Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 7:7 - ಪರಿಶುದ್ದ ಬೈಬಲ್‌

7 ಇಸ್ರೇಲ್ ದೇಶದಲ್ಲಿ ವಾಸಿಸುವ ಜನರೇ, ನಿಮಗೆ ಆಪತ್ತು ಬರುವುದು, ಸಮಯವು ಬರುತ್ತಿದೆ. ದಿನವು ಸಮೀಪಿಸಿದೆ. ಬೆಟ್ಟಗಳ ಮೇಲೆ ಆನಂದ ಬೋಷಗಳ ಬದಲು ಯುದ್ಧದ ಕೂಗಾಟಗಳು ಇರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ದೇಶ ನಿವಾಸಿಯೇ, ನಿನ್ನ ಗತಿ ಮುಗಿಯಿತು. ಸಮಯ ಬಂದಿತು, ದಿನ ಸಮೀಪಿಸಿತು; ಬೆಟ್ಟಗಳ ಮೇಲೆ ಕೇಳಿಸುವ ಧ್ವನಿಯು ಉತ್ಸಾಹ ಧ್ವನಿಯಲ್ಲ, ಅದು ಕಳವಳವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ದೇಶನಿವಾಸಿಯೇ, ನಿನ್ನ ಗತಿ ಮುಗಿಯಿತು, ಸಮಯ ಬಂದಿತು, ದಿನ ಸಮೀಪಿಸಿತು; ಬೆಟ್ಟಗಳ ಮೇಲೆ ಕೇಳಿಸುವ ಧ್ವನಿ ಉತ್ಸಾಹಧ್ವನಿಯಲ್ಲ , ಅದು ಬರೀ ಗೋಳೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ದೇಶನಿವಾಸಿಯೇ, ನಿನ್ನ ಗತಿ ಆಯಿತು. ಸಮಯ ಬಂತು, ದಿನ ಹತ್ತರಿಸಿತು; ಬೆಟ್ಟಗಳ ಮೇಲೆ ಕೇಳಿಸುವ ಧ್ವನಿಯು ಉತ್ಸಾಹ ಧ್ವನಿಯಲ್ಲ, ಕಳಕಳವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಓ ದೇಶ ನಿವಾಸಿಯೇ, ನಿನಗಾಗಿ ವಿನಾಶದ ದಿನ ಬಂದಿತು, ಕಾಲವು ಬಂತು, ತೊಂದರೆಯ ದಿನವು ಹತ್ತಿರವಾಯಿತು. ಪರ್ವತಗಳ ಮೇಲೆ ಸಂತೋಷವಲ್ಲ ಭೀತಿಯಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 7:7
16 ತಿಳಿವುಗಳ ಹೋಲಿಕೆ  

ಆದ್ದರಿಂದ ಅವರಿಗೆ ನೀನು ಈ ವಿಷಯವನ್ನು ತಿಳಿಸು, ‘ನನ್ನ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ: ಏನೆಂದರೆ ನಾನು ಇನ್ನು ಹೆಚ್ಚು ತಡಮಾಡುವುದಿಲ್ಲ. ನಾನೊಂದು ವಿಷಯವು ನೆರವೇರುವುದು ಎಂದು ಹೇಳಿದರೆ ಅದು ಖಂಡಿತ ನೆರವೇರುವುದು.’” ಇವು ನನ್ನ ಒಡೆಯನಾದ ಯೆಹೋವನ ನುಡಿಗಳು.


“ಆ ಶಿಕ್ಷೆಯ ಸಮಯವು ಬಂತು. ಆ ದಿವಸವು ಇಲ್ಲಿಯೇ ಇದೆ. ವಸ್ತುಗಳನ್ನು ಕೊಂಡುಕೊಳ್ಳುವ ಜನರು ಸಂತೋಷಪಡಕೂಡದು. ವಸ್ತುಗಳನ್ನು ಮಾರುವವರು ಮಾರುವದಕ್ಕೆ ದುಃಖಿಸಕೂಡದು. ಯಾಕೆಂದರೆ ಆ ಭಯಂಕರ ಶಿಕ್ಷೆಯು ಎಲ್ಲರಿಗೂ ಉಂಟಾಗುವುದು.


ಯೆಹೋವನು ಒಂದು ವಿಶೇಷ ದಿನವನ್ನು ಆರಿಸಿರುತ್ತಾನೆ. ಆ ದಿನದಲ್ಲಿ ಗಲಭೆ ಮತ್ತು ಗಲಿಬಿಲಿಯು ಇರುವದು. ದಿವ್ಯದರ್ಶನದ ಕಣಿವೆಯಲ್ಲಿ ಜನರು ಒಬ್ಬರನ್ನೊಬ್ಬರು ತುಳಿದುಕೊಂಡು ಅವರ ಮೇಲೆಯೇ ನಡೆದುಕೊಂಡು ಹೋಗುವರು. ನಗರದ ಕೋಟೆಗೋಡೆಗಳು ಕೆಡವಲ್ಪಡುವವು. ಕಣಿವೆಯಲ್ಲಿ ವಾಸಿಸುವ ಜನರು ಬೆಟ್ಟದ ಮೇಲಿನ ನಗರದ ಜನರಿಗೆ ಚೀರಾಡುವರು.


ಸೂರ್ಯೋದಯಕ್ಕಿಂತ ಮೊದಲೇ ಹೊರಡುವಂತೆ ದೇವದೂತರು ಲೋಟನನ್ನು ಒತ್ತಾಯಿಸಿ, “ಈ ನಗರವನ್ನು ನಾಶಗೊಳಿಸಲಾಗುವುದು. ಆದ್ದರಿಂದ ನಿನ್ನ ಹೆಂಡತಿಯನ್ನೂ ನಿನ್ನ ಇಬ್ಬರು ಹೆಣ್ಣುಮಕ್ಕಳನ್ನೂ ಕರೆದುಕೊಂಡು ಈ ಸ್ಥಳದಿಂದ ಓಡಿಹೋಗು, ಆಗ ನೀನು ಈ ನಗರದೊಡನೆ ನಾಶವಾಗುವುದಿಲ್ಲ” ಎಂದು ಹೇಳಿದರು.


ನಿಮ್ಮ ನ್ಯಾಯನಿರ್ಣಯದ ಕಾಲ ಬಂದಿದೆ. ಅದು ದೇವರ ಕುಟುಂಬದಿಂದಲೇ ಆರಂಭವಾಗುವುದು. ನಮ್ಮಲ್ಲಿಯೇ ಅದು ಆರಂಭವಾದರೆ, ದೇವರ ಸುವಾರ್ತೆಗೆ ವಿಧೇಯರಾಗದ ಜನರಿಗೆ ಏನಾಗಬಹುದು?


ನಾನು ಯಾರು? ನಾನೇ ಪರ್ವತಗಳನ್ನು ನಿರ್ಮಿಸಿದಾತನು. ನಿಮ್ಮಲ್ಲಿ ಮನಸ್ಸನ್ನು ಉಂಟುಮಾಡಿದಾತನು ನಾನೇ. ನಾನು ಜನರಿಗೆ ಮಾತನಾಡಲು ಕಲಿಸಿದೆನು. ಕತ್ತಲೆಯನ್ನು ಬೆಳಕು ಮಾಡಿದೆನು. ಭೂಮಿಯ ಮೇಲಿರುವ ಪರ್ವತಗಳ ಮೇಲೆ ನಾನು ನಡಿಯುತ್ತೇನೆ. ನಾನು ಯಾರು? ನನ್ನ ಹೆಸರು ಸೈನ್ಯಗಳ ದೇವರಾದ ಯೆಹೋವನು.


ಯೆಹೋವನೇ, ನೀನು ನನ್ನನ್ನು ಮರುಳುಗೊಳಿಸಿದೆ, ನಿಜವಾಗಿಯೂ ನಾನು ಮರುಳಾದೆನು, ನೀನು ನನಗಿಂತ ಬಲಿಷ್ಠನಾದುದರಿಂದ ಗೆದ್ದೆ. ನಾನೊಂದು ತಮಾಷೆಯಾಗಿದ್ದೇನೆ. ಹಗಲೆಲ್ಲ ಜನರು ನನ್ನನ್ನು ಕಂಡು ನಗುತ್ತಾರೆ. ನನ್ನನ್ನು ಗೇಲಿ ಮಾಡುತ್ತಾರೆ.


ಆ ರಾತ್ರಿ ಜನರು ಭಯಗ್ರಸ್ತರಾಗುವರು. ಬೆಳಗಾಗುವದರೊಳಗೆ ಏನೂ ಉಳಿಯುವದಿಲ್ಲ. ಹಾಗೆಯೇ ನಮ್ಮ ವೈರಿಗಳಿಗೆ ಏನೂ ದೊರಕುವದಿಲ್ಲ. ಅವರು ನಮ್ಮ ದೇಶಕ್ಕೆ ನುಗ್ಗಿದರೂ ಅವರಿಗೆ ಏನೂ ಸಿಗದು.


ಕಾಡುನಾಯಿ ಮತ್ತು ತೋಳಗಳು ಬಾಬಿಲೋನಿನ ಭವ್ಯಭವನಗಳೊಳಗಿಂದ ಅರಚುವವು. ಬಾಬಿಲೋನ್ ಕೊನೆಗೊಳ್ಳುವುದು. ಅದರ ಅಂತ್ಯವು ಸಮೀಪದಲ್ಲಿಯೇ ಇದೆ. ಅದರ ಪೂರ್ಣ ನಾಶನಕ್ಕಾಗಿ ನಾನು ಇನ್ನು ಹೆಚ್ಚು ಹೊತ್ತು ಕಾಯುವದಿಲ್ಲ.”


ಆಗ ಯೆಹೋವನು ಸೊದೋಮ್ ಮತ್ತು ಗೊಮೋರ ಪಟ್ಟಣಗಳ ಮೇಲೆ ಆಕಾಶದಿಂದ ಉರಿಯುವ ಗಂಧಕದ ಮಳೆಯನ್ನು ಸುರಿಸಿದನು.


ಬಾಬಿಲೋನಿನ ಎಲ್ಲಾ ತರುಣರನ್ನು ಕೊಂದುಹಾಕಿರಿ. ಅವರನ್ನು ಕತ್ತರಿಸಿಬಿಡಿ. ಅವರನ್ನು ಸೋಲಿಸುವ ಸಮಯ ಬಂದಿದೆ. ಇದು ಅವರಿಗೆ ಕೇಡಿನ ಕಾಲ. ಇದು ಅವರನ್ನು ದಂಡಿಸುವ ಸಮಯ.


ಕರ್ಮೆಲ್ ಬೆಟ್ಟದಲ್ಲಿ ಗಾಯನವಾಗಲಿ ಹರ್ಷಧ್ವನಿಯಾಗಲಿ ಇರದು. ಸುಗ್ಗಿಕಾಲದ ಎಲ್ಲಾ ಸಂತಸಗಳನ್ನು ನಾನು ನಿಲ್ಲಿಸುವೆನು. ದ್ರಾಕ್ಷಿಯ ಹಣ್ಣುಗಳು ರಸ ತೆಗೆಯಲು ಪಕ್ವವಾಗಿವೆ. ಆದರೆ ಅವುಗಳೆಲ್ಲ ವ್ಯರ್ಥವಾಗುತ್ತವೆ.


ಆ ದಿನವು ಹತ್ತಿರ ಬಂತು! ಹೌದು, ದೇವರು ನ್ಯಾಯತೀರಿಸುವ ದಿನ ಹತ್ತಿರ ಬಂತು. ಅದು ಮೋಡ ಕವಿದ ದಿನವಾಗಿರುವುದು. ಅದು ಜನಾಂಗಗಳಿಗೆ ನ್ಯಾಯತೀರಿಸುವ ಸಮಯ.


ಶೋಕಿಸಿರಿ. ಯಾಕೆಂದರೆ ಯೆಹೋವನ ಮಹಾದಿನವು ಹತ್ತಿರ ಬಂತು. ಆ ಸಮಯದಲ್ಲಿ ಸರ್ವಶಕ್ತನಾದ ದೇವರ ಸನ್ನಿಧಾನದಿಂದ ದಂಡನೆಯು ಬರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು