Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 7:10 - ಪರಿಶುದ್ದ ಬೈಬಲ್‌

10 “ಆ ಶಿಕ್ಷೆಯ ಸಮಯವು ಬಂದಿದೆ. ಆಪತ್ತು ಬರುತ್ತಿದೆ. ಹಿಂಸೆಯು ಅರಳಿದೆ. ದುರಹಂಕಾರವು ಮೊಗ್ಗು ಬಿಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 “ಆಹಾ, ದಂಡನೆಯ ದಿನವು, ಇಗೋ ಬಂತು! ನಿನಗೆ ದುರ್ಗತಿಯು ಅಂಕುರಿಸಿದೆ, ಕೋಲು ಹೂಬಿಟ್ಟಿದೆ, ಹೆಮ್ಮೆಯು ಚಿಗುರಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 “ಇಗೋ, ದಂಡನೆಯ ದಿನ ಬಂದೆಬಿಟ್ಟಿತು; ನಿನಗೆ ದುರ್ಗತಿ ಅಂಕುರಿಸಿದೆ, ಕೋಲು ಹೂಬಿಟ್ಟಿದೆ, ಹೆಮ್ಮೆ ಚಿಗುರಿದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆಹಾ, [ದಂಡನೆಯ] ದಿನವು, ಇಗೋ ಬಂತು! ನಿನಗೆ ದುರ್ಗತಿಯು ಅಂಕುರಿಸಿದೆ, ಕೋಲು ಹೂಬಿಟ್ಟಿದೆ, ಹೆಮ್ಮೆಯು ಚಿಗುರಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ ‘ಇಗೋ ಆ ದಿನವು ಬಂತು, ನೋಡು ವಿನಾಶದ ದಿನ ಹೊರಟುಹೋಯಿತು, ಕೋಲು ಚಿಗುರಿತು, ಅಹಂಕಾರವು ಅರಳಿತು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 7:10
19 ತಿಳಿವುಗಳ ಹೋಲಿಕೆ  

ದೇವರು ಹೀಗೆ ಹೇಳುವನು: “ನಾನು ಕೋಪಗೊಂಡಾಗ ಬೆತ್ತವನ್ನು ಹೇಗೆ ಉಪಯೋಗಿಸುವೆನೋ ಹಾಗೆಯೇ ಇಸ್ರೇಲನ್ನು ಶಿಕ್ಷಿಸಲು ಅಶ್ಶೂರವನ್ನು ಉಪಯೋಗಿಸುವೆನು.


ಆದರೆ ದೇವರು ದಯಪಾಲಿಸಿದ ಕೃಪೆಯು ಅದಕ್ಕಿಂತಲೂ ಹೆಚ್ಚಿನದು. ಪವಿತ್ರ ಗ್ರಂಥವು ಹೇಳುವಂತೆ, “ದೇವರು ಅಹಂಕಾರಿಗಳಿಗೆ ವಿರುದ್ಧವಾಗಿರುತ್ತಾನೆ, ದೀನರಿಗಾದರೆ ಕೃಪೆಯನ್ನು ದಯಪಾಲಿಸುತ್ತಾನೆ.”


“ನಮಗೆ ಶಾಂತಿಯಿದೆ. ನಾವು ಸುರಕ್ಷಿತರಾಗಿದ್ದೇವೆ” ಎಂದು ಜನರು ಹೇಳುವಾಗಲೇ ಅವರಿಗೆ ವಿನಾಶವು ಗರ್ಭಿಣಿಗೆ ಪ್ರಸವವೇದನೆ ಉಂಟಾಗುವಂತೆ ಬರುತ್ತದೆ. ಆ ಜನರು ತಪ್ಪಿಸಿಕೊಳ್ಳಲಾಗುವುದಿಲ್ಲ.


ಮೂಢನ ಮಾತುಗಳು ಅವನಿಗೇ ತೊಂದರೆಯನ್ನು ಉಂಟುಮಾಡುತ್ತವೆ. ಜ್ಞಾನಿಯ ಮಾತುಗಳಾದರೋ ಅವನನ್ನು ಕಾಪಾಡುತ್ತವೆ.


ಮರುದಿನ ಮೋಶೆ ಗುಡಾರದೊಳಗೆ ಹೋಗಿ ನೋಡಲಾಗಿ ಲೇವಿಕುಲದ ಆರೋನನ ಕೋಲು ಚಿಗುರಿ ಮೊಗ್ಗುಬಿಟ್ಟು ಹೂವರಳಿ ಬಾದಾಮಿ ಹಣ್ಣುಗಳನ್ನು ಫಲಿಸಿತ್ತು.


ಅರಸ ನೆಬೂಕದ್ನೆಚ್ಚರನಾದ ನಾನು ಈಗ ಪರಲೋಕದ ರಾಜನನ್ನು ಘನಪಡಿಸುತ್ತೇನೆ, ಮಹಿಮೆಪಡಿಸುತ್ತೇನೆ. ಆತನು ಮಾಡುವದೆಲ್ಲ ಸರಿ. ಆತನು ಯಾವಾಗಲೂ ನ್ಯಾಯವಂತನಾಗಿದ್ದಾನೆ. ಆತನು ಗರ್ವಿಷ್ಠರನ್ನು ದೀನರನ್ನಾಗಿ ಮಾಡಬಲ್ಲನು.


ಯಾಕೆಂದರೆ ಶೋಧನೆಯು ಸಂಭವಿಸಿತು. ಆದರೆ ನೀನು ಬೆತ್ತದ ಶಿಕ್ಷೆ ಅನುಭವಿಸಲು ನಿರಾಕರಿಸಿದಿ. ಹಾಗಾದರೆ ನಾನು ನಿನಗೆ ಏನು ಉಪಯೋಗಿಸಬೇಕು? ಹೌದು, ಖಡ್ಗವೇ?’” ನನ್ನ ಒಡೆಯನಾದ ಯೆಹೋವನು ನುಡಿದಿದ್ದಾನೆ.


ಕೊಲ್ಲುವದಕ್ಕಾಗಿ ಆ ಖಡ್ಗವು ಹರಿತಮಾಡಲ್ಪಟ್ಟಿದೆ, ಮಿಂಚಿನಂತೆ ಹೊಳೆಯುತ್ತಿದೆ. ನನ್ನ ಮಗನೇ, ನಾನು ನಿನ್ನನ್ನು ಶಿಕ್ಷಿಸುತ್ತಿದ್ದ ಬೆತ್ತದಿಂದ ನೀನು ಓಡಿಹೋದೆ. ಬೆತ್ತದ ಶಿಕ್ಷೆಯನ್ನು ಅನುಭವಿಸಲು ನೀನು ಒಪ್ಪಲಿಲ್ಲ.


ಅದರ ಸ್ವಂತ ಕಾಂಡದಿಂದಲೇ ಬೆಂಕಿಯು ಹೊರಟುಬಂದು ಅದರ ಚಿಕ್ಕ ಕೊಂಬೆಗಳನ್ನು ಮತ್ತು ಫಲಗಳನ್ನು ನಾಶಮಾಡಿತು. ಈಗ ಬಲವಾದ ಕಾಂಡ ಅದರಲ್ಲಿಲ್ಲ. ಆಳುವದಕ್ಕೆ ರಾಜದಂಡವೂ ಅದರಲ್ಲಿಲ್ಲ.’ ಇದು ಮರಣದ ಶೋಕಗೀತೆ. ಇದನ್ನು ಶೋಕಗೀತೆಯನ್ನಾಗಿಯೇ ಬಳಸಲಾಗುತ್ತಿದೆ.”


ಅಂತ್ಯವು ಬರುವುದು. ಅದು ಬೇಗನೆ ಬರುವದು.


ಸಮಾರ್ಯದ ಕಡೆಗೆ ನೋಡು! ಎಫ್ರಾಯೀಮಿನ ಮತ್ತರಾದ ಜನರು ಆ ಪಟ್ಟಣದ ಬಗ್ಗೆ ಬಹಳ ಅಭಿಮಾನಪಡುತ್ತಿದ್ದಾರೆ. ಆ ನಗರವು ಪರ್ವತದ ಮೇಲಿರುವುದು; ಅದರ ಸುತ್ತಲೂ ಫಲವತ್ತಾದ ಕಣಿವೆ ಇರುವುದು. ಸಮಾರ್ಯದ ಜನರು ತಮ್ಮ ನಗರವು ಸುಂದರವಾದ ಕಿರೀಟವೆಂದು ನೆನಸುತ್ತಾರೆ. ಆದರೆ ಅವರು ಕುಡಿದು ಮತ್ತರಾಗಿದ್ದಾರೆ. ಅವರ “ಸುಂದರ ಕಿರೀಟವು” ಒಣಗಿದ ತರಗೆಲೆಯಾಗಿದೆ.


ಅಹಂಕಾರಿಯು ನಾಶನದ ಅಪಾಯದಲ್ಲಿದ್ದಾನೆ. ದುರಾಭಿಮಾನಿಯು ಸೋಲಿನ ಅಪಾಯದಲ್ಲಿದ್ದಾನೆ.


ನಾನು ಅವರನ್ನು ಅವರ ದ್ರೋಹಕ್ಕಾಗಿ ಬಹು ಕಠಿಣವಾಗಿ ಶಿಕ್ಷಿಸುವೆನು. ಅವರ ಅಪರಾಧಕ್ಕಾಗಿ ಬೆತ್ತದಿಂದ ಹೊಡೆಯುವೆನು.


ನಾನು ನಿಮಗೆ ಕರುಣೆ ತೋರಿಸೆನು. ನಿಮಗಾಗಿ ನಾನು ದುಃಖಿಸುವದಿಲ್ಲ. ನೀವು ಮಾಡಿದ ದುಷ್ಕೃತ್ಯಗಳಿಗಾಗಿ ನಾನು ನಿಮ್ಮನ್ನು ಶಿಕ್ಷಿಸುವೆನು. ಅಂಥಾ ಭಯಂಕರವಾದ ಕೃತ್ಯಗಳನ್ನು ನೀವು ಮಾಡಿದ್ದೀರಿ. ನಿಮ್ಮನ್ನು ದಂಡಿಸಿದಾತನು ಯೆಹೋವನಾದ ನಾನೇ ಎಂಬುದು ಆಗ ನಿಮಗೆ ತಿಳಿಯುವುದು.


“ಆ ಶಿಕ್ಷೆಯ ಸಮಯವು ಬಂತು. ಆ ದಿವಸವು ಇಲ್ಲಿಯೇ ಇದೆ. ವಸ್ತುಗಳನ್ನು ಕೊಂಡುಕೊಳ್ಳುವ ಜನರು ಸಂತೋಷಪಡಕೂಡದು. ವಸ್ತುಗಳನ್ನು ಮಾರುವವರು ಮಾರುವದಕ್ಕೆ ದುಃಖಿಸಕೂಡದು. ಯಾಕೆಂದರೆ ಆ ಭಯಂಕರ ಶಿಕ್ಷೆಯು ಎಲ್ಲರಿಗೂ ಉಂಟಾಗುವುದು.


ಅದಕ್ಕೆ ಕಾವಲುಗಾರ, “ಮುಂಜಾನೆ ಬರುತ್ತಿದೆ. ಆದರೆ ರಾತ್ರಿ ತಿರುಗಿ ಬರುತ್ತಿದೆ. ನೀನೇನಾದರೋ ಕೇಳಬೇಕಿದ್ದರೆ ಮತ್ತೆ ಬಂದು ವಿಚಾರಿಸು” ಎಂದು ಉತ್ತರಿಸಿದನು.


“ಆ ಜನರಿಗೆ ಹೀಗೆ ಹೇಳು: ಅವರ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ನಾನು ಈ ಗಾದೆಗೆ ಅಂತ್ಯವನ್ನು ಬರಮಾಡುವೆನು. ಇಸ್ರೇಲಿನಲ್ಲಿ ಆ ಗಾದೆಯನ್ನು ಅವರು ಇನ್ನೆಂದಿಗೂ ಬಳಸುವುದಿಲ್ಲ. ಅದರ ಬದಲಾಗಿ ಅವರಿಗೆ ಹೀಗೆ ಹೇಳು: ‘ಸಂಕಷ್ಟದ ದಿನಗಳು ಸಮೀಪಿಸಿವೆ; ಪ್ರತಿಯೊಂದು ದರ್ಶನವೂ ನೆರವೇರುವುದು.’


ಆ ದಿನವು ಹತ್ತಿರ ಬಂತು! ಹೌದು, ದೇವರು ನ್ಯಾಯತೀರಿಸುವ ದಿನ ಹತ್ತಿರ ಬಂತು. ಅದು ಮೋಡ ಕವಿದ ದಿನವಾಗಿರುವುದು. ಅದು ಜನಾಂಗಗಳಿಗೆ ನ್ಯಾಯತೀರಿಸುವ ಸಮಯ.


ಶೋಕಿಸಿರಿ. ಯಾಕೆಂದರೆ ಯೆಹೋವನ ಮಹಾದಿನವು ಹತ್ತಿರ ಬಂತು. ಆ ಸಮಯದಲ್ಲಿ ಸರ್ವಶಕ್ತನಾದ ದೇವರ ಸನ್ನಿಧಾನದಿಂದ ದಂಡನೆಯು ಬರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು