಂದಿರುಗಿ ಬರುವುದಿಲ್ಲ. ನಾನೇ ಒಡೆಯನಾದ ಯೆಹೋವನೆಂದು ಆಗ ನಿಮಗೆ ಗೊತ್ತಾಗುವುದು.


ನಾನೇ ಯೆಹೋವನೆಂದು ಆಗ ಜನರು ತಿಳಿದುಕೊಳ್ಳುವರು; ಯಾಕೆಂದರೆ ನಾನು ಅವರನ್ನು ಜನಾಂಗಗಳ ಮಧ್ಯದಲ್ಲಿ ಚದರಿಸಿದ್ದೇನೆ ಮತ್ತು ಬೇರೆ ದೇಶಗಳಿಗೆ ಓಡಿಸಿದ್ದೇನೆ.


ಆಗ ನಾನು ಯೆಹೋವನು ಎಂದು ನೀವು ತಿಳಿಯುವಿರಿ. ನನ್ನ ಆಜ್ಞೆಗೆ ನೀವು ಅವಿಧೇಯರಾದಿರಿ. ನನ್ನ ಕಟ್ಟಳೆಗಳಿಗೆ ನೀವು ವಿಧೇಯರಾಗಲಿಲ್ಲ. ನಿಮ್ಮ ಸುತ್ತಲೂ ಇರುವ ಜನಾಂಗಗಳಂತೆ ಇರಲು ನೀವು ನಿರ್ಧರಿಸಿರುತ್ತೀರಿ.”


ನೀವು ಕತ್ತಿಯಿಂದಲೇ ಸಾಯುವಿರಿ. ನಾನು ನಿಮ್ಮನ್ನು ಇಸ್ರೇಲಿನಲ್ಲಿಯೇ ದಂಡಿಸುವೆನು. ನಾನೇ ಯೆಹೋವನೆಂಬುದು ಆಗ ನಿಮಗೆ ತಿಳಿಯುವುದು.


ದೇವರು ಅವರಿಗೆ ಹೇಳಿದ್ದೇನೆಂದರೆ, “ಈ ಆಲಯವನ್ನು ಹೊಲೆ ಮಾಡಿರಿ. ಆಲಯದ ಅಂಗಳವನ್ನು ಹೆಣಗಳಿಂದ ತುಂಬಿಸಿರಿ. ಈಗ ಹೊರಡಿ.” ಅವರು ಹೊರಟುಹೋಗಿ ನಗರದ ಜನರನ್ನು ಕೊಂದರು.


ನಾನು ನಿಮಗೆ ಕರುಣೆ ತೋರಿಸೆನು. ನಿಮಗಾಗಿ ನಾನು ದುಃಖಿಸುವದಿಲ್ಲ. ನೀವು ಮಾಡಿದ ದುಷ್ಕೃತ್ಯಗಳಿಗಾಗಿ ನಾನು ನಿಮ್ಮನ್ನು ಶಿಕ್ಷಿಸುವೆನು. ಅಂಥಾ ಭಯಂಕರವಾದ ಕೃತ್ಯಗಳನ್ನು ನೀವು ಮಾಡಿದ್ದೀರಿ. ನಿಮ್ಮನ್ನು ದಂಡಿಸಿದಾತನು ಯೆಹೋವನಾದ ನಾನೇ ಎಂಬುದು ಆಗ ನಿಮಗೆ ತಿಳಿಯುವುದು.


ನಿನಗೆ ನಾನು ಇನ್ನು ಕರುಣೆಯನ್ನು ತೋರಿಸೆನು. ನಿನ್ನ ವಿಷಯದಲ್ಲಿ ನಾನು ದುಃಖಿಸುವದಿಲ್ಲ. ನೀನು ಮಾಡಿದ ಕೆಟ್ಟಕಾರ್ಯಗಳಿಗಾಗಿ ನಿನ್ನನ್ನು ಶಿಕ್ಷಿಸುವೆನು. ನೀನು ಅಂಥಾ ಭಯಂಕರ ಕೃತ್ಯಗಳನ್ನು ಮಾಡಿದ್ದೀ. ಈಗ ನಾನೇ ಯೆಹೋವನೆಂದು ನೀನು ತಿಳಿಯುವಿ.”


ಆಗಲೇ ನಾನು ಯೆಹೋವನೆಂದು ನೀವು ಅರಿಯುವಿರಿ. ಅವರ ದೇಶದಲ್ಲಿರುವವರ ಹೆಣಗಳು ಅವರ ಹೊಲಸು ವಿಗ್ರಹಗಳ ಸುತ್ತಲೂ ಯಜ್ಞವೇದಿಗಳ ಸುತ್ತಲೂ ಎತ್ತರವಾದ ಸ್ಥಳಗಳ ಮೇಲೆಯೂ ಬೆಟ್ಟಗಳಲ್ಲಿಯೂ ಮತ್ತು ಪ್ರತಿಯೊಂದು ಹಸಿರು ಮರದ ಕೆಳಗೂ ಬೀಳುವಾಗ ನಾನೇ ಯೆಹೋವನೆಂದು ಅವರು ತಿಳಿದುಕೊಳ್ಳುವರು. ಅವರು ಈ ಎಲ್ಲಾ ಸ್ಥಳಗಳಲ್ಲಿ ತಮ್ಮ ಎಲ್ಲಾ ಹೊಲಸು ವಿಗ್ರಹಗಳಿಗೆ ಪರಿಮಳಭರಿತವಾದ ಯಜ್ಞಗಳನ್ನು ಅರ್ಪಿಸಿದರು.


ಬರಗಾಲದ ನಿಮಿತ್ತ ಸತ್ತವರಿಗಿಂತಲೂ ಖಡ್ಗಗಳಿಂದ ಹತರಾದವರ ಸಾವೇ ಮೇಲಾಗಿತ್ತು. ಹಸಿವೆಯಿಂದಿದ್ದ ಜನರು ನೋವಿನಿಂದ ನರಳಾಡಿದರು. ಭೂಮಿಯಿಂದ ಆಹಾರವನ್ನು ಪಡೆಯಲಾಗದೆ ಅವರು ಸತ್ತುಹೋದರು.


ಆ ಜನರ ಮೃತ ಶರೀರಗಳು ದೇಶದ ಒಂದು ಕೊನೆಯಿಂದ ಇನ್ನೊಂದು ಕೊನೆಯವರೆಗೆ ಬಿದ್ದಿರುವವು. ಆ ಸತ್ತಜನರಿಗಾಗಿ ಯಾರೂ ಅಳುವದಿಲ್ಲ. ಯಾರೂ ಅವರ ಶವಗಳನ್ನು ಒಟ್ಟುಗೂಡಿಸಿ ಹೂಳುವದಿಲ್ಲ. ಅವುಗಳು ಭೂಮಿಯ ಮೇಲೆ ಗೊಬ್ಬರದಂತೆ ಬಿದ್ದಿರುವವು.


ಆದ್ದರಿಂದ ಈಗ ಅವರ ಮಕ್ಕಳು ಕ್ಷಾಮಪೀಡಿತರಾಗಿ ಉಪವಾಸಬೀಳುವಂತೆ ಮಾಡು. ಅವರ ಶತ್ರುಗಳು ಅವರನ್ನು ಖಡ್ಗದಿಂದ ಸೋಲಿಸುವಂತೆ ಮಾಡು. ಅವರ ಹೆಂಡತಿಯರು ಮಕ್ಕಳನ್ನು ಕಳೆದುಕೊಳ್ಳಲಿ ಮತ್ತು ವಿಧವೆಯರಾಗಲಿ. ಅವರ ಯೌವನಸ್ಥರು ಯುದ್ಧದಲ್ಲಿ ಖಡ್ಗದಿಂದ ಹತರಾಗಲಿ.


ನಾನು ನಗರಗಳ ಹೊರಗಡೆ ಹೋದರೆ ಖಡ್ಗಗಳಿಗೆ ಆಹುತಿಯಾಗಿ ಸತ್ತವರು ನನ್ನ ಕಣ್ಣಿಗೆ ಬೀಳುತ್ತಾರೆ. ನಾನು ನಗರಗಳಿಗೆ ಹೋದರೆ ಕ್ಷಾಮದಿಂದ ಬಳಲುವ ಜನರು ನನ್ನ ಕಣ್ಣಿಗೆ ಬೀಳುತ್ತಾರೆ. ಅವರಿಗೆ ತಿನ್ನಲು ಅನ್ನವಿಲ್ಲ. ಯಾಜಕರನ್ನು ಮತ್ತು ಪ್ರವಾದಿಗಳನ್ನು ಪರದೇಶಕ್ಕೆ ತೆಗೆದುಕೊಂಡು ಹೋಗಲಾಗಿದೆ.’”


ನಮ್ಮ ದೇವರಾದ ಯೆಹೋವನೇ, ಅಶ್ಶೂರದ ರಾಜನಿಂದ ನಮ್ಮನ್ನು ರಕ್ಷಿಸು. ಭೂಲೋಕದ ರಾಜ್ಯಗಳೆಲ್ಲ ನೀನೊಬ್ಬನೇ ದೇವರಾದ ಯೆಹೋವನೆಂದು ತಿಳಿದುಕೊಳ್ಳುವಂತೆ ನಮ್ಮನ್ನು ಇವನ ಕೈಯಿಂದ ಬಿಡಿಸು” ಎಂದು ಪ್ರಾರ್ಥಿಸಿದನು.


ಆಗ ನಾನೇ ಯೆಹೋವನೆಂದು ಈಜಿಪ್ಟಿಗೆ ತಿಳಿಯುವುದು. ನಾನು ಫರೋಹನನ್ನೂ ಅವನ ರಾಹುತರನ್ನೂ ರಥಗಳನ್ನೂ ಸೋಲಿಸಿದಾಗ ಅವರು ನನ್ನನ್ನು ಸನ್ಮಾನಿಸುವರು” ಎಂದು ಹೇಳಿದನು.


ನಾನು ಫರೋಹನ ಹೃದಯವನ್ನು ಕಠಿಣಪಡಿಸುವುದರಿಂದ ಅವನು ನಿಮ್ಮನ್ನು ಬೆನ್ನಟ್ಟುವನು. ಆದರೆ ನಾನು ಫರೋಹನನ್ನು ಮತ್ತು ಅವನ ಸೈನ್ಯವನ್ನು ಸೋಲಿಸುವೆನು. ಇದು ನನಗೆ ಗೌರವವನ್ನು ತರುವುದು. ಆಗ ನಾನೇ ಯೆಹೋವನೆಂದು ಈಜಿಪ್ಟಿನ ಜನರು ತಿಳಿದುಕೊಳ್ಳುವರು” ಎಂದು ಹೇಳಿದನು. ಇಸ್ರೇಲರು ದೇವರಿಗೆ ವಿಧೇಯರಾಗಿ ಆತನು ಹೇಳಿದ್ದನ್ನು ಮಾಡಿದರು.


ನಾನು ಈಜಿಪ್ಟಿನ ವಿರುದ್ಧವಾಗಿ ನನ್ನ ಕೈಯನ್ನು ಚಾಚಿ ನನ್ನ ಜನರನ್ನು ಅವರ ದೇಶದಿಂದ ಬಿಡುಗಡೆ ಮಾಡಿದಾಗ, ನಾನೇ ಯೆಹೋವನೆಂದು ಅವರು ತಿಳಿದುಕೊಳ್ಳುವರು.”


ನಿಮ್ಮ ಜನರು ವಾಸಮಾಡುವಲ್ಲೆಲ್ಲಾ ಕೆಟ್ಟಸಂಗತಿಗಳು ನಡೆಯುವವು; ಪಟ್ಟಣಗಳು ಕಲ್ಲಿನ ರಾಶಿಗಳಾಗುವವು; ಪೂಜಾಸ್ಥಳಗಳು ನಾಶಮಾಡಲ್ಪಡುವವು. ನಿಮ್ಮ ಯಜ್ಞವೇದಿಕೆಗಳು ಕೆಡವಲ್ಪಟ್ಟು ಹಾಳಾಗಿಹೋಗುವವು; ನಿಮ್ಮ ವಿಗ್ರಹಗಳು ಮುರಿಯಲ್ಪಟ್ಟು ನಾಶವಾಗುವವು. ಜನರು ಅವುಗಳನ್ನು ಇನ್ನು ಎಂದಿಗೂ ಪೂಜಿಸರು. ನಿಮ್ಮ ಧೂಪವೇದಿಕೆಗಳು ಕತ್ತರಿಸಲ್ಪಡುವವು. ನೀವು ಮಾಡಿಕೊಂಡ ವಿಗ್ರಹಗಳು ಅಳಿದುಹೋಗುವವು.


ದೇವರು ಹೇಳಿದ್ದೇನೆಂದರೆ: “ಆದರೆ ನಾನು ನಿಮ್ಮ ಜನರಲ್ಲಿ ಕೆಲವರನ್ನು ಉಳಿದುಕೊಳ್ಳುವಂತೆ ಮಾಡುವೆನು. ನೀವು ಬೇರೆ ದೇಶಗಳಲ್ಲಿ ಚದರಿಹೋಗಿರುವಾಗ ಜನಾಂಗಗಳ ಮಧ್ಯದಲ್ಲಿ ನಿಮ್ಮಲ್ಲಿ ಕೆಲವರು ಕೊಲ್ಲಲ್ಪಡುವುದಿಲ್ಲ.


ಇದನ್ನು ನೀನು ಸಾಮಾನ್ಯ ಜನರಿಗೆ ತಿಳಿಸಬೇಕು. ನೀನು ಹೀಗೆ ಹೇಳಬೇಕು, ‘ಇನ್ನೂ ಇಸ್ರೇಲ್ ದೇಶದಲ್ಲಿರುವ ಜೆರುಸಲೇಮಿನ ನಿವಾಸಿಗಳ ಬಗ್ಗೆ ನಮ್ಮ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ಅವರು ಊಟಮಾಡುವಾಗ ಉದ್ವೇಗದಿಂದಿರುವರು; ಅವರು ಕುಡಿಯುವಾಗ ಭಯದಿಂದಿರುವರು. ಯಾಕೆಂದರೆ ಅವರ ದೇಶದಲ್ಲಿರುವ ಸಮಸ್ತವು ನಾಶವಾಗುತ್ತದೆ, ಯಾಕೆಂದರೆ ಅಲ್ಲಿ ವಾಸಿಸುವವರೆಲ್ಲರೂ ಹಿಂಸಕರಾಗಿದ್ದಾರೆ.


ಅವರು ತಮ್ಮ ಕಾಣಿಕೆಗಳಿಂದ ತಮ್ಮನ್ನೆ ಹೊಲಸು ಮಾಡಿಕೊಳ್ಳಲು ಅವರನ್ನು ಬಿಟ್ಟುಕೊಟ್ಟೆನು. ಅವರು ತಮ್ಮ ವಿಗ್ರಹಗಳಿಗೆ ತಮ್ಮ ಸ್ವಂತ ಚೊಚ್ಚಲು ಗಂಡುಮಕ್ಕಳನ್ನು ಆಹುತಿಕೊಡಲು ಪ್ರಾರಂಭಿಸಿದರು. ಈ ರೀತಿಯಾಗಿ ನಾನು ಆ ಜನರನ್ನು ನಾಶಮಾಡುವೆನು. ಆಗ ಅವರು ನಾನು ಒಡೆಯನಾದ ಯೆಹೋವನೆಂದು ತಿಳಿದುಕೊಳ್ಳುವರು.’


ಜೆರುಸಲೇಮೇ, ನಿನಗೆ ಸಂಭವಿಸುವ ಸಂಗತಿಗಳಿಂದ ಜನಾಂಗಗಳ ಮುಂದೆ ನಿನ್ನ ಕೀರ್ತಿಯು ಹಾಳಾಗುವುದು. ಆಗ ನಾನು ಯೆಹೋವನೆಂದು ನೀನು ತಿಳಿದುಕೊಳ್ಳುವೆ.’”


“ಈಜಿಪ್ಟ್ ದೇಶವನ್ನು ನಾನು ಬರಿದುಮಾಡುವೆನು. ಆ ದೇಶವು ಎಲ್ಲವನ್ನು ಕಳೆದುಕೊಳ್ಳುವದು. ಈಜಿಪ್ಟಿನಲ್ಲಿ ವಾಸಿಸುವ ಎಲ್ಲಾ ಜನರನ್ನು ನಾನು ಶಿಕ್ಷಿಸುವೆನು. ಆಗ ನಾನು ಒಡೆಯನಾದ ಯೆಹೋವನು ಎಂದು ತಿಳುಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು