Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 11:15 - ಪರಿಶುದ್ದ ಬೈಬಲ್‌

15 ಹೀಗೆ ಮಾಡಬೇಕೆಂದು ಯೆಹೋವನು ತನ್ನ ಸೇವಕನಾದ ಮೋಶೆಗೆ ಬಹುಕಾಲದ ಹಿಂದೆಯೇ ಹೇಳಿದ್ದನು. ಮೋಶೆಯು ಈ ಕಾರ್ಯವನ್ನು ಮಾಡಲು ಯೆಹೋಶುವನಿಗೆ ಆಜ್ಞಾಪಿಸಿದ್ದನು. ಹೀಗೆ ಯೆಹೋಶುವನು ದೇವರ ಆಜ್ಞೆಯನ್ನು ಪಾಲಿಸಿದನು. ಯೆಹೋವನು ಮೋಶೆಗೆ ಆಜ್ಞಾಪಿಸಿದ್ದೆಲ್ಲವನ್ನು ಯೆಹೋಶುವನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯೆಹೋವನ ಸೇವಕನಾದ ಮೋಶೆಯು ದೇವರು ತನಗೆ ಹೇಳಿದ್ದನ್ನೆಲ್ಲಾ ಯೆಹೋಶುವನಿಗೆ ಹೇಳಿದ್ದನು. ಯೆಹೋಶುವನು ಅದರಂತೆಯೇ ಮಾಡಿದನು, ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದ್ದರಲ್ಲಿ ಒಂದನ್ನೂ ಮೀರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಸರ್ವೇಶ್ವರನ ದಾಸ ಮೋಶೆ, ದೇವರು ತನಗೆ ಹೇಳಿದ್ದನ್ನೆಲ್ಲಾ ಯೆಹೋಶುವನಿಗೆ ಹೇಳಿದ್ದನು. ಅದರಂತೆಯೇ ಯೆಹೋಶುವ ಮಾಡಿದನು. ಸರ್ವೇಶ್ವರ ಮೋಶೆಯ ಮುಖಾಂತರ ಆಜ್ಞಾಪಿಸಿದ್ದರಲ್ಲಿ ಯೆಹೋಶುವ ಒಂದನ್ನೂ ಮೀರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಯೆಹೋವನ ಸೇವಕನಾದ ಮೋಶೆಯು ದೇವರು ತನಗೆ ಹೇಳಿದ್ದನ್ನೆಲ್ಲಾ ಯೆಹೋಶುವನಿಗೆ ಹೇಳಿದ್ದನು. ಯೆಹೋಶುವನು ಅದರಂತೆಯೇ ಮಾಡಿದನು; ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದ್ದರಲ್ಲಿ ಅವನು ಒಂದನ್ನೂ ಮೀರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಯೆಹೋವ ದೇವರು ತಮ್ಮ ಸೇವಕನಾದ ಮೋಶೆಗೆ ಹೇಗೆ ಆಜ್ಞಾಪಿಸಿದರೋ, ಹಾಗೆಯೇ ಮೋಶೆಯು ಯೆಹೋಶುವನಿಗೆ ಆಜ್ಞಾಪಿಸಿದನು. ಯೆಹೋಶುವನೂ ಹಾಗೆಯೇ ಮಾಡಿದನು. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ್ದರಲ್ಲಿ ಯೆಹೋಶುವನು ಒಂದನ್ನೂ ಮೀರದೆ ಎಲ್ಲವನ್ನೂ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 11:15
24 ತಿಳಿವುಗಳ ಹೋಲಿಕೆ  

ಆದರೆ ನೀನು ಇನ್ನೊಂದು ವಿಷಯದಲ್ಲಿಯೂ ಸ್ಥಿರಚಿತ್ತನಾಗಿರಬೇಕು; ಧೈರ್ಯವಂತನಾಗಿರಬೇಕು. ನನ್ನ ಸೇವಕನಾಗಿದ್ದ ಮೋಶೆಯು ನಿನಗೆ ಕೊಟ್ಟ ಆಜ್ಞೆಗಳನ್ನು ನೀನು ನಿಶ್ಚಿತವಾಗಿ ಪಾಲಿಸಬೇಕು. ಅವನ ಧರ್ಮೋಪದೇಶವನ್ನೆಲ್ಲಾ ಚಾಚೂತಪ್ಪದೆ ಅನುಸರಿಸಿದ್ದೇ ಆದರೆ ನೀನು ಮಾಡುವ ಎಲ್ಲ ಕಾರ್ಯಗಳಲ್ಲಿ ನಿನಗೆ ಜಯಸಿಗುವುದು ಖಂಡಿತ.


ನಿಮಗೆ ಒಳ್ಳೆಯದನ್ನೇ ಯಾವಾಗಲೂ ಮಾಡಿದೆನು. ನಾನು ನಿಮಗೆ ಯೇಸುವಿನ ಕುರಿತಾದ ಸುವಾರ್ತೆಯನ್ನು ಬಹಿರಂಗವಾಗಿ ಜನರೆದುರಿನಲ್ಲಿ ತಿಳಿಸಿದೆನು ಮತ್ತು ನಿಮ್ಮ ಮನೆಗಳಲ್ಲಿಯೂ ಸಹ ಬೋಧಿಸಿದೆನು.


ನಿಮ್ಮ ದೇವರಾದ ಯೆಹೋವನು ಆ ಜನಾಂಗಗಳನ್ನು ನಿಮಗೆ ಅಧೀನಪಡಿಸುವನು. ನೀವು ಅವರನ್ನು ಸೋಲಿಸಿಬಿಡುವಿರಿ. ನೀವು ಅವರನ್ನು ಸಂಪೂರ್ಣವಾಗಿ ನಾಶಮಾಡಬೇಕು. ಅವರೊಂದಿಗೆ ಒಪ್ಪಂದವನ್ನು ಮಾಡಿಕೊಳ್ಳಬೇಡಿ ಮತ್ತು ಅವರಿಗೆ ಕರುಣೆಯನ್ನು ತೋರಬೇಡಿ.


ಇದಲ್ಲದೆ, ದೇವರ ಶಕ್ತಿಯು ಯೆಹೂದದ ಜನರನ್ನು ಒಂದಾಗಿ ಮಾಡಿತು. ಆದ್ದರಿಂದ ಅವರು ಅರಸನಿಗೆ ಮತ್ತು ಅಧಿಕಾರಿಗಳಿಗೆ ವಿಧೇಯರಾದರು. ಹೀಗೆ ಜನರು ಯೆಹೋವನ ಕಟ್ಟಳೆಗಳಿಗೆ ವಿಧೇಯರಾದರು.


ಆಮೇಲೆ ಮೋಶೆಯು ಯೆಹೋಶುವನನ್ನು ಕರೆದು ಎಲ್ಲಾ ಇಸ್ರೇಲರ ಎದುರಿನಲ್ಲಿ, “ಶಕ್ತಿಶಾಲಿಯಾಗಿದ್ದು ಧೈರ್ಯಗೊಂಡಿರು. ನೀನು ಈ ಜನರನ್ನು ಯೆಹೋವನು ನಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದಂಥ ದೇಶಕ್ಕೆ ನಡೆಸು. ಆ ದೇಶವನ್ನು ಸ್ವಾಧೀನ ಮಾಡಿಕೊಳ್ಳಲು ಇಸ್ರೇಲರಿಗೆ ಸಹಾಯ ಮಾಡು.


“ನಾನು ಆಜ್ಞಾಪಿಸಿದ ಪ್ರಕಾರವೇ ನೀವು ಮಾಡಿರಿ. ಅದಕ್ಕೆ ಏನೂ ಕೂಡಿಸಬಾರದು; ಅದರಿಂದ ಏನೂ ತೆಗೆಯಬಾರದು.


“ಯೆಹೋವನು ನನಗೆ ಆಜ್ಞಾಪಿಸಿದ ವಿಧಿನಿಯಮಗಳನ್ನು ನಾನು ನಿಮಗೆ ಬೋಧಿಸಿದೆನು. ಈಗ ನೀವು ಸ್ವಾಧೀನಪಡಿಸಿಕೊಳ್ಳುವ ದೇಶದಲ್ಲಿ ನೀವು ನೆಲೆಸುವಾಗ ಆ ವಿಧಿನಿಯಮಗಳನ್ನು ಅನುಸರಿಸಬೇಕೆಂದು ನಾನು ನಿಮಗೆ ಬೋಧಿಸಿದೆನು.


ಯಾಕೆಂದರೆ ದೇವರ ಅಪೇಕ್ಷೆಗನುಸಾರವಾಗಿ ನೀವು ತಿಳಿದುಕೊಳ್ಳಬೇಕಾದ ಪ್ರತಿಯೊಂದನ್ನೂ ನಾನು ನಿಮಗೆ ನಿಶ್ಚಯವಾಗಿ ತಿಳಿಸಿದ್ದೇನೆ.


ನಾನು ಕೊಡುವ ಆಜ್ಞೆಗಳಿಗೆ ನೀವು ಏನನ್ನೂ ಸೇರಿಸಬಾರದು; ಏನನ್ನೂ ತೆಗೆಯಬಾರದು. ನಾನು ನಿಮಗೆ ತಿಳಿಸುವ ದೇವರ ಆಜ್ಞೆಗಳಿಗೆ ನೀವು ವಿಧೇಯರಾಗಬೇಕು.


ಯೆಹೋವನು ಸಮುವೇಲನಿಗೆ, “ಸೌಲನು ನನ್ನ ಮಾರ್ಗವನ್ನು ತ್ಯಜಿಸಿದನು. ನಾನು ಸೌಲನನ್ನು ರಾಜನನ್ನಾಗಿ ಮಾಡಿದ್ದಕ್ಕಾಗಿ ಪಶ್ಚಾತ್ತಾಪಪಡುತ್ತೇನೆ. ನಾನು ಆಜ್ಞಾಪಿಸಿದ ಕಾರ್ಯಗಳನ್ನು ಅವನು ಮಾಡುತ್ತಿಲ್ಲ” ಎಂದು ಹೇಳಿದನು. ಸಮುವೇಲನು ತಳಮಳಗೊಂಡನು. ಅವನು ರಾತ್ರಿಯೆಲ್ಲ ಅಳುತ್ತಾ ಯೆಹೋವನಲ್ಲಿ ಮೊರೆಯಿಟ್ಟನು.


ಯೆಹೋಶುವನು ಈ ಎಲ್ಲ ಪಟ್ಟಣಗಳನ್ನು ವಶಪಡಿಸಿಕೊಂಡನು; ಅವುಗಳ ಎಲ್ಲ ಅರಸರನ್ನು ಕೊಂದುಹಾಕಿದನು; ಈ ಪಟ್ಟಣಗಳಲ್ಲಿದ್ದ ಎಲ್ಲವನ್ನು ನಾಶಮಾಡಿದನು. ಯೆಹೋವನ ಸೇವಕನಾದ ಮೋಶೆಯು ಆಜ್ಞಾಪಿಸಿದಂತೆಯೇ ಅವನು ಮಾಡಿದನು.


“ಫರಿಸಾಯರೇ, ನಿಮ್ಮ ಗತಿಯನ್ನು ಏನು ಹೇಳಲಿ! ನೀವು ದೇವರಿಗೆ ನಿಮ್ಮಲ್ಲಿರುವ ಪ್ರತಿಯೊಂದರಲ್ಲಿಯೂ ಹತ್ತನೆಯ ಒಂದು ಭಾಗವನ್ನು ಕೊಡುತ್ತೀರಿ. ನಿಮ್ಮ ತೋಟದಲ್ಲಿ ಬೆಳೆಯುವ ಮರುಗ, ಸದಾಪು ಮುಂತಾದ ಚಿಕ್ಕ ಸಸಿಗಳಲ್ಲಿಯೂ ಹತ್ತನೆಯ ಒಂದು ಭಾಗವನ್ನು ಕೊಡುತ್ತೀರಿ. ಆದರೆ ಬೇರೆಯವರಿಗೆ ನ್ಯಾಯತೋರಿಸುವುದನ್ನೂ ದೇವರನ್ನು ಪ್ರೀತಿಸುವುದನ್ನೂ ಮರೆತುಬಿಟ್ಟಿದ್ದೀರಿ. ನೀವು ಮೊದಲು ಇವುಗಳನ್ನು ಮಾಡಬೇಕು ಮತ್ತು ಉಳಿದವುಗಳನ್ನು ಕಡೆಗಣಿಸಬಾರದು.


“ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ನಿಮ್ಮಲ್ಲಿರುವ ಪ್ರತಿಯೊಂದರಲ್ಲೂ ನಿಮ್ಮ ಪುದೀನ, ಸಬ್ಬಸ್ಸಿಗೆ ಸೊಪ್ಪು, ಜೀರಿಗೆ ಗಿಡಗಳಲ್ಲಿಯೂ ಸಹ ಹತ್ತರಲ್ಲೊಂದು ಪಾಲನ್ನು ದೇವರಿಗೆ ಕೊಡುತ್ತೀರಿ. ಆದರೆ ಧರ್ಮಶಾಸ್ತ್ರದ ಬೋಧನೆಗಳಲ್ಲಿ ನಿಜವಾಗಿಯೂ ಪ್ರಾಮುಖ್ಯವಾದ ಆಜ್ಞೆಗಳನ್ನು ಅಂದರೆ ನ್ಯಾಯವನ್ನೂ ಕರುಣೆಯನ್ನೂ ಯಥಾರ್ಥತೆಯನ್ನೂ ನೀವು ತೊರೆದುಬಿಟ್ಟಿದ್ದೀರಿ. ಈ ಆಜ್ಞೆಗಳಿಗೆ ನೀವು ಮೊದಲು ವಿಧೇಯರಾಗಿ, ಈಗ ಮಾಡುತ್ತಿರುವಂಥ ಕಾರ್ಯಗಳನ್ನು ಮಾಡಬೇಕಿತ್ತು.


ಆ ಪಟ್ಟಣಗಳಲ್ಲಿ ಸಿಕ್ಕಿದ ಎಲ್ಲ ಪದಾರ್ಥಗಳನ್ನು ಮತ್ತು ಎಲ್ಲ ಪಶುಗಳನ್ನು ಇಸ್ರೇಲರು ತಮಗಾಗಿ ಇಟ್ಟುಕೊಂಡರು. ಆದರೆ ಅಲ್ಲಿದ್ದ ಜನರನ್ನೆಲ್ಲ ಕೊಂದರು. ಅವರಲ್ಲಿ ಯಾರನ್ನೂ ಸಜೀವವಾಗಿ ಉಳಿಸಲಿಲ್ಲ.


ಹೀಗೆ ಯೆಹೋಶುವನು ಆ ದೇಶದ ಎಲ್ಲರನ್ನು ಸೋಲಿಸಿದನು. ಬೆಟ್ಟದ ಮೇಲಿನ ಪ್ರದೇಶ, ನೆಗೆವ್ ಪ್ರದೇಶ, ಗೋಷೆನಿನ ಎಲ್ಲ ಪ್ರದೇಶ, ಪಶ್ಚಿಮದ ಇಳಕಲಿನ ಪ್ರದೇಶ, ಜೋರ್ಡನಿನ ಕಣಿವೆ, ಇಸ್ರೇಲಿನ ಪರ್ವತ ಪ್ರದೇಶ ಮತ್ತು ಅವುಗಳ ಹತ್ತಿರದ ಎಲ್ಲ ಬೆಟ್ಟಗಳ ಪ್ರದೇಶ ಅವನ ಸ್ವಾಧೀನಕ್ಕೆ ಬಂದವು.


ಆ ಸ್ಥಳದಲ್ಲಿದ್ದಾಗ ಯೆಹೋವನು ಮೋಶೆಯೊಡನೆ ಮಾತಾಡಿ ಹೇಳಿದ್ದೇನೆಂದರೆ:


ಆ ದೇಶದ ನಿವಾಸಿಗಳನ್ನೆಲ್ಲ ಹೊರಡಿಸಿಬಿಟ್ಟು ಅವರ ಕೆತ್ತಿದ ಪ್ರತಿಮೆಗಳನ್ನು ಮತ್ತು ಲೋಹದ ವಿಗ್ರಹಗಳನ್ನು ನಾಶಮಾಡಿ ಅವರ ಪೂಜಾಸ್ಥಳಗಳನ್ನು ಹಾಳುಮಾಡಬೇಕು.


ಆದರೆ ನಿಮ್ಮನ್ನು ಯೆಹೋವನೇ, ಆಚೆ ಕಡೆಗೆ ನಡೆಸುವನು. ಆ ದೇಶದ ಜನರನ್ನು ಯೆಹೋವನು ನಾಶಮಾಡುವನು. ಅವರ ಕೈಯಿಂದ ನೀವು ಆ ದೇಶವನ್ನು ವಶಪಡಿಸಿಕೊಳ್ಳುವಿರಿ. ಯೆಹೋಶುವನು ನಿಮ್ಮನ್ನು ಇನ್ನು ಮುಂದೆ ನಡಿಸುವನು ಎಂದು ಯೆಹೋವನು ಹೇಳಿದ್ದಾನೆ.


ಯೆಹೋವನು ಆ ಜನಾಂಗಗಳನ್ನು ಸೋಲಿಸಲು ಸಹಾಯ ಮಾಡುವನು. ಆದರೆ ನಾನು ಹೇಳಿದ ಪ್ರಕಾರ ನೀವು ಅವರಿಗೆ ಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು