Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 13:16 - ಪರಿಶುದ್ದ ಬೈಬಲ್‌

16 ಅರ್ನೋನ್ ತಗ್ಗಿನ ಸಮೀಪದಲ್ಲಿದ್ದ ಅರೋಯೇರ್‌ನಿಂದ ಮೇದೆಬದವರೆಗಿರುವ ಪ್ರದೇಶ. ಇದು ಇಡೀ ತಪ್ಪಲ ಪ್ರದೇಶವನ್ನು ಮತ್ತು ಆ ತಗ್ಗು ಪ್ರದೇಶದ ಮಧ್ಯದಲ್ಲಿದ್ದ ಊರುಗಳನ್ನು ಒಳಗೊಂಡಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅರ್ನೋನ್ ಕಣಿವೆಯ ಅಂಚಿನಲ್ಲಿದ್ದ ಅರೋಯೇರ್ ಪಟ್ಟಣ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅರ್ನೋನ್ ಕಣಿವೆಯ ಅಂಚಿನಲ್ಲಿದ್ದ ಅರೋಯೇರ್ ನಗರ, ಅದೇ ಕಣಿವೆಯ ಮಧ್ಯೆಯಿದ್ದ ನಗರ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅರ್ನೋನ್ ತಗ್ಗಿನ ಅಂಚಿನಲ್ಲಿದ್ದ ಅರೋಯೇರ್ ಪಟ್ಟಣ, ಆ ತಗ್ಗಿನ ಮಧ್ಯದಲ್ಲಿದ್ದ ಪಟ್ಟಣ ಇವುಗಳೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅರ್ನೋನ್ ಕಣಿವೆಯ ಅಂಚಿನಲ್ಲಿದ್ದ ಅರೋಯೇರ್ ಪಟ್ಟಣವು ಮೊದಲುಗೊಂಡು, ಮೇದೆಬಾದ ಬಳಿಯಲ್ಲಿರುವ ಸಕಲ ಸಮನಾದ ಭೂಮಿಯೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 13:16
18 ತಿಳಿವುಗಳ ಹೋಲಿಕೆ  

ಅವರಿಗೆ ದೊರಕಿದ ಪ್ರದೇಶವು ಅರ್ನೋನ್ ಕಣಿವೆಯ ಬಳಿಯಲ್ಲಿದ್ದ ಅರೋಯೇರ್‌ನಿಂದ ಆರಂಭಗೊಂಡು ಮಧ್ಯಕಣಿವೆಯಲ್ಲಿದ್ದ ಊರಿನವರೆಗೂ ವಿಸ್ತರಿಸಿಕೊಂಡಿತ್ತು. ಮೇದೆಬದಿಂದ ದೀಬೋನಿನವರೆಗಿದ್ದ ಇಡೀ ಬಯಲು ಪ್ರದೇಶವನ್ನು ಇದು ಒಳಗೊಂಡಿತ್ತು.


ಅವರು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸನಾದ ಸೀಹೋನನನ್ನು ಸೋಲಿಸಿದರು. ಅವನು ಅರ್ನೋನ್ ನದಿಯ ತೀರದಲ್ಲಿದ್ದ ಅರೋಯೇರ್‌ನಿಂದ ಯಬ್ಬೋಕ್ ನದಿಯವರೆಗಿರುವ ಪ್ರದೇಶವನ್ನು ಆಳುತ್ತಿದ್ದನು. ಅವನ ರಾಜ್ಯವು ಆ ತಗ್ಗು ಪ್ರದೇಶದ ಮಧ್ಯದಿಂದ ಪ್ರಾರಂಭವಾಗುತ್ತಿತ್ತು. ಇದು ಅಮ್ಮೋನಿಯರ ಪ್ರದೇಶಕ್ಕೂ ಮೇರೆಯಾಗಿತ್ತು. ಗಿಲ್ಯಾದಿನ ಅರ್ಧ ಪ್ರದೇಶವು ಸೀಹೋನನ ಆಳ್ವಿಕೆಗೆ ಒಳಗಾಗಿತ್ತು.


ಹೆಷ್ಬೋನ್ ಮತ್ತು ಎಲೆಯಾಲೆಯಲ್ಲಿರುವ ಜನರು ಗಟ್ಟಿಯಾಗಿ ಅಳುತ್ತಿದ್ದಾರೆ. ದೂರದಲ್ಲಿರುವ ಯಹಜ್ ಪಟ್ಟಣದವರಿಗೆ ಅವರ ರೋಧನವು ಕೇಳಿಸುತ್ತದೆ. ಸೈನಿಕರೂ ಭಯಗೊಂಡಿದ್ದಾರೆ. ಹೆದರಿಕೆಯಿಂದ ನಡುಗುತ್ತಿದ್ದಾರೆ.


“ನಾವು ಗೆದ್ದುಕೊಂಡಿದ್ದ ಆ ದೇಶಗಳನ್ನು ನಮ್ಮದಾಗಿ ಮಾಡಿಕೊಂಡೆವು. ಇದರ ಒಂದು ಭಾಗವನ್ನು ನಾನು ರೂಬೇನ್ ಮತ್ತು ಗಾದ್ ಕುಲದವರಿಗೆ ಹಂಚಿಕೊಟ್ಟೆನು. ಅದು ಅರೋಯೇರ್‌ನಿಂದ ಹಿಡಿದು ಗಿಲ್ಯಾದ್ ಪ್ರದೇಶದವರೆಗೆ ಅಂದರೆ ಅರ್ನೋನ್ ಕಣಿವೆಯಲ್ಲಿರುವ ಅರೋಯೇರ್‌ನಿಂದ ಮೊದಲುಗೊಂಡು ಗಿಲ್ಯಾದ್ ಬೆಟ್ಟಪ್ರದೇಶದವರೆಗೂ ಅದರ ಎಲ್ಲಾ ಪಟ್ಟಣಗಳ ಸಮೇತವಾಗಿ ನಾನು ಕೊಟ್ಟೆನು. ಬೆಟ್ಟಪ್ರದೇಶವಾದ ಗಿಲ್ಯಾದಿನಲ್ಲಿ ಅರ್ಧಭಾಗ ಅವರಿಗೆ ದೊರೆಯಿತು.


ಮೋಶೆಯು ರೂಬೇನನ ಕುಲದ ಪ್ರತಿಯೊಂದು ಗೋತ್ರದವರಿಗೆ ಸ್ವಲ್ಪಸ್ವಲ್ಪ ಪ್ರದೇಶವನ್ನು ಕೊಟ್ಟಿದ್ದನು. ಅವರಿಗೆ ಕೊಟ್ಟ ಪ್ರದೇಶದ ವಿವರ ಹೀಗಿದೆ:


ಆ ಪ್ರದೇಶವು ಹೆಷ್ಬೋನಿನವರೆಗೆ ವಿಸ್ತರಿಸಿ ತಪ್ಪಲಪ್ರದೇಶದ ಎಲ್ಲಾ ಊರುಗಳನ್ನೊಳಗೊಂಡಿತ್ತು. ಆ ಊರುಗಳು ಯಾವುವೆಂದರೆ: ದೀಬೋನ್, ಬಾಮೋತ್‌ಬಾಳ್, ಬೇತ್ಬಾಳ್ಮೆಯೋನ್,


ಅರೋಯೇರಿನವರಿಗೆ, ಸಿಪ್ಮೋತಿನವರಿಗೆ, ಎಷ್ಟೆಮೋವದವರಿಗೆ,


ಅವರು ಜೋರ್ಡನ್ ನದಿಯನ್ನು ದಾಟಿ ಅರೋಯೇರಿನಲ್ಲಿ ಪಾಳೆಯ ಮಾಡಿಕೊಂಡರು. ಅವರ ಪಾಳೆಯವು ನಗರದ ಬಲ ಅಂಚಿನಲ್ಲಿತ್ತು. (ಆ ನಗರವು ಗಾದ್ ಕಣಿವೆಯ ಮಧ್ಯಭಾಗದಲ್ಲಿಯೂ ಯಗ್ಜೇರಿನ ಮಾರ್ಗದಲ್ಲಿಯೂ ಇತ್ತು.)


ಹೀಗೆ ಅಮ್ಮೋನಿಯರು ಮೂವತ್ತೆರಡು ಸಾವಿರ ರಥಗಳಿಂದ ಯುದ್ಧಕ್ಕೆ ಸಜ್ಜಾದರು. ಅಲ್ಲದೆ ಮಾಕಾದ ಅರಸನಿಗೆ ಹಣವನ್ನು ಕೊಟ್ಟು ಅವನ ಸೈನ್ಯವನ್ನೂ ತಮ್ಮ ಸಹಾಯಕ್ಕೆ ಬರಮಾಡಿದರು. ಮಾಕದ ಅರಸನೂ ಅವನ ಸೈನಿಕರೂ ಬಂದು ಮೇದೆಬ ಪಟ್ಟಣದ ಬಳಿ ಪಾಳೆಯ ಮಾಡಿಕೊಂಡರು. ಇತ್ತ ಅಮ್ಮೋನಿಯರೂ ಯುದ್ಧಸನ್ನದ್ಧರಾದರು.


ಹೆಷ್ಬೋನಿನಲ್ಲಿ ಅಮೋರಿಯರ ಅರಸನಾದ ಸೀಹೋನನು ವಾಸಿಸುತ್ತಿದ್ದನು. ಸೀಹೋನನು ಮೊದಲಿನ ಮೋವಾಬ್ಯರ ಅರಸನೊಡನೆ ಯುದ್ಧ ಮಾಡಿದ್ದನು. ಸೀಹೋನನು ಅರ್ನೋನ್ ನದಿಯವರೆಗಿರುವ ಆ ರಾಜನ ಪ್ರದೇಶವನ್ನೆಲ್ಲ ವಶಪಡಿಸಿಕೊಂಡಿದ್ದನು.


ಎರಡುವರೆ ಕುಲಗಳ ಜನರಿಗೆ ಮೋಶೆಯು ಜೋರ್ಡನ್ ನದಿಯ ಪೂರ್ವದಿಕ್ಕಿನ ಪ್ರದೇಶವನ್ನು ಕೊಟ್ಟಿದ್ದನು. ಆದರೆ ಲೇವಿಯ ಕುಲದವರಿಗೆ ಉಳಿದವರಂತೆ ಯಾವ ಪ್ರದೇಶವನ್ನೂ ಕೊಡಲಿಲ್ಲ.


ಲೇವಿಯ ಕುಲದವರಿಗೆ ಭೂಮಿಯಲ್ಲಿ ಪಾಲು ದೊರೆಯುವುದಿಲ್ಲ. ಯಾಜಕರಾಗಿ ಯೆಹೋವನ ಸೇವೆ ಮಾಡುವುದೇ ಅವರ ಪಾಲು. ಗಾದ್ಯರು, ರೂಬೇನ್ಯರು ಮತ್ತು ಮನಸ್ಸೆ ಕುಲದ ಅರ್ಧಜನರು ವಾಗ್ದಾನ ಮಾಡಲಾದ ಭೂಮಿಯನ್ನು ಈಗಾಗಲೇ ಪಡೆದುಕೊಂಡಿದ್ದಾರೆ. ಅವರು ಜೋರ್ಡನ್ ನದಿಯ ಪೂರ್ವದಿಕ್ಕಿನಲ್ಲಿದ್ದಾರೆ. ಯೆಹೋವನ ಸೇವಕನಾದ ಮೋಶೆಯು ಈಗಾಗಲೇ ಆ ಭೂಮಿಯನ್ನು ಅವರಿಗೆ ಕೊಟ್ಟಿದ್ದಾನೆ” ಎಂದನು.


ಇಸ್ರೇಲರು ಮುನ್ನೂರು ವರ್ಷಗಳಿಂದ ಹೆಷ್ಬೋನ್ ನಗರ ಮತ್ತು ಅದರ ಸುತ್ತಮುತ್ತಲಿನ ಪಟ್ಟಣಗಳಲ್ಲಿಯೂ ಅರೋಯೇರ್ ನಗರ ಮತ್ತು ಅದರ ಸುತ್ತಮುತ್ತಲಿನ ಪಟ್ಟಣಗಳಲ್ಲಿಯೂ ಅರ್ನೋನ್ ನದಿತೀರದ ಎಲ್ಲ ನಗರಗಳಲ್ಲಿಯೂ ಮುನ್ನೂರು ವರ್ಷಗಳಿಂದ ವಾಸಮಾಡುತ್ತಲಿದ್ದಾರೆ. ಈ ನಗರಗಳನ್ನೆಲ್ಲಾ ಸ್ವಾಧೀನಪಡಿಸಿಕೊಳ್ಳಲು ನೀವು ಇಷ್ಟು ವರ್ಷ ಏಕೆ ಪ್ರಯತ್ನ ಮಾಡಲಿಲ್ಲ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು