Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 10:36 - ಪರಿಶುದ್ದ ಬೈಬಲ್‌

36 ಆಮೇಲೆ ಯೆಹೋಶುವನು ಮತ್ತು ಎಲ್ಲ ಇಸ್ರೇಲರು ಎಗ್ಲೋನಿನಿಂದ ಹೆಬ್ರೋನಿಗೆ ಪ್ರಯಾಣ ಮಾಡಿ ಹೆಬ್ರೋನಿನ ಮೇಲೆ ಧಾಳಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಅನಂತರ ಯೆಹೋಶುವನೂ, ಇಸ್ರಾಯೇಲರೂ ಎಗ್ಲೋನನ್ನು ಬಿಟ್ಟು ಹೆಬ್ರೋನಿಗೆ ಹೋಗಿ ಅದಕ್ಕೆ ವಿರೋಧವಾಗಿ ಯುದ್ಧಮಾಡಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಅನಂತರ ಯೆಹೋಶುವನು ಮತ್ತು ಇಸ್ರಯೇಲರು ಎಗ್ಲೋನನ್ನು ಬಿಟ್ಟು ಹೆಬ್ರೋನಿಗೆ ಹೋಗಿ ಅದಕ್ಕೆ ವಿರುದ್ಧ ಯುದ್ಧಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಅನಂತರ ಯೆಹೋಶುವನೂ ಇಸ್ರಾಯೇಲ್ಯರೂ ಎಗ್ಲೋನನ್ನು ಬಿಟ್ಟು ಹೆಬ್ರೋನಿಗೆ ಹೋಗಿ ಅದಕ್ಕೆ ವಿರೋಧವಾಗಿ ಯುದ್ಧಮಾಡಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಅನಂತರ ಯೆಹೋಶುವನು ಸಮಸ್ತ ಇಸ್ರಾಯೇಲರ ಸಂಗಡ ಎಗ್ಲೋನಿನಿಂದ ಹೆಬ್ರೋನಿಗೆ ಹೊರಟುಹೋಗಿ, ಅದರ ಮೇಲೆ ಯುದ್ಧಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 10:36
17 ತಿಳಿವುಗಳ ಹೋಲಿಕೆ  

ತರುವಾಯ ಯೆಹೂದ್ಯರು ಕಿರ್ಯತರ್ಬವೆಂಬ ಹೆಬ್ರೋನ್ ನಗರದಲ್ಲಿದ್ದ ಕಾನಾನ್ಯರೊಂದಿಗೆ ಯುದ್ಧಮಾಡಲು ಹೋದರು. ಯೆಹೂದ್ಯರು ಶೇಷೈ, ಅಹೀಮನ್ ಮತ್ತು ತಲ್ಮೈ ಎಂಬವರನ್ನು ಸೋಲಿಸಿಬಿಟ್ಟರು.


ಯೆಫುನ್ನೆಯ ಮಗನಾದ ಕಾಲೇಬನಿಗೆ ಯೆಹೂದ ಕುಲದವರ ಸ್ವಾಸ್ತ್ಯದಲ್ಲಿಯೇ ಸ್ವಲ್ಪ ಪ್ರದೇಶವನ್ನು ಕೊಡಬೇಕೆಂದು ದೇವರು ಯೆಹೋಶುವನಿಗೆ ಹೇಳಿದ್ದನು. ಅದಕ್ಕಾಗಿ ಯೆಹೋಶುವನು ಕಾಲೇಬನಿಗೆ ದೇವರು ಆಜ್ಞಾಪಿಸಿದ ಪ್ರದೇಶವನ್ನು ಕೊಟ್ಟನು. ಯೆಹೋಶುವನು ಅವನಿಗೆ ಹೆಬ್ರೋನ್ ಎಂಬ ಕಿರ್ಯಾತರ್ಬ ಊರನ್ನು ಕೊಟ್ಟನು. (ಅರ್ಬನು ಅನಾಕನ ತಂದೆ.)


ಅವರು ನೆಗೆವ್ ಮೂಲಕ ದೇಶವನ್ನು ಪ್ರವೇಶಿಸಿ ಹೆಬ್ರೋನಿಗೆ ಹೋದರು. ಹೆಬ್ರೋನ್ ಪಟ್ಟಣವು ಈಜಿಪ್ಟ್ ದೇಶದಲ್ಲಿರುವ ಚೋವನ್ ಪಟ್ಟಣಕ್ಕಿಂತ ಏಳು ವರ್ಷಗಳ ಮುಂಚೆ ಕಟ್ಟಲ್ಪಟ್ಟಿತ್ತು. ಅಲ್ಲಿ ಅಹೀಮನ್, ಶೇಫೈ ಮತ್ತು ತಲ್ಮೈ ಎಂಬವರು ವಾಸಿಸುತ್ತಿದ್ದರು. ಇವರು ಅನಾಕನ ಸಂತತಿಯವರು.


ಆ ಗುಂಪಿನಲ್ಲಿ ಚಾದೋಕನೂ ಇದ್ದನು. ಇವನೂ ಪರಾಕ್ರಮಶಾಲಿಯಾಗಿದ್ದನು. ಇವನು ತನ್ನ ಇಪ್ಪತ್ತೆರಡು ಮಂದಿ ಅಧಿಕಾರಿಗಳೊಂದಿಗೆ ಸೇರಿದನು.


ದಾವೀದನು ಹೆಬ್ರೋನಿನಲ್ಲಿದ್ದಾಗ ಯುದ್ಧಸನ್ನದ್ಧರಾಗಿದ್ದವರು ದಾವೀದನಿಗೆ ಸೌಲನ ರಾಜ್ಯವನ್ನು ಕೊಡಲು ಬಂದರು. ಇದು ಯೆಹೋವನು ಮುಂತಿಳಿಸಿದಂತೆ ಆಯಿತು. ಅವರ ಸಂಖ್ಯೆಯು ಹೀಗಿದೆ:


ಆದ್ದರಿಂದ ಆರೋನನ ಸಂತತಿಯವರಿಗೆ ಆಶ್ರಯನಗರವಾದ ಹೆಬ್ರೋನ್ ನಗರವನ್ನು ಕೊಡಲಾಯಿತು. ಆರೋನನ ಸಂತತಿಯವರಿಗೆ ಅವರು ಲಿಬ್ನಾ,


ಹುಮ್ಟಾ ಹೆಬ್ರೋನ್ ಎಂಬ ಕಿರ್ಯತರ್ಬ ಮತ್ತು ಚೀಯೋರ್ ಎಂಬ ಒಂಭತ್ತು ಊರುಗಳು ಮತ್ತು ಅವುಗಳ ಸುತ್ತಮುತ್ತಲಿನ ಹೊಲಗದ್ದೆಗಳು.


ಆಗ ಆ ಐದು ಮಂದಿ ಅಮೋರಿಯರ ಅರಸರು ಸೈನ್ಯವನ್ನು ಸೇರಿಸಿದರು. (ಜೆರುಸಲೇಮಿನ ಅರಸ, ಹೆಬ್ರೋನಿನ ಅರಸ, ಯರ್ಮೂತಿನ ಅರಸ, ಲಾಕೀಷಿನ ಅರಸ ಮತ್ತು ಎಗ್ಲೋನಿನ ಅರಸ; ಇವರೇ ಆ ಐದು ಮಂದಿ ಅರಸರು.) ಆ ಸೈನ್ಯಗಳು ಗಿಬ್ಯೋನಿಗೆ ಹೋಗಿ ಪಟ್ಟಣವನ್ನು ಸುತ್ತುವರಿದು ಅದರ ವಿರುದ್ಧ ಹೋರಾಟ ಪ್ರಾರಂಭಿಸಿದವು.


ಜೆರುಸಲೇಮಿನ ಅರಸನಾದ ಅದೋನೀಚೆದೆಕನು ಹೆಬ್ರೋನಿನ ಅರಸನಾದ ಹೋಹಾಮನೊಂದಿಗೆ ಮಾತನಾಡಿದನು. ಅವನು ಯರ್ಮೂತಿನ ಅರಸನಾದ ಪಿರಾಮ್, ಲಾಕೀಷಿನ ಅರಸನಾದ ಯಾಫೀಯ ಮತ್ತು ಎಗ್ಲೋನಿನ ಅರಸನಾದ ದೆಬೀರ್ ಇವರೊಂದಿಗೂ ಮಾತನಾಡಿದನು. ಜೆರುಸಲೇಮಿನ ಅರಸನು ಅವರಿಗೆ,


ಆದ್ದರಿಂದ ಅಬ್ರಾಮನು ತನ್ನ ಗುಡಾರಗಳನ್ನು ಕೀಳಿಸಿ, ದೊಡ್ಡ ಮರಗಳಿರುವ ಮಮ್ರೆಯ ಸಮೀಪಕ್ಕೆ ಹೋಗಿ ವಾಸಿಸತೊಡಗಿದನು. ಇದು ಹೆಬ್ರೋನ್ ನಗರಕ್ಕೆ ಸಮೀಪದಲ್ಲಿತ್ತು. ಆ ಸ್ಥಳದಲ್ಲಿ ಅಬ್ರಾಮನು ಯೆಹೋವನನ್ನು ಆರಾಧಿಸುವುದಕ್ಕಾಗಿ ಯಜ್ಞವೇದಿಕೆಯನ್ನು ಕಟ್ಟಿದನು.


ಆ ದಿವಸ ಅವರು ಆ ನಗರವನ್ನು ಸ್ವಾಧೀನಪಡಿಸಿಕೊಂಡು ಅಲ್ಲಿದ್ದ ಎಲ್ಲ ಜನರನ್ನು ಕೊಂದುಹಾಕಿದರು. ಅವರು ಲಾಕೀಷಿನಲ್ಲಿ ಮಾಡಿದಂತೆ ಇಲ್ಲಿಯೂ ಮಾಡಿದರು.


ಅವರು ಹೆಬ್ರೋನ್ ಪಟ್ಟಣವನ್ನೂ ಅದರ ರಾಜನನ್ನೂ ಮತ್ತು ಅದರ ಸಮೀಪದಲ್ಲಿದ್ದ ಎಲ್ಲ ಸಣ್ಣಪುಟ್ಟ ಊರುಗಳನ್ನೂ ಸ್ವಾಧೀನಪಡಿಸಿಕೊಂಡರು. ಇಸ್ರೇಲರು ಆ ಪಟ್ಟಣದಲ್ಲಿದ್ದ ಎಲ್ಲರನ್ನೂ ಕೊಂದರು. ಅಲ್ಲಿ ಯಾರೊಬ್ಬರೂ ಜೀವಂತವಾಗಿ ಉಳಿಯಲಿಲ್ಲ. ಅವರು ಎಗ್ಲೋನಿನಲ್ಲಿ ಮಾಡಿದಂತೆಯೇ ಇಲ್ಲಿಯೂ ಮಾಡಿದರು. ಅವರು ಪಟ್ಟಣವನ್ನು ನಾಶಮಾಡಿದರು ಮತ್ತು ಅಲ್ಲಿದ್ದ ಎಲ್ಲ ಜನರನ್ನು ಕೊಂದರು.


ಹೆಬ್ರೋನಿಗೆ ಸಮೀಪದಲ್ಲಿರುವ ಭೂಮಿಯನ್ನು ಕಾಲೇಬನಿಗೆ ಕೊಡುವುದಾಗಿ ಮೋಶೆಯು ವಾಗ್ದಾನ ಮಾಡಿದ್ದನು. ಆದ್ದರಿಂದ ಆ ಭೂಮಿಯನ್ನು ಕಾಲೇಬನ ಕುಟುಂಬದವರಿಗೆ ಕೊಡಲಾಯಿತು. ಕಾಲೇಬನ ಜನರು ಅನಾಕನ ಮೂರು ಜನ ಮಕ್ಕಳನ್ನು ಆ ಪ್ರದೇಶದಿಂದ ಬಲವಂತವಾಗಿ ಹೊರಗಟ್ಟಿದರು.


ಚೊರ್ಗ, ಅಯ್ಯಾಲೋನ್ ಮತ್ತು ಹೆಬ್ರೋನ್ ಎಂಬ ಯೆಹೂದ ಮತ್ತು ಬೆನ್ಯಾಮೀನ್ ಪ್ರಾಂತದ ಪಟ್ಟಣಗಳನ್ನು ದುರಸ್ತಿಪಡಿಸಿ ಭದ್ರಪಡಿಸಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು