Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 7:13 - ಪರಿಶುದ್ದ ಬೈಬಲ್‌

13 ತಮ್ಮ ಆಸ್ತಿಗಳನ್ನು ಮಾರಿದ ಜನರು ಅಲ್ಲಿಗೆ ತಿರುಗಿ ಹೋಗುವುದಿಲ್ಲ. ಒಬ್ಬನು ಜೀವಂತವಾಗಿ ತಪ್ಪಿಸಿಕೊಂಡರೂ ತನ್ನ ಆಸ್ತಿಗೆ ಹೋಗುವುದಿಲ್ಲ. ಯಾಕೆಂದರೆ ಈ ದರ್ಶನವು ಎಲ್ಲಾ ಜನಸಮೂಹಕ್ಕಾಗಿದೆ. ಇದು ಬದಲಾಗುವುದಿಲ್ಲ; ಅವರ ಪಾಪಗಳ ದೆಸೆಯಿಂದ ಅವರಲ್ಲಿ ಒಬ್ಬನಾದರೂ ತನ್ನ ಪ್ರಾಣವನ್ನು ಕಾಪಾಡಿಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಮಾರಿದವನು ಎಷ್ಟು ವರ್ಷ ಬದುಕಿದರೂ ಮಾರಿದ ಸೊತ್ತು ಅವನ ವಶಕ್ಕೆ ತಿರುಗಿಬಾರದು; ಉಂಟಾದ ದಿವ್ಯದರ್ಶನವು ಸಮೂಹದವರಿಗೆಲ್ಲಾ ಸಂಬಂಧಿಸಿದೆ, ಯಾರೂ ಹಿಂದಿರುಗುವುದಿಲ್ಲ. ಯಾರೂ ತಮ್ಮ ಅಧರ್ಮದಿಂದ ತಮ್ಮ ಜೀವವನ್ನು ಉಳಿಸಿಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಮಾರಿದವನು ಎಷ್ಟು ವರ್ಷ ಬದುಕಿದರೂ ಮಾರಿದ ಸೊತ್ತು ಅವನ ವಶಕ್ಕೆ ತಿರುಗಿಬಾರದು; ಉಂಟಾದ ದಿವ್ಯದರ್ಶನ ಸಮಾಜದವರಿಗೆಲ್ಲಾ ಸಂಬಂಧಿಸಿದೆ, ಯಾರೂ ಹಿಂದಿರುಗರು, ಯಾರೂ ತಮ್ಮ ಅಧರ್ಮದಿಂದ ತಮ್ಮ ಜೀವವನ್ನು ಉಳಿಸಿಕೊಳ್ಳರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಮಾರಿದವನು ಎಷ್ಟು ವರುಷ ಬದುಕಿದರೂ ಮಾರಿದ ಸೊತ್ತು ಅವನ ವಶಕ್ಕೆ ತಿರುಗಿಬಾರದು; ಉಂಟಾದ ದಿವ್ಯದರ್ಶನವು ಸಮೂಹದವರಿಗೆಲ್ಲಾ ಸಂಬಂಧಿಸಿದೆ, ಯಾರೂ ಹಿಂದಿರುಗರು, ಯಾರೂ ತಮ್ಮ ಅಧರ್ಮದಿಂದ ತಮ್ಮ ಜೀವವನ್ನು ಉಳಿಸಿಕೊಳ್ಳರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಮಾರಿದವನು ಎಷ್ಟು ವರ್ಷ ಬದುಕಿದರೂ, ಮಾರಿದ ಸೊತ್ತು ಅವನ ವಶಕ್ಕೆ ತಿರುಗಿ ಬಾರದು. ಉಂಟಾದ ದಿವ್ಯದರ್ಶನ ಸಮಾಜದವರಿಗೆಲ್ಲಾ ಸಂಬಂಧಿಸಿದೆ, ಎಂದಿಗೂ ತಿರುಗದು, ಯಾರೂ ತಮ್ಮ ಪಾಪಗಳಿಂದ ತಮ್ಮ ಜೀವವನ್ನು ಉಳಿಸಿಕೊಳ್ಳರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 7:13
11 ತಿಳಿವುಗಳ ಹೋಲಿಕೆ  

“‘ಪ್ರವಾದಿನಿಯರೇ, ನೀವು ಸುಳ್ಳುಗಾರ್ತಿಯರಾಗಿದ್ದೀರಿ. ನಿಮ್ಮ ಸುಳ್ಳುಗಳು ಒಳ್ಳೆಯವರಿಗೆ ದುಃಖವನ್ನು ಬರಮಾಡುವವು. ಒಳ್ಳೆಯ ವ್ಯಕ್ತಿಗಳಿಗೆ ನೋವು ಮಾಡಲು ನನಗೆ ಮನಸ್ಸಿಲ್ಲ. ದುಷ್ಟ ಜನರು ತಮ್ಮ ದುರ್ಮಾರ್ಗಗಳನ್ನು ತೊರೆದುಬಿಡದಂತೆಯೂ ತಮ್ಮ ಪ್ರಾಣಗಳನ್ನು ರಕ್ಷಿಸಿಕೊಳ್ಳದಂತೆಯೂ ನೀವು ಪ್ರೋತ್ಸಾಹಿಸುತ್ತೀರಿ.


ಯಾರಿಗೂ ತಮ್ಮ ಆತ್ಮವನ್ನು ತಡೆದು ನಿಲ್ಲಿಸಿಕೊಳ್ಳುವ ಶಕ್ತಿ ಇಲ್ಲ. ಯಾರಿಗೂ ತಮ್ಮ ಮರಣವನ್ನು ತಡೆದು ನಿಲ್ಲಿಸುವ ಶಕ್ತಿಯಿಲ್ಲ. ಯುದ್ಧಕಾಲದಲ್ಲಿ ಸೈನಿಕರಿಗೆ ರಜೆ ದೊರೆಯುವುದಿಲ್ಲ. ಅದೇ ರೀತಿಯಲ್ಲಿ, ಪಾಪವು ಪಾಪಿಯನ್ನು ಬಿಟ್ಟುಹೋಗುವುದಿಲ್ಲ.


“ದೇವರ ಮೇಲೆ ಅವಲಂಬಿಸಿಕೊಳ್ಳದ ಇವನಿಗೆ ಏನಾಯಿತು? ತನ್ನ ಐಶ್ವರ್ಯವೂ ಸುಳ್ಳುಗಳೂ ತನ್ನನ್ನು ಕಾಪಾಡುತ್ತವೆ ಎಂದು ಭಾವಿಸಿಕೊಂಡವನು ಇವನೇ.”


ಯಾಕೆಂದರೆ ದುಷ್ಟನು ದೇವರಿಗೆ ವಿರುದ್ಧವಾಗಿ ತನ್ನ ಕೈಯನ್ನು ಝಳಪಿಸುತ್ತಾನೆ. ದುಷ್ಟನು ಸರ್ವಶಕ್ತನಾದ ದೇವರ ವಿರುದ್ಧವಾಗಿ ಮಹಾಶೂರನಂತೆ ಆಕ್ರಮಣ ಮಾಡುವನು.


ಗೋಡೆಗಳಿಲ್ಲದ ಪಟ್ಟಣಗಳನ್ನು ಬಯಲಿನ ಹೊಲಗಳಂತೆ ಪರಿಗಣಿಸಬೇಕು. ಆದ್ದರಿಂದ ಆ ಸಣ್ಣ ಪಟ್ಟಣಗಳಲ್ಲಿ ಕಟ್ಟಿದ ಮನೆಗಳು ಜ್ಯೂಬಿಲಿ ವರ್ಷದಲ್ಲಿ ಅವುಗಳ ಮೊದಲಿನ ಯಜಮಾನನಿಗೆ ಮರುಳಿ ಹೋಗುತ್ತವೆ.


ಈಗ ಇನ್ನೊಂದು ರಾಜಾಜ್ಞೆಯನ್ನು ಬರೆಯಿಸಲು ನಾನು ನಿಮಗೆ ಅಧಿಕಾರ ಕೊಡುತ್ತೇನೆ. ನಿಮಗೆ ಸರಿತೋಚುವ ರೀತಿಯಲ್ಲಿ ಯೆಹೂದ್ಯರಿಗೆ ಸಹಾಯವಾಗುವಂತೆ ಆ ಆಜ್ಞೆಯನ್ನು ರಾಜನ ಅಧಿಕಾರದೊಡನೆ ಬರೆಯಿಸಿ, ರಾಜನ ಉಂಗುರದಿಂದ ಮುದ್ರೆ ಒತ್ತಿರಿ. ರಾಜ ಮುದ್ರೆಯುಳ್ಳ ಯಾವ ಆಜ್ಞೆಯೂ ರದ್ದಾಗಕೂಡದು” ಎಂದನು.


ಜ್ಯೂಬಿಲಿ ವರ್ಷದಲ್ಲಿ ಪ್ರತಿಯೊಬ್ಬನೂ ತನ್ನ ಸ್ವಂತ ಸ್ವಾಸ್ತ್ಯಕ್ಕೆ ಹೋಗುವನು.


ಯಾಕೆಂದರೆ ನಾನೇ ಯೆಹೋವನು. ನನಗೆ ಇಷ್ಟಬಂದದ್ದನ್ನು ನಾನು ಹೇಳುವೆನು ಮತ್ತು ಆ ಸಂಗತಿಯು ನೆರವೇರುವುದು. ಅದಕ್ಕೆ ಹೆಚ್ಚು ಸಮಯಬೇಕಾಗದು. ಆ ಸಂಕಟಗಳು ಬೇಗನೇ ಬರುವವು; ನಿಮ್ಮ ಜೀವಮಾನ ಕಾಲದಲ್ಲಿಯೇ ಬರುವವು. ಓ ದಂಗೆಕೋರರಾದ ಜನರೇ, ನಾನು ಒಂದು ವಿಷಯದಲ್ಲಿ ಏನಾದರೂ ಹೇಳಿದರೆ ಆ ವಿಷಯವು ಸಂಭವಿಸುವಂತೆ ಮಾಡುವೆನು.” ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದನು.


ಆದ್ದರಿಂದ ಅವರಿಗೆ ನೀನು ಈ ವಿಷಯವನ್ನು ತಿಳಿಸು, ‘ನನ್ನ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ: ಏನೆಂದರೆ ನಾನು ಇನ್ನು ಹೆಚ್ಚು ತಡಮಾಡುವುದಿಲ್ಲ. ನಾನೊಂದು ವಿಷಯವು ನೆರವೇರುವುದು ಎಂದು ಹೇಳಿದರೆ ಅದು ಖಂಡಿತ ನೆರವೇರುವುದು.’” ಇವು ನನ್ನ ಒಡೆಯನಾದ ಯೆಹೋವನ ನುಡಿಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು