Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 10:4 - ಪರಿಶುದ್ದ ಬೈಬಲ್‌

4 “ನನ್ನೊಂದಿಗೆ ಬಂದು ಗಿಬ್ಯೋನಿನ ಮೇಲೆ ಧಾಳಿಮಾಡಲು ಸಹಾಯಮಾಡಿರಿ. ಗಿಬ್ಯೋನ್ ಯೆಹೋಶುವನೊಂದಿಗೂ ಇಸ್ರೇಲರೊಂದಿಗೂ ಶಾಂತಿಒಪ್ಪಂದ ಮಾಡಿಕೊಂಡಿದೆ” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 “ನೀವು ಬಂದು ನನಗೆ ಸಹಾಯಮಾಡಿರಿ, ನಾವು ಯೆಹೋಶುವನ ಸಂಗಡಲೂ ಇಸ್ರಾಯೇಲ್ಯರ ಸಂಗಡಲೂ ಒಡಂಬಡಿಕೆ ಮಾಡಿಕೊಂಡಿರುವ ಗಿಬ್ಯೋನ್ಯರನ್ನು ಸೋಲಿಸೋಣ” ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 “ನೀವು ಬಂದು ನನಗೆ ಸಹಾಯಮಾಡಿ, ನಾವು ಯೆಹೋಶುವನೊಂದಿಗೂ ಇಸ್ರಯೇಲರೊಂದಿಗೂ ಒಪ್ಪಂದ ಮಾಡಿಕೊಂಡು ಗಿಬ್ಯೋನ್ಯರನ್ನು ಸೋಲಿಸೋಣ,” ಎಂದು ಹೇಳಿಕಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನೀವು ಬಂದು ನನಗೆ ಸಹಾಯ ಮಾಡಿರಿ; ನಾವು ಯೆಹೋಶುವನ ಸಂಗಡಲೂ ಇಸ್ರಾಯೇಲ್ಯರ ಸಂಗಡಲೂ ಒಡಂಬಡಿಕೆಮಾಡಿಕೊಂಡ ಗಿಬ್ಯೋನ್ಯರನ್ನು ಸೋಲಿಸೋಣ ಎಂದು ಹೇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 “ಗಿಬ್ಯೋನರು ಯೆಹೋಶುವನ ಮತ್ತು ಇಸ್ರಾಯೇಲರ ಸಂಗಡ ಸಮಾಧಾನ ಮಾಡಿಕೊಂಡದ್ದರಿಂದ ನಾವು ಅದನ್ನು ದಾಳಿಮಾಡುವಂತೆ ನೀವು ನನ್ನ ಬಳಿಗೆ ಬಂದು ನನಗೆ ಸಹಾಯಮಾಡಿರಿ,” ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 10:4
15 ತಿಳಿವುಗಳ ಹೋಲಿಕೆ  

ಯೆಹೋಶುವನು ಅವರೊಂದಿಗೆ ಶಾಂತಿ ಒಪ್ಪಂದವನ್ನು ಮಾಡಿಕೊಳ್ಳಲು ಒಪ್ಪಿಕೊಂಡನು. ಅವರು ಜೀವಸಹಿತ ಇರಲು ಅವಕಾಶ ಮಾಡಿಕೊಟ್ಟನು. ಯೆಹೋಶುವನ ಈ ಒಪ್ಪಂದಕ್ಕೆ ಇಸ್ರೇಲಿನ ಜನನಾಯಕರು ಒಪ್ಪಿಕೊಂಡರು.


ಈ ಸಮಯದಲ್ಲಿ ಅದೋನೀಚೆದೆಕನು ಜೆರುಸಲೇಮಿನ ಅರಸನಾಗಿದ್ದನು. ಯೆಹೋಶುವನು ಆಯಿ ಪಟ್ಟಣವನ್ನು ಸ್ವಾಧೀನಪಡಿಸಿಕೊಂಡ ಮತ್ತು ಅದನ್ನು ಸಂಪೂರ್ಣವಾಗಿ ನಾಶಮಾಡಿದ ಸಂಗತಿಯನ್ನು ಅವನು ಕೇಳಿದ್ದನು. ಜೆರಿಕೊ ಪಟ್ಟಣಕ್ಕೂ ಅದರ ರಾಜನಿಗೂ ಯೆಹೋಶುವನು ಹಾಗೆಯೇ ಮಾಡಿದ್ದನೆಂಬುದನ್ನೂ ಗಿಬ್ಯೋನಿನ ಜನರು ಇಸ್ರೇಲರೊಂದಿಗೆ ಶಾಂತಿ ಒಪ್ಪಂದ ಮಾಡಿಕೊಂಡಿದ್ದಾರೆಂಬುದನ್ನೂ ಅವನು ಕೇಳಿದ್ದನು. ಅವರು ಜೆರುಸಲೇಮಿಗೆ ಅತೀಸಮೀಪದಲ್ಲಿ ವಾಸವಾಗಿದ್ದರು.


ಈ ಅಶುದ್ಧಾತ್ಮಗಳು ಸೈತಾನನ ಆತ್ಮಗಳಾಗಿವೆ. ಅವುಗಳಿಗೆ ಮಹಾ ಅದ್ಭುತಗಳನ್ನು ಮಾಡಲು ಶಕ್ತಿಯಿದೆ. ಈ ಅಶುದ್ಧಾತ್ಮಗಳು ಸರ್ವಶಕ್ತನಾದ ದೇವರ ಮಹಾದಿನದಂದು ನಡೆಯುವ ಯುದ್ಧಕ್ಕೆ, ಲೋಕದಲ್ಲೆಲ್ಲಾ ಇರುವ ರಾಜರನ್ನು ಒಟ್ಟುಗೂಡಿಸಲು ಹೊರಗೆ ಹೋಗುತ್ತವೆ.


ನೀವು ಅಸಹ್ಯಕರವಾದ ನಿರರ್ಥಕಗೋಷ್ಠಿಗಳನ್ನು ಮಾಡದಿರುವುದನ್ನು ಕಂಡ ಅವಿಶ್ವಾಸಿಗಳು ನಿಮ್ಮ ವಿಷಯದಲ್ಲಿ ಆಶ್ಚರ್ಯಪಡುವರು. ಆದ್ದರಿಂದಲೇ ಅವರು ನಿಮ್ಮ ಬಗ್ಗೆ ಕೆಟ್ಟ ಸಂಗತಿಗಳನ್ನು ಹೇಳುವರು.


ಆದ್ದರಿಂದ ನೀವು ದೇವರಿಗೆ ನಂಬಿಗಸ್ತರಾಗಿಲ್ಲ! ಇಹಲೋಕದ ಮೇಲಿರುವ ವ್ಯಾಮೋಹ ದೇವರ ಮೇಲಿರುವ ದ್ವೇಷಕ್ಕೆ ಸಮಾನವಾಗಿದೆ. ಆದ್ದರಿಂದ ಈ ಲೋಕವನ್ನು ಪ್ರೀತಿಸುವವನು ತನ್ನನ್ನು ದೇವರಿಗೆ ಶತ್ರುವನ್ನಾಗಿ ಮಾಡಿಕೊಳ್ಳುತ್ತಾನೆ.


ಕ್ರಿಸ್ತ ಯೇಸುವಿನಲ್ಲಿ ದೇವರ ಚಿತ್ತಕ್ಕನುಸಾರವಾಗಿ ಜೀವಿಸುವ ಪ್ರತಿಯೊಬ್ಬರೂ ಹಿಂಸೆಗೆ ಒಳಗಾಗುವರು.


“ಯೆಹೂದ್ಯ ಜನರೇ, ನಮಗೆ ಸಹಾಯಮಾಡಿ! ಮೋಶೆಯ ಧರ್ಮಶಾಸ್ತ್ರಕ್ಕೂ ನಮ್ಮ ಜನರಿಗೂ ಮತ್ತು ಈ ಸ್ಥಳಕ್ಕೂ (ದೇವಾಲಯ) ವಿರೋಧವಾಗಿ ಎಲ್ಲಾ ಕಡೆಗಳಲ್ಲಿ ಜನರಿಗೆ ಉಪದೇಶಿಸುತ್ತಿದ್ದವನು ಇವನೇ. ಈಗ ಇವನು ಕೆಲವು ಗ್ರೀಕರನ್ನು ದೇವಾಲಯದೊಳಕ್ಕೆ ಕರೆದುಕೊಂಡು ಬಂದಿದ್ದಾನೆ! ಈ ಪವಿತ್ರ ಸ್ಥಳವನ್ನು ಇವನು ಅಶುದ್ಧಗೊಳಿಸಿದ್ದಾನೆ!” ಎಂದು ಕೂಗಿಹೇಳಿ ಗಲಿಬಿಲಿ ಮಾಡಿದರು.


ನೀವು ಈ ಲೋಕಕ್ಕೆ ಸೇರಿದವರಾಗಿದ್ದರೆ, ಈ ಲೋಕವು ತನ್ನ ಸ್ವಂತ ಜನರನ್ನು ಪ್ರೀತಿಸುವಂತೆ ನಿಮ್ಮನ್ನೂ ಪ್ರೀತಿಸುತ್ತಿತ್ತು. ಆದರೆ ನಾನು ನಿಮ್ಮನ್ನು ಈ ಲೋಕದೊಳಗಿಂದ ಆರಿಸಿಕೊಂಡಿದ್ದೇನೆ. ಆದ್ದರಿಂದ ನೀವು ಈ ಲೋಕಕ್ಕೆ ಸೇರಿದವರಲ್ಲ. ಆದಕಾರಣ ಈ ಲೋಕವು ನಿಮ್ಮನ್ನು ದ್ವೇಷಿಸುತ್ತದೆ.


ಬಳಿಕ ಯೇಸು ತನ್ನ ಶಿಷ್ಯರಿಗೆ, “ನನ್ನನ್ನು ಹಿಂಬಾಲಿಸಲು ಅಪೇಕ್ಷಿಸುವವನು ತನಗೆ ಇಷ್ಟವಾದದ್ದನ್ನು ತ್ಯಜಿಸಬೇಕು. ಅವನು ತನಗೆ ಕೊಟ್ಟಿರುವ ಶಿಲುಬೆಯನ್ನು (ಸಂಕಟ) ಸ್ವೀಕರಿಸಿಕೊಂಡು ನನ್ನನ್ನು ಹಿಂಬಾಲಿಸಬೇಕು.


ಆಗ ಆ ಐದು ಮಂದಿ ಅಮೋರಿಯರ ಅರಸರು ಸೈನ್ಯವನ್ನು ಸೇರಿಸಿದರು. (ಜೆರುಸಲೇಮಿನ ಅರಸ, ಹೆಬ್ರೋನಿನ ಅರಸ, ಯರ್ಮೂತಿನ ಅರಸ, ಲಾಕೀಷಿನ ಅರಸ ಮತ್ತು ಎಗ್ಲೋನಿನ ಅರಸ; ಇವರೇ ಆ ಐದು ಮಂದಿ ಅರಸರು.) ಆ ಸೈನ್ಯಗಳು ಗಿಬ್ಯೋನಿಗೆ ಹೋಗಿ ಪಟ್ಟಣವನ್ನು ಸುತ್ತುವರಿದು ಅದರ ವಿರುದ್ಧ ಹೋರಾಟ ಪ್ರಾರಂಭಿಸಿದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು