Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 14:12 - ಪರಿಶುದ್ದ ಬೈಬಲ್‌

12 ಆದ್ದರಿಂದ ಯೆಹೋವನು ನನಗೆ ಬಹಳ ಹಿಂದೆಯೇ ವಾಗ್ದಾನ ಮಾಡಿದ್ದ ಬೆಟ್ಟಪ್ರದೇಶವನ್ನು ಈಗ ನನಗೆ ಕೊಡು. ಬಲಿಷ್ಠರಾದ ಅನಾಕವಂಶಸ್ಥರು ವಾಸವಾಗಿರುವ ಆ ಪಟ್ಟಣಗಳು ಬಹಳ ದೊಡ್ಡದಾಗಿವೆಯೆಂದೂ ಸುಭದ್ರವಾದವುಗಳೆಂದೂ ನೀನು ಕೇಳಿರುವೆ. ಆದರೆ ಯೆಹೋವನು ನನ್ನೊಂದಿಗಿರುವುದರಿಂದ ಆತನು ಹೇಳಿದಂತೆಯೇ ಆ ಪ್ರದೇಶವನ್ನು ನಾನು ತೆಗೆದುಕೊಳ್ಳುತ್ತೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಹೀಗಿರಲು ಯೆಹೋವನು ಆ ದಿನದಂದು ಸೂಚಿಸಿದಂತೆ ಈ ಪರ್ವತ ಪ್ರದೇಶವನ್ನು ನನಗೆ ಕೊಡು ಇದರಲ್ಲಿ ಉನ್ನತ ಪುರುಷರು (ಅನಾಕ್ಯರು) ಇರುತ್ತಾರೆ ಎಂದು ಈ ಪಟ್ಟಣಗಳು ದೊಡ್ಡದೂ, ಕೋಟೆಕೊತ್ತಲುಳ್ಳವುಗಳೂ ಆಗಿವೆ ಎಂದೂ ಆ ಕಾಲದಲ್ಲಿ ನೀನೇ ಕೇಳಿದ್ದೀಯಲ್ಲಾ. ಅವರೆಲ್ಲರನ್ನು ಓಡಿಸಿಬಿಡುವುದಕ್ಕೋಸ್ಕರ ಯೆಹೋವನು ತನ್ನ ಮಾತಿಗನುಸಾರವಾಗಿ ನನಗೆ ಸಹಾಯ ಮಾಡುವನೆಂದು ನಂಬಿಕೊಂಡಿದ್ದೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಹೀಗಿರಲು ಸರ್ವೇಶ್ವರ ಆ ದಿನದಂದು ಸೂಚಿಸಿದಂತೆ ಈ ಮಲೆನಾಡನ್ನು ನನಗೆ ಕೊಡು. ‘ಇದರಲ್ಲಿ ಎತ್ತರದ ವ್ಯಕ್ತಿಗಳಿದ್ದಾರೆ, ದೊಡ್ಡ ದೊಡ್ಡ ನಗರಗಳಿವೆ, ಕೋಟೆಕೊತ್ತಲಗಳಿವೆ’ ಎಂದು ಆ ಕಾಲದಲ್ಲಿ ನೀನು ಕೇಳಿದ್ದುಂಟು. ಅವರೆಲ್ಲರನ್ನು ಓಡಿಸಿಬಿಡಲು ಸರ್ವೇಶ್ವರ ತಮ್ಮ ಮಾತಿಗನುಸಾರ ನನಗೆ ಸಹಾಯಮಾಡುವರೆಂಬ ನಂಬಿಕೆ ನನಗಿದೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಹೀಗಿರಲಾಗಿ ಯೆಹೋವನು ಆ ದಿನದಲ್ಲಿ ಸೂಚಿಸಿದಂಥ ಈ ಪರ್ವತಪ್ರದೇಶವನ್ನು ನನಗೆ ಕೊಡು. ಇದರಲ್ಲಿ ಉನ್ನತ ಪುರುಷರಿರುತ್ತಾರೆಂದೂ ಇದರ ಪಟ್ಟಣಗಳು ದೊಡ್ಡವೂ ಕೋಟೆಕೊತ್ತಲುಳ್ಳವುಗಳೂ ಆಗಿವೆ ಎಂದೂ ಆ ಕಾಲದಲ್ಲಿ ನೀನು ಕೇಳಿದಿಯಲ್ಲಾ. ಅವರೆಲ್ಲರನ್ನೂ ಓಡಿಸಿ ಬಿಡುವದಕ್ಕೋಸ್ಕರ ಯೆಹೋವನು ತನ್ನ ಮಾತಿಗನುಸಾರವಾಗಿ ನನಗೆ ಸಹಾಯ ಮಾಡುವನೆಂದು ನಿರೀಕ್ಷಿಸಿಕೊಂಡಿದ್ದೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆದ್ದರಿಂದ ಯೆಹೋವ ದೇವರು ಆ ದಿವಸದಲ್ಲಿ ಹೇಳಿದ ಈ ಬೆಟ್ಟವನ್ನು ಈಗ ನನಗೆ ಕೊಡು; ಏಕೆಂದರೆ ಅಲ್ಲಿ ಅನಾಕ್ಯರು ಇದ್ದಾರೆಂದೂ, ಗೋಡೆಗಳುಳ್ಳ ದೊಡ್ಡ ಪಟ್ಟಣಗಳುಂಟೆಂದೂ ನೀನು ಆ ದಿವಸದಲ್ಲಿ ಕೇಳಿದ್ದಿ. ಯೆಹೋವ ದೇವರು ಹೇಳಿದ ಪ್ರಕಾರವೇ ನಾನು ಅವರನ್ನು ಹೊರಡಿಸಲು ಯೆಹೋವ ದೇವರು ನನಗೆ ಸಹಾಯ ಮಾಡುವರೆಂದು ನಂಬಿಕೊಂಡಿದ್ದೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 14:12
21 ತಿಳಿವುಗಳ ಹೋಲಿಕೆ  

ಆ ಜನರೆಲ್ಲರೂ ಬಲವಾದ ನಂಬಿಕೆಯುಳ್ಳವರಾಗಿದ್ದರು. ಆ ನಂಬಿಕೆಯಿಂದಲೇ ರಾಜ್ಯಗಳನ್ನು ಸೋಲಿಸಿದರು. ಅವರು ಯೋಗ್ಯವಾದ ಕಾರ್ಯಗಳನ್ನು ಮಾಡಿದರು ಮತ್ತು ದೇವರು ವಾಗ್ದಾನ ಮಾಡಿದ್ದವುಗಳನ್ನು ಪಡೆದುಕೊಂಡರು. ಅವರಲ್ಲಿ ಕೆಲವರು ತಮ್ಮ ನಂಬಿಕೆಯಿಂದ ಸಿಂಹಗಳ ಬಾಯಿಗಳನ್ನು ಮುಚ್ಚಿದರು;


ಕ್ರಿಸ್ತನ ಮೂಲಕ ನಾನು ಎಲ್ಲಾ ಕಾರ್ಯಗಳನ್ನು ಮಾಡಬಲ್ಲೆನು. ಏಕೆಂದರೆ ಆತನು ನನ್ನನ್ನು ಬಲಪಡಿಸುತ್ತಾನೆ.


ಪ್ರಚಂಡರಾದ ನೆಫೀಲಿಯರು ಅಲ್ಲಿ ವಾಸವಾಗಿರುವುದನ್ನು ನಾವು ನೋಡಿದೆವು. (ಅನಾಕ್ಯರು ನೆಫೀಲಿಯ ಜನರ ಸಂತತಿಯವರಾಗಿದ್ದಾರೆ.) ಅವರ ಮುಂದೆ ನಾವು ಮಿಡತೆಗಳೊ ಎಂದೆನಿಸಿತು. ಅವರಿಗೂ ಸಹ ನಾವು ಮಿಡತೆಗಳಂತೆ ಕಂಡುಬಂದೆವು” ಎಂದರು.


ಅಲ್ಲಿನ ಜನರು ಬಲಿಷ್ಠರು. ಪಟ್ಟಣಗಳೂ ಬಹಳ ದೊಡ್ಡದಾಗಿವೆ. ಪಟ್ಟಣಗಳು ಕೋಟೆಕೊತ್ತಲುಗಳುಳ್ಳದಾಗಿವೆ. ನಾವು ಕೆಲವು ಅನಾಕ್ಯರನ್ನು ಸಹ ನೋಡಿದೆವು.


ಹೀಗಿರುವಲ್ಲಿ ಇದರ ಬಗ್ಗೆ ನಾವು ಏನು ಹೇಳೋಣ? ದೇವರು ನಮ್ಮೊಂದಿಗೆ ಇರುವಾಗ, ನಮ್ಮನ್ನು ಯಾರೂ ಸೋಲಿಸಲಾರರು.


ಹೆಬ್ರೋನ್‌ನಲ್ಲಿ ವಾಸವಾಗಿದ್ದ ಮೂರು ಅನಾಕ ಕುಟುಂಬಗಳನ್ನು ಕಾಲೇಬನು ಅಲ್ಲಿಂದ ಬಲವಂತವಾಗಿ ಹೊರಡಿಸಿದನು. ಆ ಕುಟುಂಬಗಳ ಹೆಸರುಗಳು ಶೇಷೈ, ಅಹೀಮನ್ ಮತ್ತು ತಲ್ಮೈ. ಅವರು ಅನಾಕನ ವಂಶಸ್ಥರಾಗಿದ್ದರು.


ದೇವರೊಬ್ಬನೇ ನಮ್ಮನ್ನು ಬಲಗೊಳಿಸಬಲ್ಲನು. ಆತನೊಬ್ಬನೇ ನಮ್ಮ ಶತ್ರುಗಳನ್ನು ಸೋಲಿಸಬಲ್ಲನು!


ಈ ದೇಶವು ನಮಗೆ ದೊರೆತದ್ದು ನಮ್ಮ ಪೂರ್ವಿಕರ ಖಡ್ಗಗಳಿಂದಲ್ಲ. ಅವರನ್ನು ಜಯಶಾಲಿಗಳನ್ನಾಗಿ ಮಾಡಿದ್ದು ಅವರ ಭುಜಬಲವಲ್ಲ. ನಮ್ಮ ಪೂರ್ವಿಕರೊಂದಿಗೆ ನೀನಿದ್ದುದರಿಂದ ಅವರಿಗೆ ಜಯವು ದೊರೆಯಿತು. ದೇವರೇ, ನಿನ್ನ ಮಹಾಶಕ್ತಿಯು ಅವರನ್ನು ರಕ್ಷಿಸಿತು. ಅವರ ಮೇಲೆ ನಿನಗಿದ್ದ ಪ್ರೀತಿಯನ್ನು ಅದು ತೋರಿಸಿತು.


ಆಸನು ದೇವರಾದ ಯೆಹೋವನನ್ನು ಪ್ರಾರ್ಥಿಸಿ, “ಯೆಹೋವನೇ, ಬಲಹೀನರಾದವರು ಬಲಿಷ್ಠರಾದವರನ್ನು ಸೋಲಿಸಲು ನೀನೇ ಸಹಾಯಿಸಬೇಕು. ದೇವರಾದ ಯೆಹೋವನೇ, ನಮಗೆ ಸಹಾಯಮಾಡು. ನೀನೇ ನಮ್ಮ ರಕ್ಷಕನು. ನಾವು ನಿನ್ನ ಮೇಲೆ ಭರವಸವಿಟ್ಟಿರುತ್ತೇವೆ. ನಿನ್ನ ಹೆಸರಿನಲ್ಲಿ ನಾವು ದೊಡ್ಡ ಸೈನ್ಯದೊಂದಿಗೆ ಯುದ್ಧಕ್ಕೆ ಹೊರಟಿರುತ್ತೇವೆ. ಯೆಹೋವನೇ, ನೀನೇ ನಮ್ಮ ದೇವರು. ನಿನ್ನನ್ನು ಸೋಲಿಸಲು ಯಾರಿಗೂ ಅವಕಾಶಕೊಡಬೇಡ” ಎಂದು ಬೇಡಿಕೊಂಡನು.


ಯೋನಾತಾನನು ತನ್ನ ಆಯುಧಗಳನ್ನು ಹೊತ್ತುಕೊಂಡು ಬರುತ್ತಿದ್ದ ಯುವಸಹಾಯಕನಿಗೆ, “ಆ ಹೊರದೇಶಿಯರ ಪಾಳೆಯಕ್ಕೆ ಹೋಗೋಣ ಬಾ. ಈ ಜನರನ್ನು ಸೋಲಿಸಲು ಯೆಹೋವನು ಬಹುಶಃ ನಮ್ಮನ್ನು ಬಳಸಬಹುದು. ಯೆಹೋವನನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ. ನಮ್ಮಲ್ಲಿ ಅನೇಕ ಸೈನಿಕರಿದ್ದರೂ ಇಲ್ಲವೆ ಕೆಲವೇ ಸೈನಿಕರಿದ್ದರೂ ಅದು ಲೆಕ್ಕಕ್ಕೆ ಬರುವುದಿಲ್ಲ” ಎಂದು ಹೇಳಿದನು.


ಹೆಬ್ರೋನಿಗೆ ಸಮೀಪದಲ್ಲಿರುವ ಭೂಮಿಯನ್ನು ಕಾಲೇಬನಿಗೆ ಕೊಡುವುದಾಗಿ ಮೋಶೆಯು ವಾಗ್ದಾನ ಮಾಡಿದ್ದನು. ಆದ್ದರಿಂದ ಆ ಭೂಮಿಯನ್ನು ಕಾಲೇಬನ ಕುಟುಂಬದವರಿಗೆ ಕೊಡಲಾಯಿತು. ಕಾಲೇಬನ ಜನರು ಅನಾಕನ ಮೂರು ಜನ ಮಕ್ಕಳನ್ನು ಆ ಪ್ರದೇಶದಿಂದ ಬಲವಂತವಾಗಿ ಹೊರಗಟ್ಟಿದರು.


ಆದರೆ ಯೆಹೋವನು ಮೋಶೆಗೆ, “ಆ ಅರಸನಿಗೆ ಹೆದರಬೇಡ. ನೀನು ಅವನನ್ನು ಸೋಲಿಸುವಂತೆ ಮಾಡುವೆನು. ನೀನು ಅವನ ಸೈನ್ಯವನ್ನು ಮತ್ತು ಅವನ ದೇಶವನ್ನು ಪೂರ್ಣವಾಗಿ ವಶಪಡಿಸಿಕೊಳ್ಳುವೆ. ಹೆಷ್ಬೋನಿನಲ್ಲಿ ವಾಸಿಸಿದ್ದ ಅಮೋರಿಯರ ಅರಸನಾದ ಸೀಹೋನನಿಗೆ ಮಾಡಿದಂತೆ ಇವನಿಗೂ ಸಹ ಮಾಡುವಿರಿ” ಅಂದನು.


ನಾವೀಗ ಎಲ್ಲಿಗೆ ಹೋಗೋಣ? ನಮ್ಮ ಸಹೋದರರು ತಮ್ಮ ವರದಿಯಿಂದ ನಮ್ಮನ್ನು ಹೆದರಿಸಿದ್ದಾರೆ. ಅಲ್ಲಿಯ ಜನರು ದೃಢಕಾಯರೂ ಬಲಶಾಲಿಗಳೂ ಎತ್ತರವಾದ ಪುರುಷರೂ ಆಗಿದ್ದಾರೆ. ಅವರ ಪಟ್ಟಣಗಳು ದೊಡ್ಡವುಗಳಾಗಿದ್ದು ಅವುಗಳ ಗೋಡೆಗಳು ಆಕಾಶಕ್ಕೆ ಮುಟ್ಟುವಷ್ಟು ಎತ್ತರವಾಗಿವೆ. ನಾವು ಅಲ್ಲಿ ಅನಾಕ್ಯರೆಂಬ ಮಹಾಶರೀರಗಳನ್ನು ನೋಡಿದೆವು!’ ಎಂದು ಅವರು ಹೇಳಿದಾಗ ನಾವು ಭಯದಿಂದ ತತ್ತರಿಸಿದೆವು.


ಸೇನಾಧಿಪತಿಯ ಒಡೆಯನಾದ ಅಶ್ಶೂರದ ರಾಜನು, ಜೀವಸ್ವರೂಪನಾದ ದೇವರ ಬಗ್ಗೆ ಕೆಟ್ಟದ್ದನ್ನು ನುಡಿಯಲು ಅವನನ್ನು ಕಳುಹಿಸಿದನು. ನಿಮ್ಮ ದೇವರಾದ ಯೆಹೋವನು ಅವುಗಳನ್ನೆಲ್ಲ ಕೇಳಿರುತ್ತಾನೆ. ಯೆಹೋವನು ಶತ್ರುಗಳನ್ನು ತಪ್ಪಿತಸ್ಥರೆಂದು ನಿರ್ಧರಿಸಬಹುದು! ಆದ್ದರಿಂದ ಇನ್ನೂ ಜೀವಸಹಿತ ಉಳಿದಿರುವ ಜನರಿಗಾಗಿ ಪ್ರಾರ್ಥಿಸಿ” ಎಂದು ಹೇಳಿದರು.


“ಇಸ್ರೇಲ್ ಜನರೇ, ಕೇಳಿರಿ. ಈ ದಿನ ನೀವು ಜೋರ್ಡನ್ ನದಿಯನ್ನು ದಾಟಿ ಆ ದೇಶವನ್ನು ಪ್ರವೇಶಿಸಿ ನಿಮಗಿಂತ ಬಲಿಷ್ಠವಾದ ಜನಾಂಗಗಳನ್ನು ಹೊಡೆದೋಡಿಸುವಿರಿ. ಅವರ ಪಟ್ಟಣಗಳು ದೊಡ್ಡದಾಗಿವೆ; ಅದರ ಗೋಡೆಗಳು ಆಕಾಶದಷ್ಟು ಎತ್ತರವಾಗಿವೆ;


ಆದರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಮುಂದೆ ನದಿಯನ್ನು ದಾಟುತ್ತಾನೆಂಬುದು ನಿಮಗೆ ನಿಶ್ಚಯವಾಗಿ ತಿಳಿದಿರಲಿ. ಆತನು ದಹಿಸುವ ಬೆಂಕಿಯಂತಿದ್ದಾನೆ. ಆತನು ಆ ಜನಾಂಗಗಳನ್ನು ಬೇಗನೆ ನಾಶಪಡಿಸುವನು; ನಿಮ್ಮ ಎದುರಿನಲ್ಲಿ ಅವರು ಬಿದ್ದುಹೋಗುವಂತೆ ಮಾಡುವನು. ಇದು ನೆರವೇರುವುದಾಗಿ ಯೆಹೋವನೇ ನಿಮಗೆ ವಾಗ್ದಾನ ಮಾಡಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು