Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 7:3 - ಪರಿಶುದ್ದ ಬೈಬಲ್‌

3 ನಿನ್ನ ಅಂತ್ಯವು ಈಗ ಬರುವುದು. ನಿನ್ನ ಮೇಲೆ ನನಗೆ ಎಷ್ಟು ಕೋಪವಿದೆ ಎಂದು ನಾನು ತೋರಿಸುವೆನು. ನಿನ್ನ ದುಷ್ಕೃತ್ಯಗಳಿಗಾಗಿ ನಾನು ನಿನ್ನನ್ನು ಶಿಕ್ಷಿಸುವೆನು. ನಿನ್ನ ಅಸಹ್ಯಕೃತ್ಯಗಳಿಗಾಗಿ ನಾನು ಪ್ರತೀಕಾರ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಈಗಲೇ ನಿನಗೆ ಅಂತ್ಯವು ಬಂದಿದೆ; ನಾನು ನನ್ನ ಕೋಪವನ್ನು ನಿನ್ನ ಮೇಲೆ ಬರಮಾಡಿ, ನಿನ್ನ ನಡತೆಗೆ ತಕ್ಕಂತೆ ನ್ಯಾಯತೀರಿಸಿ ನಿನ್ನ ಸಮಸ್ತ ಅಸಹ್ಯಕಾರ್ಯಗಳ ಫಲವನ್ನು ನಿನಗೆ ತಿನ್ನಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 “ಈಗಲೇ ನಿನಗೆ ಪ್ರಳಯ ಬಂದುಬಿಟ್ಟಿತು; ನಾನು ನನ್ನ ಕೋಪವನ್ನು ನಿನ್ನ ಮೇಲೆ ಬರಮಾಡಿ, ನಿನ್ನ ನಡತೆಗೆ ತಕ್ಕಂತೆ ನ್ಯಾಯತೀರಿಸಿ, ನಿನ್ನ ಸಮಸ್ತ ಅಸಹ್ಯಕಾರ್ಯಗಳ ಫಲವನ್ನು ನಿನಗೆ ಉಣ್ಣಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಈಗಲೇ ನಿನಗೆ ಪ್ರಳಯವು ಬಂದುಬಿಟ್ಟಿತು; ನಾನು ನನ್ನ ಕೋಪವನ್ನು ನಿನ್ನ ಮೇಲೆ ಬರಮಾಡಿ ನಿನ್ನ ನಡತೆಗೆ ತಕ್ಕಂತೆ ನ್ಯಾಯತೀರಿಸಿ ನಿನ್ನ ಸಮಸ್ತ ಅಸಹ್ಯಕಾರ್ಯಗಳ ಫಲವನ್ನು ನಿನಗೆ ಉಣ್ಣಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಈಗಲೇ ನಿನಗೆ ಅಂತ್ಯವು ಬಂದಿದೆ. ನನ್ನ ಕೋಪವನ್ನು ನಿನ್ನ ಮೇಲೆ ಬರಮಾಡುತ್ತೇನೆ. ನಿನ್ನ ನಡತೆಯ ಪ್ರಕಾರ ನಿನಗೆ ನ್ಯಾಯತೀರಿಸುತ್ತೇನೆ. ನಿನ್ನ ಎಲ್ಲಾ ಅಸಹ್ಯ ಕಾರ್ಯಗಳಿಗೋಸ್ಕರ ನಿನ್ನ ಮೇಲೆ ಮುಯ್ಯಿತೀರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 7:3
27 ತಿಳಿವುಗಳ ಹೋಲಿಕೆ  

ಇಸ್ರೇಲರೇ, ನಾನು ಪ್ರತಿಯೊಬ್ಬನನ್ನು ಅವನವನ ಕಾರ್ಯಗಳ ಪ್ರಕಾರ ನ್ಯಾಯತೀರಿಸುವೆನು” ಎಂದು ಹೇಳಿದನು. ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಆದ್ದರಿಂದ ನನ್ನ ಬಳಿಗೆ ಬನ್ನಿರಿ, ದುಷ್ಟತನ ಮಾಡುವದನ್ನು ನಿಲ್ಲಿಸಿರಿ, ಪಾಪವು ನಿಮ್ಮ ನಾಶನಕ್ಕೆ ಕಾರಣವಾಗದಂತೆ ಎಚ್ಚರಿಕೆಯಾಗಿರಿ.


ಆಗಲೇ ನನ್ನ ಕೋಪವು ಶಮನವಾಗುವುದು. ನಾನು ಅವರ ವಿರುದ್ಧವಾಗಿ ನನ್ನ ಕೋಪವನ್ನು ಬಳಸಿ ತೃಪ್ತನಾಗುವೆನು. ನನ್ನ ಕೋಪವನ್ನು ಸುರಿದಾಗ ಯೆಹೋವನಾದ ನಾನೇ ಅವರೊಂದಿಗೆ ಕೋಪದಿಂದ ಮಾತಾಡಿದೆನೆಂದು ಅವರಿಗೆ ಗೊತ್ತಾಗುವುದು.”


ಆದರೆ ನಾನು ನ್ಯಾಯವಂತನಲ್ಲ, ಎಂದು ನೀವು ಹೇಳುತ್ತೀರಿ. ಆದರೆ ನಾನು ಖಂಡಿತವಾಗಿ ಹೇಳುತ್ತೇನೆ, ಇಸ್ರೇಲ್ ಮನೆತನದವರೇ, ಪ್ರತಿಯೊಬ್ಬನೂ ತಾನು ಮಾಡಿದ ಕಾರ್ಯಗಳಿಗಾಗಿ ನ್ಯಾಯ ಹೊಂದುವನು.”


ಬಳಿಕ, ಕೊಲೆಗಾರ್ತಿಯರೂ ವ್ಯಭಿಚಾರಿಣಿಯರೂ ಶಿಕ್ಷಿಸಲ್ಪಡುವಂತೆ ನಾನು ನಿನ್ನನ್ನು ದಂಡಿಸುವೆನು. ನನ್ನ ಭಯಂಕರವಾದ ಕೋಪದಿಂದ ನಿನಗೆ ಮರಣದಂಡನೆಯನ್ನು ವಿಧಿಸುವೆನು.


ದೇಶಾಂತರಕ್ಕೆ ಅವರನ್ನು ಚದರಿಸಿ, ಎಲ್ಲಾ ದೇಶಗಳಲ್ಲಿ ಅವರನ್ನು ಹರಡಿಸಿಬಿಟ್ಟೆನು. ಅವರು ಮಾಡಿದ ದುಷ್ಟತನಕ್ಕೆ ನಾನು ಶಿಕ್ಷಿಸಿದೆನು.


ಸತ್ತುಹೋದ ಜನರಿಗಾಗಿ ನಿಮ್ಮ ರಾಜನು ಗೋಳಾಡುವನು; ನಾಯಕನಿಗೆ ನಿರೀಕ್ಷೆಯು ಇಲ್ಲವಾಗುವುದು. ಸಾಮಾನ್ಯ ಜನರು ಭಯಗ್ರಸ್ತರಾಗುವರು. ಯಾಕೆಂದರೆ ನಾನು ಅವರ ನಡತೆಗೆ ತಕ್ಕಂತೆ ಅವರಿಗೆ ಮಾಡುವೆನು; ಅವರು ಬೇರೆಯವರಿಗೆ ನ್ಯಾಯ ತೀರಿಸಿದಂತೆ ನಾನು ಅವರಿಗೆ ನ್ಯಾಯತೀರಿಸುವೆನು. ನಾನೇ ಯೆಹೋವನೆಂದು ಆಗ ಅವರು ತಿಳಿದುಕೊಳ್ಳುವರು.”


ಆದ್ದರಿಂದ ದೇವರು ನೋಹನಿಗೆ, “ನಾನು ಎಲ್ಲಾ ಜನರಿಗೂ ಅಂತ್ಯವನ್ನು ಬರಮಾಡಬೇಕೆಂದಿದ್ದೇನೆ; ಯಾಕೆಂದರೆ ಅವರು ಕೋಪ, ಹಿಂಸೆಗಳಿಂದ ಭೂಮಿಯನ್ನು ತುಂಬಿಸಿದ್ದಾರೆ. ಆದಕಾರಣ ನಾನು ಎಲ್ಲಾ ಜೀವಿಗಳನ್ನು ನಾಶಮಾಡುವೆನು.


‘ನಾನು ನಿತ್ಯಕಾಲಕ್ಕೂ ವಾಸಿಸುತ್ತೇನೆ. ನಾನು ಯಾವಾಗಲೂ ರಾಣಿಯಾಗಿಯೇ ಇರುವೆನು’ ಎಂದು ನೀನು ಹೇಳುವೆ. ಅವರಿಗೆ ನೀನು ಮಾಡಿದ ದುಷ್ಟಕ್ರಿಯೆಗಳನ್ನು ನೀನು ಗಮನಿಸಲೇ ಇಲ್ಲ. ಅದರ ಪರಿಣಾಮವನ್ನು ನೀನು ಆಲೋಚಿಸಲೇ ಇಲ್ಲ.


ಆತನು ಹೇಳಿದ್ದೇನೆಂದರೆ: “ನರಪುತ್ರನೇ, ನನ್ನ ಒಡೆಯನಾದ ಯೆಹೋವನ ಸಂದೇಶವಿದು. ಈ ಸಂದೇಶವನ್ನು ಇಸ್ರೇಲ್ ದೇಶಕ್ಕೆ ನೀಡು. “ಅಂತ್ಯ, ಅಂತ್ಯವು ಬರುವುದು. ಇಡೀ ದೇಶವು ಹಾಳಾಗಿಹೋಗುವದು.


ನಿನಗೆ ನಾನು ಇನ್ನು ಕರುಣೆಯನ್ನು ತೋರಿಸೆನು. ನಿನ್ನ ವಿಷಯದಲ್ಲಿ ನಾನು ದುಃಖಿಸುವದಿಲ್ಲ. ನೀನು ಮಾಡಿದ ಕೆಟ್ಟಕಾರ್ಯಗಳಿಗಾಗಿ ನಿನ್ನನ್ನು ಶಿಕ್ಷಿಸುವೆನು. ನೀನು ಅಂಥಾ ಭಯಂಕರ ಕೃತ್ಯಗಳನ್ನು ಮಾಡಿದ್ದೀ. ಈಗ ನಾನೇ ಯೆಹೋವನೆಂದು ನೀನು ತಿಳಿಯುವಿ.”


ಇಸ್ರೇಲಿನ ದುಷ್ಟ ಅಧಿಪತಿಯೇ, ನೀನು ಸಾಯುವಿ. ನಿನಗೆ ನನ್ನ ಶಿಕ್ಷೆಯು ಬಂದಾಯಿತು. ನಿನ್ನ ಅಂತ್ಯವು ಹತ್ತಿರವೇ ಇದೆ.”


ಅದಕ್ಕಾಗಿ ನಾನು ಅವರಿಗೆ ನನ್ನ ಕೋಪವನ್ನು ತೋರಿಸುವೆನು. ಅವರ ದುಷ್ಟತನಕ್ಕಾಗಿ ನಾನು ಅವರನ್ನು ಶಿಕ್ಷಿಸುವೆನು. ಅವರೇ ಅದಕ್ಕೆ ಜವಾಬ್ದಾರರು.” ಇವು ನನ್ನ ಒಡೆಯನಾದ ಯೆಹೋವನ ನುಡಿಗಳು.


ಯೆಹೋವನು ನನಗೆ, “ಆಮೋಸನೇ, ನೀನು ಏನನ್ನು ನೋಡುತ್ತೀ?” ಎಂದು ಕೇಳಿದನು. ಅದಕ್ಕೆ ನಾನು, “ಒಂದು ಪುಟ್ಟಿ ಬೇಸಿಗೆಯ ಹಣ್ಣುಗಳು” ಎಂದು ಹೇಳಿದೆನು. ಆಗ ಯೆಹೋವನು ನನಗೆ, “ನನ್ನ ಜನರಾದ ಇಸ್ರೇಲರಿಗೆ ಅಂತ್ಯಕಾಲವು ಬಂದಿದೆ. ಇನ್ನು ಮೇಲೆ ನಾನು ಅವರನ್ನು ಸುಮ್ಮನೆ ಬಿಡುವುದಿಲ್ಲ.


ಯೆಹೂದದ ಜನರು ಎಡವಿ, ಒಬ್ಬರಮೇಲೊಬ್ಬರು ಬೀಳುವಂತೆ ನಾನು ಮಾಡುವೆನು. ತಂದೆ ಮತ್ತು ಮಕ್ಕಳು ಒಬ್ಬರಮೇಲೊಬ್ಬರು ಬೀಳುವರು.’” ಇದು ಯೆಹೋವನ ನುಡಿ. “‘ನಾನು ಅವರಿಗಾಗಿ ಕನಿಕರಪಡುವದಿಲ್ಲ ಅಥವಾ ಕರುಣೆ ತೋರಿಸುವದಿಲ್ಲ. ಯೆಹೂದದ ಜನರ ವಿನಾಶವನ್ನು ಕರುಣೆಯು ತಡೆಯದಂತೆ ನೋಡಿಕೊಳ್ಳುತ್ತೇನೆ.’”


ನಿನ್ನ ಜನರಲ್ಲಿ ಮೂರನೆ ಒಂದು ಭಾಗ ಪಟ್ಟಣದೊಳಗೆ ರೋಗದಿಂದಲೂ ಹಸಿವಿನಿಂದಲೂ ಸಾಯುವರು. ಮೂರರಲ್ಲಿ ಇನ್ನೊಂದು ಭಾಗ ಪಟ್ಟಣದ ಹೊರಗೆ ರಣರಂಗದಲ್ಲಿ ಸಾಯುವರು. ಅನಂತರ ನಾನು ನನ್ನ ಖಡ್ಗವನ್ನು ಇರಿದು ಉಳಿದವರನ್ನು ಬಹುದೂರದ ದೇಶಕ್ಕೆ ಅಟ್ಟಿಬಿಡುವೆನು.


ಅವರಿಗೆ ನಾನು ಕನಿಕರ ತೋರಿಸುವುದಿಲ್ಲ. ಅವರಿಗಾಗಿ ನಾನು ದುಃಖಿಸುವುದಿಲ್ಲ. ಅವರು ತಾವೇ ಇದನ್ನು ತಮ್ಮ ಮೇಲೆ ಬರಮಾಡಿಕೊಂಡರು. ಅವರು ಹೊಂದಲು ಯೋಗ್ಯವಾದ ಶಿಕ್ಷೆಯನ್ನೇ ನಾನು ಕೊಡುತ್ತಿರುವುದು.”


ಆಮೇಲೆ ದೇವರು ಹೇಳಿದ್ದೇನೆಂದರೆ: “ಆದರೆ ಈಗ ಅವರ ಹೃದಯವು ಆ ಹೊಲಸು ವಿಗ್ರಹಗಳಿಗೆ ಸೇರಿದ್ದಾಗಿದೆ. ಅವರು ಮಾಡಿದ ದುಷ್ಟತನಕ್ಕೆ ನಾನು ಅವರನ್ನು ಶಿಕ್ಷಿಸಲೇಬೇಕಾಗಿದೆ.” ನನ್ನ ಒಡೆಯನಾದ ಯೆಹೋವನು ಈ ಸಂಗತಿಗಳನ್ನು ತಿಳಿಸಿದನು.


ಇವೆಲ್ಲಾ ಯಾಕೆ ಸಂಭವಿಸಬೇಕು? ಯಾಕೆಂದರೆ ನೀನು ಎಳೆಯವಳಾಗಿದ್ದಾಗ ಏನು ಸಂಭವಿಸಿತೆಂದು ಮರೆತುಬಿಟ್ಟಿರುವೆ. ನೀನು ಕೆಟ್ಟಕೆಲಸಗಳನ್ನು ಮಾಡಿ ನಾನು ಕೋಪಿಸಿಕೊಳ್ಳುವಂತೆ ಮಾಡಿರುವೆ. ಆದ್ದರಿಂದ ಆ ಕೆಟ್ಟಕಾರ್ಯ ಮಾಡಿದ್ದಕ್ಕಾಗಿ ನಿನ್ನನ್ನು ಶಿಕ್ಷಿಸಬೇಕಾಗಿ ಬಂತು. ನೀನು ಅದಕ್ಕಿಂತಲೂ ಭಯಂಕರಕೃತ್ಯ ನಡಿಸಲು ಯೋಜನೆ ಹಾಕಿಕೊಂಡಿರುವೆ.” ಇವು ನನ್ನ ಒಡೆಯನಾದ ಯೆಹೋವನ ನುಡಿಗಳು.


ಈ ಮಾತುಗಳನ್ನು ನನ್ನ ಒಡೆಯನಾದ ಯೆಹೋವನು ಹೇಳಿದನು. “ನೀನು ಮಾಡಿರುವದನ್ನು ನಾನೂ ನಿನಗೆ ಮಾಡುವೆನು. ನೀನು ನಿನ್ನ ಮದುವೆ ಒಡಂಬಡಿಕೆಯನ್ನು ಮುರಿದುಬಿಟ್ಟೆ. ನಮ್ಮ ಒಡಂಬಡಿಕೆಗೆ ನೀನು ಮಹತ್ವ ಕೊಡಲಿಲ್ಲ.


“‘ನಾನೇ ಯೆಹೋವನು. ನಿನಗೆ ಶಿಕ್ಷೆಯು ಬರುವದು ಎಂದು ನಾನು ಹೇಳಿದರೆ ಅದು ಬರುವಂತೆ ನಾನು ಮಾಡುವೆನು. ನಾನು ದಂಡನೆಯನ್ನು ತಡೆಹಿಡಿಯುವುದಿಲ್ಲ. ನಾನು ನಿನ್ನನ್ನು ಬಿಟ್ಟುಬಿಡುವುದಿಲ್ಲ. ಅದರ ಬಗ್ಗೆ ನನ್ನ ಮನಸ್ಸನ್ನು ನಾನು ಮಾರ್ಪಡಿಸುವುದಿಲ್ಲ. ನಿನ್ನ ಕೆಟ್ಟಕಾರ್ಯಗಳಿಗಾಗಿ ನಾನು ನಿನ್ನನ್ನು ಶಿಕ್ಷಿಸುವೆನು.’ ನನ್ನ ಒಡೆಯನಾದ ಯೆಹೋವನು ಇದನ್ನು ನುಡಿದಿದ್ದಾನೆ.”


ತನ್ನ ತಾಯಿಯ ಗರ್ಭದಲ್ಲಿರುವಾಗಲೇ ಯಾಕೋಬನು ತನ್ನ ಅಣ್ಣನಿಗೆ ಮೋಸ ಮಾಡಲು ಪ್ರಾರಂಭಮಾಡಿದ್ದನು. ಯಾಕೋಬನು ಬಲಶಾಲಿಯಾದ ಯೌವನಸ್ಥನು. ಆಗ ಅವನು ದೇವರೊಂದಿಗೆ ಹೋರಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು