Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 7:15 - ಪರಿಶುದ್ದ ಬೈಬಲ್‌

15 ಖಡ್ಗಧಾರಿಯಾದ ವೈರಿಯು ಪಟ್ಟಣದ ಹೊರಗಿದ್ದಾನೆ. ರೋಗ ಮತ್ತು ಹಸಿವೆ ಪಟ್ಟಣದೊಳಗಿವೆ. ಒಬ್ಬನು ಹೊರಗೆ ಹೊಲದ ಬಳಿ ಹೋದರೆ ವೈರಿಸೈನಿಕನು ಅವನನ್ನು ಕೊಲ್ಲುವನು. ಪಟ್ಟಣದೊಳಗೇ ಉಳಿದರೆ ರೋಗ ಮತ್ತು ಹಸಿವೆಯು ಅವನನ್ನು ಕೊಲ್ಲುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಊರ ಹೊರಗೆ ಖಡ್ಗ, ಊರೊಳಗೆ ವ್ಯಾಧಿ ಮತ್ತು ಕ್ಷಾಮಗಳು; ಹೊರಗಿರುವವರು ಖಡ್ಗದಿಂದ ಸಾಯುವರು, ಒಳಗಿರುವವರು ವ್ಯಾಧಿ ಕ್ಷಾಮಗಳಿಗೆ ತುತ್ತಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 “ಊರ ಹೊರಗೆ ಖಡ್ಗಕ್ಕೆ, ಊರೊಳಗೆ ವ್ಯಾಧಿ ಕ್ಷಾಮಗಳಿಗೆ ತುತ್ತಾಗುವರು; ಹೊರಗಿರುವವರು ಖಡ್ಗದಿಂದ ಸಾಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಊರ ಹೊರಗೆ ಖಡ್ಗ, ಊರೊಳಗೆ ವ್ಯಾಧಿಕ್ಷಾಮಗಳು; ಹೊರಗಿರುವವರು ಖಡ್ಗದಿಂದ ಸಾಯುವರು, ಒಳಗಿರುವವರು ವ್ಯಾಧಿಕ್ಷಾಮಗಳಿಗೆ ತುತ್ತಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಹೊರಗೆ ಖಡ್ಗವೂ ಒಳಗೆ ವ್ಯಾಧಿಯೂ ಕ್ಷಾಮವೂ ಉಂಟು. ಹೊರಗಿರುವವರನ್ನು ಖಡ್ಗವು ಸಾಯಿಸುವುದು, ಪಟ್ಟಣದಲ್ಲಿರುವವರನ್ನು ವ್ಯಾಧಿಯೂ ಕ್ಷಾಮವೂ ತಿಂದುಬಿಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 7:15
9 ತಿಳಿವುಗಳ ಹೋಲಿಕೆ  

ನಾನು ನಗರಗಳ ಹೊರಗಡೆ ಹೋದರೆ ಖಡ್ಗಗಳಿಗೆ ಆಹುತಿಯಾಗಿ ಸತ್ತವರು ನನ್ನ ಕಣ್ಣಿಗೆ ಬೀಳುತ್ತಾರೆ. ನಾನು ನಗರಗಳಿಗೆ ಹೋದರೆ ಕ್ಷಾಮದಿಂದ ಬಳಲುವ ಜನರು ನನ್ನ ಕಣ್ಣಿಗೆ ಬೀಳುತ್ತಾರೆ. ಅವರಿಗೆ ತಿನ್ನಲು ಅನ್ನವಿಲ್ಲ. ಯಾಜಕರನ್ನು ಮತ್ತು ಪ್ರವಾದಿಗಳನ್ನು ಪರದೇಶಕ್ಕೆ ತೆಗೆದುಕೊಂಡು ಹೋಗಲಾಗಿದೆ.’”


ನಿನ್ನ ಜನರಲ್ಲಿ ಮೂರನೆ ಒಂದು ಭಾಗ ಪಟ್ಟಣದೊಳಗೆ ರೋಗದಿಂದಲೂ ಹಸಿವಿನಿಂದಲೂ ಸಾಯುವರು. ಮೂರರಲ್ಲಿ ಇನ್ನೊಂದು ಭಾಗ ಪಟ್ಟಣದ ಹೊರಗೆ ರಣರಂಗದಲ್ಲಿ ಸಾಯುವರು. ಅನಂತರ ನಾನು ನನ್ನ ಖಡ್ಗವನ್ನು ಇರಿದು ಉಳಿದವರನ್ನು ಬಹುದೂರದ ದೇಶಕ್ಕೆ ಅಟ್ಟಿಬಿಡುವೆನು.


“ಯೆಹೋವನೇ, ನನ್ನ ಕಡೆ ನೋಡು, ನಾನು ತೊಂದರೆಯಲ್ಲಿದ್ದೇನೆ. ನನ್ನ ಮನಸ್ಸು ಕ್ಷೋಭೆಗೊಂಡಿದೆ. ನನ್ನ ಮನಸ್ಸಿಗೆ ತಲೆ ಕೆಳಗಾದಂತೆ ಭಾಸವಾಗುತ್ತಿದೆ. ನಾನು ದುರಹಂಕಾರಿಯಾಗಿದ್ದುದರಿಂದ ನನ್ನ ಮನಸ್ಸಿಗೆ ಹಾಗೆ ಭಾಸವಾಗುತ್ತಿದೆ. ಕಾರಣವೇನೆಂದರೆ, ನಾನು ದಂಗೆಕೋರಳಾಗಿದ್ದೆ. ಬೀದಿಗಳಲ್ಲಿ ನನ್ನ ಮಕ್ಕಳು ಖಡ್ಗಕ್ಕೆ ಆಹುತಿಯಾದರು. ಮನೆಯಲ್ಲಿಯೂ ಸಹ ಸಾವಿತ್ತು.


ದೂರದಲ್ಲಿರುವ ಜನರು ರೋಗಗಳಿಂದ ಸಾಯುವರು. ಹತ್ತಿರದಲ್ಲಿರುವವರು ಕತ್ತಿಯಿಂದ ಸಾಯುವರು. ತಪ್ಪಿಸಿಕೊಂಡವರೂ ಉಳಿಸಲ್ಪಟ್ಟವರೂ ಹಸಿವೆಯಿಂದ ಸಾಯುವರು. ಆಗಲೇ ನನ್ನ ಕೋಪವು ಶಮನವಾಗುವದು.


ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದನು: “ಚಪ್ಪಾಳೆ ತಟ್ಟು, ನಿನ್ನ ಕಾಲುಗಳನ್ನು ನೆಲಕ್ಕೆ ಒದ್ದು, ‘ಅಯ್ಯೋ, ಬೇಡ!’ ಎಂದು ಹೇಳು. ಯಾಕೆಂದರೆ ಇಸ್ರೇಲ್ ಜನರು ಎಲ್ಲಾ ಅಸಹ್ಯಕರವಾದ ಮತ್ತು ದುಷ್ಕೃತ್ಯಗಳನ್ನು ಮಾಡಿದ್ದಾರೆ. ಅವರು ಯುದ್ಧದಿಂದಲೂ ಕ್ಷಾಮದಿಂದಲೂ ಭಯಂಕರವಾದ ಕಾಯಿಲೆಗಳಿಂದಲೂ ಸಾಯುವರು.


“ಆದರೆ ನಾನು ಅವರಲ್ಲಿ ಕೆಲವರನ್ನು ಯುದ್ಧಗಳಿಂದ, ಬರಗಾಲಗಳಿಂದ ಮತ್ತು ರೋಗಗಳಿಂದ ಉಳಿಸುವೆನು. ಅವರು ತಾವು ಹೋಗುವ ದೇಶಗಳಲ್ಲಿನ ಜನರಿಗೆ ತಮ್ಮ ಅಸಹ್ಯವಾದ ಆಚರಣೆಗಳ ಕುರಿತು ಹೇಳಲಾಗುವಂತೆ ನಾನು ಇದನ್ನು ಮಾಡುತ್ತೇನೆ. ನಾನೇ ಯೆಹೋವನೆಂದು ಆಗ ಅವರು ತಿಳಿದುಕೊಳ್ಳುವರು.”


ಬರಗಾಲದ ನಿಮಿತ್ತ ಸತ್ತವರಿಗಿಂತಲೂ ಖಡ್ಗಗಳಿಂದ ಹತರಾದವರ ಸಾವೇ ಮೇಲಾಗಿತ್ತು. ಹಸಿವೆಯಿಂದಿದ್ದ ಜನರು ನೋವಿನಿಂದ ನರಳಾಡಿದರು. ಭೂಮಿಯಿಂದ ಆಹಾರವನ್ನು ಪಡೆಯಲಾಗದೆ ಅವರು ಸತ್ತುಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು