Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 13:4 - ಪರಿಶುದ್ದ ಬೈಬಲ್‌

4 ಗೆಷೂರ್ಯ ಸೀಮೆಯು, ಕಾನಾನ್ ದೇಶದ ದಕ್ಷಿಣದಲ್ಲಿ ವಾಸವಾಗಿರುವ ಅವ್ವೀಯರನ್ನು ಸಹ ನೀನು ಸೋಲಿಸಬೇಕಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ದಕ್ಷಿಣದಲ್ಲಿದ್ದ ಅವ್ವೀಯರ ದೇಶ ಚೀದೋನ್ಯರಿಗೆ ಸೇರಿದ ಮೆಯಾರಾ ಮೊದಲುಗೊಂಡು ಅಮೋರಿಯರ ಮೇರೆಯಾದ ಅಫೇಕದವರೆಗಿರುವ ಕಾನಾನ್ಯರ ದೇಶವು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಗೆಷೂರ್ಯರ ನಾಡು, ದಕ್ಷಿಣದಲ್ಲಿದ್ದ ಅವ್ವೀಯರ ನಾಡು; ಸಿದೋನ್ಯರಿಗೆ ಸೇರಿದ ಮೆಯರಾದಿಂದ ಅಮೋರಿಯರ ಮೇರೆಯಾದ ಅಫೇಕದವರೆಗಿರುವ ಕಾನಾನ್ಯರ ನಾಡು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಗೆಷೂರ್ಯರ ಸೀಮೆಯು, ದಕ್ಷಿಣದಲ್ಲಿದ್ದ ಅವ್ವೀಯರ ದೇಶವು ಇವುಗಳೂ ಚೀದೋನ್ಯರಿಗೆ ಸೇರಿದ ಮೆಯಾರಾ ಮೊದಲುಗೊಂಡು ಅಮೋರಿಯರ ಮೇರೆಯಾದ ಅಫೇಕದವರೆಗಿರುವ ಕಾನಾನ್ಯರ ದೇಶವು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಸೀದೋನ್ಯರ ಆರಾ ಪ್ರದೇಶದಿಂದ ಅಫೇಕ್ ಮತ್ತು ಅಮೋರಿಯರ ಮೇರೆಯವರೆಗೆ ಕಾನಾನ್ಯರ ಎಲ್ಲಾ ದೇಶವು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 13:4
11 ತಿಳಿವುಗಳ ಹೋಲಿಕೆ  

ಉಮ್ಮಾ, ಅಫೇಕ್ ಮತ್ತು ರೆಹೋಬ್ ಹತ್ತಿರ ಸಮುದ್ರದಲ್ಲಿ ಕೊನೆಗೊಳ್ಳುತ್ತದೆ. ಒಟ್ಟಿನಲ್ಲಿ ಇಪ್ಪತ್ತೆರಡು ಪಟ್ಟಣಗಳು ಮತ್ತು ಅವುಗಳ ಸುತ್ತಮುತ್ತಲಿನ ಎಲ್ಲ ಹೊಲಗದ್ದೆಗಳು ಇದರಲ್ಲಿ ಸೇರಿದ್ದವು.


ಸಮುವೇಲನ ಸುದ್ದಿಯು ಇಸ್ರೇಲಿನಲ್ಲೆಲ್ಲಾ ಹರಡಿತು. ಏಲಿಯು ಬಹು ವೃದ್ಧನಾದನು. ಅವನ ಮಕ್ಕಳು ಯೆಹೋವನ ಸನ್ನಿಧಿಯಲ್ಲಿ ಕೆಟ್ಟಕಾರ್ಯಗಳನ್ನು ನಡೆಸುತ್ತಲೇ ಇದ್ದರು. ಆ ಕಾಲದಲ್ಲಿ ಫಿಲಿಷ್ಟಿಯರು ಇಸ್ರೇಲರಿಗೆ ವಿರುದ್ಧವಾಗಿ ಯುದ್ಧಮಾಡಲು ಒಟ್ಟುಗೂಡಿದರು. ಇಸ್ರೇಲರು ಫಿಲಿಷ್ಟಿಯರಿಗೆ ವಿರುದ್ಧವಾಗಿ ಹೊರಟು ಎಬೆನೆಜೆರಿನಲ್ಲಿ ಪಾಳೆಯ ಮಾಡಿಕೊಂಡರು; ಫಿಲಿಷ್ಟಿಯರು ಅಫೇಕಿನಲ್ಲಿ ಪಾಳೆಯ ಮಾಡಿಕೊಂಡರು.


“ಈಜಿಪ್ಟ್ ದೇಶದಿಂದ ನಿಮ್ಮನ್ನು ಹೊರತಂದವನು ನಾನೇ. ನಲವತ್ತು ವರ್ಷಗಳ ತನಕ ನಾನು ಅಡವಿಯಲ್ಲಿ ನಿಮ್ಮನ್ನು ನಡಿಸಿದೆನು. ನಾನು ಅಮೋರಿಯರ ದೇಶವನ್ನು ಸ್ವಾಧೀನಪಡಿಸಲು ಅವರಿಗೆ ಸಹಾಯ ಮಾಡಿದೆನು.


ಅಫೇಕದ ಅರಸ ಲಷ್ಷಾರೋನಿನ ಅರಸ


ಯಾಬೀನನು ಪೂರ್ವ ಮತ್ತು ಪಶ್ಚಿಮದಲ್ಲಿದ್ದ ಕಾನಾನಿನ ಅರಸರಿಗೂ ಅಮೋರಿಯರಿಗೂ ಹಿತ್ತಿಯರಿಗೂ ಪೆರಿಜ್ಜೀಯರಿಗೂ ಬೆಟ್ಟಪ್ರದೇಶದ ಯೆಬೂಸಿಯರಿಗೂ ಹೆರ್ಮೋನ್ ಪರ್ವತದ ಬುಡದಲ್ಲಿ ಮಿಚ್ಛಾದ ಹತ್ತಿರ ವಾಸವಾಗಿದ್ದ ಹಿವ್ವಿಯರಿಗೂ ಸಂದೇಶವನ್ನು ಕಳುಹಿಸಿದನು.


ಹೀಗೆ ಯೆಹೋಶುವನು ಬೆಟ್ಟದ ಮೇಲಿನ ಪ್ರದೇಶ, ನೆಗೆವ್ ಪ್ರದೇಶ, ಪಶ್ಚಿಮದ ಇಳಕಲಿನ ಪ್ರದೇಶ, ಪೂರ್ವದ ಇಳಕಲಿನ ಪ್ರದೇಶ, ಈ ಎಲ್ಲ ಪ್ರದೇಶಗಳ ಅರಸರನ್ನು ಸೋಲಿಸಿದನು. ಇಸ್ರೇಲಿನ ದೇವರಾದ ಯೆಹೋವನು ಎಲ್ಲಾ ಜನರನ್ನು ಕೊಲ್ಲು ಎಂದು ಯೆಹೋಶುವನಿಗೆ ಹೇಳಿದ್ದನು. ಅದಕ್ಕಾಗಿ ಯೆಹೋಶುವನು ಆ ಸ್ಥಳಗಳಲ್ಲಿ ಯಾರೊಬ್ಬರನ್ನೂ ಸಜೀವವಾಗಿ ಉಳಿಸಲಿಲ್ಲ.


ವಸಂತಮಾಸದಲ್ಲಿ ಬೆನ್ಹದದನು ಅರಾಮ್ಯದ ಜನರನ್ನು ಒಟ್ಟುಗೂಡಿಸಿದನು. ಅವನು ಇಸ್ರೇಲರ ವಿರುದ್ಧ ಹೋರಾಡಲು ಅಫೇಕಕ್ಕೆ ಹೋದನು.


ಬದುಕಿ ಉಳಿದವರು ಅಫೇಕ್ ನಗರಕ್ಕೆ ಓಡಿಹೋದರು. ಆ ನಗರದ ಗೋಡೆಯು ಉಳಿದಿದ್ದ ಇಪ್ಪತ್ತೇಳು ಸಾವಿರ ಜನರ ಮೇಲೆ ಉರುಳಿ ಬಿತ್ತು. ಬೆನ್ಹದದನೂ ನಗರಕ್ಕೆ ಓಡಿಹೋಗಿ ಒಂದು ಕೊಠಡಿಯಲ್ಲಿ ಅವಿತುಕೊಂಡನು.


ನೀನು ಏನು ಹೇಳಬೇಕೆಂದರೆ, ‘ಜೆರುಸಲೇಮಿಗೆ ನನ್ನ ದೇವರಾದ ಯೆಹೋವನು ಹೀಗೆನ್ನುತ್ತಾನೆ: ನಿನ್ನ ಇತಿಹಾಸವನ್ನು ನೋಡು. ನೀನು ಕಾನಾನ್‌ನಲ್ಲಿ ಜನಿಸಿರುತ್ತೀ. ನಿನ್ನ ತಂದೆಯು ಅಮೋರಿಯನು, ನಿನ್ನ ತಾಯಿ ಹಿತ್ತಿಯಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು