Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 7:12 - ಪರಿಶುದ್ದ ಬೈಬಲ್‌

12 “ಆ ಶಿಕ್ಷೆಯ ಸಮಯವು ಬಂತು. ಆ ದಿವಸವು ಇಲ್ಲಿಯೇ ಇದೆ. ವಸ್ತುಗಳನ್ನು ಕೊಂಡುಕೊಳ್ಳುವ ಜನರು ಸಂತೋಷಪಡಕೂಡದು. ವಸ್ತುಗಳನ್ನು ಮಾರುವವರು ಮಾರುವದಕ್ಕೆ ದುಃಖಿಸಕೂಡದು. ಯಾಕೆಂದರೆ ಆ ಭಯಂಕರ ಶಿಕ್ಷೆಯು ಎಲ್ಲರಿಗೂ ಉಂಟಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಸಮಯ ಬಂದಿದೆ, ದಿನ ಸಮೀಪಿಸಿತು; ಕೊಂಡುಕೊಳ್ಳುವವನು ಹರ್ಷಿಸದಿರಲಿ, ಮಾರುವವನು ದುಃಖಿಸದಿರಲಿ; ರೋಷಾಗ್ನಿಯು ಆ ಸಮೂಹದವರೆಲ್ಲರ ಮೇಲೆ ಹತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 “ಸಮಯ ಬಂದಿದೆ, ದಿನ ಹತ್ತಿರವಾಗಿದೆ; ಕೊಂಡುಕೊಳ್ಳುವವನು ಹರ್ಷಿಸದಿರಲಿ, ಮಾರುವವನು ದುಃಖಿಸದಿರಲಿ; ರೋಷಾಗ್ನಿ ಆ ಸಮೂಹದವರೆಲ್ಲರ ಮೇಲೆ ಹತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಸಮಯ ಬಂತು, ದಿನ ಹತ್ತರಿಸಿತು; ಕೊಂಡುಕೊಳ್ಳುವವನು ಹರ್ಷಿಸದಿರಲಿ, ಮಾರುವವನು ದುಃಖಿಸದಿರಲಿ; ರೋಷಾಗ್ನಿಯು ಆ ಸಮೂಹದವರೆಲ್ಲರ ಮೇಲೆ ಹತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಸಮಯವು ಬಂತು, ದಿನವು ಬಂದೇಬಿಟ್ಟಿತು. ಕೊಂಡುಕೊಳ್ಳುವವನಿಗೆ ಸಂತೋಷವಿಲ್ಲದಿರಲಿ, ಮಾರುವವನು ದುಃಖಿಸದಿರಲಿ. ಏಕೆಂದರೆ ಆ ಎಲ್ಲಾ ಜನಸಮೂಹದ ಮೇಲೆ ನನ್ನ ರೌದ್ರವಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 7:12
17 ತಿಳಿವುಗಳ ಹೋಲಿಕೆ  

“ಆ ಶಿಕ್ಷೆಯ ಸಮಯವು ಬಂದಿದೆ. ಆಪತ್ತು ಬರುತ್ತಿದೆ. ಹಿಂಸೆಯು ಅರಳಿದೆ. ದುರಹಂಕಾರವು ಮೊಗ್ಗು ಬಿಟ್ಟಿದೆ.


ನಿನ್ನ ವಸ್ತುವನ್ನು ಖರೀದಿಮಾಡುವವನು, “ಇದು ಚೆನ್ನಾಗಿಲ್ಲ! ಬೆಲೆಯೂ ಜಾಸ್ತಿ!” ಎಂದು ಹೇಳುವನು. ಬಳಿಕ ತನ್ನ ಚೌಕಾಸಿಯ ಬಗ್ಗೆ ಬೇರೆಯವರ ಮುಂದೆ ಹೊಗಳಿಕೊಳ್ಳುವನು.


ಯೆಹೋವನ ನ್ಯಾಯತೀರ್ಪಿನ ದಿನವು ಬೇಗನೇ ಬರುತ್ತದೆ; ಅತ್ಯಂತ ವೇಗವಾಗಿ ಬರುತ್ತಿದೆ. ಆ ದಿನದಂದು ಜನರು ಬಹಳವಾಗಿ ದುಃಖಿಸುವರು. ಧೈರ್ಯಶಾಲಿಗಳಾದ ಸೈನಿಕರೂ ಅಳುವರು.


ಅದಕ್ಕೆ ಕಾವಲುಗಾರ, “ಮುಂಜಾನೆ ಬರುತ್ತಿದೆ. ಆದರೆ ರಾತ್ರಿ ತಿರುಗಿ ಬರುತ್ತಿದೆ. ನೀನೇನಾದರೋ ಕೇಳಬೇಕಿದ್ದರೆ ಮತ್ತೆ ಬಂದು ವಿಚಾರಿಸು” ಎಂದು ಉತ್ತರಿಸಿದನು.


ಯೆಹೋವನು ಹೀಗೆಂದನು: “ನಾನು ಈ ಸ್ಥಳಕ್ಕೆ ವಿರೋಧವಾಗಿ ನನ್ನ ಕೋಪವನ್ನು ತೋರಿಸುವೆನು. ನಾನು ಜನರನ್ನೂ ಪ್ರಾಣಿಗಳನ್ನೂ ದಂಡಿಸುವೆನು. ಕಾಡಿನ ಮರಗಳನ್ನೂ ಹೊಲದ ಬೆಳೆಗಳನ್ನೂ ದಂಡಿಸುವೆನು. ನನ್ನ ಕೋಪವು ಉರಿಯುವ ಬೆಂಕಿಯಂತಿರುವದು; ಅದನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ.”


“ಆ ಜನರಿಗೆ ಹೀಗೆ ಹೇಳು: ಅವರ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ನಾನು ಈ ಗಾದೆಗೆ ಅಂತ್ಯವನ್ನು ಬರಮಾಡುವೆನು. ಇಸ್ರೇಲಿನಲ್ಲಿ ಆ ಗಾದೆಯನ್ನು ಅವರು ಇನ್ನೆಂದಿಗೂ ಬಳಸುವುದಿಲ್ಲ. ಅದರ ಬದಲಾಗಿ ಅವರಿಗೆ ಹೀಗೆ ಹೇಳು: ‘ಸಂಕಷ್ಟದ ದಿನಗಳು ಸಮೀಪಿಸಿವೆ; ಪ್ರತಿಯೊಂದು ದರ್ಶನವೂ ನೆರವೇರುವುದು.’


ಆ ದಿನವು ಹತ್ತಿರ ಬಂತು! ಹೌದು, ದೇವರು ನ್ಯಾಯತೀರಿಸುವ ದಿನ ಹತ್ತಿರ ಬಂತು. ಅದು ಮೋಡ ಕವಿದ ದಿನವಾಗಿರುವುದು. ಅದು ಜನಾಂಗಗಳಿಗೆ ನ್ಯಾಯತೀರಿಸುವ ಸಮಯ.


ಶೋಕಿಸಿರಿ. ಯಾಕೆಂದರೆ ಯೆಹೋವನ ಮಹಾದಿನವು ಹತ್ತಿರ ಬಂತು. ಆ ಸಮಯದಲ್ಲಿ ಸರ್ವಶಕ್ತನಾದ ದೇವರ ಸನ್ನಿಧಾನದಿಂದ ದಂಡನೆಯು ಬರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು