Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 13:25 - ಪರಿಶುದ್ದ ಬೈಬಲ್‌

25 ಮೋಶೆ ಅವರಿಗೆ ಯಗ್ಜೇರಿನ ಪ್ರದೇಶ ಮತ್ತು ಗಿಲ್ಯಾದಿನ ಎಲ್ಲ ಪಟ್ಟಣಗಳನ್ನೂ ರಬ್ಬಾದ ಹತ್ತಿರವಿದ್ದ ಅರೋಯೇರ್‌ವರೆಗಿನ ಅಮ್ಮೋನಿಯರ ಅರ್ಧಪ್ರದೇಶವನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಹೆಷ್ಬೋನಿನ ಅರಸನಾದ ಸೀಹೋನಿನ ರಾಜ್ಯದ ಉಳಿದ ಭಾಗವಾಗಿರುವ ಯಗ್ಜೇರ್, ಮೊದಲಾದ ಗಿಲ್ಯಾದಿನ ಎಲ್ಲಾ ಪಟ್ಟಣಗಳು, ರಬ್ಬಾ ಊರಿನ ಪೂರ್ವದಲ್ಲಿರುವ ಅರೋಯೇರ್ ಪಟ್ಟಣದ ವರೆಗೆ ವಿಸ್ತರಿಸಿಕೊಂಡಿರುವ ಅಮ್ಮೋನಿಯರ ಅರ್ಧ ರಾಜ್ಯ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಹೆಷ್ಬೋನಿನ ಅರಸ ಸೀಹೋನನ ರಾಜ್ಯದ ಉಳಿದ ಭಾಗವಾಗಿರುವ ಯಗ್ಜೇರ್, ಗಿಲ್ಯಾದಿನ ಎಲ್ಲ ನಗರಗಳು, ರಬ್ಬಾ ಊರಿನ ಪೂರ್ವದಲ್ಲಿ ಇರುವ ಅರೋಯೇರ್ ನಗರದವರೆಗೆ ವಿಸ್ತರಿಸಿಕೊಂಡಿರುವ ಅಮ್ಮೋನಿಯರ ಅರ್ಧರಾಜ್ಯ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಹೆಷ್ಬೋನಿನ ಅರಸನಾದ ಸೀಹೋನನ ರಾಜ್ಯದ ಉಳಿದ ಭಾಗವಾಗಿರುವ ಯಗ್ಜೇರ್ ಮೊದಲಾದ ಗಿಲ್ಯಾದಿನ ಎಲ್ಲಾ ಪಟ್ಟಣಗಳು, ರಬ್ಬಾ ಊರಿನ ಪೂರ್ವದಲ್ಲಿರುವ ಅರೋಯೇರ್ ಪಟ್ಟಣದವರೆಗೆ ವಿಸ್ತರಿಸಿಕೊಂಡಿರುವ ಅಮ್ಮೋನಿಯರ ಅರ್ಧರಾಜ್ಯ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಯಜ್ಜೇರ್ ಪ್ರದೇಶ, ಗಿಲ್ಯಾದಿನ ಸಮಸ್ತ ಪಟ್ಟಣಗಳೂ ರಬ್ಬಾ ಊರಿನ ಎದುರಾಗಿರುವ ಅರೋಯೇರ್ ಪಟ್ಟಣವರೆಗೂ ಇರುವ ಅಮ್ಮೋನಿಯರ ಅರ್ಧ ದೇಶವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 13:25
21 ತಿಳಿವುಗಳ ಹೋಲಿಕೆ  

ಯೋವಾಬನು ಅಮ್ಮೋನಿಯರ ರಾಜಧಾನಿಯಾದ ರಬ್ಬಕ್ಕೆ ವಿರುದ್ಧವಾಗಿ ಹೋರಾಡಿ ಆ ನಗರವನ್ನು ವಶಪಡಿಸಿಕೊಂಡನು.


ವಸಂತಕಾಲದಲ್ಲಿ, ಎಲ್ಲಾ ರಾಜರೂ ಯುದ್ಧಕ್ಕೆ ಹೊರಡುವ ಸಮಯ ಬಂದಾಗ, ದಾವೀದನು ಯೋವಾಬನನ್ನೂ ಅವನ ಸೇವಕರನ್ನೂ ಮತ್ತು ಇಸ್ರೇಲರೆಲ್ಲರನ್ನೂ ಅಮ್ಮೋನಿಯರೊಂದಿಗೆ ಯುದ್ಧಮಾಡಲು ಕಳುಹಿಸಿದನು. ಯೋವಾಬನ ಸೈನ್ಯವು ರಬ್ಬಕ್ಕೆ ಮುತ್ತಿಗೆ ಹಾಕಿತು. ಆದರೆ ದಾವೀದನು ಜೆರುಸಲೇಮಿನಲ್ಲಿಯೇ ಉಳಿದುಕೊಂಡನು.


(ಓಗನು ಬಾಷಾನಿನ ರಾಜನಾಗಿದ್ದನು. ಎದ್ರೈ ಮತ್ತು ಸಲ್ಕಾ ಬಾಷಾನಿನಲ್ಲಿದ್ದ ಓಗನ ರಾಜ್ಯದ ಪಟ್ಟಣಗಳಾಗಿದ್ದವು. ಅವನು ರೆಫಾಯರಲ್ಲಿ ಅಳಿದುಳಿದವರಲ್ಲಿ ಒಬ್ಬನಾಗಿದ್ದನು. ಅವನ ಮಂಚವು ಕಬ್ಬಿಣದಿಂದ ಮಾಡಲ್ಪಟ್ಟಿತ್ತು. ಅದು ಹದಿಮೂರು ಅಡಿ ಉದ್ದವಿತ್ತು ಮತ್ತು ಆರು ಅಡಿ ಅಗಲವಿತ್ತು. ಆ ಮಂಚವು ಈಗಲೂ ಅಮ್ಮೋನಿಯರು ವಾಸಿಸುವ ರಬ್ಬಾದಲ್ಲಿದೆ.)


ಅಟ್ರೋತ್ಷೋಫಾನ್, ಯಗ್ಜೇರ್, ಯೊಗ್ಬೆಹಾ, ಬೇತ್ನಿಮ್ರಾ,


ಆದ್ದರಿಂದ ನಾನು ರಬ್ಬದ ಗೋಡೆಗಳಲ್ಲಿ ಬೆಂಕಿ ಹಾಕುವೆನು. ಆ ಬೆಂಕಿಯು ರಬ್ಬದ ಉನ್ನತ ಗೋಪುರಗಳನ್ನು ನಾಶಮಾಡುವದು; ಹಗಲಿನ ಯುದ್ಧದ ಕೂಗಾಟದಂತೆಯೂ ಸುಂಟರಗಾಳಿಯಂತೆಯೂ ಸಂಕಟವು ಅವರ ದೇಶಕ್ಕೆ ಬರುವದು.


ಯಾವ ಮಾರ್ಗದಲ್ಲಿ ಖಡ್ಗವು ಬರುವದೋ ಆ ದಾರಿಯನ್ನು ಗುರುತಿಸು. ಒಂದು ರಸ್ತೆಯು ಅಮ್ಮೋನಿಯರ ನಗರವಾದ ರಬ್ಬಾಗೆ ಹೋಗುವದು. ಇನ್ನೊಂದು ಮಾರ್ಗವು ಯೆಹೂದದಲ್ಲಿರುವ ಭದ್ರಪಡಿಸಲ್ಪಟ್ಟ ಪಟ್ಟಣವಾಗಿರುವ ಜೆರುಸಲೇಮಿಗೆ ಹೋಗುವುದು.


ಹೆಷ್ಬೋನ್, ಯಗ್ಜೇರ್ ಪಟ್ಟಣಗಳನ್ನು ಕೊಟ್ಟರು. ಒಟ್ಟಿನಲ್ಲಿ ಗಾದ್ಯರು ಅವರಿಗೆ ನಾಲ್ಕು ಪಟ್ಟಣಗಳನ್ನು ಮತ್ತು ಅವರ ಪಶುಗಳಿಗಾಗಿ ಪ್ರತಿಯೊಂದು ಪಟ್ಟಣಗಳ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನು ಕೊಟ್ಟರು.


ನೀನು ಅಮ್ಮೋನಿಯರ ಬಳಿಗೆ ಹೋಗಬೇಕು. ಆದರೆ ಅವರಿಗೆ ತೊಂದರೆ ಕೊಡಬೇಡ. ಅವರೊಂದಿಗೆ ಯುದ್ಧಮಾಡಬೇಡ. ಯಾಕೆಂದರೆ ಅವರ ದೇಶದಲ್ಲಿ ನಿನಗೆ ಪಾಲಿಲ್ಲ. ಅವರು ಲೋಟನ ಸಂತತಿಯವರು, ಆ ದೇಶವನ್ನು ನಾನು ಅವರಿಗೆ ಕೊಟ್ಟಿರುತ್ತೇನೆ.’”


ಮೋಶೆಯು ಯಗ್ಜೇರ್ ಪಟ್ಟಣದ ಗುಟ್ಟನ್ನು ತಿಳಿದುಕೊಂಡು ಬರುವುದಕ್ಕೆ ಕೆಲವು ಜನರನ್ನು ಕಳುಹಿಸಿದ ನಂತರ, ಇಸ್ರೇಲರು ಆ ಪಟ್ಟಣವನ್ನು ವಶಪಡಿಸಿಕೊಂಡರು. ಅದರ ಸುತ್ತಲಿರುವ ಚಿಕ್ಕ ಪಟ್ಟಣಗಳನ್ನು ಅವರು ವಶಪಡಿಸಿಕೊಂಡರು. ಇಸ್ರೇಲರು ಅಲ್ಲಿದ್ದ ಅಮೋರಿಯರನ್ನು ಓಡಿಸಿದರು.


ಗಿಲ್ಯಾದ್ ಪಟ್ಟಣವೂ ಸಹ ಈ ಪ್ರದೇಶಕ್ಕೆ ಒಳಪಟ್ಟಿತ್ತು. ಗೆಷೂರ್ಯರು ಮತ್ತು ಮಾಕತೀಯರು ವಾಸಮಾಡುತ್ತಿದ್ದ ಪ್ರದೇಶವು ಸಹ ಈ ಪ್ರದೇಶಕ್ಕೆ ಸೇರಿತ್ತು. ಇಡೀ ಹೆರ್ಮೋನ್ ಬೆಟ್ಟಪ್ರದೇಶ ಮತ್ತು ಸಲ್ಕಾ ಪಟ್ಟಣದವರೆಗೆ ವಿಸ್ತರಿಸಿಕೊಂಡಿದ್ದ ಬಾಷಾನಿನ ಎಲ್ಲಾ ಪ್ರಾಂತ್ಯಗಳು ಆ ಪ್ರದೇಶಕ್ಕೆ ಸೇರಿಕೊಂಡಿದ್ದವು.


ಮೋಶೆಯು ಗಾದನ ಕುಲದ ಪ್ರತಿಯೊಂದು ಗೋತ್ರದವರಿಗೆ ಕೊಟ್ಟ ಪ್ರದೇಶ ಇಂತಿದೆ:


ಆ ಪ್ರದೇಶವು ಹೆಷ್ಬೋನ್‌ನಿಂದ ರಾಮತ್‌ಮಿಚ್ಛೆ ಮತ್ತು ಬೆಟೋನೀಮ್ ಊರುಗಳವರೆಗೂ ಇರುವ ಪ್ರದೇಶ ಮತ್ತು ಮಹನಯಿಮಿನಿಂದ ದೆಬೀರ್ ಪ್ರಾಂತ್ಯದವರೆಗೆ ಇರುವ ಪ್ರದೇಶವನ್ನು ಒಳಗೊಂಡಿತ್ತು.


ಅವರು ಜೋರ್ಡನ್ ನದಿಯನ್ನು ದಾಟಿ ಅರೋಯೇರಿನಲ್ಲಿ ಪಾಳೆಯ ಮಾಡಿಕೊಂಡರು. ಅವರ ಪಾಳೆಯವು ನಗರದ ಬಲ ಅಂಚಿನಲ್ಲಿತ್ತು. (ಆ ನಗರವು ಗಾದ್ ಕಣಿವೆಯ ಮಧ್ಯಭಾಗದಲ್ಲಿಯೂ ಯಗ್ಜೇರಿನ ಮಾರ್ಗದಲ್ಲಿಯೂ ಇತ್ತು.)


ಹೆಬ್ರೋನ್ ಸಂತಾನದ ಚರಿತ್ರೆಗನುಸಾರವಾಗಿ ಯೆರೀಯನು ಅವರ ಅಧಿಪತಿಯಾಗಿದ್ದನು. ದಾವೀದನು ನಲವತ್ತು ವರ್ಷ ಇಸ್ರೇಲಿನ ಅರಸನಾಗಿದ್ದ ಕಾಲದಲ್ಲಿ ತನ್ನ ಜನರ ಚರಿತ್ರೆಯನ್ನು ಕಂಡುಹಿಡಿದು ದಾಖಲೆ ಮಾಡಲು ಆಜ್ಞೆಯಿತ್ತಿದ್ದನು. ಗಿಲ್ಯಾದಿನ ಯಾಜೇರ್ ಎಂಬಲ್ಲಿ ಹೆಬ್ರೋನ್ ಸಂತಾನಕ್ಕೆ ಸೇರಿದವರಲ್ಲಿ ಬಹಳ ಮಂದಿ ಅನುಭವಶಾಲಿಗಳಾದ ಕಾರ್ಮಿಕರು ದೊರಕಿದರು.


ಹೆಷ್ಬೋನಿನ ತೋಟಗಳು ಮತ್ತು ಸಿಬ್ಮದ ದ್ರಾಕ್ಷಾಲತೆಗಳು ದ್ರಾಕ್ಷಿಯನ್ನು ಫಲಿಸಲಾರದ ಕಾರಣ ಜನರು ವ್ಯಸನದಿಂದಿರುವರು. ಶತ್ರುಸೈನ್ಯವು ಯೆಜ್ಜೇರಿನಿಂದ ಮರುಭೂಮಿಯವರೆಗೂ ಮತ್ತು ಸಮುದ್ರದವರೆಗೂ ಆವರಿಸಿಕೊಂಡಿರುವರು.


ನಾನು ಯೆಜ್ಜೇರಿನ ಜನರೊಂದಿಗೆ ಯೆಜ್ಜೇರಿಗಾಗಿ ಪ್ರಲಾಪಿಸುವೆನು. ಸಿಬ್ಮವೇ, ನಿನ್ನ ದ್ರಾಕ್ಷಿಬಳ್ಳಿಗಳು ಸಮುದ್ರದವರೆಗೂ ಹಬ್ಬಿದ್ದವು; ಅವು ಯೆಜ್ಜೇರ್ ಪಟ್ಟಣದವರೆಗೂ ಚಾಚಿದ್ದವು. ಆದರೆ ವಿನಾಶಕನು ನಿನ್ನ ಹಣ್ಣುಗಳನ್ನು ಮತ್ತು ದ್ರಾಕ್ಷಿಗಳನ್ನು ಕಿತ್ತುಕೊಂಡಿದ್ದಾನೆ.


ಗಿಲ್ಯಾದಿನ ಜನರು ಜೋರ್ಡನ್ ನದಿಯ ಆಚೆಯ ದಡದಲ್ಲಿದ್ದ ತಮ್ಮ ಶಿಬಿರಗಳಲ್ಲಿ ಇದ್ದುಬಿಟ್ಟರು. ದಾನ್ ಕುಲದವರೇ, ನೀವೇಕೆ ನಿಮ್ಮ ಹಡಗುಗಳಲ್ಲಿಯೇ ಉಳಿದುಬಿಟ್ಟಿರಿ? ಆಶೇರ್ ಕುಲದವರು ಸಮುದ್ರತೀರದಲ್ಲಿರುವ ತಮ್ಮ ಸುರಕ್ಷಿತವಾದ ಬಂದರುಗಳಲ್ಲಿ ಉಳಿದುಕೊಂಡರು.


ಅರೋಯೇರ್ ಪ್ರಾಂತ್ಯದ ನಗರಗಳನ್ನು ಜನರು ಬಿಟ್ಟುಹೋಗುವರು. ಆ ಪಾಳುಬಿದ್ದ ನಗರಗಳಲ್ಲಿ ಕುರಿಮಂದೆಗಳು ತಿರುಗಾಡುವವು. ಅವುಗಳಿಗೆ ತೊಂದರೆ ಕೊಡಲು ಯಾರೂ ಇರುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು