Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 7:16 - ಪರಿಶುದ್ದ ಬೈಬಲ್‌

16 “ಆದರೂ ಕೆಲವರು ತಪ್ಪಿಸಿಕೊಳ್ಳುವರು. ಅವರು ಬೆಟ್ಟಕ್ಕೆ ಓಡುವರು. ಆದರೆ ಅವರು ಸಂತೋಷಪಡುವುದಿಲ್ಲ. ತಮ್ಮ ಪಾಪಗಳಿಗಾಗಿ ಅವರು ದುಃಖಿತರಾಗುವರು. ಪಾರಿವಾಳಗಳಂತೆ ಮೂಲುಗುವರು, ಅಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅವರಲ್ಲಿ ಪಲಾಯನ ಮಾಡಿದವರು ತಪ್ಪಿಸಿಕೊಂಡು, ತಮ್ಮ ಅಧರ್ಮದಲ್ಲಿಯೇ ಇದ್ದು, ಡೊಂಗರಗಳಲ್ಲಿನ ಪಾರಿವಾಳಗಳಂತೆ ಬೆಟ್ಟಗಳ ಮೇಲೆ ಗೋಳಾಡುತ್ತಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅವರಲ್ಲಿ ಪಲಾಯನ ಮಾಡಿದವರು ತಪ್ಪಿಸಿಕೊಂಡು, ತಮ್ಮ ಅಧರ್ಮದಲ್ಲಿಯೇ ಇದ್ದು, ಡೊಂಗರಗಳಲ್ಲಿನ ಪಾರಿವಾಳಗಳಂತೆ ಬೆಟ್ಟಗಳ ಮೇಲೆ ಗೋಳಿಡುತ್ತಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅವರಲ್ಲಿ ಪಲಾಯನ ಮಾಡಿದವರು ತಪ್ಪಿಸಿಕೊಂಡು ತಮ್ಮ ಅಧರ್ಮದಲ್ಲಿಯೇ ಇದ್ದು ಡೊಂಗರಗಳಲ್ಲಿನ ಪಾರಿವಾಳಗಳಂತೆ ಬೆಟ್ಟಗಳ ಮೇಲೆ ಮೊರೆಯಿಡುತ್ತಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆದರೆ ಅವರಲ್ಲಿ ಪಲಾಯನ ಮಾಡಿದವರು ತಪ್ಪಿಸಿಕೊಳ್ಳುವರು. ಪ್ರತಿಯೊಬ್ಬರೂ ತಮ್ಮ ತಮ್ಮ ಅಕ್ರಮಗಳ ನಿಮಿತ್ತ ಕಣಿವೆಯಲ್ಲಿರುವ ಪಾರಿವಾಳದ ಹಾಗೆ ಗೋಳಾಡಿ, ಪರ್ವತಗಳ ಮೇಲೆ ಇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 7:16
22 ತಿಳಿವುಗಳ ಹೋಲಿಕೆ  

ನಾವೆಲ್ಲಾ ಗುಣುಗುಟ್ಟುತ್ತೇವೆ. ನಾವು ಕರಡಿಗಳಂತೆ ಗುರುಗುಟ್ಟುತ್ತಿದ್ದೇವೆ, ಪಾರಿವಾಳಗಳಂತೆ ಮೂಲುಗುತ್ತಿದ್ದೇವೆ. ಜನರು ಧರ್ಮವನ್ನು ಅನುಸರಿಸುವ ಸಮಯಕ್ಕಾಗಿ ನಾವು ಕಾಯುತ್ತಿದ್ದೇವೆ. ಆದರೆ ಧರ್ಮವೇ ಇಲ್ಲ. ನಾವು ರಕ್ಷಣೆಗಾಗಿ ಕಾಯುತ್ತಿದ್ದೇವೆ. ಆದರೆ ರಕ್ಷಣೆಯು ಬಹುದೂರವಿದೆ.


