Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 10:26 - ಪರಿಶುದ್ದ ಬೈಬಲ್‌

26 ಆಮೇಲೆ ಯೆಹೋಶುವನು ಆ ಐದು ಮಂದಿ ಅರಸರನ್ನು ಕೊಂದುಹಾಕಿದನು. ಅವರ ದೇಹಗಳನ್ನು ಐದು ಮರಗಳಿಗೆ ಸಾಯಂಕಾಲದವರೆಗೂ ನೇತುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅನಂತರ ಆ ಅರಸರನ್ನು ಕೊಲ್ಲಿಸಿ ಐದು ಮರಗಳಿಗೆ ನೇತುಹಾಕಿಸಿದನು. ಅವರ ಶವಗಳು ಸಾಯಂಕಾಲದವರೆಗೂ ಅಲ್ಲೇ ತೂಗಾಡುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಅನಂತರ ಆ ಅರಸರನ್ನು ಕೊಲ್ಲಿಸಿ ಐದು ಮರಗಳಿಗೆ ನೇತುಹಾಕಿಸಿದನು. ಅವರ ಶವಗಳು ಸಾಯಂಕಾಲದವರೆಗೂ ಅಲ್ಲೇ ತೂಗಾಡುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆ ಅರಸರನ್ನು ಕೊಲ್ಲಿಸಿ ಐದು ಮರಗಳಿಗೆ ನೇತುಹಾಕಿಸಿದನು. ಅವರ ಶವಗಳು ಸಾಯಂಕಾಲದವರೆಗೂ ಅಲ್ಲೇ ತೂಗಾಡುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆ ತರುವಾಯ ಯೆಹೋಶುವನು ಅವರನ್ನು ದಂಡಿಸಿ, ಐದು ಮರಗಳಲ್ಲಿ ತೂಗುಹಾಕಿಸಿದನು. ಅವರ ಶವಗಳು ಸಾಯಂಕಾಲದವರೆಗೂ ಮರಗಳಲ್ಲಿ ತೂಗಾಡುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 10:26
14 ತಿಳಿವುಗಳ ಹೋಲಿಕೆ  

ಯೆಹೋಶುವನು “ಆಯಿ”ಯ ಅರಸನನ್ನು ಒಂದು ಮರಕ್ಕೆ ಸಾಯಂಕಾಲದವರೆಗೂ ನೇತುಹಾಕಿದನು. ಸೂರ್ಯನು ಮುಳುಗಿದ ಮೇಲೆ, ಯೆಹೋಶುವನು ಆ ಅರಸನ ಶವವನ್ನು ಮರದಿಂದ ಕೆಳಗಿಳಿಸಿ ನಗರದ ದ್ವಾರದಲ್ಲೇ ಬಿಸಾಡಿ ಅದರ ಮೇಲೆ ಕಲ್ಲಿನ ದೊಡ್ಡ ಕುಪ್ಪೆಯನ್ನು ಮಾಡಿಸಿದನು. ಅದು ಇಂದಿನವರೆಗೂ ಹಾಗೆಯೇ ಇದೆ.


ಧರ್ಮಶಾಸ್ತ್ರವು ನಮ್ಮ ಮೇಲೆ ಶಾಪವನ್ನು ಬರಮಾಡುತ್ತದೆ. ಆದರೆ ಕ್ರಿಸ್ತನು ಆ ಶಾಪವನ್ನು ತನ್ನ ಮೇಲೆ ತೆಗೆದುಕೊಂಡನು. ಆತನು ನಮ್ಮ ಸ್ಥಾನವನ್ನು ತಾನೇ ತೆಗೆದುಕೊಂಡನು. ಕ್ರಿಸ್ತನು ತನ್ನನ್ನೇ ಶಾಪಕ್ಕೆ ಒಳಪಡಿಸಿಕೊಂಡನು. ಪವಿತ್ರ ಗ್ರಂಥದಲ್ಲಿ ಬರೆದಿರುವಂತೆ, “ಮರಕ್ಕೆ ತೂಗುಹಾಕಲ್ಪಟ್ಟ ವ್ಯಕ್ತಿಯು ಶಾಪಗ್ರಸ್ತನಾಗಿದ್ದಾನೆ.”


ಜನರೆಲ್ಲರೂ, “ಅವನ ಸಾವಿಗೆ ನಾವೇ ಜವಾಬ್ದಾರರು. ಅವನ ಸಾವಿಗೆ ಏನಾದರೂ ದಂಡನೆಯಿದ್ದರೆ ಅದನ್ನು ನಾವು ಮತ್ತು ನಮ್ಮ ಮಕ್ಕಳು ಅನುಭವಿಸುತ್ತೇವೆ” ಎಂದು ಉತ್ತರಕೊಟ್ಟರು.


ಕೂಡಲೇ ವಿಚಾರಣೆ ನಡೆಸಿದಾಗ ಮೊರ್ದೆಕೈಯು ಹೇಳಿದ ವಿಷಯವು ಸತ್ಯ ಎಂದು ಗೊತ್ತಾಯಿತು. ಆ ಎರಡು ದ್ವಾರಪಾಲಕರನ್ನು ಹಿಡಿದು ಗಲ್ಲಿಗೇರಿಸಿದರು. ಈ ಎಲ್ಲಾ ಸಮಾಚಾರವನ್ನು ರಾಜನ ಬಳಿಯಲ್ಲಿರುವ ರಾಜಕಾಲ ವೃತ್ತಾಂತ ಪುಸ್ತಕದಲ್ಲಿ ಬರೆಯಲ್ಪಟ್ಟವು.


ಗಿಬ್ಯೋನ್ಯರು ಈ ಏಳು ಮಂದಿ ಗಂಡುಮಕ್ಕಳನ್ನು ಗಿಬೆಯ ಬೆಟ್ಟದ ಮೇಲೆ ಯೆಹೋವನ ಸನ್ನಿಧಿಯಲ್ಲಿ ನೇತುಹಾಕಿದರು. ಈ ಏಳು ಮಂದಿ ಒಟ್ಟಿಗೆ ಸತ್ತರು. ಅವರನ್ನು ಸುಗ್ಗಿಯ ಆರಂಭದ ದಿನಗಳಲ್ಲಿ ಕೊಲ್ಲಲಾಯಿತು. (ಬಾರ್ಲಿಯ ಸುಗ್ಗಿಯು ಆಗ ತಾನೇ ಆರಂಭವಾಗಿತ್ತು.)


ಅವನ ಏಳು ಮಂದಿ ಗಂಡುಮಕ್ಕಳನ್ನು ನಮ್ಮ ಬಳಿಗೆ ಕಳುಹಿಸು. ಸೌಲನು ವಾಸವಾಗಿದ್ದ ಗಿಬೆಯ ಬೆಟ್ಟದ ಮೇಲೆ ಯೆಹೋವನ ಸನ್ನಿಧಿಯಲ್ಲಿ ನೇತುಹಾಕುತ್ತೇವೆ” ಎಂದು ಹೇಳಿದರು. ರಾಜನಾದ ದಾವೀದನು, “ಆ ಗಂಡುಮಕ್ಕಳನ್ನು ನಾನು ನಿಮಗೆ ಒಪ್ಪಿಸುತ್ತೇನೆ” ಎಂದು ಹೇಳಿದನು.


ಆದರೆ ಸಮುವೇಲನು ಅಗಾಗನಿಗೆ, “ನಿನ್ನ ಕತ್ತಿಯು ಅನೇಕ ತಾಯಂದಿರಿಗೆ ಮಕ್ಕಳಿಲ್ಲದಂತೆ ಮಾಡಿದೆ. ಆದ್ದರಿಂದ ಈಗ ನಿನ್ನ ತಾಯಿಗೆ ಮಕ್ಕಳಿಲ್ಲದಂತಾಯಿತು” ಎಂದು ಹೇಳಿ ಅಗಾಗನನ್ನು ಗಿಲ್ಗಾಲಿನ ಯೆಹೋವನ ಸನ್ನಿಧಿಯಲ್ಲೇ ಕಡಿದುಹಾಕಿದನು.


ಆಗ ಜೆಬಹ ಮತ್ತು ಚಲ್ಮುನ್ನರು ಗಿದ್ಯೋನನಿಗೆ, “ನೀನೇ ನಮ್ಮನ್ನು ಕೊಲ್ಲು. ನೀನು ಈ ಕೆಲಸವನ್ನು ಮಾಡುವುದಕ್ಕೆ ಯೋಗ್ಯವಯಸ್ಸಿನವನೂ ಗಟ್ಟಿಗನೂ ಆಗಿರುವೆ” ಎಂದರು. ಗಿದ್ಯೋನನು ಎದ್ದು ಜೆಬಹ ಮತ್ತು ಚಲ್ಮುನ್ನರನ್ನು ಕೊಂದುಹಾಕಿದನು. ಆಮೇಲೆ ಗಿದ್ಯೋನನು ಅವರ ಒಂಟೆಗಳ ಕೊರಳಲ್ಲಿದ್ದ ಅರ್ಧಚಂದ್ರಾಕಾರದ ಆಭರಣಗಳನ್ನು ತೆಗೆದುಕೊಂಡನು.


ಯೆಹೋವನು ಮೋಶೆಗೆ, “ನೀನು ಜನರ ನಾಯಕರನ್ನೆಲ್ಲ ಬಂಧಿಸಿ ಯೆಹೋವನ ಮುಂದೆ ಬಹಿರಂಗವಾಗಿ ಅವರನ್ನು ನೇಣುಗಂಬಕ್ಕೆ ಏರಿಸು. ಹೀಗೆ ಯೆಹೋವನ ಕೋಪಾಗ್ನಿಯನ್ನು ಇಸ್ರೇಲರಿಂದ ತೊಲಗಿಸಬೇಕು” ಎಂದು ಹೇಳಿದನು.


ಆ ದಿನವು ಸಿದ್ಧತೆಯ ದಿನವಾಗಿತ್ತು. ಮರುದಿನ ವಿಶೇಷವಾದ ಸಬ್ಬತ್‌ದಿನವಾಗಿತ್ತು. ಸಬ್ಬತ್‌ದಿನದಂದು ದೇಹಗಳು ಶಿಲುಬೆಯ ಮೇಲಿರುವುದು ಯೆಹೂದ್ಯರಿಗೆ ಇಷ್ಟವಿರಲಿಲ್ಲ. ಆದ್ದರಿಂದ ಅವರ ಕಾಲುಗಳನ್ನು ಮುರಿದು ಬೇಗನೆ ಸಾಯಿಸಲು ಆಜ್ಞಾಪಿಸಬೇಕೆಂಬುದಾಗಿ ಅವರು ಪಿಲಾತನನ್ನು ಕೇಳಿಕೊಂಡರು.


ನನ್ನ ಶತ್ರುಗಳು ಸಹಾಯಕ್ಕಾಗಿ ಕೂಗಿಕೊಂಡರು. ಆದರೆ ಅವರನ್ನು ರಕ್ಷಿಸಲು ಯಾರೂ ಇರಲಿಲ್ಲ. ಅವರು ಯೆಹೋವನನ್ನೂ ಕೂಗಿಕೊಂಡರು; ಆದರೆ ಆತನೂ ಅವರಿಗೆ ಉತ್ತರಿಸಲಿಲ್ಲ.


ಅವರು ಹೋಗಿ ತಮ್ಮ ಶತ್ರುಗಳನ್ನು ದಂಡಿಸಲಿ; ಅನ್ಯ ಜನರನ್ನು ದಂಡಿಸಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು