ಯೆಹೋಶುವ 1:9 - ಪರಿಶುದ್ದ ಬೈಬಲ್9 ನೆನಪಿಡು, ನೀನು ಸ್ಥಿರಚಿತ್ತನಾಗಿರಬೇಕೆಂತಲೂ ಧೈರ್ಯಶಾಲಿಯಾಗಿರಬೇಕೆಂತಲೂ ನಾನು ನಿನಗೆ ಆಜ್ಞಾಪಿಸುತ್ತೇನೆ. ಆದ್ದರಿಂದ ಹೆದರಬೇಡ, ಯಾಕೆಂದರೆ ನೀನು ಹೋಗುವಲ್ಲೆಲ್ಲಾ ನಿನ್ನ ದೇವರಾದ ಯೆಹೋವನೇ ನಿನ್ನ ಸಂಗಡ ಇರುವನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನಾನು ನಿನಗೆ ಆಜ್ಞಾಪಿಸಿದಂತೆ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವಲ್ಲೆಲ್ಲಾ ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರುವನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ನಾನು ನಿನಗೆ ಆಜ್ಞಾಪಿಸಿದಂತೆ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವ ಎಡೆಗಳಲ್ಲೆಲ್ಲ ನಿನ್ನ ದೇವರೂ ಸರ್ವೇಶ್ವರನೂ ಆದ ನಾನು ನಿನ್ನ ಸಂಗಡ ಇರುತ್ತೇನೆ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನಾನು ನಿನಗೆ ಆಜ್ಞಾಪಿಸಿದ್ದೇನಲ್ಲಾ; ಸ್ಥಿರಚಿತ್ತನಾಗಿರು, ಧೈರ್ಯದಿಂದಿರು. ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವಲ್ಲೆಲ್ಲಾ ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರುತ್ತಾನೆ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ನಾನು ನಿನಗೆ ಆಜ್ಞಾಪಿಸಿದ್ದೇನಲ್ಲಾ, ಬಲಿಷ್ಠನಾಗಿರು. ಧೈರ್ಯದಿಂದಿರು, ಭಯಪಡಬೇಡ, ನಿರುತ್ಸಾಹಗೊಳ್ಳಬೇಡ. ಏಕೆಂದರೆ ನೀನು ಹೋಗುವ ಕಡೆಯೆಲ್ಲಾ ನಿನ್ನ ದೇವರಾದ ಯೆಹೋವ ದೇವರು ನಿನ್ನ ಸಂಗಡ ಇದ್ದಾರೆ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |
ಆಗ ಅಬ್ಷಾಲೋಮನು ತನ್ನ ಸೇವಕರಿಗೆ ಈ ರೀತಿ ಆಜ್ಞೆ ಮಾಡಿದನು: “ಅಮ್ನೋನನನ್ನು ಗಮನಿಸುತ್ತಿರಿ. ಅವನು ಮತ್ತನಾಗಿ ಆನಂದಿಸುತ್ತಿರುವಾಗ ನಾನು ಆಜ್ಞೆಯನ್ನು ಕೊಡುತ್ತೇನೆ. ಆಗ ನೀವು ಅವನ ಮೇಲೆ ಆಕ್ರಮಣಮಾಡಿ ಕೊಲ್ಲಬೇಕು. ನಿಮಗೆ ಶಿಕ್ಷೆಯಾಗುತ್ತದೆ ಎಂಬ ಭಯವಿಲ್ಲದಿರಲಿ, ಯಾಕೆಂದರೆ ನೀವು ನನ್ನ ಆಜ್ಞೆಯನ್ನು ಪಾಲಿಸಿದಿರಷ್ಟೇ, ಆದ್ದರಿಂದ ಶಕ್ತರಾಗಿಯೂ ಧೈರ್ಯವಂತರಾಗಿಯೂ ಇರಿ” ಎಂದನು.