ನಾನು ಪಾರಿವಾಳದಂತೆ ಕೂಗಿಕೊಂಡೆನು. ಪಕ್ಷಿಯಂತೆ ಅರಚಿಕೊಂಡೆನು. ನನ್ನ ಕಣ್ಣುಗಳು ಸ್ವರ್ಗದ ಕಡೆಗೆ ನೋಡುತ್ತಾ ಆಯಾಸಗೊಂಡವು. ನನ್ನ ಒಡೆಯನೇ, ನಾನು ತುಂಬಾ ಚಿಂತಾಕ್ರಾಂತನಾಗಿದ್ದೇನೆ. ನೀನು ನನಗೆ ಸಹಾಯ ಮಾಡುವುದಾಗಿ ವಾಗ್ದಾನ ಮಾಡು.”


“ಇಸ್ರೇಲಿನ ದೇವರಾದ ಯೆಹೋವನೇ, ನೀನು ಒಳ್ಳೆಯವನಾಗಿರುವೆ. ನಮ್ಮ ಜನಾಂಗದ ಕೆಲವರನ್ನಾದರೂ ಉಳಿದುಕೊಳ್ಳುವಂತೆ ಮಾಡಿರುವೆ. ಹೌದು, ನಾವು ಪಾಪಿಗಳು. ನಮ್ಮ ಅಪರಾಧಗಳ ದೆಸೆಯಿಂದ ಯಾರೂ ನಿನ್ನ ಮುಂದೆ ನಿಲ್ಲಲು ಸಾಧ್ಯವಿಲ್ಲ.”


“ಯೆಹೂದ ಕುಲದವರಲ್ಲಿ ತಪ್ಪಿಸಿಕೊಂಡು ಜೀವಂತವಾಗಿ ಉಳಿದವರು ಮತ್ತೆ ಅಭಿವೃದ್ಧಿಯಾಗುವರು. ತಮ್ಮ ಬೇರುಗಳನ್ನು ಆಳವಾಗಿ ಇಳಿಯಬಿಟ್ಟು ಹಣ್ಣುಗಳನ್ನು ಬಿಡುವ ಗಿಡಗಳಂತೆ ಅವರಿರುವರು.


ನೀವು ಮಾಡಿದ ದುಷ್ಟತನವನ್ನು ನೀವು ಜ್ಞಾಪಿಸಿಕೊಳ್ಳುವಿರಿ. ಅವುಗಳು ಒಳ್ಳೆಯದಲ್ಲ ಎಂಬುದನ್ನು ಅರಿತುಕೊಳ್ಳುವಿರಿ. ಆಗ ನೀವು ಮಾಡಿದ ಪಾಪಕೃತ್ಯಗಳಿಗಾಗಿ ನಿಮ್ಮನ್ನೆ ನೀವು ಅಸಹ್ಯಪಟ್ಟುಕೊಳ್ಳುವಿರಿ.”


ಕೆಲವು ಯೆಹೂದಿಯರು ಖಡ್ಗದಿಂದ ತಪ್ಪಿಸಿಕೊಳ್ಳುವರು. ಅವರು ಈಜಿಪ್ಟಿನಿಂದ ಯೆಹೂದಕ್ಕೆ ಹಿಂದಿರುಗಿ ಬರುವರು. ಆದರೆ ಹಾಗೆ ತಪ್ಪಿಸಿಕೊಳ್ಳುವ ಯೆಹೂದಿಯರು ಬಹು ಕಡಿಮೆ. ಆಗ ಈಜಿಪ್ಟಿಗೆ ವಲಸೆ ಬಂದ ಆ ಅಳಿದುಳಿದ ಯೆಹೂದಿಯರಿಗೆ ಯಾರ ಮಾತು ನಿಜವೆಂಬುದು ತಿಳಿದು ಬರುತ್ತದೆ. ನನ್ನ ಮಾತು ನಿಜವಾಯಿತೋ ಅಥವಾ ಅವರ ಮಾತು ನಿಜವಾಯಿತೋ ಎಂಬುದು ಅವರಿಗೆ ಗೊತ್ತಾಗುತ್ತದೆ.


ಈಜಿಪ್ಟಿಗೆ ವಲಸೆ ಹೋದ ಕೆಲವೇ ಯೆಹೂದದ ಜನರು ಅಳಿದುಳಿದವರಾಗಿದ್ದಾರೆ. ಒಬ್ಬನೂ ಕೂಡ ನನ್ನ ಶಿಕ್ಷೆಯಿಂದ ತಪ್ಪಿಸಿಕೊಳ್ಳಲಾರನು. ಅವರಲ್ಲಿ ಒಬ್ಬನೂ ಜೀವಂತವಾಗಿ ಯೆಹೂದಕ್ಕೆ ಹಿಂತಿರುಗಿ ಬರಲಾರನು. ಆ ಜನರು ಯೆಹೂದಕ್ಕೆ ಹಿಂತಿರುಗಿ ಬಂದು ಅಲ್ಲಿ ವಾಸಮಾಡಬಯಸುವರು, ಆದರೆ ತಪ್ಪಿಸಿಕೊಂಡ ಸ್ವಲ್ಪ ಜನರನ್ನು ಬಿಟ್ಟು ಮಿಕ್ಕವರಾರೂ ಯೆಹೂದಕ್ಕೆ ಹಿಂತಿರುಗುವದಿಲ್ಲ.”


ಆ ಜನರು ಹಿಂತಿರುಗಿ ಬರುವಾಗ ಅಳುತ್ತಿರುವರು. ಆದರೆ ನಾನು ಅವರಿಗೆ ದಾರಿತೋರಿಸುವೆನು, ಸಮಾಧಾನಪಡಿಸುವೆನು. ನಾನು ಅವರನ್ನು ನದಿ ದಾಟಿಸಿಕೊಂಡು ಬರುವೆನು. ಅವರು ಎಡವದಂತೆ ಸಮವಾದ ಮಾರ್ಗದಲ್ಲಿ ನಡೆಸಿಕೊಂಡು ಬರುವೆನು. ನಾನು ಇಸ್ರೇಲಿನ ತಂದೆ; ಎಫ್ರಾಯೀಮ್ ನನ್ನ ಚೊಚ್ಚಲ ಮಗ. ಆದ್ದರಿಂದಲೇ ನಾನು ಅವರನ್ನು ನಡೆಸಿಕೊಂಡು ಬರುವೆನು.


ಆದರೆ ಸರ್ವಶಕ್ತನಾದ ಯೆಹೋವನು ಸ್ವಲ್ಪ ಮಂದಿಯನ್ನಾದರೂ ಉಳಿಸಿ ಅಲ್ಲಿ ವಾಸಿಸುವಂತೆ ಮಾಡಿದ್ದಾನೆ. ನಾವು ಸೊದೋಮ್ ಗೊಮೋರ ಪಟ್ಟಣಗಳಂತೆ ಸಂಪೂರ್ಣವಾಗಿ ನಾಶವಾಗಲಿಲ್ಲ.


ನನ್ನ ಮೊರೆಯನ್ನು ಆಲಿಸಿ ಸದುತ್ತರವನ್ನು ದಯಪಾಲಿಸು. ನಾನು ನಿನ್ನೊಂದಿಗೆ ಮಾತಾಡುವೆನು; ನನಗಾಗಿರುವ ದುಃಖವನ್ನು ನಿನ್ನ ಮುಂದೆ ತೋಡಿಕೊಳ್ಳುವೆನು.


“ಚೀಯೋನಿನಿಂದ ಮಹಾಗೋಳಾಟವು ಕೇಳಿಸುತ್ತಿದೆ: ‘ನಿಜವಾಗಿಯೂ ನಾವು ಹಾಳಾಗಿಹೋದೆವು. ನಿಜವಾಗಿಯೂ ನಾವು ನಾಚಿಕೆಪಡುವಂತಾಗಿದೆ. ನಾವು ನಮ್ಮ ನಾಡನ್ನು ಬಿಡಬೇಕು, ಏಕೆಂದರೆ ನಮ್ಮ ಮನೆಗಳನ್ನು ನಾಶಪಡಿಸಲಾಗಿದೆ.’”


ಆದರೆ ಆಶ್ಚರ್ಯಕರವಾಗಿ, ಕೆಲವರು ಅದರಲ್ಲಿ ಉಳಿದುಕೊಳ್ಳುವರು, ಪುತ್ರಪುತ್ರಿಯರನ್ನು ನಿಮ್ಮ ಬಳಿಗೆ ಜೀವಂತವಾಗಿ ತರಲಾಗುವುದು. ಆ ಜನರು ಎಷ್ಟು ದುಷ್ಟರೆಂಬುದನ್ನು ಸ್ವತಃ ನೀವೇ ಅರ್ಥಮಾಡಿಕೊಳ್ಳುವಿರಿ. ನಾನು ಜೆರುಸಲೇಮಿನ ಮೇಲೆ ಬರಮಾಡಿದ ಇಡೀ ಆಪತ್ತಿನ ಬಗ್ಗೆ ನೀವು ಬಹಳವಾಗಿ ನೊಂದುಕೊಳ್ಳುವಿರಿ.


ಕುರುಬರೇ ಇಲ್ಲವಾದ್ದರಿಂದ ಎತ್ತರವಾದ ಎಲ್ಲಾ ಬೆಟ್ಟಗುಡ್ಡಗಳ ಮೇಲೆ ನನ್ನ ಮಂದೆಯು ಅಲೆದಾಡಿತು; ಭೂಮಂಡಲದ ಎಲ್ಲಾ ಕಡೆಗಳಲ್ಲಿ ಚದರಿ ಹೋಯಿತು.’”


ವೈರಿಗಳು ರಾಣಿಯನ್ನು ಎತ್ತಿಕೊಂಡು ಹೋಗುತ್ತಾರೆ. ಆಕೆಯ ಸೇವಕಿಯರು ಪಾರಿವಾಳಗಳಂತೆ ಗೋಳಾಡುತ್ತಿದ್ದಾರೆ. ತಮ್ಮ ದುಃಖವನ್ನು ಪ್ರದರ್ಶಿಸಲು ಎದೆಯನ್ನು ಬಡಕೊಳ್ಳುತ್ತಿದ್ದಾರೆ.


ಯೆಹೋವನ ನ್ಯಾಯತೀರ್ಪಿನ ದಿನವು ಬೇಗನೇ ಬರುತ್ತದೆ; ಅತ್ಯಂತ ವೇಗವಾಗಿ ಬರುತ್ತಿದೆ. ಆ ದಿನದಂದು ಜನರು ಬಹಳವಾಗಿ ದುಃಖಿಸುವರು. ಧೈರ್ಯಶಾಲಿಗಳಾದ ಸೈನಿಕರೂ ಅಳುವರು.


ಯಾಕೆಂದರೆ ನಾವು ಲೆಕ್ಕವಿಲ್ಲದಷ್ಟು ದ್ರೋಹಗಳನ್ನು ದೇವರಿಗೆ ವಿರುದ್ಧವಾಗಿ ಮಾಡಿರುತ್ತೇವೆ. ನಾವು ಮಾಡಿದ್ದು ತಪ್ಪೆಂದು ನಮ್ಮ ಪಾಪಗಳೇ ತೋರಿಸುತ್ತವೆ. ಹೌದು, ನಾವು ಈ ಕಾರ್ಯಗಳನ್ನು ಮಾಡಿ ದೋಷಿಗಳಾಗಿದ್ದೇವೆ.


ಬೋಳುಪರ್ವತದ ಮೇಲೆ ಅಳುವ ಧ್ವನಿಯನ್ನು ನೀವು ಕೇಳಬಹುದು. ಇಸ್ರೇಲಿನ ಜನರು ಕಣ್ಣೀರು ಸುರಿಸಿ ಕರುಣೆಗಾಗಿ ಪ್ರಾರ್ಥಿಸುತ್ತಿದ್ದಾರೆ. ಅವರು ತುಂಬಾ ಕೆಟ್ಟುಹೋಗಿ ತಮ್ಮ ದೇವರಾದ ಯೆಹೋವನನ್ನು ಮರೆತರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು