Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 14:15 - ಪರಿಶುದ್ದ ಬೈಬಲ್‌

15 ಹಿಂದೆ ಆ ನಗರದ ಹೆಸರು ಕಿರ್ಯಾತ್ ಅರ್ಬ ಎಂದಿತ್ತು. ಅನಾಕ ವಂಶದವರಲ್ಲಿ ಶ್ರೇಷ್ಠನಾದ ಅರ್ಬ ಎಂಬವನ ಸ್ಮರಣಾರ್ಥವಾಗಿ ಆ ನಗರಕ್ಕೆ ಅವನ ಹೆಸರನ್ನೇ ಇಡಲಾಗಿತ್ತು. ಇದಾದ ಮೇಲೆ, ಆ ಪ್ರದೇಶದಲ್ಲಿ ಶಾಂತಿ ನೆಲೆಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅದರ ಹಿಂದಿನ ಹೆಸರು “ಕಿರ್ಯತ್ಅರ್ಬ” ಎಂಬುದಾಗಿತ್ತು. “ಅರ್ಬ” ಎಂಬುವವನು ಉನ್ನತ ಪುರುಷರಲ್ಲಿ (ಅನಾಕ್ಯರಲ್ಲಿ) ಪ್ರಮುಖನಾಗಿದ್ದನು. ಯುದ್ಧವು ನಿಂತು ದೇಶದಲ್ಲಿ ಸಮಾಧಾನ ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅದರ ಹಿಂದಿನ ಹೆಸರು, ‘ಕಿರ್ಯತ್ ಅರ್ಬ’ ಎಂದು. ಅರ್ಬ ಎಂಬವನು ಈ ಎತ್ತರದ ವ್ಯಕ್ತಿಗಳಲ್ಲಿ ಪ್ರಮುಖನು. ಯುದ್ಧವು ನಿಂತಿತು. ನಾಡಿನಲ್ಲಿ ಶಾಂತಿಸಮಾಧಾನ ನೆಲೆಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅದರ ಮುಂಚಿನ ಹೆಸರು ಕಿರ್ಯತ್ಅರ್ಬ ಎಂಬದು. ಅರ್ಬ ಎಂಬವನು ಉನ್ನತ ಪುರುಷರಲ್ಲಿ ಪ್ರಮುಖನು. ಯುದ್ಧವು ನಿಂತು ದೇಶದಲ್ಲಿ ಸಮಾಧಾನವುಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಹೆಬ್ರೋನಿನ ಮೊದಲಿನ ಹೆಸರು ಕಿರ್ಯತ್ ಅರ್ಬ. “ಅರ್ಬ” ಎಂಬುವವನು ಅನಾಕ್ಯರಲ್ಲಿ ಪ್ರಮುಖನಾಗಿದ್ದನು. ದೇಶವು ಯುದ್ಧವಿಲ್ಲದೆ ಶಾಂತವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 14:15
16 ತಿಳಿವುಗಳ ಹೋಲಿಕೆ  

ಬಹಳ ಹಿಂದೆಯೇ ಯೆಹೋವನು ಮೋಶೆಗೆ ಹೇಳಿದ ಪ್ರಕಾರ ಯೆಹೋಶುವನು ಇಸ್ರೇಲಿನ ಪ್ರದೇಶವನ್ನೆಲ್ಲ ಸ್ವಾಧೀನಪಡಿಸಿಕೊಂಡನು. ಯೆಹೋವನು ತಾನು ವಾಗ್ದಾನ ಮಾಡಿದಂತೆ ಆ ಪ್ರದೇಶವನ್ನು ಇಸ್ರೇಲರಿಗೆ ಕೊಟ್ಟುಬಿಟ್ಟನು. ಆಗ ಯೆಹೋಶುವನು ಆ ಪ್ರದೇಶವನ್ನು ಕುಲಗಳ ಪ್ರಕಾರ ಹಂಚಿಕೊಟ್ಟನು. ಆಗ ಯುದ್ಧವು ಮುಗಿಯಿತು, ಕೊನೆಗೆ ಆ ಪ್ರದೇಶದಲ್ಲಿ ಶಾಂತಿ ನೆಲೆಸಿತು.


ಅವಳು ಕಾನಾನ್ ದೇಶದ ಹೆಬ್ರೋನೆಂಬ ಕಿರ್ಯತರ್ಬದಲ್ಲಿ ಮರಣಹೊಂದಿದಳು. ಅಬ್ರಹಾಮನು ಅವಳಿಗೋಸ್ಕರ ಅಲ್ಲಿ ಬಹಳವಾಗಿ ಅತ್ತನು.


ಆದ್ದರಿಂದ ನಲವತ್ತು ವರ್ಷಗಳ ಕಾಲದವರೆಗೆ ಅಂದರೆ ಕೆನಜನ ಮಗನಾದ ಒತ್ನೀಯೇಲನ ಮರಣದವರೆಗೆ ಆ ಪ್ರದೇಶದಲ್ಲಿ ಶಾಂತಿ ನೆಲೆಸಿತ್ತು.


ಯೆಫುನ್ನೆಯ ಮಗನಾದ ಕಾಲೇಬನಿಗೆ ಯೆಹೂದ ಕುಲದವರ ಸ್ವಾಸ್ತ್ಯದಲ್ಲಿಯೇ ಸ್ವಲ್ಪ ಪ್ರದೇಶವನ್ನು ಕೊಡಬೇಕೆಂದು ದೇವರು ಯೆಹೋಶುವನಿಗೆ ಹೇಳಿದ್ದನು. ಅದಕ್ಕಾಗಿ ಯೆಹೋಶುವನು ಕಾಲೇಬನಿಗೆ ದೇವರು ಆಜ್ಞಾಪಿಸಿದ ಪ್ರದೇಶವನ್ನು ಕೊಟ್ಟನು. ಯೆಹೋಶುವನು ಅವನಿಗೆ ಹೆಬ್ರೋನ್ ಎಂಬ ಕಿರ್ಯಾತರ್ಬ ಊರನ್ನು ಕೊಟ್ಟನು. (ಅರ್ಬನು ಅನಾಕನ ತಂದೆ.)


ಮಿದ್ಯಾನ್ಯರು ಇಸ್ರೇಲರ ಅಧೀನದಲ್ಲಿರಬೇಕಾಯಿತು. ಮಿದ್ಯಾನ್ಯರು ಯಾವ ಹೆಚ್ಚಿನ ತೊಂದರೆಗಳನ್ನು ಕೊಡಲಿಲ್ಲ. ಗಿದ್ಯೋನನು ಬದುಕಿರುವವರೆಗೆ ನಲವತ್ತು ವರ್ಷ ಆ ದೇಶದಲ್ಲಿ ಶಾಂತಿ ನೆಲೆಸಿತ್ತು.


“ಯೆಹೋವನೇ, ನಿನ್ನ ವೈರಿಗಳೆಲ್ಲಾ ಹೀಗೇ ಸಾಯಲಿ; ಆದರೆ ನಿನ್ನನ್ನು ಪ್ರೀತಿಸುವವರೆಲ್ಲರೂ ಬಲವಾಗಿದ್ದು ಉದಯಿಸುವ ಸೂರ್ಯನಂತೆ ಬೆಳಗಲಿ!” ನಲವತ್ತು ವರ್ಷಗಳವರೆಗೆ ದೇಶದಲ್ಲಿ ಶಾಂತಿ ನೆಲೆಸಿತ್ತು.


ಅಂದಿನಿಂದ ಇಸ್ರೇಲರು ಮೋವಾಬ್ಯರನ್ನು ಆಳಲು ಪ್ರಾರಂಭಿಸಿದರು. ಆ ಪ್ರದೇಶದಲ್ಲಿ ಎಂಭತ್ತು ವರ್ಷಗಳವರೆಗೆ ಶಾಂತಿ ನೆಲೆಸಿತು.


ಯಾಕೋಬನು ತನ್ನ ತಂದೆಯಾದ ಇಸಾಕನ ಬಳಿಗೆ ಹೆಬ್ರೋನೆಂಬ ಕಿರ್ಯತರ್ಬದಲ್ಲಿದ್ದ ಮಮ್ರೆಗೆ ಬಂದನು. ಅಬ್ರಹಾಮನು ಮತ್ತು ಇಸಾಕನು ವಾಸವಾಗಿದ್ದದ್ದು ಇಲ್ಲೇ.


ಇಸ್ರೇಲನು, “ನಿನ್ನ ಅಣ್ಣಂದಿರ ಮತ್ತು ಆಡುಕುರಿಗಳ ಕ್ಷೇಮವನ್ನು ವಿಚಾರಿಸಿಕೊಂಡು ಬಂದು ನನಗೆ ತಿಳಿಸು” ಎಂದು ಹೇಳಿ ಅವನನ್ನು ಹೆಬ್ರೋನಿನ ಕಣಿವೆಯಿಂದ ಶೆಕೆಮಿಗೆ ಕಳುಹಿಸಿಕೊಟ್ಟನು.


ಆ ನಗರ ಈಗಲೂ ಕೆನಿಜ್ಜೀಯನಾದ ಯೆಫುನ್ನೆಯ ಮಗನಾದ ಕಾಲೇಬನ ವಂಶದವರ ಸ್ವಾಸ್ತ್ಯವಾಗಿದೆ. ಏಕೆಂದರೆ ಅವನು ಇಸ್ರೇಲಿನ ದೇವರಾದ ಯೆಹೋವನನ್ನು ನಂಬಿದ್ದನು ಮತ್ತು ಆತನ ಆಜ್ಞೆಯನ್ನು ಪಾಲಿಸಿದನು.


ಅವರಿಗೆ ಹೆಬ್ರೋನ್ ಎಂಬ ಕಿರ್ಯತರ್ಬನಗರ (ಇದಕ್ಕೆ ಅನಾಕನ ತಂದೆಯಾದ ಅರ್ಬನ ಹೆಸರಿಡಲಾಗಿತ್ತು.) ಮತ್ತು ಅವರ ಪಶುಗಳಿಗಾಗಿ ಆ ನಗರದ ಹತ್ತಿರದ ಸ್ವಲ್ಪ ಭೂಮಿಯನ್ನು ಕೊಡಲಾಯಿತು.


ಯೆಹೂದ ಸಂಸ್ಥಾನದ ಜನರು ಈ ಪಟ್ಟಣಗಳಲ್ಲಿ ವಾಸಿಸಿದರು. ಕಿರ್ಯತರ್ಬ ಮತ್ತು ಸುತ್ತಮುತ್ತಲಿರುವ ಚಿಕ್ಕ ಪಟ್ಟಣಗಳಲ್ಲಿ, ದೀಬೋನ್ ಮತ್ತು ಅದರ ಸುತ್ತಲಿರುವ ಚಿಕ್ಕ ಪಟ್ಟಣಗಳಲ್ಲಿ, ಯಕಬ್ಜೆಯೇಲ್ ಮತ್ತು ಅದರ ಸುತ್ತಲಿದ್ದ ಚಿಕ್ಕ ಪಟ್ಟಣಗಳಲ್ಲಿ ವಾಸಿಸಿದರು.


ಆದರೆ ಕಿರ್ಯತರ್ಬ ನಗರದ ಸುತ್ತಮುತ್ತಲಿನ ಸಣ್ಣಸಣ್ಣ ಊರುಗಳು ಮತ್ತು ಅವುಗಳಿಗೆ ಸೇರಿದ ಭೂಮಿಯು ಯೆಫುನ್ನೆಯ ಮಗನಾದ ಕಾಲೇಬನಿಗೆ ಸೇರಿತ್ತು.


ಹೆಬ್ರೋನಿಗೆ ಸಮೀಪದಲ್ಲಿರುವ ಭೂಮಿಯನ್ನು ಕಾಲೇಬನಿಗೆ ಕೊಡುವುದಾಗಿ ಮೋಶೆಯು ವಾಗ್ದಾನ ಮಾಡಿದ್ದನು. ಆದ್ದರಿಂದ ಆ ಭೂಮಿಯನ್ನು ಕಾಲೇಬನ ಕುಟುಂಬದವರಿಗೆ ಕೊಡಲಾಯಿತು. ಕಾಲೇಬನ ಜನರು ಅನಾಕನ ಮೂರು ಜನ ಮಕ್ಕಳನ್ನು ಆ ಪ್ರದೇಶದಿಂದ ಬಲವಂತವಾಗಿ ಹೊರಗಟ್ಟಿದರು.


ಮತ್ತು ಹೆಬ್ರೋನಿನವರಿಗೆ ಕಳುಹಿಸಿಕೊಟ್ಟನು ಮತ್ತು ತನ್ನ ಜನರು ಹೋಗಿದ್ದ ಇತರ ಸ್ಥಳಗಳ ನಾಯಕರಿಗೂ ಆ ವಸ್ತುಗಳಲ್ಲಿ ಕೆಲವನ್ನು ಕಳುಹಿಸಿದನು.


ಎಲ್ಲಾಜಾರನ ಮಗನು ಫೀನೆಹಾಸ. ಫೀನೆಹಾಸನ ಮಗನು ಅಬೀಷೂವ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು