ಯೆಹೂದದ ಮತ್ತು ಜೆರುಸಲೇಮಿನ ಜನರನ್ನು ನಾಶಮಾಡಲು ಬಾಬಿಲೋನಿನ ಅರಸನನ್ನು ಕಳುಹಿಸಿದನು. ಬಾಬಿಲೋನಿನ ಅರಸನು ದೇವಾಲಯದೊಳಗಿದ್ದ ಯುವಜನರನ್ನು ಕೊಂದುಹಾಕಿದನು. ಅವನಿಗೆ ಯೆಹೂದದ ಮತ್ತು ಜೆರುಸಲೇಮಿನ ಜನರ ಮೇಲೆ ಕರುಣೆಯೇ ಇರಲಿಲ್ಲ. ಅವನು ಚಿಕ್ಕವರನ್ನೂ ದೊಡ್ಡವರನ್ನೂ ಗಂಡಸರನ್ನೂ ಹೆಂಗಸರನ್ನೂ ಬಿಡದೆ ಸಂಹರಿಸಿದನು. ರೋಗಿಗಳನ್ನೂ ಆರೋಗ್ಯವಂತರನ್ನೂ ಸಂಹರಿಸಿದನು; ಯೆಹೂದದ ಮತ್ತು ಜೆರುಸಲೇಮಿನ ಜನರನ್ನು ಶಿಕ್ಷಿಸಲು ದೇವರು ನೆಬೂಕದ್ನೆಚ್ಚರನನ್ನು ಉಪಯೋಗಿಸಿದನು.
ಅದೇ ಸಮಯದಲ್ಲಿ ಅಲ್ಲಿದ್ದ ಕೆಲವರು ಯೇಸುವಿನ ಬಳಿಗೆ ಬಂದು ಗಲಿಲಾಯದಲ್ಲಿ ಯಜ್ಞ ಅರ್ಪಿಸುತ್ತಿದ್ದವರನ್ನು ಪಿಲಾತನು ಕೊಲ್ಲಿಸಿದ್ದನ್ನೂ ಅವರು ಯಜ್ಞವಾಗಿ ಅರ್ಪಿಸಿದ್ದ ಪಶುಗಳ ರಕ್ತದೊಡನೆ ಅವರ ರಕ್ತವನ್ನು ಬೆರಸಿದ್ದನ್ನೂ ಯೇಸುವಿಗೆ ತಿಳಿಸಿದರು.
ನನ್ನ ಕಡೆಗೆ ನೋಡು. ನೀನು ಇಷ್ಟೆಲ್ಲ ಮಾಡಿದ್ದು ಯಾರಿಗೆ ಎಂಬುದನ್ನು ನೋಡು. ನಾನು ನಿನಗೆ ಈ ಪ್ರಶ್ನೆಗಳನ್ನು ಕೇಳಬಯಸುತ್ತೇನೆ. ಏನು, ಸ್ತ್ರೀಯರು ತಾವು ಹೆತ್ತ ಮಕ್ಕಳನ್ನೇ ತಿನ್ನಬೇಕೇ? ಸ್ತ್ರೀಯರು ತಾವು ಲಾಲನೆಪಾಲನೆ ಮಾಡಿದ ಮಕ್ಕಳನ್ನೇ ತಿನ್ನಬೇಕೇ? ಯೆಹೋವನ ಪವಿತ್ರ ಆಲಯದಲ್ಲಿಯೇ ಯಾಜಕನನ್ನು ಮತ್ತು ಪ್ರವಾದಿಯನ್ನು ಕೊಲ್ಲಬೇಕೇ?