Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 13:8 - ಪರಿಶುದ್ದ ಬೈಬಲ್‌

8 ಮನಸ್ಸೆ ಕುಲದ ಅರ್ಧಜನರು, ರೂಬೇನ್ ಮತ್ತು ಗಾದ್ ಕುಲಗಳವರು ಈಗಾಗಲೇ ತಮ್ಮ ಸ್ವಾಸ್ತ್ಯವನ್ನು ತೆಗೆದುಕೊಂಡಿದ್ದರು. ಯೆಹೋವನ ಸೇವಕನಾದ ಮೋಶೆಯು ಜೋರ್ಡನ್ ನದಿಯ ಪೂರ್ವದಿಕ್ಕಿನ ಪ್ರದೇಶವನ್ನು ಅವರಿಗೆ ಕೊಟ್ಟಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಮನಸ್ಸೆ ಕುಲದ ಉಳಿದ ಅರ್ಧಜನರಿಗೆ, ರೂಬೇನ್ಯರಿಗೆ ಹಾಗೂ ಗಾದ್ಯರಿಗೆ ಮೋಶೆಯಿಂದ ಯೊರ್ದನಿನ ಆಚೆಕಡೆಯಲ್ಲಿರುವ ಸ್ವತ್ತು ದೊರಕಿತು. ಯೆಹೋವನ ಸೇವಕನಾದ ಮೋಶೆಯು ಅವರಿಗೆ ಕೊಟ್ಟ ಪ್ರಾಂತ್ಯಗಳು ಯಾವುವೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಮನಸ್ಸೆಕುಲದ ಉಳಿದ ಅರ್ಧಜನರಿಗೆ, ರೂಬೇನ್ಯರಿಗೆ ಹಾಗೂ ಗಾದ್ಯರಿಗೆ ಜೋರ್ಡನಿನ ಆಚೆಕಡೆ ಈಗಾಗಲೇ ಮೋಶೆಯಿಂದ ಸ್ವಂತ ಭೂಮಿ ದೊರಕಿತ್ತು. ಸರ್ವೇಶ್ವರನ ದಾಸ ಮೋಶೆ ಅವರಿಗೆ ಕೊಟ್ಟ ಪ್ರಾಂತ್ಯಗಳು ಇವು :

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಮನಸ್ಸೆಕುಲದ ಉಳಿದ ಅರ್ಧಜನರಿಗೂ ರೂಬೇನ್ಯರಿಗೂ ಗಾದ್ಯರಿಗೂ ಮೋಶೆಯಿಂದ ಯೊರ್ದನಿನ ಆಚೆಯಲ್ಲೇ ಸ್ವಾಸ್ತ್ಯವು ದೊರಕಿತು. ಯೆಹೋವನ ಸೇವಕನಾದ ಮೋಶೆಯು ಅವರಿಗೆ ಕೊಟ್ಟ ಪ್ರಾಂತಗಳು ಯಾವವಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಮನಸ್ಸೆ ಕುಲದ ಉಳಿದ ಅರ್ಧ ಗೋತ್ರದವರೂ ರೂಬೇನ್ಯರೂ ಗಾದ್ಯರೂ ತಮ್ಮ ಸೊತ್ತನ್ನು ಯೆಹೋವ ದೇವರ ಸೇವಕನಾದ ಮೋಶೆಯು ಯೊರ್ದನ್ ನದಿ ಆಚೆ ಸೂರ್ಯೋದಯದ ದಿಕ್ಕಿನಲ್ಲಿ ಅವರಿಗೆ ಕೊಡಬೇಕೆಂದು ನಿರ್ಣಯಿಸಿದ ಸ್ಥಳಗಳು ಅವರಿಗೆ ಕೊಡಲಾದವು. ಅವುಗಳು ಯಾವುವೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 13:8
11 ತಿಳಿವುಗಳ ಹೋಲಿಕೆ  

ಯೆಹೋವನ ಸೇವಕನಾದ ಮೋಶೆಯು ಮತ್ತು ಇಸ್ರೇಲರು ಈ ಎಲ್ಲ ಅರಸರನ್ನು ಸೋಲಿಸಿದರು. ಮೋಶೆಯು ಈ ಪ್ರದೇಶವನ್ನು ರೂಬೇನನ ಕುಲದವರಿಗೂ ಗಾದನ ಕುಲದವರಿಗೂ ಮನಸ್ಸೆ ಕುಲದ ಅರ್ಧಜನರಿಗೂ ಸ್ವಾಸ್ತ್ಯವಾಗಿ ಕೊಟ್ಟುಬಿಟ್ಟನು.


ನಿಮ್ಮ ದೇವರಾದ ಯೆಹೋವನು ಇಸ್ರೇಲರಿಗೆ ಶಾಂತಿಯನ್ನು ದಯಪಾಲಿಸುವುದಾಗಿ ವಾಗ್ದಾನ ಮಾಡಿದ್ದನು. ಈಗ ಯೆಹೋವನು ತನ್ನ ವಾಗ್ದಾನವನ್ನು ಪೂರ್ಣಗೊಳಿಸಿದ್ದಾನೆ. ಆದ್ದರಿಂದ ಈಗ ನೀವು ನಿಮ್ಮ ಮನೆಗಳಿಗೆ ಹೋಗಬಹುದು. ಯೆಹೋವನ ಸೇವಕನಾದ ಮೋಶೆಯು ನಿಮಗೆ ಜೋರ್ಡನ್ ನದಿಯ ಪೂರ್ವಕ್ಕೆ ಸ್ವಾಸ್ತ್ಯವನ್ನು ಕೊಟ್ಟಿದ್ದಾನೆ. ಈಗ ನೀವು ಆ ಪ್ರದೇಶದಲ್ಲಿರುವ ನಿಮ್ಮ ಮನೆಗಳಿಗೆ ಹೋಗಬಹುದು.


ರೂಬೇನ್ಯರು, ಗಾದ್ಯರು ಮತ್ತು ಮನಸ್ಸೆ ಕುಲದ ಅರ್ಧಜನರು ಮೋಶೆಯ ಆಜ್ಞೆಯನ್ನು ಪಾಲಿಸಿದರು. ಇವರು ಬೇರೆಯವರಿಗಿಂತ ಮುಂಚೆಯೇ ನದಿಯನ್ನು ದಾಟಿದರು. ಯೆಹೋವನು ವಾಗ್ದಾನ ಮಾಡಿದ ದೇಶವನ್ನು ಪಡೆಯಲು ಇಸ್ರೇಲರಿಗೆ ಸಹಾಯ ಮಾಡಲು ಇವರು ಯುದ್ಧಸನ್ನದ್ಧರಾಗಿ ಹೋಗುತ್ತಿದ್ದರು.


ನಮಗೆ ಜೋರ್ಡನ್ ಹೊಳೆಯ ಈಚೆ ಪೂರ್ವದಿಕ್ಕಿನಲ್ಲಿ ಸ್ವಾಸ್ತ್ಯವು ದೊರಕಿದ್ದರಿಂದ ನಾವು ಹೊಳೆಯ ಆಚೆ ಎಲ್ಲಿಯೂ ಅವರೊಂದಿಗೆ ಸ್ವಾಸ್ತ್ಯವನ್ನು ಅಪೇಕ್ಷಿಸುವುದಿಲ್ಲ” ಅಂದರು.


“ಈ ರೀತಿಯಾಗಿ ನಾವು, ಇಬ್ಬರು ಅಮೋರಿಯ ಅರಸರ ದೇಶಗಳನ್ನು ಸ್ವಾಧೀನ ಮಾಡಿಕೊಂಡೆವು. ಅವರ ದೇಶಗಳು ಜೋರ್ಡನ್ ನದಿಯ ಪೂರ್ವದಲ್ಲಿದ್ದು ಅರ್ನೋನ್ ಕಣಿವೆಯಿಂದ ಹಿಡಿದು, ಹೆರ್ಮೋನ್ ಪರ್ವತದ ತನಕ ವಿಸ್ತಾರವಾಗಿತ್ತು.


ಇಸ್ರೇಲರು ಜೋರ್ಡನ್ ನದಿಯ ಪೂರ್ವದಿಕ್ಕಿನ ಭೂಮಿಯನ್ನು ಸ್ವಾಧೀನಪಡಿಸಿಕೊಂಡರು. ಅರ್ನೋನ್ ನದಿಯಿಂದ ಹೆರ್ಮೋನ್ ಪರ್ವತದವರೆಗಿನ ಪ್ರದೇಶ ಮತ್ತು ಜೋರ್ಡನ್ ಕಣಿವೆಯ ಪೂರ್ವದಿಕ್ಕಿಗೆ ಉದ್ದಕ್ಕೂ ಹಬ್ಬಿರುವ ಪ್ರದೇಶ ಅವರ ವಶಕ್ಕೆ ಬಂತು. ಈ ದೇಶವನ್ನು ತೆಗೆದುಕೊಳ್ಳುವುದಕ್ಕಾಗಿ ಇಸ್ರೇಲರು ಸೋಲಿಸಿದ ಅರಸರ ವಿವರ ಹೀಗಿದೆ:


ಒಂಭತ್ತು ಕುಲಗಳಿಗೂ ಮನಸ್ಸೆ ಕುಲದ ಅರ್ಧಜನರಿಗೂ ಪಾಲು ಮಾಡಿಕೊಡು.”


ಅವರಿಗೆ ದೊರಕಿದ ಪ್ರದೇಶವು ಅರ್ನೋನ್ ಕಣಿವೆಯ ಬಳಿಯಲ್ಲಿದ್ದ ಅರೋಯೇರ್‌ನಿಂದ ಆರಂಭಗೊಂಡು ಮಧ್ಯಕಣಿವೆಯಲ್ಲಿದ್ದ ಊರಿನವರೆಗೂ ವಿಸ್ತರಿಸಿಕೊಂಡಿತ್ತು. ಮೇದೆಬದಿಂದ ದೀಬೋನಿನವರೆಗಿದ್ದ ಇಡೀ ಬಯಲು ಪ್ರದೇಶವನ್ನು ಇದು ಒಳಗೊಂಡಿತ್ತು.


ಇಬ್ರಿಯರಲ್ಲಿ ಕೆಲವರು ಜೋರ್ಡನ್ ನದಿಯನ್ನು ದಾಟಿ ಗಾದ್ ಮತ್ತು ಗಿಲ್ಯಾದ್ ಪ್ರದೇಶಕ್ಕೆ ಹೊರಟುಹೋದರು. ಸೌಲನು ಇನ್ನೂ ಗಿಲ್ಗಾಲಿನಲ್ಲೇ ಇದ್ದನು. ಅವನ ಸೈನ್ಯದಲ್ಲಿದ್ದ ಜನರೆಲ್ಲ ಭಯದಿಂದ ನಡುಗತೊಡಗಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು