Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 9:2 - ಪರಿಶುದ್ದ ಬೈಬಲ್‌

2 ಆಗ ಆರು ಮಂದಿ ಪುರುಷರು ಉತ್ತರದಿಕ್ಕಿನಲ್ಲಿದ್ದ ಮೇಲಿನ ದ್ವಾರದ ಮಾರ್ಗದಿಂದ ಬರುತ್ತಿರುವುದನ್ನು ನಾನು ನೋಡಿದೆನು. ಪ್ರತಿಯೊಬ್ಬನ ಕೈಯಲ್ಲಿ ಮಾರಕಾಸ್ತ್ರವಿತ್ತು. ಅವರಲ್ಲೊಬ್ಬನು ನಾರುಮಡಿಯನ್ನು ಧರಿಸಿದ್ದನು. ಅವನ ಸೊಂಟದಲ್ಲಿ ಲೇಖಕನ ಸಾಮಾಗ್ರಿಯ ಚಿಕ್ಕ ಚೀಲವಿತ್ತು. ಅವರು ಆಲಯದೊಳಗಿದ್ದ ತಾಮ್ರದ ವೇದಿಕೆಯ ಬಳಿ ಹೋಗಿ ನಿಂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಕೂಡಲೆ ಗದೆಗಳನ್ನು ಹಿಡಿದುಕೊಂಡ ಆರು ಮಂದಿ ಪುರುಷರು ಉತ್ತರ ಮುಖವಾಗಿರುವ ಮೇಲಣ ಹೆಬ್ಬಾಗಿಲಿನ ಮಾರ್ಗವಾಗಿ ಬಂದರು; ನಾರಿನ ಬಟ್ಟೆಯನ್ನು ಹೊದ್ದುಕೊಂಡು ಲೇಖಕನ ಮಸಿಕುಡಿಕೆಯನ್ನು ನಡುವಿಗೆ ಕಟ್ಟಿಕೊಂಡಿರುವ ಮತ್ತೊಬ್ಬ ಪುರುಷನು ಅವರ ಮಧ್ಯದಲ್ಲಿದ್ದನು. ಇವರೆಲ್ಲರೂ ಒಳಕ್ಕೆ ಸೇರಿ ತಾಮ್ರದ ಯಜ್ಞವೇದಿಯ ಪಕ್ಕದಲ್ಲಿ ನಿಂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಕೂಡಲೆ ಗದೆಗಳನ್ನು ಹಿಡಿದುಕೊಂಡ ಆರುಮಂದಿ ಪುರುಷರು ಉತ್ತರಾಭಿಮುಖವಾಗಿರುವ ಮೇಲಣ ಹೆಬ್ಬಾಗಿಲಿನ ಮಾರ್ಗವಾಗಿ ಬಂದರು; ನಾರಿನ ಬಟ್ಟೆಯನ್ನು ಹೊದ್ದುಕೊಂಡು ಲೇಖಕನ ದೌತಿಯನ್ನು ನಡುವಿಗೆ ಕಟ್ಟಿಕೊಂಡಿರುವ ಮತ್ತೊಬ್ಬ ಪುರುಷನು ಅವರ ಮಧ್ಯದಲ್ಲಿದ್ದನು. ಇವರೆಲ್ಲರೂ ಒಳಕ್ಕೆ ಸೇರಿ ಕಂಚಿನ ಬಲಿಪೀಠದ ಪಕ್ಕದಲ್ಲಿ ನಿಂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಕೂಡಲೆ ಗದೆಗಳನ್ನು ಹಿಡಿದುಕೊಂಡ ಆರುಮಂದಿ ಪುರುಷರು ಉತ್ತರಮುಖವಾಗಿರುವ ಮೇಲಣ ಹೆಬ್ಬಾಗಿಲಿನ ಮಾರ್ಗವಾಗಿ ಬಂದರು; ನಾರಿನ ಬಟ್ಟೆಯನ್ನು ಹೊದ್ದುಕೊಂಡು ಲೇಖಕನ ದೌತಿಯನ್ನು ನಡುವಿಗೆ ಕಟ್ಟಿಕೊಂಡಿರುವ ಮತ್ತೊಬ್ಬ ಪುರುಷನು ಅವರ ಮಧ್ಯದಲ್ಲಿದ್ದನು. ಇವರೆಲ್ಲರೂ ಒಳಕ್ಕೆ ಸೇರಿ ತಾಮ್ರದ ಯಜ್ಞವೇದಿಯ ಪಕ್ಕದಲ್ಲಿ ನಿಂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಕೂಡಲೇ ಗದೆಗಳನ್ನು ಹಿಡಿದುಕೊಂಡ ಆರು ಮಂದಿ ಪುರುಷರು ಉತ್ತರಾಭಿಮುಖವಾಗಿರುವ ಮೇಲಣ ಹೆಬ್ಬಾಗಿಲಿನ ಮಾರ್ಗವಾಗಿ ಬಂದರು. ನಾರಿನ ಬಟ್ಟೆಯನ್ನು ಹೊದ್ದುಕೊಂಡು ಲೇಖಕನ ಮಸಿಕುಡಿಕೆಯನ್ನು ನಡುವಿಗೆ ಕಟ್ಟಿಕೊಂಡಿರುವ ಮತ್ತೊಬ್ಬ ಪುರುಷನು ಅವರ ಮಧ್ಯದಲ್ಲಿದ್ದನು. ಇವರೆಲ್ಲರೂ ಒಳಕ್ಕೆ ಸೇರಿ ಕಂಚಿನ ಬಲಿಪೀಠದ ಪಕ್ಕದಲ್ಲಿ ನಿಂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 9:2
21 ತಿಳಿವುಗಳ ಹೋಲಿಕೆ  

ಆಗ ಸಿಂಹಾಸನದಲ್ಲಿ ಕೂತಿದ್ದಾತನು ನಾರುಮಡಿ ಧರಿಸಿದ್ದವನಿಗೆ, “ಕೆರೂಬಿದೂತರ ಕೆಳಗಿರುವ ಚಕ್ರಗಳ ನಡುವೆ ಹೋಗು. ಕೆರೂಬಿಗಳ ನಡುವೆ ಇರುವ ಉರಿಯುವ ಕೆಂಡಗಳನ್ನು ನಿನ್ನ ಅಂಗೈಗಳಲ್ಲಿ ತುಂಬಿಕೊಂಡು ಜೆರುಸಲೇಮ್ ನಗರದ ಮೇಲೆ ಹರಡು” ಎಂದು ಹೇಳಿದನು. ನಾನು ನೋಡುತ್ತಿರಲು ಆ ಮನುಷ್ಯನು ಒಳಗೆ ಹೋದನು.


ಆರೋನನು ತನ್ನ ಪೂರ್ಣಶರೀರವನ್ನು ನೀರಿನಿಂದ ತೊಳೆದುಕೊಳ್ಳಬೇಕು. ಬಳಿಕ ಅವನು ಈ ಬಟ್ಟೆಗಳನ್ನು ಹಾಕಿಕೊಳ್ಳಬೇಕು. ಆರೋನನು ಪವಿತ್ರ ನಾರಿನ ನಿಲುವಂಗಿಯನ್ನೂ ನಾರಿನ ಚಡ್ಡಿಯನ್ನೂ ಧರಿಸಿಕೊಂಡಿರಬೇಕು. ಅವನು ನಾರಿನ ನಡುಕಟ್ಟನ್ನು ಕಟ್ಟಿಕೊಳ್ಳಬೇಕು; ನಾರಿನ ಮುಂಡಾಸವನ್ನು ಇಟ್ಟುಕೊಳ್ಳಬೇಕು. ಇವುಗಳು ಪವಿತ್ರವಾದವುಗಳಾಗಿವೆ.


ಏಳು ಉಪದ್ರವಗಳನ್ನು ತರುವ ಏಳು ಮಂದಿ ದೇವದೂತರು ಆಲಯದಿಂದ ಹೊರಗೆ ಬಂದರು. ಅವರು ಶುಭ್ರವಾದ ಮತ್ತು ಪ್ರಕಾಶಮಾನವಾದ ನಾರುಮಡಿಯನ್ನು ಧರಿಸಿದ್ದರು. ಅವರು ಎದೆಯ ಸುತ್ತಲೂ ಚಿನ್ನದ ಪಟ್ಟಿಗಳನ್ನು ಕಟ್ಟಿಕೊಂಡಿದ್ದರು.


ಆದರೆ ಅವನು ಉನ್ನತಸ್ಥಳಗಳನ್ನು ನಾಶಗೊಳಿಸಲಿಲ್ಲ. ಈ ಪೂಜಾಸ್ಥಳಗಳಲ್ಲಿ ಜನರು ಯಜ್ಞಗಳನ್ನು ಅರ್ಪಿಸುತ್ತಿದ್ದರು ಮತ್ತು ಧೂಪವನ್ನು ಸುಡುತ್ತಿದ್ದರು. ಯೋತಾಮನು ಯೆಹೋವನ ಆಲಯಕ್ಕೆ ಮೇಲ್ಬಾಗಿಲನ್ನು ನಿರ್ಮಿಸಿದನು.


ನಡೆಯುತ್ತಿರುವ ಎಲ್ಲಾ ಘಟನೆಗಳ ಬಗ್ಗೆ ಯೆಹೂದದ ಅಧಿಪತಿಗಳು ಕೇಳಿದರು. ಅವರು ರಾಜನ ಅರಮನೆಯಿಂದ ಹೊರಗೆ ಬಂದರು. ಅವರು ಯೆಹೋವನ ಆಲಯದವರೆಗೆ ಹೋದರು. ಅಲ್ಲಿ ಅವರು ಹೊಸ ಬಾಗಿಲಿನಲ್ಲಿದ್ದ ತಮ್ಮ ಆಸನಗಳಲ್ಲಿ ಕುಳಿತುಕೊಂಡರು. ಹೊಸಬಾಗಿಲಿನಿಂದ ದಾರಿ ಯೆಹೋವನ ಆಲಯಕ್ಕೆ ಹೋಗುತ್ತದೆ.


ಆದ್ದರಿಂದ ನಾನು ಉತ್ತರದ ಎಲ್ಲಾ ಜನಾಂಗಗಳನ್ನು ಕರೆಸುತ್ತೇನೆ.” ಇದು ಯೆಹೋವನ ಸಂದೇಶ. “ನಾನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಕೂಡಲೇ ಕರೆಸುವೆನು. ಅವನು ನನ್ನ ಸೇವಕ. ನಾನು ಆ ಜನರನ್ನು ಯೆಹೂದ ದೇಶದ ವಿರುದ್ಧವಾಗಿಯೂ ಯೆಹೂದ್ಯರ ವಿರುದ್ಧವಾಗಿಯೂ ತರುತ್ತೇನೆ. ನಾನು ನಿಮ್ಮ ಸುತ್ತಮುತ್ತಲಿನಲ್ಲಿದ್ದ ಜನಾಂಗಗಳ ವಿರುದ್ಧವಾಗಿಯೂ ಅವರನ್ನು ಕರೆತರುವೆನು. ನಾನು ಆ ದೇಶಗಳನ್ನೆಲ್ಲ ನಾಶಮಾಡುವೆನು. ನಾನು ಆ ಭೂಮಿಗಳನ್ನು ಶಾಶ್ವತವಾಗಿ ಬರಿದಾದ ಮರುಭೂಮಿಗಳನ್ನಾಗಿ ಮಾಡುವೆನು. ಜನರು ಆ ದೇಶಗಳನ್ನು ನೋಡಿ ಅವು ಹಾಳಾಗಿರುವುದನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು.


ಸ್ವಲ್ಪ ಸಮಯದಲ್ಲಿಯೇ ನಾನು ಉತ್ತರ ರಾಜ್ಯಗಳ ಎಲ್ಲಾ ಜನರನ್ನು ಕರೆಯುತ್ತೇನೆ” ಎಂದನು. ಮತ್ತೆ ಯೆಹೋವನು ಹೀಗೆ ಹೇಳಿದನು: “ಆ ದೇಶಗಳ ರಾಜರು ಬರುವರು. ಅವರು ಜೆರುಸಲೇಮಿನ ಹೆಬ್ಬಾಗಿಲಿನ ಹತ್ತಿರ ತಮ್ಮ ಆಸನಗಳನ್ನು ಹಾಕುವರು. ಅವರು ಜೆರುಸಲೇಮಿನ ಎಲ್ಲಾ ಕೋಟೆಗೋಡೆಗಳಿಗೆ ಮುತ್ತಿಗೆಹಾಕುವರು. ಅವರು ಯೆಹೂದ ಪ್ರದೇಶದ ಎಲ್ಲಾ ನಗರಗಳ ಮೇಲೆ ಧಾಳಿ ಮಾಡುವರು.


ಯೋತಾಮನು ದೇವಾಲಯದ ಮೇಲಿನ ಬಾಗಿಲನ್ನು ತಿರುಗಿ ಕಟ್ಟಿಸಿದನು. ಪೌಳಿಗೋಡೆಯ ಮೇಲೆ ಓಫೇಲ್ ಎಂಬ ಸ್ಥಳದಲ್ಲಿ ಅನೇಕ ಕಟ್ಟಡಗಳನ್ನು ಕಟ್ಟಿಸಿದನು.


ಸೊಲೊಮೋನನು ತಾಮ್ರದ ಯಜ್ಞವೇದಿಕೆಯನ್ನು ಮಾಡಿಸಿದನು. ಅದು ಇಪ್ಪತ್ತು ಮೊಳ ಉದ್ದ; ಇಪ್ಪತ್ತು ಮೊಳ ಅಗಲ; ಮತ್ತು ಹತ್ತು ಮೊಳ ಎತ್ತರವಿತ್ತು.


ಪವಿತ್ರಗುಡಾರದ ಪ್ರವೇಶದ್ವಾರದ ಬಳಿಯಲ್ಲಿ ಯಜ್ಞವೇದಿಕೆಯನ್ನು ಇರಿಸಿದನು. ಅವನು ಯೆಹೋವನಿಗಾಗಿ ಆ ವೇದಿಕೆಯ ಮೇಲೆ ಸರ್ವಾಂಗಹೋಮವನ್ನೂ ಧಾನ್ಯಸಮರ್ಪಣೆಯನ್ನೂ ಮಾಡಿದನು. ಯೆಹೋವನು ಆಜ್ಞಾಪಿಸಿದಂತೆ ಅವನು ಇದನ್ನು ಮಾಡಿದನು.


ಆಗ ಇಸ್ರೇಲರ ದೇವರ ಮಹಿಮೆಯು ತಾನು ಆಸನಾರೂಢನಾಗಿದ್ದ ಕೆರೂಬಿದೂತರ ಮೇಲಿನಿಂದ ಏರಿ ದೇವಾಲಯದ ಪ್ರವೇಶ ಸ್ಥಳಕ್ಕೆ ಹೋಯಿತು. ಆ ಮಹಿಮೆಯು ನಾರುಮಡಿಯನ್ನು ಧರಿಸಿದ್ದ, ಲೇಖಕನ ಸಾಮಾಗ್ರಿಯ ಚಿಕ್ಕ ಚೀಲವನ್ನು ಹೊಂದಿದ್ದ ಪುರುಷನನ್ನು ಕರೆಯಿತು.


ಆಗ ನಾರುಬಟ್ಟೆಯನ್ನು ಧರಿಸಿಕೊಂಡು ಲೇಖಕನ ಸಾಮಾಗ್ರಿಯ ಚಿಕ್ಕ ಚೀಲವನ್ನು ಸೊಂಟಕ್ಕೆ ಕಟ್ಟಿಕೊಂಡಿದ್ದವನು, “ನೀನು ಆಜ್ಞಾಪಿಸಿದ ಮೇರೆಗೆ ನಾನು ಮಾಡಿದೆ” ಅಂದನು.


ಅಲ್ಲಿ ನಿಂತುಕೊಂಡಿದ್ದಾಗ ನಾನು ಮುಖವೆತ್ತಿ ನೋಡಿದೆ. ನನ್ನ ಎದುರಿಗೆ ಒಬ್ಬ ವ್ಯಕ್ತಿಯು ನಿಂತಿದ್ದನ್ನು ಕಂಡೆ. ಅವನು ನಾರುಬಟ್ಟೆಯನ್ನು ಧರಿಸಿಕೊಂಡಿದ್ದನು. ಅವನು ಊಫಜಿನ ಅಪರಂಜಿಯ ಪಟ್ಟಿಯನ್ನು ಸೊಂಟಕ್ಕೆ ಬಿಗಿದುಕೊಂಡಿದ್ದನು.


ನಾರುಮಡಿಯನ್ನು ಧರಿಸಿದ್ದವನೊಬ್ಬನು ನದಿಯಲ್ಲಿ ನೀರಿನ ಮೇಲೆ ನಿಂತಿದ್ದನು. ಅವರಿಬ್ಬರಲ್ಲಿ ಒಬ್ಬನು, “ಆ ಅದ್ಭುತ ಘಟನೆಗಳು ಸಂಭವಿಸುವದಕ್ಕೆ ಇನ್ನು ಎಷ್ಟು ಕಾಲ ಬೇಕು?” ಎಂದು ಅವನನ್ನು ಕೇಳಿದನು.


ಚೀಯೋನಿನ ಕಡೆಗೆ ಧ್ವಜವನ್ನು ಎತ್ತಿ ಸಂಕೇತ ಕೊಡಿ. ನಿಲ್ಲಬೇಡಿ. ನಿಮ್ಮ ಜೀವ ರಕ್ಷಣೆಗಾಗಿ ಓಡಿರಿ. ನಾನು ಉತ್ತರದಿಂದ ವಿಪತ್ತನ್ನು ತರುತ್ತಿರುವುದರಿಂದ ನೀವು ಹೀಗೆ ಮಾಡಬೇಕು. ನಾನು ಭಯಂಕರವಾದ ವಿನಾಶವನ್ನು ಬರಮಾಡಲಿದ್ದೇನೆ.”


ಆಗ ಅದು ಕೈಯಂತಿದ್ದ ಒಂದನ್ನು ಚಾಚಿ ನನ್ನ ತಲೆಯ ಕೂದಲನ್ನು ಹಿಡಿದುಕೊಂಡಿತು. ಬಳಿಕ ಆತ್ಮವು ನನ್ನನ್ನು ಮೇಲಕ್ಕೆ ಎತ್ತಿ ದಿವ್ಯದರ್ಶನದಲ್ಲಿ ಜೆರುಸಲೇಮಿಗೆ ಕೊಂಡೊಯ್ಯಿತು. ಅದು ನನ್ನನ್ನು ಒಳದ್ವಾರಕ್ಕೆ ಕೊಂಡೊಯ್ಯಿತು. ಇದು ಉತ್ತರ ದಿಕ್ಕಿನಲ್ಲಿತ್ತು. ದೇವರನ್ನು ಸಿಟ್ಟಿಗೆಬ್ಬಿಸುವ ವಿಗ್ರಹವು ಈ ದ್ವಾರದ ಬಳಿ ಇತ್ತು.


ಯಜ್ಞವೇದಿಕೆಯ ಬಳಿಯಲ್ಲಿ ನನ್ನ ಒಡೆಯನು ನಿಂತಿರುವುದನ್ನು ಕಂಡೆನು. ಆತನು ಹೇಳಿದ್ದೇನೆಂದರೆ, “ಸ್ತಂಭಗಳ ಮೇಲೆ ಹೊಡೆಯಿರಿ, ಆಗ ಕಟ್ಟಡವು ಹೊಸ್ತಿಲಿನ ತನಕ ಕಂಪಿಸುವದು. ಸ್ತಂಭಗಳು ಜನರ ತಲೆಗಳ ಮೇಲೆ ಕುಸಿದುಬೀಳುವಂತೆ ಮಾಡಿರಿ. ಅದರಿಂದ ಸಾಯದೆ ಉಳಿಯುವವರನ್ನು ನಾನು ಖಡ್ಗದಿಂದ ಸಾಯಿಸುವೆನು. ಅದರಿಂದ ತಪ್ಪಿಸಿಕೊಂಡು ಓಡಿಹೋಗಲು ಒಬ್ಬನು ಪ್ರಯತ್ನಿಸಿದರೂ ಸಾಧ್ಯವಾಗುವುದಿಲ್ಲ. ಒಬ್ಬನಾದರೂ ತಪ್ಪಿಸಿಕೊಳ್ಳುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು